Homeಮುಖಪುಟರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

ರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಕಾರ್ಯಕ್ರಮ ನಡೆಯುತ್ತಿದೆ. ಮಲಯಾಳಂ ಚಿತ್ರರಂಗದ ಜನಪ್ರಿಯ ನಟರು, ನಿರ್ದೇಶಕರು ತಮ್ಮ ಸಾಮಾಜಿಕ ಮಾದ್ಯಮಗಳ ಖಾತೆಗಳಲ್ಲಿ ಭಾರತದ ಸಂವಿಧಾನದ ಪೀಠಿಕೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಸಮಾನತೆ, ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ತತ್ವಗಳನ್ನು ಒತ್ತಿಹೇಳಿದ್ದಾರೆ.

ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ.ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ ಪೀಠ, ದಶಕಗಳ ಕಾಲದ ಅಯೋಧ್ಯೆ-ಬಾಬರಿ ಮಸೀದಿ ಜಮೀನಿನ ಒಡೆತನದ ಬಗ್ಗೆ ನ.9, 2019ರಂದು ಅಂತಿಮ ತೀರ್ಪು ನೀಡಿತ್ತು. ತೀರ್ಪಿನ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗಿತ್ತು. ತೀರ್ಪನ್ನು ವಾಸ್ತವಕ್ಕಿಂತ-ನಂಬಿಕೆ ಆಧಾರದಲ್ಲಿ ನೀಡಲಾಗಿದೆ ಎಂದು ಟೀಕೆ ವ್ಯಕ್ತವಾಗಿತ್ತು. ವಿವಾದಿತ ಭೂಮಿಯನ್ನು ಸುಪ್ರೀಂಕೋರ್ಟ್‌ ರಾಮಮಂದಿರ ನಿರ್ಮಾಣಕ್ಕೆ ಕೊಟ್ಟ ಬಳಿಕ ಇದೀಗ ಅದೇ ಸ್ಥಳದಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ರಾಮಮಂದಿರ ಆಂದೋಲನ ಮತ್ತು ಬಾಬರಿ ಮಸೀದಿ ಧ್ವಂಸವು ಹಿಂದೂ ಬಹುಸಂಖ್ಯಾತತೆಯ ಬಲವರ್ಧನೆಗೆ ಮತ್ತು ಭಾರತೀಯ ಜನತಾ ಪಕ್ಷದ ಬೆಳವಣಿಗೆಗೆ ಕಾರಣವಾಗಿತ್ತು. ಇದೀಗ ರಾಮಮಂದಿರ ಉದ್ಘಾಟನೆಯನ್ನು ಬಿಜೆಪಿ ಲೋಕಸಭೆಯ ಚುನಾವಣೆಯ ಹೊಸ್ತಿಲಲ್ಲೇ ನಡೆಸುತ್ತಿದ್ದು, ಪ್ರತಿಪಕ್ಷಗಳ ವಿರೋಧಕ್ಕೆ ಕಾರಣವಾಗಿತ್ತು. ಧರ್ಮವನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ಮತ್ತು ಪ್ರಧಾನಿ, ಸಿಎಂಗಳು ಸೇರಿ ಆಡಳಿತ ಯಂತ್ರವನ್ನು ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ವ್ಯಾಪಕ ಟೀಕೆಗೆ ಕಾರಣವಾಗಿತ್ತು.

ಮಳಯಾಲಂ ನಟರಾದ ಪಾರ್ವತಿ ತಿರುವೋತು, ರಿಮಾ ಕಲ್ಲಿಂಗಲ್, ದಿವ್ಯ ಪ್ರಭಾ, ಕಣಿ ಕುಸೃತಿ, ನಿರ್ದೇಶಕರಾದ ಜಿಯೋ ಬೇಬಿ, ಆಶಿಕ್ ಅಬು, ಕಮಲ್ ಕೆಎಂ ಮತ್ತು ಗಾಯಕ ಸೂರಜ್ ಸಂತೋಷ್ ಸೇರಿದಂತೆ ಹಲವಾರು ಪ್ರಸಿದ್ಧ ಮಲಯಾಳಂ ಚಿತ್ರರಂಗದ ಸೆಲೆಬ್ರಿಟಿಗಳು ಸಂವಿಧಾನದ ಮುನ್ನುಡಿಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಭಾರತದ ಪ್ರಜೆಗಳಾದ, ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ, ಗಣರಾಜ್ಯವಾಗಿ ರೂಪಿಸಲು ಮತ್ತು ಅದರ ಎಲ್ಲಾ ನಾಗರಿಕರಿಗೆ ಸುರಕ್ಷಿತಗೊಳಿಸಲು ನಿರ್ಧರಿಸಿದ್ದೇವೆ..

ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ;

ವಿಚಾರ, ಅಭಿವ್ಯಕ್ತಿ, ವಿಶ್ವಾಸ ಮತ್ತು ಉಪಾಸನಾ ಸ್ವಾತಂತ್ರ್ಯ;

ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು(ರಾಷ್ಟ್ರದ ಏಕತೆ ಮತ್ತು ಅಖಂಡತೆಯನ್ನು) ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃತ್ವ ಭಾವನೆಯನ್ನು ವೃದ್ಧಿಸಿಕೊಳ್ಳಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ 

ನಮ್ಮ ಸಂವಿಧಾನ ಸಭೆಯಲ್ಲಿ, 1949ನೆಯ ನವೆಂಬರ್‌ ತಿಂಗಳ 26ನೇ ತಾರೀಖಾದ ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ. 

ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾಪನೆ’ ಇಂದು ಮಧ್ಯಾಹ್ನ 12.20ಕ್ಕೆ ಪ್ರಾರಂಭವಾಗಲಿದೆ. ಕಾರ್ಯಕ್ರಮ ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಈ ವೇಳೆ ಭಾಷಣ ಮಾಡಲಿದ್ದಾರೆ. ಸ್ಥಳದಲ್ಲಿ 13,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ. ವಿಕ್ಕಿ ಕೌಶಲ್, ಮಾಧುರಿ ದೀಕ್ಷಿತ್, ಆಲಿಯಾ ಭಟ್, ರಾಜ್‌ಕುಮಾರ್ ಹಿರಾನಿ, ಮಹಾವೀರ್ ಜೈನ್ ಮತ್ತು ರೋಹಿತ್ ಶೆಟ್ಟಿ ಸೇರಿದಂತೆ ಬಾಲಿವುಡ್ ತಾರೆಯರು ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.

1528 ರಲ್ಲಿ ಮೊಘಲ್ ಚಕ್ರವರ್ತಿ ಬಾಬರ್‌ನ ಕಮಾಂಡರ್ ಮೀರ್ ಬಾಕಿಯಿಂದ ನಿರ್ಮಿಸಲ್ಪಟ್ಟ 16ನೇ ಶತಮಾನದ ಮಸೀದಿ ಬಾಬರಿ ಮಸೀದಿಯನ್ನು ಡಿಸೆಂಬರ್ 6, 1992 ರಂದು  ಧ್ವಂಸಗೊಳಿಸಲಾಗಿತ್ತು. ವಿಎಚ್ ಪಿ, ಶಿವ ಸೇನೆ, ಬಿಜೆಪಿಯ ಸದಸ್ಯರಿದ್ದ ಕರಸೇವಕರು ಮಸೀದಿಯ 3 ಗುಮ್ಮಟಗಳು ಒಂದರ ನಂತರ ಒಂದರಂತೆ  ಕೆಡವಿದ್ದಾರೆ. ಈ ಸಂಘಟಿತ ಅಪರಾಧದಿಂದಾಗಿ ಭುಗಿಲೆದ್ದ ಕೋಮು ಗಲಭೆಯಲ್ಲಿ 2,000ಕ್ಕೂ ಹೆಚ್ಚು ಸಾವುಗಳಿಗೆ ಕಾರಣವಾಗಿತ್ತು. 1947ರಲ್ಲಿ ಸ್ವಾತಂತ್ರ್ಯದ ನಂತರ ಭಾರತವು ಕಂಡ ಅತ್ಯಂತ ಭೀಕರವಾದ ಗಲಭೆಗಳಲ್ಲಿ ಒಂದಾಗಿದೆ.

ಬಾಬರಿ ಮಸೀದಿ ಧ್ವಂಸ ಅಪರಾಧ ಆದರೆ ಸುದೀರ್ಘ ವಿಚಾರಣೆಯ ನಂತರವೂ ವಿಚಾರಣಾ ನ್ಯಾಯಾಲಯದಿಂದ ಒಬ್ಬ ಆರೋಪಿಗೂ ಶಿಕ್ಷೆಯಾಗಲಿಲ್ಲ. ಉತ್ತರಪ್ರದೇಶ ಪೊಲೀಸರು ಬಾಬರಿ ಮಸೀದಿ ಧ್ವಂಸ, ಗಲಭೆ, ಕೋಮು ಸೌಹಾರ್ದತೆಗೆ ಭಂಗ ತರುವ ಭಾಷಣಗಳು ಮತ್ತು ಇತರ ಪತ್ರಕರ್ತರ ಮೇಲಿನ ಹಲ್ಲೆಗಳಿಗೆ ಸಂಬಂಧಿಸಿದಂತೆ ಒಟ್ಟು 49 ಪ್ರಕರಣಗಳನ್ನು ದಾಖಲಿಸಿದ್ದರು. ದಾಖಲೆಗಳ ಪ್ರಕಾರ ಅಂದಿನ ರಾಮಜನ್ಮಭೂಮಿ ಪೊಲೀಸ್ ಠಾಣೆಯ ಉಸ್ತುವಾರಿ ಪಿಎನ್ ಶುಕ್ಲಾ ಅವರು ಅಪರಿಚಿತ ಕರಸೇವಕರ ವಿರುದ್ಧ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಅಶೋಕ್ ಸಿಂಘಾಲ್, ಗಿರಿರಾಜ್ ಕಿಶೋರ್, ವಿಷ್ಣು ಹರಿ ದಾಲ್ಮಿಯಾ, ಸಾಧ್ವಿ ಋತಂಭರ, ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ವಿನಯ್ ಕಟಿಯಾರ್ ಮತ್ತು ಉಮಾಭಾರತಿ ಸೇರಿ ಪ್ರಕರಣದಲ್ಲಿ ಹಲವರ ವಿರುದ್ಧ ಕೇಸ್ ದಾಖಲಾಗಿತ್ತು.
ಅಯೋಧ್ಯೆ-ಬಾಬರಿ ಮಸೀದಿ ಜಮೀನಿನ ಒಡೆತನದ ಬಗ್ಗೆ ನ. 9, 2019ರಂದು ಸುಪ್ರೀಂಕೋರ್ಟ್‌ ಪೀಠ ತೀರ್ಪು ನೀಡಿತ್ತು. ವಿವಾದಿತ 2.77 ಎಕರೆ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದ ಸುಪ್ರೀಂಕೋರ್ಟ್, ರಾಮಮಂದಿರ ಜಮೀನನ್ನು ಸಂಪೂರ್ಣವಾಗಿ ಟ್ರಸ್ಟ್​​ ವಶಕ್ಕೆ ನೀಡಬೇಕು. ಇದರ ಹೊಣೆ ಸರ್ಕಾರದ್ದು ಎಂದು ಸೂಚಿಸಿತ್ತು. ಇದೇ ವೇಳೆ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಫ್ ಬೋರ್ಡ್‌ಗೆ 5 ಎಕರೆ ಪರ್ಯಾಯ ಭೂಮಿ ನೀಡಲು ಸೂಚಿಸಿತ್ತು. ಇದಲ್ಲದೆ 2010ರಲ್ಲಿ ಇದೇ ವಿವಾದದಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು  ರದ್ದುಪಡಿಸಿತ್ತು. ರಾಮ್ ಲಲ್ಲಾ, ನಿರ್ಮೋಹಿ ಅಖಾಡಾ ಮತ್ತು ಸುನ್ನಿ ವಕ್ಫ್ ಬೋರ್ಡ್‌ಗೆ ವಿವಾದಿತ ಜಾಗವನ್ನು ಅಲಹಾಬಾದ್ ಹೈಕೋರ್ಟ್ ಸಮನಾಗಿ ಹಂಚಿಕೆ ಮಾಡಿರುವುದನ್ನು ರದ್ದುಪಡಿಸಿತ್ತು. ಮಸೀದಿಯ ಧ್ವಂಸವನ್ನು “ಕಾನೂನಿನ ನಿಯಮದ ಉಲ್ಲಂಘನೆ” ಎಂದು ಸುಪ್ರೀಂಕೋರ್ಟ್ ಉಲ್ಲೇಖಿಸಿದ್ದರೂ, ವಾಸ್ತವಕ್ಕಿಂತ ಮೇಲಿನ ನಂಬಿಕೆ ಆಧಾರದಲ್ಲಿ ತೀರ್ಪನ್ನು ನೀಡಿದ್ದಕ್ಕೆ ವ್ಯಾಪಕವಾದ ಟೀಕೆ ವ್ಯಕ್ತವಾಗಿತ್ತು.

 

 

View this post on Instagram

 

A post shared by Parvathy Thiruvothu (@par_vathy)

 

 

View this post on Instagram

 

A post shared by Aashiq Abu (@aashiqabu)

 

 

View this post on Instagram

 

A post shared by Jeo Baby (@jeobabymusic)

 

 

View this post on Instagram

 

A post shared by Kamal KM (@kamalkm)

 

 

View this post on Instagram

 

A post shared by Divyaprabha (@divya_prabha__)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...