Homeಕರ್ನಾಟಕಮಳವಳ್ಳಿಯಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ

ಮಳವಳ್ಳಿಯಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ

- Advertisement -
- Advertisement -

ದಲಿತ ಯುವಕನ ಮೇಲೆ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗೌಡೆಗೆರೆ ಗ್ರಾಮದಲ್ಲಿ ನಡೆದಿದೆ. ಗುಂಪೊಂದು ಅಡ್ಡಗಟ್ಟಿ ಜಾತಿ ನಿಂದಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡುವುದರ ಜೊತೆಗೆ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಿ ಮೆರವಣಿಗೆ ಮಾಡಿ ಅವಮಾನ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

ಈ ಕುರಿತು ಸಂತ್ರಸ್ತ ಯುವಕ ಕಿರಣ್‌ ಜಿ.ಗಂಗಾಧರ್‌ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ?

ಜ.6ರಂದು  ಸಂಜೆ 7.30ರ ಸುಮಾರಿಗೆ ನಾನು ನನ್ನ ಊರಿನಿಂದ ಹಾಡ್ಲಿ ಸರ್ಕಲ್‌ಗೆ ಸ್ನೇಹಿತನಾದ ಶಿವಕುಮರ್‌ ಬಳಿ ಡ್ರಾಪ್‌ ಕೇಳುತ್ತಿದ್ದಾಗ, ವೈ ಸಿ ಎಸ್‌ ಬಾರ್‌ ಮುಂಭಾಗ ಕಾರಿನಲ್ಲಿ ಅತಿ ವೇಗವಾಗಿ ಢಿಕ್ಕಿ ಹೊಡೆಯುವ ರೀತಿಯಲ್ಲಿ ಬಂದು ಬಸವನಪುರ ಗ್ರಾಮದ ಬಿಪಿ ಗಿರೀಶ, ಗಂಗಾಧರ, ಚನ್ನಿಪುರ ಗ್ರಾಮದ ಸುರೇಶ, ಅಗಸನಪುರ ಗ್ರಾಮದ ಅಪ್ಪಯ್ಯ, ಮತ್ತು ಬಸವನಪುರದ ಪ್ರಸನ್ನ ಇತರರು ಸೇರಿಕೊಂಡು ಗುಂಪುಗೂಡಿಕೊಂಡು ಬಂದು  ಬೈಕಿಗೆ ಅಡ್ಡಲಾಗಿ ನಿಂತು ಬೈಕ್‌ನಲ್ಲಿ ಕುಳಿತಿದ್ದ ನನ್ನನ್ನು ಕುತ್ತಿಗೆ ಹಿಡಿದು ಎಳೆದು ಅವಾಚ್ಯವಾಗಿ ನಿಂದಿಸಿ ಜಾತಿ ನಿಂದನೆ ಮಾಡಿದ್ದಾರೆ. ಬಳಿಕ ದೊಣ್ಣೆ ಮತ್ತು ರಾಡ್‌ನಿಂದ ಹಲ್ಲೆ ಮಾಡಲು ಮುಂದಾದಾಗ ನಾನು ತಪ್ಪಿಸಿಕೊಳ್ಳಲು ಯತ್ನಿಸಿದ್ದೇನೆ. ಈ ವೇಳೆ ನನ್ನನ್ನು ಅಟ್ಟಾಡಿಸಿಕೊಂಡು ಬಂದ ಗುಂಪು ಸಾರ್ವಜನಿಕವಾಗಿ ನನ್ನ ಬಟ್ಟೆ ಹರಿದು ದೊಣ್ಣೆ, ರಾಡ್‌ಗಳಿಂದ ಹಲ್ಲೆ ನಡೆಸಿ, ನನ್ನ ಎದೆ ಮತ್ತು ಹೊಟ್ಟೆಯ ಮೇಲೆ ಒದ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಹೊಲಯ ಜಾತಿಯ ಇವನನ್ನು ಬಿಡಬೇಡಿ ಎಂದು ಎಂದು ಥಳಿಸಿದ್ದಾರೆ. ಇದಲ್ಲದೆ ಕತ್ತಿನಲ್ಲಿದ್ದ 50ಗ್ರಾಂ ಚಿನ್ನದ ಸರವನ್ನು ಕಳ್ಳತನ ಮಾಡಿದ್ದಾರೆ. ಜೇಬಿನಲ್ಲಿದ್ದ 50ಸಾವಿರೂ ರೂವನ್ನು ದರೋಡೆ ಮಾಡಿಕೊಂಡು ಬಟ್ಟೆ ಹರಿದು ಹೀಯಾಳಿಸುತ್ತಾ, ಹಲ್ಲೆ ನಡೆಸುತ್ತಾ ಒಂದು ಕಿ.ಮೀ ಮೆರವಣಿಗೆ ಮಾಡಿದ್ದು, ಬಳಿಕ ಸರ್ಕಲ್‌ನಲ್ಲಿ ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ  ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮೈಮೇಲೆ ಮೂತ್ರವಿಸರ್ಜನೆ ಮಾಡಿದ್ದಾರೆ. ಬಳಿಕ ನನ್ನನ್ನು ಅಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ವೇಳೆ ಆರೋಪಿಗಳು ಕೊಲೆ ಮಾಡುವ ಬೆದರಿಕೆಯನ್ನು ಕೂಡ ಹಾಕಿದ್ದಾರೆ. ನಾನು ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದೆ. ನನ್ನನ್ನು ಬಳಿಕ ಹಲಗೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಾನು ಚಿಕಿತ್ಸೆ ಪಡೆದ ಬಳಿಕ ಊರಿನಲ್ಲಿ ಅವಮಾನದಿಂದ ಮುಖವನ್ನು ತೋರಿಸಲು ಸಾಧ್ಯವಾಗದೆ ಪತ್ನಿ ಮನೆ ಕನಕಪುರಕ್ಕೆ ತೆರಳಿರುತ್ತೇನೆ. ಬಳಿಕ ಕನಕಪುರ ಆಸ್ಪತ್ರೆಯಲ್ಲಿ 4 ದಿನ ಒಳರೋಗಿಯಾಗಿ ಚಿಕಿತ್ಸೆಯನ್ನು ಪಡೆದಿದ್ದೇನೆ. ತದ ನಂತರ ಆರೋಪಿಗಳು ರಾಜಿ ಪಂಚಾಯತಿಗೆ ಕರೆದು ದೂರು ನೀಡಬಾರದು ಎಂದು ಬೆದರಿಸಿದ್ದಾರೆ. ನಾನು ಈ ಅವಮಾನ ತಾಳಲಾರದೆ ಇದೀಗ ತಡವಾಗಿ ದೂರು ದಾಖಲಿಸುತ್ತೇನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಹೋರಾಟಗಾರ ಪ್ರೊ.ಹರಿರಾಮ್, ಮಳವಳ್ಳಿಯಲ್ಲಿ ನಡೆದಿರುವುದು ಜಾತಿ ಭಯೋತ್ಪಾದನೆ, ಹಲ್ಲೆ ಜೊತೆ ನಿಂದನೆ ಕೂಡ ಅಲ್ಲಿ ನಡೆದಿದೆ. ನಮ್ಮ ತಂಡ ನಾಳೆ ಮಳವಳ್ಳಿಗೆ ತೆರಳಲಿದೆ. ಪೊಲೀಸ್‌ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ಸರಕಾರ ಬಂದಾಗ ಕೆಲವರಿಗೆ ಒಂದು ರೀತಿ ಅಹಂ ಬಂದಿದೆ. ಕಾಂಗ್ರೆಸ್‌ ಬಂದ ಮೇಲೆ ದಲಿತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿದೆ. ಇವರು ಬಿಜೆಪಿಗಿಂತ ಭಿನ್ನವಾಗಿಲ್ಲ. ಎಲ್ಲೂ ದಲಿತ ದೌರ್ಜನ್ಯ ನಡೆದಾಗ ಗಂಭೀರವಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಎಫ್ಐಆರ್‌ ಆಗಬೇಕಾದರೂ ನಮ್ಮಂತಹ ಹೋರಾಟಗಾರರು ಒತ್ತಡ, ಬಲವಂತ, ಪ್ರತಿಭಟನೆ ಮಾಡಿದ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿದೆ. ದಲಿತರಿಗೆ ಸಂಬಂಧಿಸಿದ ಯೋಜನೆಗಳಿಗೆ ಕೂಡ ದುಡ್ಡು ನೀಡುತ್ತಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನವರು ಬಿಜೆಪಿಯನ್ನು ತೊರಿಸಿ ಸುಳ್ಳು ಹೇಳಿ ಮುಸ್ಲಿಮರು ಮತ್ತು ದಲಿತರ ವೋಟ್‌ ತೆಗೆದುಕೊಂಡರು. ಆದರೆ ಅಧಿಕಾರಕ್ಕೆ ಬಂದ ಮೇಲೆ ಕಲ್ಲಡ್ಕ ಭಟ್ಟ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದಾಗ ಆತನಿಗೆ ಬಂಧಿಸಲ್ಲ, ಸರಕಾರಿ ವಕೀಲರೇ ಆತನಿಗೆ ಬಂಧಿಸಲ್ಲ ಎಂದು ಹೇಳುತ್ತಾರೆ. ಆತನಿಗೆ ಜಾಮೀನು ಕೂಡ ಸಿಕ್ಕಿದೆ. ಚಿಕ್ಕಮಗಳೂರಿನ ಗೊಲ್ಲರ ಹಟ್ಟಿ ಘಟನೆ ನಡೆದಿದೆ, ಅದೇ ರೀತಿ ಮಡಿಕೇರಿಯಲ್ಲಿ ಹೆಣ್ಣುಮಗಳ ಮೇಲೆ ದೌರ್ಜನ್ಯ ನಡೆದಿದೆ. ಅದರಲ್ಲಿ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಿಲ್ಲ. ಎಲ್ಲಾ ಸಮಸ್ಯೆ ವೇಳೆ ಮುಂದೆ ನಿಂತು ಬಗೆಹರಿಸಬೇಕಾದ ಕಾಂಗ್ರೆಸ್‌ನವರು ಈ ಬಗ್ಗೆ ಯಾವುದೇ ಕಾಳಜಿ ವಹಿಸುತ್ತಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಹೋರಾಟಗಾರ ಭಾಸ್ಕರ್‌ ಪ್ರಸಾದ್,  ಮಳವಳ್ಳಿಯಲ್ಲಿ ಕಿರಣ್‌ ಎಂಬ ಯುವಕನ ಮೇಲೆ ತುಂಬಾ ಜನ ಗುಂಪಾಗಿ ಹೊಡೆದಿದ್ದಾರೆ. ಈ ಬಗ್ಗೆ ಡಿವೈಎಸ್ಪಿ ಜೊತೆ ಮಾತನಾಡಲು ಯತ್ನಿಸಿದೆ. ಆದರೆ ಅವರು ಪೋನ್‌ ತೆಗೆದಿಲ್ಲ. ಬಳಿಕ ಎಸ್‌ಐ ಜೊತೆ ಮಾತನಾಡಿದೆವು, ಮೊದಲು ಎಫ್‌ಐಆರ್‌ ಮಾಡಿರಲಿಲ್ಲ. ತುಂಬಾ ತಕರಾರು ಮಾಡಿದ್ರು, ಈಗಾದರೆ ನಾವೆಲ್ಲಾ ಅಲ್ಲಿಗೆ ಬರಬೇಕಾಗುತ್ತೆ ಎಂದ ಮೇಲೆ ಎಫ್‌ಐಆರ್‌ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಒಬ್ಬನಿಗೆ ಮಾತ್ರ ಬಂದಿಸಿದ್ದಾರೆ. ಬೇರೆ ಯಾರಿಗೂ ಬಂಧಿಸಿಲ್ಲ. ಸಂತ್ರಸ್ತನಿಗೆ ಪೊಲೀಸರು ಬೆದರಿಸಿದ್ದಾರೆ. ನೀನು 80 ಜನರನ್ನು ಎಫ್‌ಐಆರ್‌ನಲ್ಲಿ ಹೇಳಿದ್ದಿಯಾ, ನೀನೇ ಅವರನ್ನು ಹುಡುಕಿಕೊಡು ಎಂದು ಬೆದರಿಸಿದ್ದಾರೆ. ಈ ಹಿನ್ನೆಲೆ ನಾವು ನಾಳೆ ಮಳವಳ್ಳಿಗೆ ತೆರಳಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರಂಜನ್ ಗೊಗೊಯ್‌ಗೆ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’: ‘ರಾಮ ಮಂದಿರ’ ಸ್ಥಾಪನೆಯಾಗಿದ್ದರೆ…..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...