Homeಕರ್ನಾಟಕಮಳವಳ್ಳಿಯಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ

ಮಳವಳ್ಳಿಯಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ

- Advertisement -
- Advertisement -

ದಲಿತ ಯುವಕನ ಮೇಲೆ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗೌಡೆಗೆರೆ ಗ್ರಾಮದಲ್ಲಿ ನಡೆದಿದೆ. ಗುಂಪೊಂದು ಅಡ್ಡಗಟ್ಟಿ ಜಾತಿ ನಿಂದಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡುವುದರ ಜೊತೆಗೆ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಿ ಮೆರವಣಿಗೆ ಮಾಡಿ ಅವಮಾನ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

ಈ ಕುರಿತು ಸಂತ್ರಸ್ತ ಯುವಕ ಕಿರಣ್‌ ಜಿ.ಗಂಗಾಧರ್‌ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ?

ಜ.6ರಂದು  ಸಂಜೆ 7.30ರ ಸುಮಾರಿಗೆ ನಾನು ನನ್ನ ಊರಿನಿಂದ ಹಾಡ್ಲಿ ಸರ್ಕಲ್‌ಗೆ ಸ್ನೇಹಿತನಾದ ಶಿವಕುಮರ್‌ ಬಳಿ ಡ್ರಾಪ್‌ ಕೇಳುತ್ತಿದ್ದಾಗ, ವೈ ಸಿ ಎಸ್‌ ಬಾರ್‌ ಮುಂಭಾಗ ಕಾರಿನಲ್ಲಿ ಅತಿ ವೇಗವಾಗಿ ಢಿಕ್ಕಿ ಹೊಡೆಯುವ ರೀತಿಯಲ್ಲಿ ಬಂದು ಬಸವನಪುರ ಗ್ರಾಮದ ಬಿಪಿ ಗಿರೀಶ, ಗಂಗಾಧರ, ಚನ್ನಿಪುರ ಗ್ರಾಮದ ಸುರೇಶ, ಅಗಸನಪುರ ಗ್ರಾಮದ ಅಪ್ಪಯ್ಯ, ಮತ್ತು ಬಸವನಪುರದ ಪ್ರಸನ್ನ ಇತರರು ಸೇರಿಕೊಂಡು ಗುಂಪುಗೂಡಿಕೊಂಡು ಬಂದು  ಬೈಕಿಗೆ ಅಡ್ಡಲಾಗಿ ನಿಂತು ಬೈಕ್‌ನಲ್ಲಿ ಕುಳಿತಿದ್ದ ನನ್ನನ್ನು ಕುತ್ತಿಗೆ ಹಿಡಿದು ಎಳೆದು ಅವಾಚ್ಯವಾಗಿ ನಿಂದಿಸಿ ಜಾತಿ ನಿಂದನೆ ಮಾಡಿದ್ದಾರೆ. ಬಳಿಕ ದೊಣ್ಣೆ ಮತ್ತು ರಾಡ್‌ನಿಂದ ಹಲ್ಲೆ ಮಾಡಲು ಮುಂದಾದಾಗ ನಾನು ತಪ್ಪಿಸಿಕೊಳ್ಳಲು ಯತ್ನಿಸಿದ್ದೇನೆ. ಈ ವೇಳೆ ನನ್ನನ್ನು ಅಟ್ಟಾಡಿಸಿಕೊಂಡು ಬಂದ ಗುಂಪು ಸಾರ್ವಜನಿಕವಾಗಿ ನನ್ನ ಬಟ್ಟೆ ಹರಿದು ದೊಣ್ಣೆ, ರಾಡ್‌ಗಳಿಂದ ಹಲ್ಲೆ ನಡೆಸಿ, ನನ್ನ ಎದೆ ಮತ್ತು ಹೊಟ್ಟೆಯ ಮೇಲೆ ಒದ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಹೊಲಯ ಜಾತಿಯ ಇವನನ್ನು ಬಿಡಬೇಡಿ ಎಂದು ಎಂದು ಥಳಿಸಿದ್ದಾರೆ. ಇದಲ್ಲದೆ ಕತ್ತಿನಲ್ಲಿದ್ದ 50ಗ್ರಾಂ ಚಿನ್ನದ ಸರವನ್ನು ಕಳ್ಳತನ ಮಾಡಿದ್ದಾರೆ. ಜೇಬಿನಲ್ಲಿದ್ದ 50ಸಾವಿರೂ ರೂವನ್ನು ದರೋಡೆ ಮಾಡಿಕೊಂಡು ಬಟ್ಟೆ ಹರಿದು ಹೀಯಾಳಿಸುತ್ತಾ, ಹಲ್ಲೆ ನಡೆಸುತ್ತಾ ಒಂದು ಕಿ.ಮೀ ಮೆರವಣಿಗೆ ಮಾಡಿದ್ದು, ಬಳಿಕ ಸರ್ಕಲ್‌ನಲ್ಲಿ ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ  ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮೈಮೇಲೆ ಮೂತ್ರವಿಸರ್ಜನೆ ಮಾಡಿದ್ದಾರೆ. ಬಳಿಕ ನನ್ನನ್ನು ಅಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ವೇಳೆ ಆರೋಪಿಗಳು ಕೊಲೆ ಮಾಡುವ ಬೆದರಿಕೆಯನ್ನು ಕೂಡ ಹಾಕಿದ್ದಾರೆ. ನಾನು ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದೆ. ನನ್ನನ್ನು ಬಳಿಕ ಹಲಗೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಾನು ಚಿಕಿತ್ಸೆ ಪಡೆದ ಬಳಿಕ ಊರಿನಲ್ಲಿ ಅವಮಾನದಿಂದ ಮುಖವನ್ನು ತೋರಿಸಲು ಸಾಧ್ಯವಾಗದೆ ಪತ್ನಿ ಮನೆ ಕನಕಪುರಕ್ಕೆ ತೆರಳಿರುತ್ತೇನೆ. ಬಳಿಕ ಕನಕಪುರ ಆಸ್ಪತ್ರೆಯಲ್ಲಿ 4 ದಿನ ಒಳರೋಗಿಯಾಗಿ ಚಿಕಿತ್ಸೆಯನ್ನು ಪಡೆದಿದ್ದೇನೆ. ತದ ನಂತರ ಆರೋಪಿಗಳು ರಾಜಿ ಪಂಚಾಯತಿಗೆ ಕರೆದು ದೂರು ನೀಡಬಾರದು ಎಂದು ಬೆದರಿಸಿದ್ದಾರೆ. ನಾನು ಈ ಅವಮಾನ ತಾಳಲಾರದೆ ಇದೀಗ ತಡವಾಗಿ ದೂರು ದಾಖಲಿಸುತ್ತೇನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಹೋರಾಟಗಾರ ಪ್ರೊ.ಹರಿರಾಮ್, ಮಳವಳ್ಳಿಯಲ್ಲಿ ನಡೆದಿರುವುದು ಜಾತಿ ಭಯೋತ್ಪಾದನೆ, ಹಲ್ಲೆ ಜೊತೆ ನಿಂದನೆ ಕೂಡ ಅಲ್ಲಿ ನಡೆದಿದೆ. ನಮ್ಮ ತಂಡ ನಾಳೆ ಮಳವಳ್ಳಿಗೆ ತೆರಳಲಿದೆ. ಪೊಲೀಸ್‌ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ಸರಕಾರ ಬಂದಾಗ ಕೆಲವರಿಗೆ ಒಂದು ರೀತಿ ಅಹಂ ಬಂದಿದೆ. ಕಾಂಗ್ರೆಸ್‌ ಬಂದ ಮೇಲೆ ದಲಿತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿದೆ. ಇವರು ಬಿಜೆಪಿಗಿಂತ ಭಿನ್ನವಾಗಿಲ್ಲ. ಎಲ್ಲೂ ದಲಿತ ದೌರ್ಜನ್ಯ ನಡೆದಾಗ ಗಂಭೀರವಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಎಫ್ಐಆರ್‌ ಆಗಬೇಕಾದರೂ ನಮ್ಮಂತಹ ಹೋರಾಟಗಾರರು ಒತ್ತಡ, ಬಲವಂತ, ಪ್ರತಿಭಟನೆ ಮಾಡಿದ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿದೆ. ದಲಿತರಿಗೆ ಸಂಬಂಧಿಸಿದ ಯೋಜನೆಗಳಿಗೆ ಕೂಡ ದುಡ್ಡು ನೀಡುತ್ತಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನವರು ಬಿಜೆಪಿಯನ್ನು ತೊರಿಸಿ ಸುಳ್ಳು ಹೇಳಿ ಮುಸ್ಲಿಮರು ಮತ್ತು ದಲಿತರ ವೋಟ್‌ ತೆಗೆದುಕೊಂಡರು. ಆದರೆ ಅಧಿಕಾರಕ್ಕೆ ಬಂದ ಮೇಲೆ ಕಲ್ಲಡ್ಕ ಭಟ್ಟ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದಾಗ ಆತನಿಗೆ ಬಂಧಿಸಲ್ಲ, ಸರಕಾರಿ ವಕೀಲರೇ ಆತನಿಗೆ ಬಂಧಿಸಲ್ಲ ಎಂದು ಹೇಳುತ್ತಾರೆ. ಆತನಿಗೆ ಜಾಮೀನು ಕೂಡ ಸಿಕ್ಕಿದೆ. ಚಿಕ್ಕಮಗಳೂರಿನ ಗೊಲ್ಲರ ಹಟ್ಟಿ ಘಟನೆ ನಡೆದಿದೆ, ಅದೇ ರೀತಿ ಮಡಿಕೇರಿಯಲ್ಲಿ ಹೆಣ್ಣುಮಗಳ ಮೇಲೆ ದೌರ್ಜನ್ಯ ನಡೆದಿದೆ. ಅದರಲ್ಲಿ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಿಲ್ಲ. ಎಲ್ಲಾ ಸಮಸ್ಯೆ ವೇಳೆ ಮುಂದೆ ನಿಂತು ಬಗೆಹರಿಸಬೇಕಾದ ಕಾಂಗ್ರೆಸ್‌ನವರು ಈ ಬಗ್ಗೆ ಯಾವುದೇ ಕಾಳಜಿ ವಹಿಸುತ್ತಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಹೋರಾಟಗಾರ ಭಾಸ್ಕರ್‌ ಪ್ರಸಾದ್,  ಮಳವಳ್ಳಿಯಲ್ಲಿ ಕಿರಣ್‌ ಎಂಬ ಯುವಕನ ಮೇಲೆ ತುಂಬಾ ಜನ ಗುಂಪಾಗಿ ಹೊಡೆದಿದ್ದಾರೆ. ಈ ಬಗ್ಗೆ ಡಿವೈಎಸ್ಪಿ ಜೊತೆ ಮಾತನಾಡಲು ಯತ್ನಿಸಿದೆ. ಆದರೆ ಅವರು ಪೋನ್‌ ತೆಗೆದಿಲ್ಲ. ಬಳಿಕ ಎಸ್‌ಐ ಜೊತೆ ಮಾತನಾಡಿದೆವು, ಮೊದಲು ಎಫ್‌ಐಆರ್‌ ಮಾಡಿರಲಿಲ್ಲ. ತುಂಬಾ ತಕರಾರು ಮಾಡಿದ್ರು, ಈಗಾದರೆ ನಾವೆಲ್ಲಾ ಅಲ್ಲಿಗೆ ಬರಬೇಕಾಗುತ್ತೆ ಎಂದ ಮೇಲೆ ಎಫ್‌ಐಆರ್‌ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಒಬ್ಬನಿಗೆ ಮಾತ್ರ ಬಂದಿಸಿದ್ದಾರೆ. ಬೇರೆ ಯಾರಿಗೂ ಬಂಧಿಸಿಲ್ಲ. ಸಂತ್ರಸ್ತನಿಗೆ ಪೊಲೀಸರು ಬೆದರಿಸಿದ್ದಾರೆ. ನೀನು 80 ಜನರನ್ನು ಎಫ್‌ಐಆರ್‌ನಲ್ಲಿ ಹೇಳಿದ್ದಿಯಾ, ನೀನೇ ಅವರನ್ನು ಹುಡುಕಿಕೊಡು ಎಂದು ಬೆದರಿಸಿದ್ದಾರೆ. ಈ ಹಿನ್ನೆಲೆ ನಾವು ನಾಳೆ ಮಳವಳ್ಳಿಗೆ ತೆರಳಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರಂಜನ್ ಗೊಗೊಯ್‌ಗೆ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’: ‘ರಾಮ ಮಂದಿರ’ ಸ್ಥಾಪನೆಯಾಗಿದ್ದರೆ…..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...