Homeಮುಖಪುಟಹೇಮಾ ಸಮಿತಿ ವರದಿ : ಎಸ್‌ಐಟಿ ತನಿಖೆ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ ನಟಿ!

ಹೇಮಾ ಸಮಿತಿ ವರದಿ : ಎಸ್‌ಐಟಿ ತನಿಖೆ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ ನಟಿ!

- Advertisement -
- Advertisement -

ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವಂತೆ ಕೇರಳ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಮಲಯಾಳಂ ನಟಿ ಮಾಲಾ ಪಾರ್ವತಿ ಶುಕ್ರವಾರ (ನ.29) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

“ಹೇಮಾ ಸಮಿತಿ ಮುಂದೆ ನಾನು ನೀಡಿರುವ ಹೇಳಿಕೆಗಳು ಸಂಪೂರ್ಣವಾಗಿ ‘ಶೈಕ್ಷಣಿಕ ಉದ್ದೇಶ’ವನ್ನು ಹೊಂದಿದೆ. ಅಲ್ಲದೆ, ಮುಂದೆ ಶಿಫಾರಸುಗಳನ್ನು ನೀಡಲು ಸಹಾಯವಾಗಲಿ ಎಂದು ನಾನು ಹೇಳಿಕೆ ನೀಡಿದ್ದೇನೆ. ಆದರೆ, ಈಗ ನನ್ನ ಹೇಳಿಕೆ ಆಧರಿಸಿ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುತ್ತಿದೆ. ಹೇಮಾ ಸಮಿತಿ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವಂತೆ ಆದೇಶಿಸುವ ಮೂಲಕ ಹೈಕೋರ್ಟ್ ತನ್ನ ಅಧಿಕಾರ ವ್ಯಾಪ್ತಿಯನ್ನು ದಾಟಿದೆ” ಎಂದು ಮಾಲಾ ಪಾರ್ವತಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ.

“ವರದಿ ಆಧರಿಸಿ ಎಫ್‌ಐಆರ್ ದಾಖಲಿಸಿ ಎಂಬ ಹೈಕೋರ್ಟ್ ಆದೇಶ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆ ನಡೆಸುವ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ. ಆ ತಂಡದ ವಿವೇಚನೆಯನ್ನು ದುರ್ಬಲಗೊಳಿಸುತ್ತದೆ. ಸೂಕ್ತ ತನಿಖೆ ನಡೆಸದೆ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವುದು ಸರಿಯಲ್ಲ” ಎಂದು ಮಾಲಾ ಪಾರ್ವತಿ ವಾದಿಸಿದ್ದಾರೆ.

“ನಾನು ಹೇಮಾ ಸಮಿತಿ ಮುಂದೆ ನೀಡಿರುವ ಹೇಳಿಕೆಗಳು ಬೇರೆಯವರಿಂದ ಕೇಳಿದ್ದು, ಅವರು ನಂತರ ತಮ್ಮ ನಿಲುವು ಬದಲಿಸಿಕೊಂಡಿದ್ದಾರೆ. ಎಸ್‌ಐಟಿ ರಚನೆಯಾದ ಬಳಿಕ ಅಧಿಕಾರಿಗಳು ನನ್ನನ್ನು ಮತ್ತು ನನಗೆ ಮಾಹಿತಿ ನೀಡಿದವರನ್ನು ಭೇಟಿಯಾಗಿದ್ದಾರೆ. ನಮಗೆ ಕಾನೂನು ಕ್ರಮ ಮುಂದುವರಿಸಲು ಆಸಕ್ತಿಯಿಲ್ಲ. ಹೈಕೋರ್ಟ್ ಆದೇಶದ ಬಳಿಕ, ಬೇಡ ಅಂದರೂ ಎಸ್‌ಐಟಿ ಎಫ್‌ಐಆರ್ ದಾಖಲಿಸುತ್ತಿದೆ” ಎಂದಿದ್ದಾರೆ.

“ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಯಮಗಳನ್ನು ರೂಪಿಸುವ ಸಲುವಾಗಿ ಅಥವಾ ಈ ನಿಟ್ಟಿನಲ್ಲಿ ನಿರ್ಧಾರಗಳನ್ನು ಕೈಗೊಳ್ಳುವ ಸಲುವಾಗಿ ನಾನು ಹೇಮಾ ಸಮಿತಿ ಮುಂದೆ ಹೇಳಿಕೆಗಳನ್ನು ನೀಡಿದ್ದೇನೆ. ನನ್ನಿಂದ ಹೇಳಿಕೆ ಪಡೆಯುವಾಗಲೂ, ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಮಾ ಸಮಿತಿ ಭರವಸೆ ನೀಡಿದೆ. ಆದರೆ, ಈಗ ನನ್ನ ಹೇಳಿಕೆ ಆಧರಿಸಿ ಕ್ರಮಕ್ಕೆ ಮುಂದಾಗಿದ್ದಾರೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಎಸ್‌ಐಟಿ ನನ್ನ ಹೇಳಿಕೆಯೊಂದಿಗೆ ಸಂಬಂಧ ಇಲ್ಲದವರನ್ನು ಕರೆದು ಕಿರುಕುಳ ನೀಡುತ್ತಿದೆ. ಇದು ನಟಿಯಾಗಿ ನನ್ನ ಸಮಗ್ರತೆಯನ್ನು ಹಾಳು ಮಾಡುತ್ತದೆ. ಸಮಿತಿಯ ಉದ್ದೇವನ್ನೂ ಕೆಡಿಸುತ್ತದೆ. ಸಿನಿಮಾ ರಂಗದಲ್ಲಿ ಸಮಸ್ಯೆ ಎದುರಿಸಿದವರು ಪಡೆಯುತ್ತಿರುವ ಬೆಂಬಲವನ್ನು ಕುಗ್ಗಿಸುತ್ತದೆ” ಎಂದು ಮಾಲಾ ಪಾರ್ವತಿ ಹೇಳಿದ್ದಾರೆ.

2017ರಲ್ಲಿ ಬಹುಭಾ‍ಷಾ ನಟಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ನಡೆದ ಬಳಿಕ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿದ್ದ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ತಂಡ, ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಕೋರಿತ್ತು.

ಈ ಮನವಿ ಪರಿಗಣಿಸಿದ ಸರ್ಕಾರ, ಕೇರಳ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಹೇಮಾ, ಚಲನಚಿತ್ರ ನಟಿ ಶಾರದ ಮತ್ತು ಮಾಜಿ ಐಎಎಸ್ ಅಧಿಕಾರಿ ಕೆ.ಬಿ.ವಲ್ಸಲಕುಮಾರಿ ಅವರ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯನ್ನು ‘ಹೇಮಾ ಸಮಿತಿ’ ಎಂದು ಕರೆಯಲಾಗುತ್ತದೆ.

ಸಮಿತಿ ಅಧ್ಯಯನ ನಡೆಸಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಆದರೆ, ನಟಿ ರಜಿನಿ ಅವರು ವರದಿ ಬಿಡುಗಡೆಗೆ ತಡೆ ಕೋರಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದ ಕಾರಣ ವರದಿ ಬಿಡುಗಡೆಯಾಗದೆ ಉಳಿದಿತ್ತು.

ಹೈಕೋರ್ಟ್ ರಜಿನಿಯವರ ಅರ್ಜಿಯನ್ನು ತಿರಸ್ಕರಿಸಿದ ಬಳಿಕ, ಕಳೆದ ಆಗಸ್ಟ್ 19ರಂದು ವರದಿ ಬಿಡುಗಡೆಯಾಗಿದೆ. ಅದರಲ್ಲಿ ಉಲ್ಲೇಖಿಸಿರುವ ‘ಸಿನಿಮಾದಲ್ಲಿ ಅವಕಾಶ ಬೇಕೇಂದರೆ ಮಹಿಳಾ ಕಲಾವಿದರು ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಪುರುಷರ ಜೊತೆ ಲೈಂಗಿಕವಾಗಿ ಹೊಂದಾಣಿಕೆ ಮಾಡಿಕೊಳ್ಳಬೇಕಿದೆ. ಅನೇಕ ಮಹಿಳಾ ಕಲಾವಿದರು ಈಗಾಗಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಬೆದರಿಕೆಯಿಂದ ಅದನ್ನು ಹೊರಗೆ ಹೇಳಿಕೊಳ್ಳುತ್ತಿಲ್ಲ, ದೂರು ದಾಖಲಿಸುತ್ತಿಲ್ಲ” ಎಂಬ ವಿಷಯ ದೇಶದಲ್ಲೇ ಸಂಚಲನ ಸೃಷ್ಟಿಸಿದೆ.

ವರದಿ ಬಿಡುಗಡೆ ಬಳಿಕ, ಅನೇಕ ನಟಿಯರು ಮಾಧ್ಯಮಗಳ ಮುಂದೆ ತಮಗಾದ ಕಿರುಕುಳ ಹೇಳಿಕೊಂಡಿದ್ದಾರೆ. ದೂರು ದಾಖಲಿಸಿದ್ದಾರೆ. ಕೇರಳ ಸರ್ಕಾರ ಹೇಮಾ ಸಮಿತಿಯ ವರದಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದೆ.

ವರದಿ ಬಿಡುಗಡೆಯಾದ ನಂತರ, ಮಲಯಾಳಂ ನಟ ಸಿದ್ದೀಕ್, ನಟ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಶಾಸಕ ಎಂ ಮುಖೇಶ್, ನಟ ಜಯಸೂರ್ಯ ಮತ್ತು ನಿರ್ದೇಶಕ ವಿಎ ಶ್ರೀಕುಮಾರ್ ಮೆನನ್ ಸೇರಿದಂತೆ ಮಲಯಾಳಂ ಚಿತ್ರರಂಗದ ಹಲವಾರು ಘಟಾನುಘಟಿಗಳ ವಿರುದ್ದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ‘ಆಂತರಿಕ ಸಮಿತಿ’ ರಚಿಸುವಲ್ಲಿ ಫಿಲ್ಮ್ ಚೇಂಬರ್ ವಿಫಲ : ಜಿಲ್ಲಾಧಿಕಾರಿಗೆ ಪತ್ರ ಬರೆದ ಮಹಿಳಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...