Homeಮುಖಪುಟಹೇಮಾ ಸಮಿತಿ ವರದಿ : ಎಸ್‌ಐಟಿ ತನಿಖೆ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ ನಟಿ!

ಹೇಮಾ ಸಮಿತಿ ವರದಿ : ಎಸ್‌ಐಟಿ ತನಿಖೆ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ ನಟಿ!

- Advertisement -
- Advertisement -

ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವಂತೆ ಕೇರಳ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಮಲಯಾಳಂ ನಟಿ ಮಾಲಾ ಪಾರ್ವತಿ ಶುಕ್ರವಾರ (ನ.29) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

“ಹೇಮಾ ಸಮಿತಿ ಮುಂದೆ ನಾನು ನೀಡಿರುವ ಹೇಳಿಕೆಗಳು ಸಂಪೂರ್ಣವಾಗಿ ‘ಶೈಕ್ಷಣಿಕ ಉದ್ದೇಶ’ವನ್ನು ಹೊಂದಿದೆ. ಅಲ್ಲದೆ, ಮುಂದೆ ಶಿಫಾರಸುಗಳನ್ನು ನೀಡಲು ಸಹಾಯವಾಗಲಿ ಎಂದು ನಾನು ಹೇಳಿಕೆ ನೀಡಿದ್ದೇನೆ. ಆದರೆ, ಈಗ ನನ್ನ ಹೇಳಿಕೆ ಆಧರಿಸಿ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುತ್ತಿದೆ. ಹೇಮಾ ಸಮಿತಿ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವಂತೆ ಆದೇಶಿಸುವ ಮೂಲಕ ಹೈಕೋರ್ಟ್ ತನ್ನ ಅಧಿಕಾರ ವ್ಯಾಪ್ತಿಯನ್ನು ದಾಟಿದೆ” ಎಂದು ಮಾಲಾ ಪಾರ್ವತಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ.

“ವರದಿ ಆಧರಿಸಿ ಎಫ್‌ಐಆರ್ ದಾಖಲಿಸಿ ಎಂಬ ಹೈಕೋರ್ಟ್ ಆದೇಶ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆ ನಡೆಸುವ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ. ಆ ತಂಡದ ವಿವೇಚನೆಯನ್ನು ದುರ್ಬಲಗೊಳಿಸುತ್ತದೆ. ಸೂಕ್ತ ತನಿಖೆ ನಡೆಸದೆ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವುದು ಸರಿಯಲ್ಲ” ಎಂದು ಮಾಲಾ ಪಾರ್ವತಿ ವಾದಿಸಿದ್ದಾರೆ.

“ನಾನು ಹೇಮಾ ಸಮಿತಿ ಮುಂದೆ ನೀಡಿರುವ ಹೇಳಿಕೆಗಳು ಬೇರೆಯವರಿಂದ ಕೇಳಿದ್ದು, ಅವರು ನಂತರ ತಮ್ಮ ನಿಲುವು ಬದಲಿಸಿಕೊಂಡಿದ್ದಾರೆ. ಎಸ್‌ಐಟಿ ರಚನೆಯಾದ ಬಳಿಕ ಅಧಿಕಾರಿಗಳು ನನ್ನನ್ನು ಮತ್ತು ನನಗೆ ಮಾಹಿತಿ ನೀಡಿದವರನ್ನು ಭೇಟಿಯಾಗಿದ್ದಾರೆ. ನಮಗೆ ಕಾನೂನು ಕ್ರಮ ಮುಂದುವರಿಸಲು ಆಸಕ್ತಿಯಿಲ್ಲ. ಹೈಕೋರ್ಟ್ ಆದೇಶದ ಬಳಿಕ, ಬೇಡ ಅಂದರೂ ಎಸ್‌ಐಟಿ ಎಫ್‌ಐಆರ್ ದಾಖಲಿಸುತ್ತಿದೆ” ಎಂದಿದ್ದಾರೆ.

“ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಯಮಗಳನ್ನು ರೂಪಿಸುವ ಸಲುವಾಗಿ ಅಥವಾ ಈ ನಿಟ್ಟಿನಲ್ಲಿ ನಿರ್ಧಾರಗಳನ್ನು ಕೈಗೊಳ್ಳುವ ಸಲುವಾಗಿ ನಾನು ಹೇಮಾ ಸಮಿತಿ ಮುಂದೆ ಹೇಳಿಕೆಗಳನ್ನು ನೀಡಿದ್ದೇನೆ. ನನ್ನಿಂದ ಹೇಳಿಕೆ ಪಡೆಯುವಾಗಲೂ, ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಮಾ ಸಮಿತಿ ಭರವಸೆ ನೀಡಿದೆ. ಆದರೆ, ಈಗ ನನ್ನ ಹೇಳಿಕೆ ಆಧರಿಸಿ ಕ್ರಮಕ್ಕೆ ಮುಂದಾಗಿದ್ದಾರೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಎಸ್‌ಐಟಿ ನನ್ನ ಹೇಳಿಕೆಯೊಂದಿಗೆ ಸಂಬಂಧ ಇಲ್ಲದವರನ್ನು ಕರೆದು ಕಿರುಕುಳ ನೀಡುತ್ತಿದೆ. ಇದು ನಟಿಯಾಗಿ ನನ್ನ ಸಮಗ್ರತೆಯನ್ನು ಹಾಳು ಮಾಡುತ್ತದೆ. ಸಮಿತಿಯ ಉದ್ದೇವನ್ನೂ ಕೆಡಿಸುತ್ತದೆ. ಸಿನಿಮಾ ರಂಗದಲ್ಲಿ ಸಮಸ್ಯೆ ಎದುರಿಸಿದವರು ಪಡೆಯುತ್ತಿರುವ ಬೆಂಬಲವನ್ನು ಕುಗ್ಗಿಸುತ್ತದೆ” ಎಂದು ಮಾಲಾ ಪಾರ್ವತಿ ಹೇಳಿದ್ದಾರೆ.

2017ರಲ್ಲಿ ಬಹುಭಾ‍ಷಾ ನಟಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ನಡೆದ ಬಳಿಕ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿದ್ದ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ತಂಡ, ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಕೋರಿತ್ತು.

ಈ ಮನವಿ ಪರಿಗಣಿಸಿದ ಸರ್ಕಾರ, ಕೇರಳ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಹೇಮಾ, ಚಲನಚಿತ್ರ ನಟಿ ಶಾರದ ಮತ್ತು ಮಾಜಿ ಐಎಎಸ್ ಅಧಿಕಾರಿ ಕೆ.ಬಿ.ವಲ್ಸಲಕುಮಾರಿ ಅವರ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯನ್ನು ‘ಹೇಮಾ ಸಮಿತಿ’ ಎಂದು ಕರೆಯಲಾಗುತ್ತದೆ.

ಸಮಿತಿ ಅಧ್ಯಯನ ನಡೆಸಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಆದರೆ, ನಟಿ ರಜಿನಿ ಅವರು ವರದಿ ಬಿಡುಗಡೆಗೆ ತಡೆ ಕೋರಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದ ಕಾರಣ ವರದಿ ಬಿಡುಗಡೆಯಾಗದೆ ಉಳಿದಿತ್ತು.

ಹೈಕೋರ್ಟ್ ರಜಿನಿಯವರ ಅರ್ಜಿಯನ್ನು ತಿರಸ್ಕರಿಸಿದ ಬಳಿಕ, ಕಳೆದ ಆಗಸ್ಟ್ 19ರಂದು ವರದಿ ಬಿಡುಗಡೆಯಾಗಿದೆ. ಅದರಲ್ಲಿ ಉಲ್ಲೇಖಿಸಿರುವ ‘ಸಿನಿಮಾದಲ್ಲಿ ಅವಕಾಶ ಬೇಕೇಂದರೆ ಮಹಿಳಾ ಕಲಾವಿದರು ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಪುರುಷರ ಜೊತೆ ಲೈಂಗಿಕವಾಗಿ ಹೊಂದಾಣಿಕೆ ಮಾಡಿಕೊಳ್ಳಬೇಕಿದೆ. ಅನೇಕ ಮಹಿಳಾ ಕಲಾವಿದರು ಈಗಾಗಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಬೆದರಿಕೆಯಿಂದ ಅದನ್ನು ಹೊರಗೆ ಹೇಳಿಕೊಳ್ಳುತ್ತಿಲ್ಲ, ದೂರು ದಾಖಲಿಸುತ್ತಿಲ್ಲ” ಎಂಬ ವಿಷಯ ದೇಶದಲ್ಲೇ ಸಂಚಲನ ಸೃಷ್ಟಿಸಿದೆ.

ವರದಿ ಬಿಡುಗಡೆ ಬಳಿಕ, ಅನೇಕ ನಟಿಯರು ಮಾಧ್ಯಮಗಳ ಮುಂದೆ ತಮಗಾದ ಕಿರುಕುಳ ಹೇಳಿಕೊಂಡಿದ್ದಾರೆ. ದೂರು ದಾಖಲಿಸಿದ್ದಾರೆ. ಕೇರಳ ಸರ್ಕಾರ ಹೇಮಾ ಸಮಿತಿಯ ವರದಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದೆ.

ವರದಿ ಬಿಡುಗಡೆಯಾದ ನಂತರ, ಮಲಯಾಳಂ ನಟ ಸಿದ್ದೀಕ್, ನಟ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಶಾಸಕ ಎಂ ಮುಖೇಶ್, ನಟ ಜಯಸೂರ್ಯ ಮತ್ತು ನಿರ್ದೇಶಕ ವಿಎ ಶ್ರೀಕುಮಾರ್ ಮೆನನ್ ಸೇರಿದಂತೆ ಮಲಯಾಳಂ ಚಿತ್ರರಂಗದ ಹಲವಾರು ಘಟಾನುಘಟಿಗಳ ವಿರುದ್ದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ‘ಆಂತರಿಕ ಸಮಿತಿ’ ರಚಿಸುವಲ್ಲಿ ಫಿಲ್ಮ್ ಚೇಂಬರ್ ವಿಫಲ : ಜಿಲ್ಲಾಧಿಕಾರಿಗೆ ಪತ್ರ ಬರೆದ ಮಹಿಳಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...