Homeಕರ್ನಾಟಕಮಳವಳ್ಳಿಯಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ

ಮಳವಳ್ಳಿಯಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ

- Advertisement -
- Advertisement -

ದಲಿತ ಯುವಕನ ಮೇಲೆ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗೌಡೆಗೆರೆ ಗ್ರಾಮದಲ್ಲಿ ನಡೆದಿದೆ. ಗುಂಪೊಂದು ಅಡ್ಡಗಟ್ಟಿ ಜಾತಿ ನಿಂದಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡುವುದರ ಜೊತೆಗೆ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಿ ಮೆರವಣಿಗೆ ಮಾಡಿ ಅವಮಾನ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

ಈ ಕುರಿತು ಸಂತ್ರಸ್ತ ಯುವಕ ಕಿರಣ್‌ ಜಿ.ಗಂಗಾಧರ್‌ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ?

ಜ.6ರಂದು  ಸಂಜೆ 7.30ರ ಸುಮಾರಿಗೆ ನಾನು ನನ್ನ ಊರಿನಿಂದ ಹಾಡ್ಲಿ ಸರ್ಕಲ್‌ಗೆ ಸ್ನೇಹಿತನಾದ ಶಿವಕುಮರ್‌ ಬಳಿ ಡ್ರಾಪ್‌ ಕೇಳುತ್ತಿದ್ದಾಗ, ವೈ ಸಿ ಎಸ್‌ ಬಾರ್‌ ಮುಂಭಾಗ ಕಾರಿನಲ್ಲಿ ಅತಿ ವೇಗವಾಗಿ ಢಿಕ್ಕಿ ಹೊಡೆಯುವ ರೀತಿಯಲ್ಲಿ ಬಂದು ಬಸವನಪುರ ಗ್ರಾಮದ ಬಿಪಿ ಗಿರೀಶ, ಗಂಗಾಧರ, ಚನ್ನಿಪುರ ಗ್ರಾಮದ ಸುರೇಶ, ಅಗಸನಪುರ ಗ್ರಾಮದ ಅಪ್ಪಯ್ಯ, ಮತ್ತು ಬಸವನಪುರದ ಪ್ರಸನ್ನ ಇತರರು ಸೇರಿಕೊಂಡು ಗುಂಪುಗೂಡಿಕೊಂಡು ಬಂದು  ಬೈಕಿಗೆ ಅಡ್ಡಲಾಗಿ ನಿಂತು ಬೈಕ್‌ನಲ್ಲಿ ಕುಳಿತಿದ್ದ ನನ್ನನ್ನು ಕುತ್ತಿಗೆ ಹಿಡಿದು ಎಳೆದು ಅವಾಚ್ಯವಾಗಿ ನಿಂದಿಸಿ ಜಾತಿ ನಿಂದನೆ ಮಾಡಿದ್ದಾರೆ. ಬಳಿಕ ದೊಣ್ಣೆ ಮತ್ತು ರಾಡ್‌ನಿಂದ ಹಲ್ಲೆ ಮಾಡಲು ಮುಂದಾದಾಗ ನಾನು ತಪ್ಪಿಸಿಕೊಳ್ಳಲು ಯತ್ನಿಸಿದ್ದೇನೆ. ಈ ವೇಳೆ ನನ್ನನ್ನು ಅಟ್ಟಾಡಿಸಿಕೊಂಡು ಬಂದ ಗುಂಪು ಸಾರ್ವಜನಿಕವಾಗಿ ನನ್ನ ಬಟ್ಟೆ ಹರಿದು ದೊಣ್ಣೆ, ರಾಡ್‌ಗಳಿಂದ ಹಲ್ಲೆ ನಡೆಸಿ, ನನ್ನ ಎದೆ ಮತ್ತು ಹೊಟ್ಟೆಯ ಮೇಲೆ ಒದ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಹೊಲಯ ಜಾತಿಯ ಇವನನ್ನು ಬಿಡಬೇಡಿ ಎಂದು ಎಂದು ಥಳಿಸಿದ್ದಾರೆ. ಇದಲ್ಲದೆ ಕತ್ತಿನಲ್ಲಿದ್ದ 50ಗ್ರಾಂ ಚಿನ್ನದ ಸರವನ್ನು ಕಳ್ಳತನ ಮಾಡಿದ್ದಾರೆ. ಜೇಬಿನಲ್ಲಿದ್ದ 50ಸಾವಿರೂ ರೂವನ್ನು ದರೋಡೆ ಮಾಡಿಕೊಂಡು ಬಟ್ಟೆ ಹರಿದು ಹೀಯಾಳಿಸುತ್ತಾ, ಹಲ್ಲೆ ನಡೆಸುತ್ತಾ ಒಂದು ಕಿ.ಮೀ ಮೆರವಣಿಗೆ ಮಾಡಿದ್ದು, ಬಳಿಕ ಸರ್ಕಲ್‌ನಲ್ಲಿ ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ  ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮೈಮೇಲೆ ಮೂತ್ರವಿಸರ್ಜನೆ ಮಾಡಿದ್ದಾರೆ. ಬಳಿಕ ನನ್ನನ್ನು ಅಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ವೇಳೆ ಆರೋಪಿಗಳು ಕೊಲೆ ಮಾಡುವ ಬೆದರಿಕೆಯನ್ನು ಕೂಡ ಹಾಕಿದ್ದಾರೆ. ನಾನು ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದೆ. ನನ್ನನ್ನು ಬಳಿಕ ಹಲಗೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಾನು ಚಿಕಿತ್ಸೆ ಪಡೆದ ಬಳಿಕ ಊರಿನಲ್ಲಿ ಅವಮಾನದಿಂದ ಮುಖವನ್ನು ತೋರಿಸಲು ಸಾಧ್ಯವಾಗದೆ ಪತ್ನಿ ಮನೆ ಕನಕಪುರಕ್ಕೆ ತೆರಳಿರುತ್ತೇನೆ. ಬಳಿಕ ಕನಕಪುರ ಆಸ್ಪತ್ರೆಯಲ್ಲಿ 4 ದಿನ ಒಳರೋಗಿಯಾಗಿ ಚಿಕಿತ್ಸೆಯನ್ನು ಪಡೆದಿದ್ದೇನೆ. ತದ ನಂತರ ಆರೋಪಿಗಳು ರಾಜಿ ಪಂಚಾಯತಿಗೆ ಕರೆದು ದೂರು ನೀಡಬಾರದು ಎಂದು ಬೆದರಿಸಿದ್ದಾರೆ. ನಾನು ಈ ಅವಮಾನ ತಾಳಲಾರದೆ ಇದೀಗ ತಡವಾಗಿ ದೂರು ದಾಖಲಿಸುತ್ತೇನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಹೋರಾಟಗಾರ ಪ್ರೊ.ಹರಿರಾಮ್, ಮಳವಳ್ಳಿಯಲ್ಲಿ ನಡೆದಿರುವುದು ಜಾತಿ ಭಯೋತ್ಪಾದನೆ, ಹಲ್ಲೆ ಜೊತೆ ನಿಂದನೆ ಕೂಡ ಅಲ್ಲಿ ನಡೆದಿದೆ. ನಮ್ಮ ತಂಡ ನಾಳೆ ಮಳವಳ್ಳಿಗೆ ತೆರಳಲಿದೆ. ಪೊಲೀಸ್‌ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ಸರಕಾರ ಬಂದಾಗ ಕೆಲವರಿಗೆ ಒಂದು ರೀತಿ ಅಹಂ ಬಂದಿದೆ. ಕಾಂಗ್ರೆಸ್‌ ಬಂದ ಮೇಲೆ ದಲಿತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿದೆ. ಇವರು ಬಿಜೆಪಿಗಿಂತ ಭಿನ್ನವಾಗಿಲ್ಲ. ಎಲ್ಲೂ ದಲಿತ ದೌರ್ಜನ್ಯ ನಡೆದಾಗ ಗಂಭೀರವಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಎಫ್ಐಆರ್‌ ಆಗಬೇಕಾದರೂ ನಮ್ಮಂತಹ ಹೋರಾಟಗಾರರು ಒತ್ತಡ, ಬಲವಂತ, ಪ್ರತಿಭಟನೆ ಮಾಡಿದ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿದೆ. ದಲಿತರಿಗೆ ಸಂಬಂಧಿಸಿದ ಯೋಜನೆಗಳಿಗೆ ಕೂಡ ದುಡ್ಡು ನೀಡುತ್ತಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನವರು ಬಿಜೆಪಿಯನ್ನು ತೊರಿಸಿ ಸುಳ್ಳು ಹೇಳಿ ಮುಸ್ಲಿಮರು ಮತ್ತು ದಲಿತರ ವೋಟ್‌ ತೆಗೆದುಕೊಂಡರು. ಆದರೆ ಅಧಿಕಾರಕ್ಕೆ ಬಂದ ಮೇಲೆ ಕಲ್ಲಡ್ಕ ಭಟ್ಟ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದಾಗ ಆತನಿಗೆ ಬಂಧಿಸಲ್ಲ, ಸರಕಾರಿ ವಕೀಲರೇ ಆತನಿಗೆ ಬಂಧಿಸಲ್ಲ ಎಂದು ಹೇಳುತ್ತಾರೆ. ಆತನಿಗೆ ಜಾಮೀನು ಕೂಡ ಸಿಕ್ಕಿದೆ. ಚಿಕ್ಕಮಗಳೂರಿನ ಗೊಲ್ಲರ ಹಟ್ಟಿ ಘಟನೆ ನಡೆದಿದೆ, ಅದೇ ರೀತಿ ಮಡಿಕೇರಿಯಲ್ಲಿ ಹೆಣ್ಣುಮಗಳ ಮೇಲೆ ದೌರ್ಜನ್ಯ ನಡೆದಿದೆ. ಅದರಲ್ಲಿ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಿಲ್ಲ. ಎಲ್ಲಾ ಸಮಸ್ಯೆ ವೇಳೆ ಮುಂದೆ ನಿಂತು ಬಗೆಹರಿಸಬೇಕಾದ ಕಾಂಗ್ರೆಸ್‌ನವರು ಈ ಬಗ್ಗೆ ಯಾವುದೇ ಕಾಳಜಿ ವಹಿಸುತ್ತಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಹೋರಾಟಗಾರ ಭಾಸ್ಕರ್‌ ಪ್ರಸಾದ್,  ಮಳವಳ್ಳಿಯಲ್ಲಿ ಕಿರಣ್‌ ಎಂಬ ಯುವಕನ ಮೇಲೆ ತುಂಬಾ ಜನ ಗುಂಪಾಗಿ ಹೊಡೆದಿದ್ದಾರೆ. ಈ ಬಗ್ಗೆ ಡಿವೈಎಸ್ಪಿ ಜೊತೆ ಮಾತನಾಡಲು ಯತ್ನಿಸಿದೆ. ಆದರೆ ಅವರು ಪೋನ್‌ ತೆಗೆದಿಲ್ಲ. ಬಳಿಕ ಎಸ್‌ಐ ಜೊತೆ ಮಾತನಾಡಿದೆವು, ಮೊದಲು ಎಫ್‌ಐಆರ್‌ ಮಾಡಿರಲಿಲ್ಲ. ತುಂಬಾ ತಕರಾರು ಮಾಡಿದ್ರು, ಈಗಾದರೆ ನಾವೆಲ್ಲಾ ಅಲ್ಲಿಗೆ ಬರಬೇಕಾಗುತ್ತೆ ಎಂದ ಮೇಲೆ ಎಫ್‌ಐಆರ್‌ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಒಬ್ಬನಿಗೆ ಮಾತ್ರ ಬಂದಿಸಿದ್ದಾರೆ. ಬೇರೆ ಯಾರಿಗೂ ಬಂಧಿಸಿಲ್ಲ. ಸಂತ್ರಸ್ತನಿಗೆ ಪೊಲೀಸರು ಬೆದರಿಸಿದ್ದಾರೆ. ನೀನು 80 ಜನರನ್ನು ಎಫ್‌ಐಆರ್‌ನಲ್ಲಿ ಹೇಳಿದ್ದಿಯಾ, ನೀನೇ ಅವರನ್ನು ಹುಡುಕಿಕೊಡು ಎಂದು ಬೆದರಿಸಿದ್ದಾರೆ. ಈ ಹಿನ್ನೆಲೆ ನಾವು ನಾಳೆ ಮಳವಳ್ಳಿಗೆ ತೆರಳಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರಂಜನ್ ಗೊಗೊಯ್‌ಗೆ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’: ‘ರಾಮ ಮಂದಿರ’ ಸ್ಥಾಪನೆಯಾಗಿದ್ದರೆ…..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...