Homeಮುಖಪುಟಹೇಮಾ ಸಮಿತಿ ವರದಿ : ಎಸ್‌ಐಟಿ ತನಿಖೆ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ ನಟಿ!

ಹೇಮಾ ಸಮಿತಿ ವರದಿ : ಎಸ್‌ಐಟಿ ತನಿಖೆ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ ನಟಿ!

- Advertisement -
- Advertisement -

ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವಂತೆ ಕೇರಳ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಮಲಯಾಳಂ ನಟಿ ಮಾಲಾ ಪಾರ್ವತಿ ಶುಕ್ರವಾರ (ನ.29) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

“ಹೇಮಾ ಸಮಿತಿ ಮುಂದೆ ನಾನು ನೀಡಿರುವ ಹೇಳಿಕೆಗಳು ಸಂಪೂರ್ಣವಾಗಿ ‘ಶೈಕ್ಷಣಿಕ ಉದ್ದೇಶ’ವನ್ನು ಹೊಂದಿದೆ. ಅಲ್ಲದೆ, ಮುಂದೆ ಶಿಫಾರಸುಗಳನ್ನು ನೀಡಲು ಸಹಾಯವಾಗಲಿ ಎಂದು ನಾನು ಹೇಳಿಕೆ ನೀಡಿದ್ದೇನೆ. ಆದರೆ, ಈಗ ನನ್ನ ಹೇಳಿಕೆ ಆಧರಿಸಿ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುತ್ತಿದೆ. ಹೇಮಾ ಸಮಿತಿ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವಂತೆ ಆದೇಶಿಸುವ ಮೂಲಕ ಹೈಕೋರ್ಟ್ ತನ್ನ ಅಧಿಕಾರ ವ್ಯಾಪ್ತಿಯನ್ನು ದಾಟಿದೆ” ಎಂದು ಮಾಲಾ ಪಾರ್ವತಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ.

“ವರದಿ ಆಧರಿಸಿ ಎಫ್‌ಐಆರ್ ದಾಖಲಿಸಿ ಎಂಬ ಹೈಕೋರ್ಟ್ ಆದೇಶ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆ ನಡೆಸುವ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ. ಆ ತಂಡದ ವಿವೇಚನೆಯನ್ನು ದುರ್ಬಲಗೊಳಿಸುತ್ತದೆ. ಸೂಕ್ತ ತನಿಖೆ ನಡೆಸದೆ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವುದು ಸರಿಯಲ್ಲ” ಎಂದು ಮಾಲಾ ಪಾರ್ವತಿ ವಾದಿಸಿದ್ದಾರೆ.

“ನಾನು ಹೇಮಾ ಸಮಿತಿ ಮುಂದೆ ನೀಡಿರುವ ಹೇಳಿಕೆಗಳು ಬೇರೆಯವರಿಂದ ಕೇಳಿದ್ದು, ಅವರು ನಂತರ ತಮ್ಮ ನಿಲುವು ಬದಲಿಸಿಕೊಂಡಿದ್ದಾರೆ. ಎಸ್‌ಐಟಿ ರಚನೆಯಾದ ಬಳಿಕ ಅಧಿಕಾರಿಗಳು ನನ್ನನ್ನು ಮತ್ತು ನನಗೆ ಮಾಹಿತಿ ನೀಡಿದವರನ್ನು ಭೇಟಿಯಾಗಿದ್ದಾರೆ. ನಮಗೆ ಕಾನೂನು ಕ್ರಮ ಮುಂದುವರಿಸಲು ಆಸಕ್ತಿಯಿಲ್ಲ. ಹೈಕೋರ್ಟ್ ಆದೇಶದ ಬಳಿಕ, ಬೇಡ ಅಂದರೂ ಎಸ್‌ಐಟಿ ಎಫ್‌ಐಆರ್ ದಾಖಲಿಸುತ್ತಿದೆ” ಎಂದಿದ್ದಾರೆ.

“ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಯಮಗಳನ್ನು ರೂಪಿಸುವ ಸಲುವಾಗಿ ಅಥವಾ ಈ ನಿಟ್ಟಿನಲ್ಲಿ ನಿರ್ಧಾರಗಳನ್ನು ಕೈಗೊಳ್ಳುವ ಸಲುವಾಗಿ ನಾನು ಹೇಮಾ ಸಮಿತಿ ಮುಂದೆ ಹೇಳಿಕೆಗಳನ್ನು ನೀಡಿದ್ದೇನೆ. ನನ್ನಿಂದ ಹೇಳಿಕೆ ಪಡೆಯುವಾಗಲೂ, ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಮಾ ಸಮಿತಿ ಭರವಸೆ ನೀಡಿದೆ. ಆದರೆ, ಈಗ ನನ್ನ ಹೇಳಿಕೆ ಆಧರಿಸಿ ಕ್ರಮಕ್ಕೆ ಮುಂದಾಗಿದ್ದಾರೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಎಸ್‌ಐಟಿ ನನ್ನ ಹೇಳಿಕೆಯೊಂದಿಗೆ ಸಂಬಂಧ ಇಲ್ಲದವರನ್ನು ಕರೆದು ಕಿರುಕುಳ ನೀಡುತ್ತಿದೆ. ಇದು ನಟಿಯಾಗಿ ನನ್ನ ಸಮಗ್ರತೆಯನ್ನು ಹಾಳು ಮಾಡುತ್ತದೆ. ಸಮಿತಿಯ ಉದ್ದೇವನ್ನೂ ಕೆಡಿಸುತ್ತದೆ. ಸಿನಿಮಾ ರಂಗದಲ್ಲಿ ಸಮಸ್ಯೆ ಎದುರಿಸಿದವರು ಪಡೆಯುತ್ತಿರುವ ಬೆಂಬಲವನ್ನು ಕುಗ್ಗಿಸುತ್ತದೆ” ಎಂದು ಮಾಲಾ ಪಾರ್ವತಿ ಹೇಳಿದ್ದಾರೆ.

2017ರಲ್ಲಿ ಬಹುಭಾ‍ಷಾ ನಟಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ನಡೆದ ಬಳಿಕ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿದ್ದ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ತಂಡ, ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಕೋರಿತ್ತು.

ಈ ಮನವಿ ಪರಿಗಣಿಸಿದ ಸರ್ಕಾರ, ಕೇರಳ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಹೇಮಾ, ಚಲನಚಿತ್ರ ನಟಿ ಶಾರದ ಮತ್ತು ಮಾಜಿ ಐಎಎಸ್ ಅಧಿಕಾರಿ ಕೆ.ಬಿ.ವಲ್ಸಲಕುಮಾರಿ ಅವರ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯನ್ನು ‘ಹೇಮಾ ಸಮಿತಿ’ ಎಂದು ಕರೆಯಲಾಗುತ್ತದೆ.

ಸಮಿತಿ ಅಧ್ಯಯನ ನಡೆಸಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಆದರೆ, ನಟಿ ರಜಿನಿ ಅವರು ವರದಿ ಬಿಡುಗಡೆಗೆ ತಡೆ ಕೋರಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದ ಕಾರಣ ವರದಿ ಬಿಡುಗಡೆಯಾಗದೆ ಉಳಿದಿತ್ತು.

ಹೈಕೋರ್ಟ್ ರಜಿನಿಯವರ ಅರ್ಜಿಯನ್ನು ತಿರಸ್ಕರಿಸಿದ ಬಳಿಕ, ಕಳೆದ ಆಗಸ್ಟ್ 19ರಂದು ವರದಿ ಬಿಡುಗಡೆಯಾಗಿದೆ. ಅದರಲ್ಲಿ ಉಲ್ಲೇಖಿಸಿರುವ ‘ಸಿನಿಮಾದಲ್ಲಿ ಅವಕಾಶ ಬೇಕೇಂದರೆ ಮಹಿಳಾ ಕಲಾವಿದರು ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಪುರುಷರ ಜೊತೆ ಲೈಂಗಿಕವಾಗಿ ಹೊಂದಾಣಿಕೆ ಮಾಡಿಕೊಳ್ಳಬೇಕಿದೆ. ಅನೇಕ ಮಹಿಳಾ ಕಲಾವಿದರು ಈಗಾಗಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಬೆದರಿಕೆಯಿಂದ ಅದನ್ನು ಹೊರಗೆ ಹೇಳಿಕೊಳ್ಳುತ್ತಿಲ್ಲ, ದೂರು ದಾಖಲಿಸುತ್ತಿಲ್ಲ” ಎಂಬ ವಿಷಯ ದೇಶದಲ್ಲೇ ಸಂಚಲನ ಸೃಷ್ಟಿಸಿದೆ.

ವರದಿ ಬಿಡುಗಡೆ ಬಳಿಕ, ಅನೇಕ ನಟಿಯರು ಮಾಧ್ಯಮಗಳ ಮುಂದೆ ತಮಗಾದ ಕಿರುಕುಳ ಹೇಳಿಕೊಂಡಿದ್ದಾರೆ. ದೂರು ದಾಖಲಿಸಿದ್ದಾರೆ. ಕೇರಳ ಸರ್ಕಾರ ಹೇಮಾ ಸಮಿತಿಯ ವರದಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದೆ.

ವರದಿ ಬಿಡುಗಡೆಯಾದ ನಂತರ, ಮಲಯಾಳಂ ನಟ ಸಿದ್ದೀಕ್, ನಟ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಶಾಸಕ ಎಂ ಮುಖೇಶ್, ನಟ ಜಯಸೂರ್ಯ ಮತ್ತು ನಿರ್ದೇಶಕ ವಿಎ ಶ್ರೀಕುಮಾರ್ ಮೆನನ್ ಸೇರಿದಂತೆ ಮಲಯಾಳಂ ಚಿತ್ರರಂಗದ ಹಲವಾರು ಘಟಾನುಘಟಿಗಳ ವಿರುದ್ದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ‘ಆಂತರಿಕ ಸಮಿತಿ’ ರಚಿಸುವಲ್ಲಿ ಫಿಲ್ಮ್ ಚೇಂಬರ್ ವಿಫಲ : ಜಿಲ್ಲಾಧಿಕಾರಿಗೆ ಪತ್ರ ಬರೆದ ಮಹಿಳಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...