Homeಮುಖಪುಟರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

ರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಕಾರ್ಯಕ್ರಮ ನಡೆಯುತ್ತಿದೆ. ಮಲಯಾಳಂ ಚಿತ್ರರಂಗದ ಜನಪ್ರಿಯ ನಟರು, ನಿರ್ದೇಶಕರು ತಮ್ಮ ಸಾಮಾಜಿಕ ಮಾದ್ಯಮಗಳ ಖಾತೆಗಳಲ್ಲಿ ಭಾರತದ ಸಂವಿಧಾನದ ಪೀಠಿಕೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಸಮಾನತೆ, ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ತತ್ವಗಳನ್ನು ಒತ್ತಿಹೇಳಿದ್ದಾರೆ.

ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ.ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ ಪೀಠ, ದಶಕಗಳ ಕಾಲದ ಅಯೋಧ್ಯೆ-ಬಾಬರಿ ಮಸೀದಿ ಜಮೀನಿನ ಒಡೆತನದ ಬಗ್ಗೆ ನ.9, 2019ರಂದು ಅಂತಿಮ ತೀರ್ಪು ನೀಡಿತ್ತು. ತೀರ್ಪಿನ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗಿತ್ತು. ತೀರ್ಪನ್ನು ವಾಸ್ತವಕ್ಕಿಂತ-ನಂಬಿಕೆ ಆಧಾರದಲ್ಲಿ ನೀಡಲಾಗಿದೆ ಎಂದು ಟೀಕೆ ವ್ಯಕ್ತವಾಗಿತ್ತು. ವಿವಾದಿತ ಭೂಮಿಯನ್ನು ಸುಪ್ರೀಂಕೋರ್ಟ್‌ ರಾಮಮಂದಿರ ನಿರ್ಮಾಣಕ್ಕೆ ಕೊಟ್ಟ ಬಳಿಕ ಇದೀಗ ಅದೇ ಸ್ಥಳದಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ರಾಮಮಂದಿರ ಆಂದೋಲನ ಮತ್ತು ಬಾಬರಿ ಮಸೀದಿ ಧ್ವಂಸವು ಹಿಂದೂ ಬಹುಸಂಖ್ಯಾತತೆಯ ಬಲವರ್ಧನೆಗೆ ಮತ್ತು ಭಾರತೀಯ ಜನತಾ ಪಕ್ಷದ ಬೆಳವಣಿಗೆಗೆ ಕಾರಣವಾಗಿತ್ತು. ಇದೀಗ ರಾಮಮಂದಿರ ಉದ್ಘಾಟನೆಯನ್ನು ಬಿಜೆಪಿ ಲೋಕಸಭೆಯ ಚುನಾವಣೆಯ ಹೊಸ್ತಿಲಲ್ಲೇ ನಡೆಸುತ್ತಿದ್ದು, ಪ್ರತಿಪಕ್ಷಗಳ ವಿರೋಧಕ್ಕೆ ಕಾರಣವಾಗಿತ್ತು. ಧರ್ಮವನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ಮತ್ತು ಪ್ರಧಾನಿ, ಸಿಎಂಗಳು ಸೇರಿ ಆಡಳಿತ ಯಂತ್ರವನ್ನು ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ವ್ಯಾಪಕ ಟೀಕೆಗೆ ಕಾರಣವಾಗಿತ್ತು.

ಮಳಯಾಲಂ ನಟರಾದ ಪಾರ್ವತಿ ತಿರುವೋತು, ರಿಮಾ ಕಲ್ಲಿಂಗಲ್, ದಿವ್ಯ ಪ್ರಭಾ, ಕಣಿ ಕುಸೃತಿ, ನಿರ್ದೇಶಕರಾದ ಜಿಯೋ ಬೇಬಿ, ಆಶಿಕ್ ಅಬು, ಕಮಲ್ ಕೆಎಂ ಮತ್ತು ಗಾಯಕ ಸೂರಜ್ ಸಂತೋಷ್ ಸೇರಿದಂತೆ ಹಲವಾರು ಪ್ರಸಿದ್ಧ ಮಲಯಾಳಂ ಚಿತ್ರರಂಗದ ಸೆಲೆಬ್ರಿಟಿಗಳು ಸಂವಿಧಾನದ ಮುನ್ನುಡಿಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಭಾರತದ ಪ್ರಜೆಗಳಾದ, ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ, ಗಣರಾಜ್ಯವಾಗಿ ರೂಪಿಸಲು ಮತ್ತು ಅದರ ಎಲ್ಲಾ ನಾಗರಿಕರಿಗೆ ಸುರಕ್ಷಿತಗೊಳಿಸಲು ನಿರ್ಧರಿಸಿದ್ದೇವೆ..

ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ;

ವಿಚಾರ, ಅಭಿವ್ಯಕ್ತಿ, ವಿಶ್ವಾಸ ಮತ್ತು ಉಪಾಸನಾ ಸ್ವಾತಂತ್ರ್ಯ;

ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು(ರಾಷ್ಟ್ರದ ಏಕತೆ ಮತ್ತು ಅಖಂಡತೆಯನ್ನು) ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃತ್ವ ಭಾವನೆಯನ್ನು ವೃದ್ಧಿಸಿಕೊಳ್ಳಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ 

ನಮ್ಮ ಸಂವಿಧಾನ ಸಭೆಯಲ್ಲಿ, 1949ನೆಯ ನವೆಂಬರ್‌ ತಿಂಗಳ 26ನೇ ತಾರೀಖಾದ ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ. 

ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾಪನೆ’ ಇಂದು ಮಧ್ಯಾಹ್ನ 12.20ಕ್ಕೆ ಪ್ರಾರಂಭವಾಗಲಿದೆ. ಕಾರ್ಯಕ್ರಮ ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಈ ವೇಳೆ ಭಾಷಣ ಮಾಡಲಿದ್ದಾರೆ. ಸ್ಥಳದಲ್ಲಿ 13,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ. ವಿಕ್ಕಿ ಕೌಶಲ್, ಮಾಧುರಿ ದೀಕ್ಷಿತ್, ಆಲಿಯಾ ಭಟ್, ರಾಜ್‌ಕುಮಾರ್ ಹಿರಾನಿ, ಮಹಾವೀರ್ ಜೈನ್ ಮತ್ತು ರೋಹಿತ್ ಶೆಟ್ಟಿ ಸೇರಿದಂತೆ ಬಾಲಿವುಡ್ ತಾರೆಯರು ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.

1528 ರಲ್ಲಿ ಮೊಘಲ್ ಚಕ್ರವರ್ತಿ ಬಾಬರ್‌ನ ಕಮಾಂಡರ್ ಮೀರ್ ಬಾಕಿಯಿಂದ ನಿರ್ಮಿಸಲ್ಪಟ್ಟ 16ನೇ ಶತಮಾನದ ಮಸೀದಿ ಬಾಬರಿ ಮಸೀದಿಯನ್ನು ಡಿಸೆಂಬರ್ 6, 1992 ರಂದು  ಧ್ವಂಸಗೊಳಿಸಲಾಗಿತ್ತು. ವಿಎಚ್ ಪಿ, ಶಿವ ಸೇನೆ, ಬಿಜೆಪಿಯ ಸದಸ್ಯರಿದ್ದ ಕರಸೇವಕರು ಮಸೀದಿಯ 3 ಗುಮ್ಮಟಗಳು ಒಂದರ ನಂತರ ಒಂದರಂತೆ  ಕೆಡವಿದ್ದಾರೆ. ಈ ಸಂಘಟಿತ ಅಪರಾಧದಿಂದಾಗಿ ಭುಗಿಲೆದ್ದ ಕೋಮು ಗಲಭೆಯಲ್ಲಿ 2,000ಕ್ಕೂ ಹೆಚ್ಚು ಸಾವುಗಳಿಗೆ ಕಾರಣವಾಗಿತ್ತು. 1947ರಲ್ಲಿ ಸ್ವಾತಂತ್ರ್ಯದ ನಂತರ ಭಾರತವು ಕಂಡ ಅತ್ಯಂತ ಭೀಕರವಾದ ಗಲಭೆಗಳಲ್ಲಿ ಒಂದಾಗಿದೆ.

ಬಾಬರಿ ಮಸೀದಿ ಧ್ವಂಸ ಅಪರಾಧ ಆದರೆ ಸುದೀರ್ಘ ವಿಚಾರಣೆಯ ನಂತರವೂ ವಿಚಾರಣಾ ನ್ಯಾಯಾಲಯದಿಂದ ಒಬ್ಬ ಆರೋಪಿಗೂ ಶಿಕ್ಷೆಯಾಗಲಿಲ್ಲ. ಉತ್ತರಪ್ರದೇಶ ಪೊಲೀಸರು ಬಾಬರಿ ಮಸೀದಿ ಧ್ವಂಸ, ಗಲಭೆ, ಕೋಮು ಸೌಹಾರ್ದತೆಗೆ ಭಂಗ ತರುವ ಭಾಷಣಗಳು ಮತ್ತು ಇತರ ಪತ್ರಕರ್ತರ ಮೇಲಿನ ಹಲ್ಲೆಗಳಿಗೆ ಸಂಬಂಧಿಸಿದಂತೆ ಒಟ್ಟು 49 ಪ್ರಕರಣಗಳನ್ನು ದಾಖಲಿಸಿದ್ದರು. ದಾಖಲೆಗಳ ಪ್ರಕಾರ ಅಂದಿನ ರಾಮಜನ್ಮಭೂಮಿ ಪೊಲೀಸ್ ಠಾಣೆಯ ಉಸ್ತುವಾರಿ ಪಿಎನ್ ಶುಕ್ಲಾ ಅವರು ಅಪರಿಚಿತ ಕರಸೇವಕರ ವಿರುದ್ಧ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಅಶೋಕ್ ಸಿಂಘಾಲ್, ಗಿರಿರಾಜ್ ಕಿಶೋರ್, ವಿಷ್ಣು ಹರಿ ದಾಲ್ಮಿಯಾ, ಸಾಧ್ವಿ ಋತಂಭರ, ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ವಿನಯ್ ಕಟಿಯಾರ್ ಮತ್ತು ಉಮಾಭಾರತಿ ಸೇರಿ ಪ್ರಕರಣದಲ್ಲಿ ಹಲವರ ವಿರುದ್ಧ ಕೇಸ್ ದಾಖಲಾಗಿತ್ತು.
ಅಯೋಧ್ಯೆ-ಬಾಬರಿ ಮಸೀದಿ ಜಮೀನಿನ ಒಡೆತನದ ಬಗ್ಗೆ ನ. 9, 2019ರಂದು ಸುಪ್ರೀಂಕೋರ್ಟ್‌ ಪೀಠ ತೀರ್ಪು ನೀಡಿತ್ತು. ವಿವಾದಿತ 2.77 ಎಕರೆ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದ ಸುಪ್ರೀಂಕೋರ್ಟ್, ರಾಮಮಂದಿರ ಜಮೀನನ್ನು ಸಂಪೂರ್ಣವಾಗಿ ಟ್ರಸ್ಟ್​​ ವಶಕ್ಕೆ ನೀಡಬೇಕು. ಇದರ ಹೊಣೆ ಸರ್ಕಾರದ್ದು ಎಂದು ಸೂಚಿಸಿತ್ತು. ಇದೇ ವೇಳೆ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಫ್ ಬೋರ್ಡ್‌ಗೆ 5 ಎಕರೆ ಪರ್ಯಾಯ ಭೂಮಿ ನೀಡಲು ಸೂಚಿಸಿತ್ತು. ಇದಲ್ಲದೆ 2010ರಲ್ಲಿ ಇದೇ ವಿವಾದದಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು  ರದ್ದುಪಡಿಸಿತ್ತು. ರಾಮ್ ಲಲ್ಲಾ, ನಿರ್ಮೋಹಿ ಅಖಾಡಾ ಮತ್ತು ಸುನ್ನಿ ವಕ್ಫ್ ಬೋರ್ಡ್‌ಗೆ ವಿವಾದಿತ ಜಾಗವನ್ನು ಅಲಹಾಬಾದ್ ಹೈಕೋರ್ಟ್ ಸಮನಾಗಿ ಹಂಚಿಕೆ ಮಾಡಿರುವುದನ್ನು ರದ್ದುಪಡಿಸಿತ್ತು. ಮಸೀದಿಯ ಧ್ವಂಸವನ್ನು “ಕಾನೂನಿನ ನಿಯಮದ ಉಲ್ಲಂಘನೆ” ಎಂದು ಸುಪ್ರೀಂಕೋರ್ಟ್ ಉಲ್ಲೇಖಿಸಿದ್ದರೂ, ವಾಸ್ತವಕ್ಕಿಂತ ಮೇಲಿನ ನಂಬಿಕೆ ಆಧಾರದಲ್ಲಿ ತೀರ್ಪನ್ನು ನೀಡಿದ್ದಕ್ಕೆ ವ್ಯಾಪಕವಾದ ಟೀಕೆ ವ್ಯಕ್ತವಾಗಿತ್ತು.

 

 

View this post on Instagram

 

A post shared by Parvathy Thiruvothu (@par_vathy)

 

 

View this post on Instagram

 

A post shared by Aashiq Abu (@aashiqabu)

 

 

View this post on Instagram

 

A post shared by Jeo Baby (@jeobabymusic)

 

 

View this post on Instagram

 

A post shared by Kamal KM (@kamalkm)

 

 

View this post on Instagram

 

A post shared by Divyaprabha (@divya_prabha__)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...