Homeಮುಖಪುಟಮಳವಳ್ಳಿ: ಪಿ.ಎಂ ನರೇಂದ್ರಸ್ವಾಮಿಯವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ- ಗೆಲುವಿನ ಸಾಧ್ಯಾಸಾಧ್ಯತೆ ಹೀಗಿದೆ

ಮಳವಳ್ಳಿ: ಪಿ.ಎಂ ನರೇಂದ್ರಸ್ವಾಮಿಯವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ- ಗೆಲುವಿನ ಸಾಧ್ಯಾಸಾಧ್ಯತೆ ಹೀಗಿದೆ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 124 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸಿದೆ. ಮಂಡ್ಯ ಲೋಕಸಭಾ ವ್ಯಾಪ್ತಿಯ 4 ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ದು, ಮಳವಳ್ಳಿಯ ಸಂಕ್ಷಿಪ್ತ ಚಿತ್ರಣ ಇಲ್ಲಿದೆ.

ಮಳವಳ್ಳಿ (ಪರಿಶಿಷ್ಟ ಜಾತಿ ಮೀಸಲು)

ಮಳವಳ್ಳಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಮಾಜಿ ಸಚಿವ ಪಿ.ಎಂ ನರೇಂದ್ರ ಸ್ವಾಮಿಯವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. 1999 ಮತ್ತು 2004ರಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಇವರು ಸೋಲು ಕಂಡಿದ್ದರು. 2008ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯ ಸಾಧಿಸಿದ್ದರು. ಆನಂತರ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದರಿಂದ ಪಿ.ಎಂ ನರೇಂದ್ರ ಸ್ವಾಮಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದರು. 2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದರು.

2018ರ ಚುನಾವಣೆಯ ಸಮಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ಒಕ್ಕಲಿಗರ ಪರವಾಗಿನ ಅಲೆಯಲ್ಲಿ ಜೆಡಿಎಸ್‌ ಪಕ್ಷದ ಡಾ.ಕೆ ಅನ್ನದಾನಿ ಗೆದ್ದು ಬರುತ್ತಾರೆ. ಅವರು 1,03,038 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಪಿ.ಎಂ ನರೇಂದ್ರಸ್ವಾಮಿ 76,278 ಮತಗಳನ್ನು ಪಡೆದು 26,760 ಮತಗಳ ಅಂತರದಿಂದ ಸೋಲು ಕಾಣುತ್ತಾರೆ.

ಎರಡು ಬಾರಿ ಶಾಸಕರಾಗಿರುವ, ಒಮ್ಮೆ ಸಚಿವರಾಗಿರುವ ಪಿ.ಎಂ ನರೇಂದ್ರ ಸ್ವಾಮಿ ಈ ಬಾರಿ ಶತಾಯಗತಾಯ ಗೆಲ್ಲಲು ಕಸರತ್ತು ನಡೆಸಿದ್ದಾರೆ. ತಮ್ಮ ಅವಧಿಯಲ್ಲಿ ಮಾಡಿರುವ ರಸ್ತೆಗಳು, ನೀರಾವರಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತ್ತೊಂದು ಅವಕಾಶ ಕೊಡಿ ಎಂದು ಕೇಳುತ್ತಿದ್ದಾರೆ. ಬಹಳಷ್ಟು ಜನರು ನರೇಂದ್ರ ಸ್ವಾಮಿಯವರು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ, ಕ್ಷೇತ್ರಕ್ಕೆ ಅನುದಾನ ತಂದಿದ್ದಾರೆ ಎನ್ನುತ್ತಾರೆ. ಆದರೆ ಅವರು ಜೋರುದನಿಯಲ್ಲಿ ಒರಟಾಗಿ ಮಾತನಾಡುತ್ತಾರೆ ಎಂದು ಆರೋಪಿಸುತ್ತಾರೆ.

ಇನ್ನು ಮಾಜಿ ಶಾಸಕಿ ಮಲ್ಲಾಜಮ್ಮ ಕೂಡ ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟ್ಟಿದ್ದರು. ಜೊತೆಗೆ ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಆದರ್ಶ ಶಿಕ್ಷಣ ಸಂಸ್ಥೆಯ ಡಾ.ಮೂರ್ತಿಯವರು ಕಾಂಗ್ರೆಸ್ ಟಿಕೆಟ್‌ಗಾಗಿ ಕಸರತ್ತು ನಡೆಸುತ್ತಿದ್ದರು. ಆದರೆ ಕೊನೆಗೂ ಎಂ.ಪಿ ನರೇಂದ್ರ ಸ್ವಾಮಿಯವರಿಗೆ ಟಿಕೆಟ್ ಲಭಿಸಿದೆ.

ರಾಜಕೀಯ ಇತಿಹಾಸ

ಮಳವಳ್ಳಿಯಲ್ಲಿ ಕಾಂಗ್ರೆಸ್ 7 ಬಾರಿ, ಜನತಾ ಪಕ್ಷ ಮೂರು ಬಾರಿ, ಜೆಡಿಎಸ್ ಎರಡು ಬಾರಿ, ಜನತಾದಳ, ಜೆಡಿಯು, ಕಿಸಾನ್ ಮಜ್ದೂರ್ ಪಕ್ಷ, ಶೆಡ್ಯೂಲ್ ಕಾಸ್ಟ್ ಫೆಡರೇಷನ್ ಮತ್ತು ಸ್ವತಂತ್ರ ಅಭ್ಯರ್ತಿಗಳು ತಲಾ ಒಂದು ಬಾರಿ ಗೆಲುವು ಸಾಧಿಸಿದ್ದಾರೆ.

ಜೆಡಿಎಸ್‌ನಿಂದ ಡಾ.ಅನ್ನದಾನಿ ಕಣಕ್ಕೆ

ಎರಡು ಬಾರಿ ಶಾಸಕರಾಗಿರುವ ಹಾಲಿ ಶಾಸಕ ಡಾ.ಅನ್ನದಾನಿಯವರಿಗೆ ಜೆಡಿಎಸ್ ಪಕ್ಷವು ಈಗಾಗಲೇ ಟಿಕೆಟ್ ಘೋಷಿಸಿದೆ.

ಬಿಜೆಪಿಯಲ್ಲಿ ಮೂವರು ಆಕಾಂಕ್ಷಿಗಳು

ಮಳವಳ್ಳಿಯಲ್ಲಿ ಇದುವರೆಗೂ ಬಿಜೆಪಿ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. 2008ರಲ್ಲಿ ಬಿಜೆಪಿ ಅಭ್ಯರ್ಥಿ ಕಲ್ಕುಣಿ ಮಹದೇವಯ್ಯನವರು 29,158 ಮತಗಳನ್ನು ಪಡೆದಿದ್ದೆ ಇದುವರೆಗಿನ ದೊಡ್ಡ ಸಾಧನೆಯಾಗಿದೆ. ಆದರೂ ಪಕ್ಷದ ಟಿಕೆಟ್‌ಗಾಗಿ ಕ್ಷೇತ್ರದಲ್ಲಿ ಮೂವರು ಪೈಪೋಟಿ ನಡೆಸುತ್ತಿದ್ದಾರೆ. ಭೋವಿ ಸಮುದಾಯದ ಜಿ.ಮುನಿರಾಜುರವರು 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ 26,397 ಮತಗಳನ್ನು ಪಡೆದಿದ್ದರು. ಆದರೆ ಕಳೆದ ಚುನಾವಣೆಯ ಸಮಯದಲ್ಲಿ ಮಾಯವಾಗಿದ್ದ ಅವರು ಈಗ ಮತ್ತೆ ಪ್ರತ್ಯಕ್ಷರಾಗಿದ್ದು ತನಗೇ ಬಿಜೆಪಿ ಟಿಕೆಟ್ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಆದರೆ ಅವರು ಮೂಲ ಮಳವಳ್ಳಿಯವರಲ್ಲ, ಬೆಂಗಳೂರಿನ ಕೆಂಗೇರಿಯವರು ಎಂದು ಕೆಲವರು ಆರೋಪ ಮಾಡುತ್ತಾರೆ.

ಅಂದಾಜು ಜಾತಿವಾರು ಮತಗಳು

ಮಂಡ್ಯ ಜಿಲ್ಲೆಯ ಉಳಿದ ವಿಧಾನಸಭಾ ಕ್ಷೇತ್ರಗಳಿಗಿಂತ ಭಿನ್ನವಾಗಿ ಮಳವಳ್ಳಿಯಲ್ಲಿ ಪರಿಶಿಷ್ಟ ಜಾತಿಯ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಕ್ಷೇತ್ರದಲ್ಲಿ ಒಟ್ಟು ಸುಮಾರು 2,50,000 ಮತಗಳಿದ್ದರೆ ಪರಿಶಿಷ್ಟ ಜಾತಿಯ 75,000 ದಷ್ಟು ಮತಗಳಿವೆ. ಒಕ್ಕಲಿಗರ 70,000, ಲಿಂಗಾಯತರ 30,000 ಮತ್ತು 25,000ದಷ್ಟು ಕುರುಬ ಸಮುದಾಯದ ಮತಗಳಿವೆ. ಮುಸ್ಲಿಂ ಸಮುದಾಯದ 15,000 ಮತಗಳಿದ್ದರೆ ಇತರೆ ಸಮುದಾಯದ ಮತಗಳು 35,000 ಎನ್ನಲಾಗಿದೆ.

2023ರ ಸಾಧ್ಯತೆಗಳು

ಮಳವಳ್ಳಿಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆಯೇ ನೇರಾನೇರ ಹಣಾಹಣಿ ನಡೆಯುವ ಸೂಚನೆಗಳು ಗೋಚರಿಸುತ್ತಿವೆ. ಶಾಸಕ ಅನ್ನದಾನಿಯವರು ಜೆಡಿಎಸ್ ಪಕ್ಷ ಮತ್ತು ಕುಮಾರಸ್ವಾಮಿಯವರ ನಾಮಬಲದ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನ ಪಿ.ಎಂ ನರೇಂದ್ರ ಸ್ವಾಮಿಯವರು ತಾನು ಮಾಡಿದ ಕೆಲಸಗಳು ಮತ್ತು ಕ್ಷೇತ್ರದ ಅಹಿಂದ ಮತಗಳು ತನ್ನ ಕೈ ಹಿಡಿಯುತ್ತವೆ ಎಂದು ನಂಬಿದ್ದಾರೆ.

ಇನ್ನು ಬಿಜೆಪಿ ಪಕ್ಷವು ಜಿ.ಮುನಿರಾಜುರವರಿಗೆ ಟಿಕೆಟ್ ನೀಡಿದ್ದಲ್ಲಿ ಕ್ಷೇತ್ರದ ಒಂದಷ್ಟು ಲಿಂಗಾಯಿತ ಮತಗಳ ಜೊತೆ ಮತ್ತಷ್ಟು ಮತಗಳನ್ನು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಅವರೊಟ್ಟಿಗೆ ಬಿಎಸ್‌ಪಿಯ ಎಂ.ಕೃಷ್ಣಮೂರ್ತಿಯವರು ಸಹ ಒಂದಷ್ಟು ಮತಗಳನ್ನು ಪಡೆಯಲಿದ್ದಾರೆ. ಇವರಿಬ್ಬರೂ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಹಾಲಿ ಶಾಸಕ ಡಾ.ಕೆ ಅನ್ನದಾನಿಯವರ ಮತಗಳನ್ನು ಕಬಳಿಸುತ್ತಾರೊ ಅಥವಾ ಮಾಜಿ ಸಚಿವ ನರೇಂದ್ರ ಸ್ವಾಮಿಯವರ ಮತಬುಟ್ಟಿಗೆ ಕೈ ಹಾಕುತ್ತಾರೊ ಎಂಬುದರ ಮೇಲೆ ಕ್ಷೇತ್ರದ ಫಲಿತಾಂಶ ನಿರ್ಧಾರವಾಗಲಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಳವಳ್ಳಿ: ಹಾಲಿ ಶಾಸಕ ಅನ್ನದಾನಿ ಮೇಲಿನ ಆಡಳಿತ ವಿರೋಧಿ ಅಲೆ ನರೇಂದ್ರ ಸ್ವಾಮಿಯವರಿಗೆ ವರವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...