Homeಕರ್ನಾಟಕಮಳವಳ್ಳಿಯಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ

ಮಳವಳ್ಳಿಯಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ

- Advertisement -
- Advertisement -

ದಲಿತ ಯುವಕನ ಮೇಲೆ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗೌಡೆಗೆರೆ ಗ್ರಾಮದಲ್ಲಿ ನಡೆದಿದೆ. ಗುಂಪೊಂದು ಅಡ್ಡಗಟ್ಟಿ ಜಾತಿ ನಿಂದಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡುವುದರ ಜೊತೆಗೆ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಿ ಮೆರವಣಿಗೆ ಮಾಡಿ ಅವಮಾನ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

ಈ ಕುರಿತು ಸಂತ್ರಸ್ತ ಯುವಕ ಕಿರಣ್‌ ಜಿ.ಗಂಗಾಧರ್‌ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ?

ಜ.6ರಂದು  ಸಂಜೆ 7.30ರ ಸುಮಾರಿಗೆ ನಾನು ನನ್ನ ಊರಿನಿಂದ ಹಾಡ್ಲಿ ಸರ್ಕಲ್‌ಗೆ ಸ್ನೇಹಿತನಾದ ಶಿವಕುಮರ್‌ ಬಳಿ ಡ್ರಾಪ್‌ ಕೇಳುತ್ತಿದ್ದಾಗ, ವೈ ಸಿ ಎಸ್‌ ಬಾರ್‌ ಮುಂಭಾಗ ಕಾರಿನಲ್ಲಿ ಅತಿ ವೇಗವಾಗಿ ಢಿಕ್ಕಿ ಹೊಡೆಯುವ ರೀತಿಯಲ್ಲಿ ಬಂದು ಬಸವನಪುರ ಗ್ರಾಮದ ಬಿಪಿ ಗಿರೀಶ, ಗಂಗಾಧರ, ಚನ್ನಿಪುರ ಗ್ರಾಮದ ಸುರೇಶ, ಅಗಸನಪುರ ಗ್ರಾಮದ ಅಪ್ಪಯ್ಯ, ಮತ್ತು ಬಸವನಪುರದ ಪ್ರಸನ್ನ ಇತರರು ಸೇರಿಕೊಂಡು ಗುಂಪುಗೂಡಿಕೊಂಡು ಬಂದು  ಬೈಕಿಗೆ ಅಡ್ಡಲಾಗಿ ನಿಂತು ಬೈಕ್‌ನಲ್ಲಿ ಕುಳಿತಿದ್ದ ನನ್ನನ್ನು ಕುತ್ತಿಗೆ ಹಿಡಿದು ಎಳೆದು ಅವಾಚ್ಯವಾಗಿ ನಿಂದಿಸಿ ಜಾತಿ ನಿಂದನೆ ಮಾಡಿದ್ದಾರೆ. ಬಳಿಕ ದೊಣ್ಣೆ ಮತ್ತು ರಾಡ್‌ನಿಂದ ಹಲ್ಲೆ ಮಾಡಲು ಮುಂದಾದಾಗ ನಾನು ತಪ್ಪಿಸಿಕೊಳ್ಳಲು ಯತ್ನಿಸಿದ್ದೇನೆ. ಈ ವೇಳೆ ನನ್ನನ್ನು ಅಟ್ಟಾಡಿಸಿಕೊಂಡು ಬಂದ ಗುಂಪು ಸಾರ್ವಜನಿಕವಾಗಿ ನನ್ನ ಬಟ್ಟೆ ಹರಿದು ದೊಣ್ಣೆ, ರಾಡ್‌ಗಳಿಂದ ಹಲ್ಲೆ ನಡೆಸಿ, ನನ್ನ ಎದೆ ಮತ್ತು ಹೊಟ್ಟೆಯ ಮೇಲೆ ಒದ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಹೊಲಯ ಜಾತಿಯ ಇವನನ್ನು ಬಿಡಬೇಡಿ ಎಂದು ಎಂದು ಥಳಿಸಿದ್ದಾರೆ. ಇದಲ್ಲದೆ ಕತ್ತಿನಲ್ಲಿದ್ದ 50ಗ್ರಾಂ ಚಿನ್ನದ ಸರವನ್ನು ಕಳ್ಳತನ ಮಾಡಿದ್ದಾರೆ. ಜೇಬಿನಲ್ಲಿದ್ದ 50ಸಾವಿರೂ ರೂವನ್ನು ದರೋಡೆ ಮಾಡಿಕೊಂಡು ಬಟ್ಟೆ ಹರಿದು ಹೀಯಾಳಿಸುತ್ತಾ, ಹಲ್ಲೆ ನಡೆಸುತ್ತಾ ಒಂದು ಕಿ.ಮೀ ಮೆರವಣಿಗೆ ಮಾಡಿದ್ದು, ಬಳಿಕ ಸರ್ಕಲ್‌ನಲ್ಲಿ ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ  ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮೈಮೇಲೆ ಮೂತ್ರವಿಸರ್ಜನೆ ಮಾಡಿದ್ದಾರೆ. ಬಳಿಕ ನನ್ನನ್ನು ಅಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ವೇಳೆ ಆರೋಪಿಗಳು ಕೊಲೆ ಮಾಡುವ ಬೆದರಿಕೆಯನ್ನು ಕೂಡ ಹಾಕಿದ್ದಾರೆ. ನಾನು ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದೆ. ನನ್ನನ್ನು ಬಳಿಕ ಹಲಗೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಾನು ಚಿಕಿತ್ಸೆ ಪಡೆದ ಬಳಿಕ ಊರಿನಲ್ಲಿ ಅವಮಾನದಿಂದ ಮುಖವನ್ನು ತೋರಿಸಲು ಸಾಧ್ಯವಾಗದೆ ಪತ್ನಿ ಮನೆ ಕನಕಪುರಕ್ಕೆ ತೆರಳಿರುತ್ತೇನೆ. ಬಳಿಕ ಕನಕಪುರ ಆಸ್ಪತ್ರೆಯಲ್ಲಿ 4 ದಿನ ಒಳರೋಗಿಯಾಗಿ ಚಿಕಿತ್ಸೆಯನ್ನು ಪಡೆದಿದ್ದೇನೆ. ತದ ನಂತರ ಆರೋಪಿಗಳು ರಾಜಿ ಪಂಚಾಯತಿಗೆ ಕರೆದು ದೂರು ನೀಡಬಾರದು ಎಂದು ಬೆದರಿಸಿದ್ದಾರೆ. ನಾನು ಈ ಅವಮಾನ ತಾಳಲಾರದೆ ಇದೀಗ ತಡವಾಗಿ ದೂರು ದಾಖಲಿಸುತ್ತೇನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಹೋರಾಟಗಾರ ಪ್ರೊ.ಹರಿರಾಮ್, ಮಳವಳ್ಳಿಯಲ್ಲಿ ನಡೆದಿರುವುದು ಜಾತಿ ಭಯೋತ್ಪಾದನೆ, ಹಲ್ಲೆ ಜೊತೆ ನಿಂದನೆ ಕೂಡ ಅಲ್ಲಿ ನಡೆದಿದೆ. ನಮ್ಮ ತಂಡ ನಾಳೆ ಮಳವಳ್ಳಿಗೆ ತೆರಳಲಿದೆ. ಪೊಲೀಸ್‌ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ಸರಕಾರ ಬಂದಾಗ ಕೆಲವರಿಗೆ ಒಂದು ರೀತಿ ಅಹಂ ಬಂದಿದೆ. ಕಾಂಗ್ರೆಸ್‌ ಬಂದ ಮೇಲೆ ದಲಿತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿದೆ. ಇವರು ಬಿಜೆಪಿಗಿಂತ ಭಿನ್ನವಾಗಿಲ್ಲ. ಎಲ್ಲೂ ದಲಿತ ದೌರ್ಜನ್ಯ ನಡೆದಾಗ ಗಂಭೀರವಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಎಫ್ಐಆರ್‌ ಆಗಬೇಕಾದರೂ ನಮ್ಮಂತಹ ಹೋರಾಟಗಾರರು ಒತ್ತಡ, ಬಲವಂತ, ಪ್ರತಿಭಟನೆ ಮಾಡಿದ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿದೆ. ದಲಿತರಿಗೆ ಸಂಬಂಧಿಸಿದ ಯೋಜನೆಗಳಿಗೆ ಕೂಡ ದುಡ್ಡು ನೀಡುತ್ತಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನವರು ಬಿಜೆಪಿಯನ್ನು ತೊರಿಸಿ ಸುಳ್ಳು ಹೇಳಿ ಮುಸ್ಲಿಮರು ಮತ್ತು ದಲಿತರ ವೋಟ್‌ ತೆಗೆದುಕೊಂಡರು. ಆದರೆ ಅಧಿಕಾರಕ್ಕೆ ಬಂದ ಮೇಲೆ ಕಲ್ಲಡ್ಕ ಭಟ್ಟ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದಾಗ ಆತನಿಗೆ ಬಂಧಿಸಲ್ಲ, ಸರಕಾರಿ ವಕೀಲರೇ ಆತನಿಗೆ ಬಂಧಿಸಲ್ಲ ಎಂದು ಹೇಳುತ್ತಾರೆ. ಆತನಿಗೆ ಜಾಮೀನು ಕೂಡ ಸಿಕ್ಕಿದೆ. ಚಿಕ್ಕಮಗಳೂರಿನ ಗೊಲ್ಲರ ಹಟ್ಟಿ ಘಟನೆ ನಡೆದಿದೆ, ಅದೇ ರೀತಿ ಮಡಿಕೇರಿಯಲ್ಲಿ ಹೆಣ್ಣುಮಗಳ ಮೇಲೆ ದೌರ್ಜನ್ಯ ನಡೆದಿದೆ. ಅದರಲ್ಲಿ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಿಲ್ಲ. ಎಲ್ಲಾ ಸಮಸ್ಯೆ ವೇಳೆ ಮುಂದೆ ನಿಂತು ಬಗೆಹರಿಸಬೇಕಾದ ಕಾಂಗ್ರೆಸ್‌ನವರು ಈ ಬಗ್ಗೆ ಯಾವುದೇ ಕಾಳಜಿ ವಹಿಸುತ್ತಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಹೋರಾಟಗಾರ ಭಾಸ್ಕರ್‌ ಪ್ರಸಾದ್,  ಮಳವಳ್ಳಿಯಲ್ಲಿ ಕಿರಣ್‌ ಎಂಬ ಯುವಕನ ಮೇಲೆ ತುಂಬಾ ಜನ ಗುಂಪಾಗಿ ಹೊಡೆದಿದ್ದಾರೆ. ಈ ಬಗ್ಗೆ ಡಿವೈಎಸ್ಪಿ ಜೊತೆ ಮಾತನಾಡಲು ಯತ್ನಿಸಿದೆ. ಆದರೆ ಅವರು ಪೋನ್‌ ತೆಗೆದಿಲ್ಲ. ಬಳಿಕ ಎಸ್‌ಐ ಜೊತೆ ಮಾತನಾಡಿದೆವು, ಮೊದಲು ಎಫ್‌ಐಆರ್‌ ಮಾಡಿರಲಿಲ್ಲ. ತುಂಬಾ ತಕರಾರು ಮಾಡಿದ್ರು, ಈಗಾದರೆ ನಾವೆಲ್ಲಾ ಅಲ್ಲಿಗೆ ಬರಬೇಕಾಗುತ್ತೆ ಎಂದ ಮೇಲೆ ಎಫ್‌ಐಆರ್‌ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಒಬ್ಬನಿಗೆ ಮಾತ್ರ ಬಂದಿಸಿದ್ದಾರೆ. ಬೇರೆ ಯಾರಿಗೂ ಬಂಧಿಸಿಲ್ಲ. ಸಂತ್ರಸ್ತನಿಗೆ ಪೊಲೀಸರು ಬೆದರಿಸಿದ್ದಾರೆ. ನೀನು 80 ಜನರನ್ನು ಎಫ್‌ಐಆರ್‌ನಲ್ಲಿ ಹೇಳಿದ್ದಿಯಾ, ನೀನೇ ಅವರನ್ನು ಹುಡುಕಿಕೊಡು ಎಂದು ಬೆದರಿಸಿದ್ದಾರೆ. ಈ ಹಿನ್ನೆಲೆ ನಾವು ನಾಳೆ ಮಳವಳ್ಳಿಗೆ ತೆರಳಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರಂಜನ್ ಗೊಗೊಯ್‌ಗೆ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’: ‘ರಾಮ ಮಂದಿರ’ ಸ್ಥಾಪನೆಯಾಗಿದ್ದರೆ…..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...