Homeಮುಖಪುಟಮಳವಳ್ಳಿ: ಪಿ.ಎಂ ನರೇಂದ್ರಸ್ವಾಮಿಯವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ- ಗೆಲುವಿನ ಸಾಧ್ಯಾಸಾಧ್ಯತೆ ಹೀಗಿದೆ

ಮಳವಳ್ಳಿ: ಪಿ.ಎಂ ನರೇಂದ್ರಸ್ವಾಮಿಯವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ- ಗೆಲುವಿನ ಸಾಧ್ಯಾಸಾಧ್ಯತೆ ಹೀಗಿದೆ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 124 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸಿದೆ. ಮಂಡ್ಯ ಲೋಕಸಭಾ ವ್ಯಾಪ್ತಿಯ 4 ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ದು, ಮಳವಳ್ಳಿಯ ಸಂಕ್ಷಿಪ್ತ ಚಿತ್ರಣ ಇಲ್ಲಿದೆ.

ಮಳವಳ್ಳಿ (ಪರಿಶಿಷ್ಟ ಜಾತಿ ಮೀಸಲು)

ಮಳವಳ್ಳಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಮಾಜಿ ಸಚಿವ ಪಿ.ಎಂ ನರೇಂದ್ರ ಸ್ವಾಮಿಯವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. 1999 ಮತ್ತು 2004ರಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಇವರು ಸೋಲು ಕಂಡಿದ್ದರು. 2008ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯ ಸಾಧಿಸಿದ್ದರು. ಆನಂತರ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದರಿಂದ ಪಿ.ಎಂ ನರೇಂದ್ರ ಸ್ವಾಮಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದರು. 2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದರು.

2018ರ ಚುನಾವಣೆಯ ಸಮಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ಒಕ್ಕಲಿಗರ ಪರವಾಗಿನ ಅಲೆಯಲ್ಲಿ ಜೆಡಿಎಸ್‌ ಪಕ್ಷದ ಡಾ.ಕೆ ಅನ್ನದಾನಿ ಗೆದ್ದು ಬರುತ್ತಾರೆ. ಅವರು 1,03,038 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಪಿ.ಎಂ ನರೇಂದ್ರಸ್ವಾಮಿ 76,278 ಮತಗಳನ್ನು ಪಡೆದು 26,760 ಮತಗಳ ಅಂತರದಿಂದ ಸೋಲು ಕಾಣುತ್ತಾರೆ.

ಎರಡು ಬಾರಿ ಶಾಸಕರಾಗಿರುವ, ಒಮ್ಮೆ ಸಚಿವರಾಗಿರುವ ಪಿ.ಎಂ ನರೇಂದ್ರ ಸ್ವಾಮಿ ಈ ಬಾರಿ ಶತಾಯಗತಾಯ ಗೆಲ್ಲಲು ಕಸರತ್ತು ನಡೆಸಿದ್ದಾರೆ. ತಮ್ಮ ಅವಧಿಯಲ್ಲಿ ಮಾಡಿರುವ ರಸ್ತೆಗಳು, ನೀರಾವರಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತ್ತೊಂದು ಅವಕಾಶ ಕೊಡಿ ಎಂದು ಕೇಳುತ್ತಿದ್ದಾರೆ. ಬಹಳಷ್ಟು ಜನರು ನರೇಂದ್ರ ಸ್ವಾಮಿಯವರು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ, ಕ್ಷೇತ್ರಕ್ಕೆ ಅನುದಾನ ತಂದಿದ್ದಾರೆ ಎನ್ನುತ್ತಾರೆ. ಆದರೆ ಅವರು ಜೋರುದನಿಯಲ್ಲಿ ಒರಟಾಗಿ ಮಾತನಾಡುತ್ತಾರೆ ಎಂದು ಆರೋಪಿಸುತ್ತಾರೆ.

ಇನ್ನು ಮಾಜಿ ಶಾಸಕಿ ಮಲ್ಲಾಜಮ್ಮ ಕೂಡ ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟ್ಟಿದ್ದರು. ಜೊತೆಗೆ ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಆದರ್ಶ ಶಿಕ್ಷಣ ಸಂಸ್ಥೆಯ ಡಾ.ಮೂರ್ತಿಯವರು ಕಾಂಗ್ರೆಸ್ ಟಿಕೆಟ್‌ಗಾಗಿ ಕಸರತ್ತು ನಡೆಸುತ್ತಿದ್ದರು. ಆದರೆ ಕೊನೆಗೂ ಎಂ.ಪಿ ನರೇಂದ್ರ ಸ್ವಾಮಿಯವರಿಗೆ ಟಿಕೆಟ್ ಲಭಿಸಿದೆ.

ರಾಜಕೀಯ ಇತಿಹಾಸ

ಮಳವಳ್ಳಿಯಲ್ಲಿ ಕಾಂಗ್ರೆಸ್ 7 ಬಾರಿ, ಜನತಾ ಪಕ್ಷ ಮೂರು ಬಾರಿ, ಜೆಡಿಎಸ್ ಎರಡು ಬಾರಿ, ಜನತಾದಳ, ಜೆಡಿಯು, ಕಿಸಾನ್ ಮಜ್ದೂರ್ ಪಕ್ಷ, ಶೆಡ್ಯೂಲ್ ಕಾಸ್ಟ್ ಫೆಡರೇಷನ್ ಮತ್ತು ಸ್ವತಂತ್ರ ಅಭ್ಯರ್ತಿಗಳು ತಲಾ ಒಂದು ಬಾರಿ ಗೆಲುವು ಸಾಧಿಸಿದ್ದಾರೆ.

ಜೆಡಿಎಸ್‌ನಿಂದ ಡಾ.ಅನ್ನದಾನಿ ಕಣಕ್ಕೆ

ಎರಡು ಬಾರಿ ಶಾಸಕರಾಗಿರುವ ಹಾಲಿ ಶಾಸಕ ಡಾ.ಅನ್ನದಾನಿಯವರಿಗೆ ಜೆಡಿಎಸ್ ಪಕ್ಷವು ಈಗಾಗಲೇ ಟಿಕೆಟ್ ಘೋಷಿಸಿದೆ.

ಬಿಜೆಪಿಯಲ್ಲಿ ಮೂವರು ಆಕಾಂಕ್ಷಿಗಳು

ಮಳವಳ್ಳಿಯಲ್ಲಿ ಇದುವರೆಗೂ ಬಿಜೆಪಿ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. 2008ರಲ್ಲಿ ಬಿಜೆಪಿ ಅಭ್ಯರ್ಥಿ ಕಲ್ಕುಣಿ ಮಹದೇವಯ್ಯನವರು 29,158 ಮತಗಳನ್ನು ಪಡೆದಿದ್ದೆ ಇದುವರೆಗಿನ ದೊಡ್ಡ ಸಾಧನೆಯಾಗಿದೆ. ಆದರೂ ಪಕ್ಷದ ಟಿಕೆಟ್‌ಗಾಗಿ ಕ್ಷೇತ್ರದಲ್ಲಿ ಮೂವರು ಪೈಪೋಟಿ ನಡೆಸುತ್ತಿದ್ದಾರೆ. ಭೋವಿ ಸಮುದಾಯದ ಜಿ.ಮುನಿರಾಜುರವರು 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ 26,397 ಮತಗಳನ್ನು ಪಡೆದಿದ್ದರು. ಆದರೆ ಕಳೆದ ಚುನಾವಣೆಯ ಸಮಯದಲ್ಲಿ ಮಾಯವಾಗಿದ್ದ ಅವರು ಈಗ ಮತ್ತೆ ಪ್ರತ್ಯಕ್ಷರಾಗಿದ್ದು ತನಗೇ ಬಿಜೆಪಿ ಟಿಕೆಟ್ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಆದರೆ ಅವರು ಮೂಲ ಮಳವಳ್ಳಿಯವರಲ್ಲ, ಬೆಂಗಳೂರಿನ ಕೆಂಗೇರಿಯವರು ಎಂದು ಕೆಲವರು ಆರೋಪ ಮಾಡುತ್ತಾರೆ.

ಅಂದಾಜು ಜಾತಿವಾರು ಮತಗಳು

ಮಂಡ್ಯ ಜಿಲ್ಲೆಯ ಉಳಿದ ವಿಧಾನಸಭಾ ಕ್ಷೇತ್ರಗಳಿಗಿಂತ ಭಿನ್ನವಾಗಿ ಮಳವಳ್ಳಿಯಲ್ಲಿ ಪರಿಶಿಷ್ಟ ಜಾತಿಯ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಕ್ಷೇತ್ರದಲ್ಲಿ ಒಟ್ಟು ಸುಮಾರು 2,50,000 ಮತಗಳಿದ್ದರೆ ಪರಿಶಿಷ್ಟ ಜಾತಿಯ 75,000 ದಷ್ಟು ಮತಗಳಿವೆ. ಒಕ್ಕಲಿಗರ 70,000, ಲಿಂಗಾಯತರ 30,000 ಮತ್ತು 25,000ದಷ್ಟು ಕುರುಬ ಸಮುದಾಯದ ಮತಗಳಿವೆ. ಮುಸ್ಲಿಂ ಸಮುದಾಯದ 15,000 ಮತಗಳಿದ್ದರೆ ಇತರೆ ಸಮುದಾಯದ ಮತಗಳು 35,000 ಎನ್ನಲಾಗಿದೆ.

2023ರ ಸಾಧ್ಯತೆಗಳು

ಮಳವಳ್ಳಿಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆಯೇ ನೇರಾನೇರ ಹಣಾಹಣಿ ನಡೆಯುವ ಸೂಚನೆಗಳು ಗೋಚರಿಸುತ್ತಿವೆ. ಶಾಸಕ ಅನ್ನದಾನಿಯವರು ಜೆಡಿಎಸ್ ಪಕ್ಷ ಮತ್ತು ಕುಮಾರಸ್ವಾಮಿಯವರ ನಾಮಬಲದ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನ ಪಿ.ಎಂ ನರೇಂದ್ರ ಸ್ವಾಮಿಯವರು ತಾನು ಮಾಡಿದ ಕೆಲಸಗಳು ಮತ್ತು ಕ್ಷೇತ್ರದ ಅಹಿಂದ ಮತಗಳು ತನ್ನ ಕೈ ಹಿಡಿಯುತ್ತವೆ ಎಂದು ನಂಬಿದ್ದಾರೆ.

ಇನ್ನು ಬಿಜೆಪಿ ಪಕ್ಷವು ಜಿ.ಮುನಿರಾಜುರವರಿಗೆ ಟಿಕೆಟ್ ನೀಡಿದ್ದಲ್ಲಿ ಕ್ಷೇತ್ರದ ಒಂದಷ್ಟು ಲಿಂಗಾಯಿತ ಮತಗಳ ಜೊತೆ ಮತ್ತಷ್ಟು ಮತಗಳನ್ನು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಅವರೊಟ್ಟಿಗೆ ಬಿಎಸ್‌ಪಿಯ ಎಂ.ಕೃಷ್ಣಮೂರ್ತಿಯವರು ಸಹ ಒಂದಷ್ಟು ಮತಗಳನ್ನು ಪಡೆಯಲಿದ್ದಾರೆ. ಇವರಿಬ್ಬರೂ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಹಾಲಿ ಶಾಸಕ ಡಾ.ಕೆ ಅನ್ನದಾನಿಯವರ ಮತಗಳನ್ನು ಕಬಳಿಸುತ್ತಾರೊ ಅಥವಾ ಮಾಜಿ ಸಚಿವ ನರೇಂದ್ರ ಸ್ವಾಮಿಯವರ ಮತಬುಟ್ಟಿಗೆ ಕೈ ಹಾಕುತ್ತಾರೊ ಎಂಬುದರ ಮೇಲೆ ಕ್ಷೇತ್ರದ ಫಲಿತಾಂಶ ನಿರ್ಧಾರವಾಗಲಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಳವಳ್ಳಿ: ಹಾಲಿ ಶಾಸಕ ಅನ್ನದಾನಿ ಮೇಲಿನ ಆಡಳಿತ ವಿರೋಧಿ ಅಲೆ ನರೇಂದ್ರ ಸ್ವಾಮಿಯವರಿಗೆ ವರವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...