Homeಮುಖಪುಟರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

ರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಕಾರ್ಯಕ್ರಮ ನಡೆಯುತ್ತಿದೆ. ಮಲಯಾಳಂ ಚಿತ್ರರಂಗದ ಜನಪ್ರಿಯ ನಟರು, ನಿರ್ದೇಶಕರು ತಮ್ಮ ಸಾಮಾಜಿಕ ಮಾದ್ಯಮಗಳ ಖಾತೆಗಳಲ್ಲಿ ಭಾರತದ ಸಂವಿಧಾನದ ಪೀಠಿಕೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಸಮಾನತೆ, ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ತತ್ವಗಳನ್ನು ಒತ್ತಿಹೇಳಿದ್ದಾರೆ.

ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ.ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ ಪೀಠ, ದಶಕಗಳ ಕಾಲದ ಅಯೋಧ್ಯೆ-ಬಾಬರಿ ಮಸೀದಿ ಜಮೀನಿನ ಒಡೆತನದ ಬಗ್ಗೆ ನ.9, 2019ರಂದು ಅಂತಿಮ ತೀರ್ಪು ನೀಡಿತ್ತು. ತೀರ್ಪಿನ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗಿತ್ತು. ತೀರ್ಪನ್ನು ವಾಸ್ತವಕ್ಕಿಂತ-ನಂಬಿಕೆ ಆಧಾರದಲ್ಲಿ ನೀಡಲಾಗಿದೆ ಎಂದು ಟೀಕೆ ವ್ಯಕ್ತವಾಗಿತ್ತು. ವಿವಾದಿತ ಭೂಮಿಯನ್ನು ಸುಪ್ರೀಂಕೋರ್ಟ್‌ ರಾಮಮಂದಿರ ನಿರ್ಮಾಣಕ್ಕೆ ಕೊಟ್ಟ ಬಳಿಕ ಇದೀಗ ಅದೇ ಸ್ಥಳದಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ರಾಮಮಂದಿರ ಆಂದೋಲನ ಮತ್ತು ಬಾಬರಿ ಮಸೀದಿ ಧ್ವಂಸವು ಹಿಂದೂ ಬಹುಸಂಖ್ಯಾತತೆಯ ಬಲವರ್ಧನೆಗೆ ಮತ್ತು ಭಾರತೀಯ ಜನತಾ ಪಕ್ಷದ ಬೆಳವಣಿಗೆಗೆ ಕಾರಣವಾಗಿತ್ತು. ಇದೀಗ ರಾಮಮಂದಿರ ಉದ್ಘಾಟನೆಯನ್ನು ಬಿಜೆಪಿ ಲೋಕಸಭೆಯ ಚುನಾವಣೆಯ ಹೊಸ್ತಿಲಲ್ಲೇ ನಡೆಸುತ್ತಿದ್ದು, ಪ್ರತಿಪಕ್ಷಗಳ ವಿರೋಧಕ್ಕೆ ಕಾರಣವಾಗಿತ್ತು. ಧರ್ಮವನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ಮತ್ತು ಪ್ರಧಾನಿ, ಸಿಎಂಗಳು ಸೇರಿ ಆಡಳಿತ ಯಂತ್ರವನ್ನು ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ವ್ಯಾಪಕ ಟೀಕೆಗೆ ಕಾರಣವಾಗಿತ್ತು.

ಮಳಯಾಲಂ ನಟರಾದ ಪಾರ್ವತಿ ತಿರುವೋತು, ರಿಮಾ ಕಲ್ಲಿಂಗಲ್, ದಿವ್ಯ ಪ್ರಭಾ, ಕಣಿ ಕುಸೃತಿ, ನಿರ್ದೇಶಕರಾದ ಜಿಯೋ ಬೇಬಿ, ಆಶಿಕ್ ಅಬು, ಕಮಲ್ ಕೆಎಂ ಮತ್ತು ಗಾಯಕ ಸೂರಜ್ ಸಂತೋಷ್ ಸೇರಿದಂತೆ ಹಲವಾರು ಪ್ರಸಿದ್ಧ ಮಲಯಾಳಂ ಚಿತ್ರರಂಗದ ಸೆಲೆಬ್ರಿಟಿಗಳು ಸಂವಿಧಾನದ ಮುನ್ನುಡಿಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಭಾರತದ ಪ್ರಜೆಗಳಾದ, ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ, ಗಣರಾಜ್ಯವಾಗಿ ರೂಪಿಸಲು ಮತ್ತು ಅದರ ಎಲ್ಲಾ ನಾಗರಿಕರಿಗೆ ಸುರಕ್ಷಿತಗೊಳಿಸಲು ನಿರ್ಧರಿಸಿದ್ದೇವೆ..

ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ;

ವಿಚಾರ, ಅಭಿವ್ಯಕ್ತಿ, ವಿಶ್ವಾಸ ಮತ್ತು ಉಪಾಸನಾ ಸ್ವಾತಂತ್ರ್ಯ;

ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು(ರಾಷ್ಟ್ರದ ಏಕತೆ ಮತ್ತು ಅಖಂಡತೆಯನ್ನು) ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃತ್ವ ಭಾವನೆಯನ್ನು ವೃದ್ಧಿಸಿಕೊಳ್ಳಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ 

ನಮ್ಮ ಸಂವಿಧಾನ ಸಭೆಯಲ್ಲಿ, 1949ನೆಯ ನವೆಂಬರ್‌ ತಿಂಗಳ 26ನೇ ತಾರೀಖಾದ ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ. 

ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾಪನೆ’ ಇಂದು ಮಧ್ಯಾಹ್ನ 12.20ಕ್ಕೆ ಪ್ರಾರಂಭವಾಗಲಿದೆ. ಕಾರ್ಯಕ್ರಮ ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಈ ವೇಳೆ ಭಾಷಣ ಮಾಡಲಿದ್ದಾರೆ. ಸ್ಥಳದಲ್ಲಿ 13,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ. ವಿಕ್ಕಿ ಕೌಶಲ್, ಮಾಧುರಿ ದೀಕ್ಷಿತ್, ಆಲಿಯಾ ಭಟ್, ರಾಜ್‌ಕುಮಾರ್ ಹಿರಾನಿ, ಮಹಾವೀರ್ ಜೈನ್ ಮತ್ತು ರೋಹಿತ್ ಶೆಟ್ಟಿ ಸೇರಿದಂತೆ ಬಾಲಿವುಡ್ ತಾರೆಯರು ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.

1528 ರಲ್ಲಿ ಮೊಘಲ್ ಚಕ್ರವರ್ತಿ ಬಾಬರ್‌ನ ಕಮಾಂಡರ್ ಮೀರ್ ಬಾಕಿಯಿಂದ ನಿರ್ಮಿಸಲ್ಪಟ್ಟ 16ನೇ ಶತಮಾನದ ಮಸೀದಿ ಬಾಬರಿ ಮಸೀದಿಯನ್ನು ಡಿಸೆಂಬರ್ 6, 1992 ರಂದು  ಧ್ವಂಸಗೊಳಿಸಲಾಗಿತ್ತು. ವಿಎಚ್ ಪಿ, ಶಿವ ಸೇನೆ, ಬಿಜೆಪಿಯ ಸದಸ್ಯರಿದ್ದ ಕರಸೇವಕರು ಮಸೀದಿಯ 3 ಗುಮ್ಮಟಗಳು ಒಂದರ ನಂತರ ಒಂದರಂತೆ  ಕೆಡವಿದ್ದಾರೆ. ಈ ಸಂಘಟಿತ ಅಪರಾಧದಿಂದಾಗಿ ಭುಗಿಲೆದ್ದ ಕೋಮು ಗಲಭೆಯಲ್ಲಿ 2,000ಕ್ಕೂ ಹೆಚ್ಚು ಸಾವುಗಳಿಗೆ ಕಾರಣವಾಗಿತ್ತು. 1947ರಲ್ಲಿ ಸ್ವಾತಂತ್ರ್ಯದ ನಂತರ ಭಾರತವು ಕಂಡ ಅತ್ಯಂತ ಭೀಕರವಾದ ಗಲಭೆಗಳಲ್ಲಿ ಒಂದಾಗಿದೆ.

ಬಾಬರಿ ಮಸೀದಿ ಧ್ವಂಸ ಅಪರಾಧ ಆದರೆ ಸುದೀರ್ಘ ವಿಚಾರಣೆಯ ನಂತರವೂ ವಿಚಾರಣಾ ನ್ಯಾಯಾಲಯದಿಂದ ಒಬ್ಬ ಆರೋಪಿಗೂ ಶಿಕ್ಷೆಯಾಗಲಿಲ್ಲ. ಉತ್ತರಪ್ರದೇಶ ಪೊಲೀಸರು ಬಾಬರಿ ಮಸೀದಿ ಧ್ವಂಸ, ಗಲಭೆ, ಕೋಮು ಸೌಹಾರ್ದತೆಗೆ ಭಂಗ ತರುವ ಭಾಷಣಗಳು ಮತ್ತು ಇತರ ಪತ್ರಕರ್ತರ ಮೇಲಿನ ಹಲ್ಲೆಗಳಿಗೆ ಸಂಬಂಧಿಸಿದಂತೆ ಒಟ್ಟು 49 ಪ್ರಕರಣಗಳನ್ನು ದಾಖಲಿಸಿದ್ದರು. ದಾಖಲೆಗಳ ಪ್ರಕಾರ ಅಂದಿನ ರಾಮಜನ್ಮಭೂಮಿ ಪೊಲೀಸ್ ಠಾಣೆಯ ಉಸ್ತುವಾರಿ ಪಿಎನ್ ಶುಕ್ಲಾ ಅವರು ಅಪರಿಚಿತ ಕರಸೇವಕರ ವಿರುದ್ಧ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಅಶೋಕ್ ಸಿಂಘಾಲ್, ಗಿರಿರಾಜ್ ಕಿಶೋರ್, ವಿಷ್ಣು ಹರಿ ದಾಲ್ಮಿಯಾ, ಸಾಧ್ವಿ ಋತಂಭರ, ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ವಿನಯ್ ಕಟಿಯಾರ್ ಮತ್ತು ಉಮಾಭಾರತಿ ಸೇರಿ ಪ್ರಕರಣದಲ್ಲಿ ಹಲವರ ವಿರುದ್ಧ ಕೇಸ್ ದಾಖಲಾಗಿತ್ತು.
ಅಯೋಧ್ಯೆ-ಬಾಬರಿ ಮಸೀದಿ ಜಮೀನಿನ ಒಡೆತನದ ಬಗ್ಗೆ ನ. 9, 2019ರಂದು ಸುಪ್ರೀಂಕೋರ್ಟ್‌ ಪೀಠ ತೀರ್ಪು ನೀಡಿತ್ತು. ವಿವಾದಿತ 2.77 ಎಕರೆ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದ ಸುಪ್ರೀಂಕೋರ್ಟ್, ರಾಮಮಂದಿರ ಜಮೀನನ್ನು ಸಂಪೂರ್ಣವಾಗಿ ಟ್ರಸ್ಟ್​​ ವಶಕ್ಕೆ ನೀಡಬೇಕು. ಇದರ ಹೊಣೆ ಸರ್ಕಾರದ್ದು ಎಂದು ಸೂಚಿಸಿತ್ತು. ಇದೇ ವೇಳೆ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಫ್ ಬೋರ್ಡ್‌ಗೆ 5 ಎಕರೆ ಪರ್ಯಾಯ ಭೂಮಿ ನೀಡಲು ಸೂಚಿಸಿತ್ತು. ಇದಲ್ಲದೆ 2010ರಲ್ಲಿ ಇದೇ ವಿವಾದದಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು  ರದ್ದುಪಡಿಸಿತ್ತು. ರಾಮ್ ಲಲ್ಲಾ, ನಿರ್ಮೋಹಿ ಅಖಾಡಾ ಮತ್ತು ಸುನ್ನಿ ವಕ್ಫ್ ಬೋರ್ಡ್‌ಗೆ ವಿವಾದಿತ ಜಾಗವನ್ನು ಅಲಹಾಬಾದ್ ಹೈಕೋರ್ಟ್ ಸಮನಾಗಿ ಹಂಚಿಕೆ ಮಾಡಿರುವುದನ್ನು ರದ್ದುಪಡಿಸಿತ್ತು. ಮಸೀದಿಯ ಧ್ವಂಸವನ್ನು “ಕಾನೂನಿನ ನಿಯಮದ ಉಲ್ಲಂಘನೆ” ಎಂದು ಸುಪ್ರೀಂಕೋರ್ಟ್ ಉಲ್ಲೇಖಿಸಿದ್ದರೂ, ವಾಸ್ತವಕ್ಕಿಂತ ಮೇಲಿನ ನಂಬಿಕೆ ಆಧಾರದಲ್ಲಿ ತೀರ್ಪನ್ನು ನೀಡಿದ್ದಕ್ಕೆ ವ್ಯಾಪಕವಾದ ಟೀಕೆ ವ್ಯಕ್ತವಾಗಿತ್ತು.

 

 

View this post on Instagram

 

A post shared by Parvathy Thiruvothu (@par_vathy)

 

 

View this post on Instagram

 

A post shared by Aashiq Abu (@aashiqabu)

 

 

View this post on Instagram

 

A post shared by Jeo Baby (@jeobabymusic)

 

 

View this post on Instagram

 

A post shared by Kamal KM (@kamalkm)

 

 

View this post on Instagram

 

A post shared by Divyaprabha (@divya_prabha__)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...