Homeಕರ್ನಾಟಕಮಳವಳ್ಳಿ: ಬೆಟ್ಟದ ಮೇಲೆ ಕಟ್ಟೆಗಳನ್ನು ಕಟ್ಟಿಸಿದ ಕಾಮೇಗೌಡರು ಇನ್ನಿಲ್ಲ

ಮಳವಳ್ಳಿ: ಬೆಟ್ಟದ ಮೇಲೆ ಕಟ್ಟೆಗಳನ್ನು ಕಟ್ಟಿಸಿದ ಕಾಮೇಗೌಡರು ಇನ್ನಿಲ್ಲ

- Advertisement -
- Advertisement -

ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದನಿ ಬೆಟ್ಟದ ಮೇಲೆ 15 ಕಟ್ಟೆ ಕಟ್ಟಿ ಹೆಸರಾಗಿದ್ದ ಪ್ರಕೃತಿಪ್ರಿಯ ಕಲ್ಮನೆ ಕಾಮೇಗೌಡ (83) ಅವರು ಸೋಮವಾರ ನಸುಕಿನಲ್ಲಿ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಳವಳ್ಳಿ ತಾಲೂಕಿನ ದಾಸನದೊಡ್ಡಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ವೆಂಕಟಗೌಡ ಮತ್ತು ರಾಜಮ್ಮ ದಂಪತಿಯ ಪುತ್ರ ಕಾಮೇಗೌಡರು ಶಾಲೆಯ ಮೆಟ್ಟಿಲು ಹತ್ತಿದವರಲ್ಲ. ಆದರೆ ಪುಟ್ಟ ಕೆರೆಗಳನ್ನು ಸಂರಕ್ಷಿಸಿ ಪ್ರಕೃತಿ ಪ್ರೀತಿ ಮೆರೆದಿದ್ದರು.

ಕುರಿಗಾಹಿಯಾಗಿದ್ದ ಅವರು ಕುರಿ ಮಾರಿ ಸಂಪಾದಿಸಿದ ಹಣದಲ್ಲಿ ಬೆಟ್ಟದ ಮೇಲೆ ಕಟ್ಟೆಗಳನ್ನು ತೋಡಿಸಿದ್ದರು. ಪ್ರತಿ ಕಟ್ಟೆಗೂ ದೇವರು ಹಾಗೂ ಮೊಮ್ಮಕ್ಕಳ ಹೆಸರು ಇಟ್ಟಿದ್ದರು. ಹಲವು ವರ್ಷಗಳಿಂದಲೂ ಕಟ್ಟೆಗಳನ್ನು ಸಂರಕ್ಷಿಸಿ ಬೆಟ್ಟದ ತಟದಲ್ಲಿ ಹಸಿರು ಪರಿಸರ ಇರುವಂತೆ ನೋಡಿಕೊಂಡಿದ್ದರು.

ಬೆಟ್ಟದ ಮೇಲ್ಭಾಗ ಹಾಗೂ ತಟದಲ್ಲಿ ನೂರಾರು ಸಸಿ ನೆಟ್ಟು ಬೆಳೆಸಿದ್ದರು. ಕಾಮೇಗೌಡರ ಪ್ರಕೃತಿ ಸಂರಕ್ಷಣೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿತ್ತು, 2020ರಲ್ಲಿ ‘ಮನ್‌ ಕಿ ಬಾತ್‌’ ಸರಣಿಯಲ್ಲಿ ಕಾಮೇಗೌಡರ ಸೇವೆಯನ್ನು ಕೊಂಡಾಡಿದ್ದರು.

‘ಬಾಯಾರಿದ ಪ್ರಾಣಿ-ಪಕ್ಷಿಗಳಿಗಾಗಿ ತಮ್ಮ ಸ್ವಂತ ಹಣದಿಂದ ಕಟ್ಟೆಗಳನ್ನು ನಿರ್ಮಿಸಿರುವ ಕಾಮೇಗೌಡರು ಎಲ್ಲರಿಗೂ ಮಾದರಿ. ತಮ್ಮ ಕುರಿಗಳನ್ನು ಮೇಯಿಸಲು ಹೋಗಿದ್ದ ಕಾಮೇಗೌಡರಿಗೆ ನೀರಿನ ಮಹತ್ವದ ಅರಿವಾಯಿತು. ಕಠಿಣ ಪರಿಶ್ರಮ ಮತ್ತು ಬೆವರಿನಿಂದ ಜಲಕಾಯಕ ಮಾಡಿದವರು ಅವರು. ಈ ಕೆರೆಗಳಿಂದ ಸುತ್ತಮುತ್ತಲ ಪ್ರದೇಶದಲ್ಲಿ ಹಸಿರು ಆವರಿಸಿಕೊಂಡಿದೆ’ ಎಂದು ಮೋದಿ ಬಣ್ಣಿಸಿದ್ದರು.

ಇದನ್ನೂ ಓದಿರಿ: ಚಿಕ್ಕಬಳ್ಳಾಪುರ: ಹಾವು ಪ್ರದರ್ಶಿಸಿದ ಜಗ್ಗಿ ವಿರುದ್ಧ ದೂರು; ಕಾನೂನು ಉಲ್ಲಂಘನೆ ಪಟ್ಟಿಗೆ ಮತ್ತೊಂದು ಪ್ರಕರಣ ಸೇರ್ಪಡೆ

ರಾಷ್ಟ್ರಮಟ್ಟದಲ್ಲಿ ಹಲವು ನಾಯಕರು ಅವರ ಸೇವೆಯನ್ನು ಹೊಗಳಿದ್ದರು. ಕ್ರಿಕೆಟಿಗ ವಿವಿಎಸ್‌ ಲಕ್ಷ್ಮಣ್‌ ಅವರು ಕಾಮೇಗೌಡರ ಸೇವೆಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿದ್ದರು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ರಮಾಗೋವಿಂದ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಕಾಮೇಗೌಡರಿಗೆ ಸಂದಿದ್ದವು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಕಾಮೇಗೌಡರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂತಾಪ ಸೂಚಿಸಿದ್ದು, “ಜಲ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಕೊಂಡು ಸುಮಾರು 15ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ ಗಳಿಸಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಜಲಋಷಿ ಶ್ರೀ ಕಾಮೇಗೌಡರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು” ಎಂದು ಟ್ವೀಟ್ ಮಾಡಿದ್ದಾರೆ.

“ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದೂರು ಬೆಟ್ಟದಲ್ಲಿ 15 ಕೆರೆ ನಿರ್ಮಿಸಿ ಆಧುನಿಕ ಭಗೀರಥ ಎಂದೇ ಪ್ರಸಿದ್ಧಿ ಪಡೆದಿದ್ದ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು” ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...