ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಕಾರ್ಯಕ್ರಮ ನಡೆಯುತ್ತಿದೆ. ಮಲಯಾಳಂ ಚಿತ್ರರಂಗದ ಜನಪ್ರಿಯ ನಟರು, ನಿರ್ದೇಶಕರು ತಮ್ಮ ಸಾಮಾಜಿಕ ಮಾದ್ಯಮಗಳ ಖಾತೆಗಳಲ್ಲಿ ಭಾರತದ ಸಂವಿಧಾನದ ಪೀಠಿಕೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಸಮಾನತೆ, ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ತತ್ವಗಳನ್ನು ಒತ್ತಿಹೇಳಿದ್ದಾರೆ.
ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್.ಎ ಬೊಬ್ಡೆ, ಡಿ.ವೈ.ಚಂದ್ರಚೂಡ್, ಅಶೋಕ್ ಭೂಷಣ್ ಹಾಗೂ ಅಬ್ದುಲ್ ನಜೀರ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ, ದಶಕಗಳ ಕಾಲದ ಅಯೋಧ್ಯೆ-ಬಾಬರಿ ಮಸೀದಿ ಜಮೀನಿನ ಒಡೆತನದ ಬಗ್ಗೆ ನ.9, 2019ರಂದು ಅಂತಿಮ ತೀರ್ಪು ನೀಡಿತ್ತು. ತೀರ್ಪಿನ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗಿತ್ತು. ತೀರ್ಪನ್ನು ವಾಸ್ತವಕ್ಕಿಂತ-ನಂಬಿಕೆ ಆಧಾರದಲ್ಲಿ ನೀಡಲಾಗಿದೆ ಎಂದು ಟೀಕೆ ವ್ಯಕ್ತವಾಗಿತ್ತು. ವಿವಾದಿತ ಭೂಮಿಯನ್ನು ಸುಪ್ರೀಂಕೋರ್ಟ್ ರಾಮಮಂದಿರ ನಿರ್ಮಾಣಕ್ಕೆ ಕೊಟ್ಟ ಬಳಿಕ ಇದೀಗ ಅದೇ ಸ್ಥಳದಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ರಾಮಮಂದಿರ ಆಂದೋಲನ ಮತ್ತು ಬಾಬರಿ ಮಸೀದಿ ಧ್ವಂಸವು ಹಿಂದೂ ಬಹುಸಂಖ್ಯಾತತೆಯ ಬಲವರ್ಧನೆಗೆ ಮತ್ತು ಭಾರತೀಯ ಜನತಾ ಪಕ್ಷದ ಬೆಳವಣಿಗೆಗೆ ಕಾರಣವಾಗಿತ್ತು. ಇದೀಗ ರಾಮಮಂದಿರ ಉದ್ಘಾಟನೆಯನ್ನು ಬಿಜೆಪಿ ಲೋಕಸಭೆಯ ಚುನಾವಣೆಯ ಹೊಸ್ತಿಲಲ್ಲೇ ನಡೆಸುತ್ತಿದ್ದು, ಪ್ರತಿಪಕ್ಷಗಳ ವಿರೋಧಕ್ಕೆ ಕಾರಣವಾಗಿತ್ತು. ಧರ್ಮವನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ಮತ್ತು ಪ್ರಧಾನಿ, ಸಿಎಂಗಳು ಸೇರಿ ಆಡಳಿತ ಯಂತ್ರವನ್ನು ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ವ್ಯಾಪಕ ಟೀಕೆಗೆ ಕಾರಣವಾಗಿತ್ತು.
ಮಳಯಾಲಂ ನಟರಾದ ಪಾರ್ವತಿ ತಿರುವೋತು, ರಿಮಾ ಕಲ್ಲಿಂಗಲ್, ದಿವ್ಯ ಪ್ರಭಾ, ಕಣಿ ಕುಸೃತಿ, ನಿರ್ದೇಶಕರಾದ ಜಿಯೋ ಬೇಬಿ, ಆಶಿಕ್ ಅಬು, ಕಮಲ್ ಕೆಎಂ ಮತ್ತು ಗಾಯಕ ಸೂರಜ್ ಸಂತೋಷ್ ಸೇರಿದಂತೆ ಹಲವಾರು ಪ್ರಸಿದ್ಧ ಮಲಯಾಳಂ ಚಿತ್ರರಂಗದ ಸೆಲೆಬ್ರಿಟಿಗಳು ಸಂವಿಧಾನದ ಮುನ್ನುಡಿಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಭಾರತದ ಪ್ರಜೆಗಳಾದ, ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ, ಗಣರಾಜ್ಯವಾಗಿ ರೂಪಿಸಲು ಮತ್ತು ಅದರ ಎಲ್ಲಾ ನಾಗರಿಕರಿಗೆ ಸುರಕ್ಷಿತಗೊಳಿಸಲು ನಿರ್ಧರಿಸಿದ್ದೇವೆ..
ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ;
ವಿಚಾರ, ಅಭಿವ್ಯಕ್ತಿ, ವಿಶ್ವಾಸ ಮತ್ತು ಉಪಾಸನಾ ಸ್ವಾತಂತ್ರ್ಯ;
ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು(ರಾಷ್ಟ್ರದ ಏಕತೆ ಮತ್ತು ಅಖಂಡತೆಯನ್ನು) ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃತ್ವ ಭಾವನೆಯನ್ನು ವೃದ್ಧಿಸಿಕೊಳ್ಳಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ
ನಮ್ಮ ಸಂವಿಧಾನ ಸಭೆಯಲ್ಲಿ, 1949ನೆಯ ನವೆಂಬರ್ ತಿಂಗಳ 26ನೇ ತಾರೀಖಾದ ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ.
ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾಪನೆ’ ಇಂದು ಮಧ್ಯಾಹ್ನ 12.20ಕ್ಕೆ ಪ್ರಾರಂಭವಾಗಲಿದೆ. ಕಾರ್ಯಕ್ರಮ ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಈ ವೇಳೆ ಭಾಷಣ ಮಾಡಲಿದ್ದಾರೆ. ಸ್ಥಳದಲ್ಲಿ 13,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ. ವಿಕ್ಕಿ ಕೌಶಲ್, ಮಾಧುರಿ ದೀಕ್ಷಿತ್, ಆಲಿಯಾ ಭಟ್, ರಾಜ್ಕುಮಾರ್ ಹಿರಾನಿ, ಮಹಾವೀರ್ ಜೈನ್ ಮತ್ತು ರೋಹಿತ್ ಶೆಟ್ಟಿ ಸೇರಿದಂತೆ ಬಾಲಿವುಡ್ ತಾರೆಯರು ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.
1528 ರಲ್ಲಿ ಮೊಘಲ್ ಚಕ್ರವರ್ತಿ ಬಾಬರ್ನ ಕಮಾಂಡರ್ ಮೀರ್ ಬಾಕಿಯಿಂದ ನಿರ್ಮಿಸಲ್ಪಟ್ಟ 16ನೇ ಶತಮಾನದ ಮಸೀದಿ ಬಾಬರಿ ಮಸೀದಿಯನ್ನು ಡಿಸೆಂಬರ್ 6, 1992 ರಂದು ಧ್ವಂಸಗೊಳಿಸಲಾಗಿತ್ತು. ವಿಎಚ್ ಪಿ, ಶಿವ ಸೇನೆ, ಬಿಜೆಪಿಯ ಸದಸ್ಯರಿದ್ದ ಕರಸೇವಕರು ಮಸೀದಿಯ 3 ಗುಮ್ಮಟಗಳು ಒಂದರ ನಂತರ ಒಂದರಂತೆ ಕೆಡವಿದ್ದಾರೆ. ಈ ಸಂಘಟಿತ ಅಪರಾಧದಿಂದಾಗಿ ಭುಗಿಲೆದ್ದ ಕೋಮು ಗಲಭೆಯಲ್ಲಿ 2,000ಕ್ಕೂ ಹೆಚ್ಚು ಸಾವುಗಳಿಗೆ ಕಾರಣವಾಗಿತ್ತು. 1947ರಲ್ಲಿ ಸ್ವಾತಂತ್ರ್ಯದ ನಂತರ ಭಾರತವು ಕಂಡ ಅತ್ಯಂತ ಭೀಕರವಾದ ಗಲಭೆಗಳಲ್ಲಿ ಒಂದಾಗಿದೆ.
ಬಾಬರಿ ಮಸೀದಿ ಧ್ವಂಸ ಅಪರಾಧ ಆದರೆ ಸುದೀರ್ಘ ವಿಚಾರಣೆಯ ನಂತರವೂ ವಿಚಾರಣಾ ನ್ಯಾಯಾಲಯದಿಂದ ಒಬ್ಬ ಆರೋಪಿಗೂ ಶಿಕ್ಷೆಯಾಗಲಿಲ್ಲ. ಉತ್ತರಪ್ರದೇಶ ಪೊಲೀಸರು ಬಾಬರಿ ಮಸೀದಿ ಧ್ವಂಸ, ಗಲಭೆ, ಕೋಮು ಸೌಹಾರ್ದತೆಗೆ ಭಂಗ ತರುವ ಭಾಷಣಗಳು ಮತ್ತು ಇತರ ಪತ್ರಕರ್ತರ ಮೇಲಿನ ಹಲ್ಲೆಗಳಿಗೆ ಸಂಬಂಧಿಸಿದಂತೆ ಒಟ್ಟು 49 ಪ್ರಕರಣಗಳನ್ನು ದಾಖಲಿಸಿದ್ದರು. ದಾಖಲೆಗಳ ಪ್ರಕಾರ ಅಂದಿನ ರಾಮಜನ್ಮಭೂಮಿ ಪೊಲೀಸ್ ಠಾಣೆಯ ಉಸ್ತುವಾರಿ ಪಿಎನ್ ಶುಕ್ಲಾ ಅವರು ಅಪರಿಚಿತ ಕರಸೇವಕರ ವಿರುದ್ಧ ವಿವಿಧ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
View this post on Instagram
View this post on Instagram
View this post on Instagram
View this post on Instagram
View this post on Instagram