Homeಮುಖಪುಟಮಳವಳ್ಳಿ: ಪಿ.ಎಂ ನರೇಂದ್ರಸ್ವಾಮಿಯವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ- ಗೆಲುವಿನ ಸಾಧ್ಯಾಸಾಧ್ಯತೆ ಹೀಗಿದೆ

ಮಳವಳ್ಳಿ: ಪಿ.ಎಂ ನರೇಂದ್ರಸ್ವಾಮಿಯವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ- ಗೆಲುವಿನ ಸಾಧ್ಯಾಸಾಧ್ಯತೆ ಹೀಗಿದೆ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 124 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸಿದೆ. ಮಂಡ್ಯ ಲೋಕಸಭಾ ವ್ಯಾಪ್ತಿಯ 4 ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ದು, ಮಳವಳ್ಳಿಯ ಸಂಕ್ಷಿಪ್ತ ಚಿತ್ರಣ ಇಲ್ಲಿದೆ.

ಮಳವಳ್ಳಿ (ಪರಿಶಿಷ್ಟ ಜಾತಿ ಮೀಸಲು)

ಮಳವಳ್ಳಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಮಾಜಿ ಸಚಿವ ಪಿ.ಎಂ ನರೇಂದ್ರ ಸ್ವಾಮಿಯವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. 1999 ಮತ್ತು 2004ರಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಇವರು ಸೋಲು ಕಂಡಿದ್ದರು. 2008ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯ ಸಾಧಿಸಿದ್ದರು. ಆನಂತರ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದರಿಂದ ಪಿ.ಎಂ ನರೇಂದ್ರ ಸ್ವಾಮಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದರು. 2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದರು.

2018ರ ಚುನಾವಣೆಯ ಸಮಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ಒಕ್ಕಲಿಗರ ಪರವಾಗಿನ ಅಲೆಯಲ್ಲಿ ಜೆಡಿಎಸ್‌ ಪಕ್ಷದ ಡಾ.ಕೆ ಅನ್ನದಾನಿ ಗೆದ್ದು ಬರುತ್ತಾರೆ. ಅವರು 1,03,038 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಪಿ.ಎಂ ನರೇಂದ್ರಸ್ವಾಮಿ 76,278 ಮತಗಳನ್ನು ಪಡೆದು 26,760 ಮತಗಳ ಅಂತರದಿಂದ ಸೋಲು ಕಾಣುತ್ತಾರೆ.

ಎರಡು ಬಾರಿ ಶಾಸಕರಾಗಿರುವ, ಒಮ್ಮೆ ಸಚಿವರಾಗಿರುವ ಪಿ.ಎಂ ನರೇಂದ್ರ ಸ್ವಾಮಿ ಈ ಬಾರಿ ಶತಾಯಗತಾಯ ಗೆಲ್ಲಲು ಕಸರತ್ತು ನಡೆಸಿದ್ದಾರೆ. ತಮ್ಮ ಅವಧಿಯಲ್ಲಿ ಮಾಡಿರುವ ರಸ್ತೆಗಳು, ನೀರಾವರಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತ್ತೊಂದು ಅವಕಾಶ ಕೊಡಿ ಎಂದು ಕೇಳುತ್ತಿದ್ದಾರೆ. ಬಹಳಷ್ಟು ಜನರು ನರೇಂದ್ರ ಸ್ವಾಮಿಯವರು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ, ಕ್ಷೇತ್ರಕ್ಕೆ ಅನುದಾನ ತಂದಿದ್ದಾರೆ ಎನ್ನುತ್ತಾರೆ. ಆದರೆ ಅವರು ಜೋರುದನಿಯಲ್ಲಿ ಒರಟಾಗಿ ಮಾತನಾಡುತ್ತಾರೆ ಎಂದು ಆರೋಪಿಸುತ್ತಾರೆ.

ಇನ್ನು ಮಾಜಿ ಶಾಸಕಿ ಮಲ್ಲಾಜಮ್ಮ ಕೂಡ ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟ್ಟಿದ್ದರು. ಜೊತೆಗೆ ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಆದರ್ಶ ಶಿಕ್ಷಣ ಸಂಸ್ಥೆಯ ಡಾ.ಮೂರ್ತಿಯವರು ಕಾಂಗ್ರೆಸ್ ಟಿಕೆಟ್‌ಗಾಗಿ ಕಸರತ್ತು ನಡೆಸುತ್ತಿದ್ದರು. ಆದರೆ ಕೊನೆಗೂ ಎಂ.ಪಿ ನರೇಂದ್ರ ಸ್ವಾಮಿಯವರಿಗೆ ಟಿಕೆಟ್ ಲಭಿಸಿದೆ.

ರಾಜಕೀಯ ಇತಿಹಾಸ

ಮಳವಳ್ಳಿಯಲ್ಲಿ ಕಾಂಗ್ರೆಸ್ 7 ಬಾರಿ, ಜನತಾ ಪಕ್ಷ ಮೂರು ಬಾರಿ, ಜೆಡಿಎಸ್ ಎರಡು ಬಾರಿ, ಜನತಾದಳ, ಜೆಡಿಯು, ಕಿಸಾನ್ ಮಜ್ದೂರ್ ಪಕ್ಷ, ಶೆಡ್ಯೂಲ್ ಕಾಸ್ಟ್ ಫೆಡರೇಷನ್ ಮತ್ತು ಸ್ವತಂತ್ರ ಅಭ್ಯರ್ತಿಗಳು ತಲಾ ಒಂದು ಬಾರಿ ಗೆಲುವು ಸಾಧಿಸಿದ್ದಾರೆ.

ಜೆಡಿಎಸ್‌ನಿಂದ ಡಾ.ಅನ್ನದಾನಿ ಕಣಕ್ಕೆ

ಎರಡು ಬಾರಿ ಶಾಸಕರಾಗಿರುವ ಹಾಲಿ ಶಾಸಕ ಡಾ.ಅನ್ನದಾನಿಯವರಿಗೆ ಜೆಡಿಎಸ್ ಪಕ್ಷವು ಈಗಾಗಲೇ ಟಿಕೆಟ್ ಘೋಷಿಸಿದೆ.

ಬಿಜೆಪಿಯಲ್ಲಿ ಮೂವರು ಆಕಾಂಕ್ಷಿಗಳು

ಮಳವಳ್ಳಿಯಲ್ಲಿ ಇದುವರೆಗೂ ಬಿಜೆಪಿ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. 2008ರಲ್ಲಿ ಬಿಜೆಪಿ ಅಭ್ಯರ್ಥಿ ಕಲ್ಕುಣಿ ಮಹದೇವಯ್ಯನವರು 29,158 ಮತಗಳನ್ನು ಪಡೆದಿದ್ದೆ ಇದುವರೆಗಿನ ದೊಡ್ಡ ಸಾಧನೆಯಾಗಿದೆ. ಆದರೂ ಪಕ್ಷದ ಟಿಕೆಟ್‌ಗಾಗಿ ಕ್ಷೇತ್ರದಲ್ಲಿ ಮೂವರು ಪೈಪೋಟಿ ನಡೆಸುತ್ತಿದ್ದಾರೆ. ಭೋವಿ ಸಮುದಾಯದ ಜಿ.ಮುನಿರಾಜುರವರು 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ 26,397 ಮತಗಳನ್ನು ಪಡೆದಿದ್ದರು. ಆದರೆ ಕಳೆದ ಚುನಾವಣೆಯ ಸಮಯದಲ್ಲಿ ಮಾಯವಾಗಿದ್ದ ಅವರು ಈಗ ಮತ್ತೆ ಪ್ರತ್ಯಕ್ಷರಾಗಿದ್ದು ತನಗೇ ಬಿಜೆಪಿ ಟಿಕೆಟ್ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಆದರೆ ಅವರು ಮೂಲ ಮಳವಳ್ಳಿಯವರಲ್ಲ, ಬೆಂಗಳೂರಿನ ಕೆಂಗೇರಿಯವರು ಎಂದು ಕೆಲವರು ಆರೋಪ ಮಾಡುತ್ತಾರೆ.

ಅಂದಾಜು ಜಾತಿವಾರು ಮತಗಳು

ಮಂಡ್ಯ ಜಿಲ್ಲೆಯ ಉಳಿದ ವಿಧಾನಸಭಾ ಕ್ಷೇತ್ರಗಳಿಗಿಂತ ಭಿನ್ನವಾಗಿ ಮಳವಳ್ಳಿಯಲ್ಲಿ ಪರಿಶಿಷ್ಟ ಜಾತಿಯ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಕ್ಷೇತ್ರದಲ್ಲಿ ಒಟ್ಟು ಸುಮಾರು 2,50,000 ಮತಗಳಿದ್ದರೆ ಪರಿಶಿಷ್ಟ ಜಾತಿಯ 75,000 ದಷ್ಟು ಮತಗಳಿವೆ. ಒಕ್ಕಲಿಗರ 70,000, ಲಿಂಗಾಯತರ 30,000 ಮತ್ತು 25,000ದಷ್ಟು ಕುರುಬ ಸಮುದಾಯದ ಮತಗಳಿವೆ. ಮುಸ್ಲಿಂ ಸಮುದಾಯದ 15,000 ಮತಗಳಿದ್ದರೆ ಇತರೆ ಸಮುದಾಯದ ಮತಗಳು 35,000 ಎನ್ನಲಾಗಿದೆ.

2023ರ ಸಾಧ್ಯತೆಗಳು

ಮಳವಳ್ಳಿಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆಯೇ ನೇರಾನೇರ ಹಣಾಹಣಿ ನಡೆಯುವ ಸೂಚನೆಗಳು ಗೋಚರಿಸುತ್ತಿವೆ. ಶಾಸಕ ಅನ್ನದಾನಿಯವರು ಜೆಡಿಎಸ್ ಪಕ್ಷ ಮತ್ತು ಕುಮಾರಸ್ವಾಮಿಯವರ ನಾಮಬಲದ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನ ಪಿ.ಎಂ ನರೇಂದ್ರ ಸ್ವಾಮಿಯವರು ತಾನು ಮಾಡಿದ ಕೆಲಸಗಳು ಮತ್ತು ಕ್ಷೇತ್ರದ ಅಹಿಂದ ಮತಗಳು ತನ್ನ ಕೈ ಹಿಡಿಯುತ್ತವೆ ಎಂದು ನಂಬಿದ್ದಾರೆ.

ಇನ್ನು ಬಿಜೆಪಿ ಪಕ್ಷವು ಜಿ.ಮುನಿರಾಜುರವರಿಗೆ ಟಿಕೆಟ್ ನೀಡಿದ್ದಲ್ಲಿ ಕ್ಷೇತ್ರದ ಒಂದಷ್ಟು ಲಿಂಗಾಯಿತ ಮತಗಳ ಜೊತೆ ಮತ್ತಷ್ಟು ಮತಗಳನ್ನು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಅವರೊಟ್ಟಿಗೆ ಬಿಎಸ್‌ಪಿಯ ಎಂ.ಕೃಷ್ಣಮೂರ್ತಿಯವರು ಸಹ ಒಂದಷ್ಟು ಮತಗಳನ್ನು ಪಡೆಯಲಿದ್ದಾರೆ. ಇವರಿಬ್ಬರೂ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಹಾಲಿ ಶಾಸಕ ಡಾ.ಕೆ ಅನ್ನದಾನಿಯವರ ಮತಗಳನ್ನು ಕಬಳಿಸುತ್ತಾರೊ ಅಥವಾ ಮಾಜಿ ಸಚಿವ ನರೇಂದ್ರ ಸ್ವಾಮಿಯವರ ಮತಬುಟ್ಟಿಗೆ ಕೈ ಹಾಕುತ್ತಾರೊ ಎಂಬುದರ ಮೇಲೆ ಕ್ಷೇತ್ರದ ಫಲಿತಾಂಶ ನಿರ್ಧಾರವಾಗಲಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಳವಳ್ಳಿ: ಹಾಲಿ ಶಾಸಕ ಅನ್ನದಾನಿ ಮೇಲಿನ ಆಡಳಿತ ವಿರೋಧಿ ಅಲೆ ನರೇಂದ್ರ ಸ್ವಾಮಿಯವರಿಗೆ ವರವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...