Homeಮುಖಪುಟಹೇಮಾ ಸಮಿತಿ ವರದಿ : ಎಸ್‌ಐಟಿ ತನಿಖೆ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ ನಟಿ!

ಹೇಮಾ ಸಮಿತಿ ವರದಿ : ಎಸ್‌ಐಟಿ ತನಿಖೆ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ ನಟಿ!

- Advertisement -
- Advertisement -

ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವಂತೆ ಕೇರಳ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಮಲಯಾಳಂ ನಟಿ ಮಾಲಾ ಪಾರ್ವತಿ ಶುಕ್ರವಾರ (ನ.29) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

“ಹೇಮಾ ಸಮಿತಿ ಮುಂದೆ ನಾನು ನೀಡಿರುವ ಹೇಳಿಕೆಗಳು ಸಂಪೂರ್ಣವಾಗಿ ‘ಶೈಕ್ಷಣಿಕ ಉದ್ದೇಶ’ವನ್ನು ಹೊಂದಿದೆ. ಅಲ್ಲದೆ, ಮುಂದೆ ಶಿಫಾರಸುಗಳನ್ನು ನೀಡಲು ಸಹಾಯವಾಗಲಿ ಎಂದು ನಾನು ಹೇಳಿಕೆ ನೀಡಿದ್ದೇನೆ. ಆದರೆ, ಈಗ ನನ್ನ ಹೇಳಿಕೆ ಆಧರಿಸಿ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುತ್ತಿದೆ. ಹೇಮಾ ಸಮಿತಿ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವಂತೆ ಆದೇಶಿಸುವ ಮೂಲಕ ಹೈಕೋರ್ಟ್ ತನ್ನ ಅಧಿಕಾರ ವ್ಯಾಪ್ತಿಯನ್ನು ದಾಟಿದೆ” ಎಂದು ಮಾಲಾ ಪಾರ್ವತಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ.

“ವರದಿ ಆಧರಿಸಿ ಎಫ್‌ಐಆರ್ ದಾಖಲಿಸಿ ಎಂಬ ಹೈಕೋರ್ಟ್ ಆದೇಶ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆ ನಡೆಸುವ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ. ಆ ತಂಡದ ವಿವೇಚನೆಯನ್ನು ದುರ್ಬಲಗೊಳಿಸುತ್ತದೆ. ಸೂಕ್ತ ತನಿಖೆ ನಡೆಸದೆ ವರದಿ ಆಧರಿಸಿ ಎಫ್‌ಐಆರ್ ದಾಖಲಿಸುವುದು ಸರಿಯಲ್ಲ” ಎಂದು ಮಾಲಾ ಪಾರ್ವತಿ ವಾದಿಸಿದ್ದಾರೆ.

“ನಾನು ಹೇಮಾ ಸಮಿತಿ ಮುಂದೆ ನೀಡಿರುವ ಹೇಳಿಕೆಗಳು ಬೇರೆಯವರಿಂದ ಕೇಳಿದ್ದು, ಅವರು ನಂತರ ತಮ್ಮ ನಿಲುವು ಬದಲಿಸಿಕೊಂಡಿದ್ದಾರೆ. ಎಸ್‌ಐಟಿ ರಚನೆಯಾದ ಬಳಿಕ ಅಧಿಕಾರಿಗಳು ನನ್ನನ್ನು ಮತ್ತು ನನಗೆ ಮಾಹಿತಿ ನೀಡಿದವರನ್ನು ಭೇಟಿಯಾಗಿದ್ದಾರೆ. ನಮಗೆ ಕಾನೂನು ಕ್ರಮ ಮುಂದುವರಿಸಲು ಆಸಕ್ತಿಯಿಲ್ಲ. ಹೈಕೋರ್ಟ್ ಆದೇಶದ ಬಳಿಕ, ಬೇಡ ಅಂದರೂ ಎಸ್‌ಐಟಿ ಎಫ್‌ಐಆರ್ ದಾಖಲಿಸುತ್ತಿದೆ” ಎಂದಿದ್ದಾರೆ.

“ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಯಮಗಳನ್ನು ರೂಪಿಸುವ ಸಲುವಾಗಿ ಅಥವಾ ಈ ನಿಟ್ಟಿನಲ್ಲಿ ನಿರ್ಧಾರಗಳನ್ನು ಕೈಗೊಳ್ಳುವ ಸಲುವಾಗಿ ನಾನು ಹೇಮಾ ಸಮಿತಿ ಮುಂದೆ ಹೇಳಿಕೆಗಳನ್ನು ನೀಡಿದ್ದೇನೆ. ನನ್ನಿಂದ ಹೇಳಿಕೆ ಪಡೆಯುವಾಗಲೂ, ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಮಾ ಸಮಿತಿ ಭರವಸೆ ನೀಡಿದೆ. ಆದರೆ, ಈಗ ನನ್ನ ಹೇಳಿಕೆ ಆಧರಿಸಿ ಕ್ರಮಕ್ಕೆ ಮುಂದಾಗಿದ್ದಾರೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಎಸ್‌ಐಟಿ ನನ್ನ ಹೇಳಿಕೆಯೊಂದಿಗೆ ಸಂಬಂಧ ಇಲ್ಲದವರನ್ನು ಕರೆದು ಕಿರುಕುಳ ನೀಡುತ್ತಿದೆ. ಇದು ನಟಿಯಾಗಿ ನನ್ನ ಸಮಗ್ರತೆಯನ್ನು ಹಾಳು ಮಾಡುತ್ತದೆ. ಸಮಿತಿಯ ಉದ್ದೇವನ್ನೂ ಕೆಡಿಸುತ್ತದೆ. ಸಿನಿಮಾ ರಂಗದಲ್ಲಿ ಸಮಸ್ಯೆ ಎದುರಿಸಿದವರು ಪಡೆಯುತ್ತಿರುವ ಬೆಂಬಲವನ್ನು ಕುಗ್ಗಿಸುತ್ತದೆ” ಎಂದು ಮಾಲಾ ಪಾರ್ವತಿ ಹೇಳಿದ್ದಾರೆ.

2017ರಲ್ಲಿ ಬಹುಭಾ‍ಷಾ ನಟಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ನಡೆದ ಬಳಿಕ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿದ್ದ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ತಂಡ, ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಕೋರಿತ್ತು.

ಈ ಮನವಿ ಪರಿಗಣಿಸಿದ ಸರ್ಕಾರ, ಕೇರಳ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಹೇಮಾ, ಚಲನಚಿತ್ರ ನಟಿ ಶಾರದ ಮತ್ತು ಮಾಜಿ ಐಎಎಸ್ ಅಧಿಕಾರಿ ಕೆ.ಬಿ.ವಲ್ಸಲಕುಮಾರಿ ಅವರ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯನ್ನು ‘ಹೇಮಾ ಸಮಿತಿ’ ಎಂದು ಕರೆಯಲಾಗುತ್ತದೆ.

ಸಮಿತಿ ಅಧ್ಯಯನ ನಡೆಸಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಆದರೆ, ನಟಿ ರಜಿನಿ ಅವರು ವರದಿ ಬಿಡುಗಡೆಗೆ ತಡೆ ಕೋರಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದ ಕಾರಣ ವರದಿ ಬಿಡುಗಡೆಯಾಗದೆ ಉಳಿದಿತ್ತು.

ಹೈಕೋರ್ಟ್ ರಜಿನಿಯವರ ಅರ್ಜಿಯನ್ನು ತಿರಸ್ಕರಿಸಿದ ಬಳಿಕ, ಕಳೆದ ಆಗಸ್ಟ್ 19ರಂದು ವರದಿ ಬಿಡುಗಡೆಯಾಗಿದೆ. ಅದರಲ್ಲಿ ಉಲ್ಲೇಖಿಸಿರುವ ‘ಸಿನಿಮಾದಲ್ಲಿ ಅವಕಾಶ ಬೇಕೇಂದರೆ ಮಹಿಳಾ ಕಲಾವಿದರು ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಪುರುಷರ ಜೊತೆ ಲೈಂಗಿಕವಾಗಿ ಹೊಂದಾಣಿಕೆ ಮಾಡಿಕೊಳ್ಳಬೇಕಿದೆ. ಅನೇಕ ಮಹಿಳಾ ಕಲಾವಿದರು ಈಗಾಗಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಬೆದರಿಕೆಯಿಂದ ಅದನ್ನು ಹೊರಗೆ ಹೇಳಿಕೊಳ್ಳುತ್ತಿಲ್ಲ, ದೂರು ದಾಖಲಿಸುತ್ತಿಲ್ಲ” ಎಂಬ ವಿಷಯ ದೇಶದಲ್ಲೇ ಸಂಚಲನ ಸೃಷ್ಟಿಸಿದೆ.

ವರದಿ ಬಿಡುಗಡೆ ಬಳಿಕ, ಅನೇಕ ನಟಿಯರು ಮಾಧ್ಯಮಗಳ ಮುಂದೆ ತಮಗಾದ ಕಿರುಕುಳ ಹೇಳಿಕೊಂಡಿದ್ದಾರೆ. ದೂರು ದಾಖಲಿಸಿದ್ದಾರೆ. ಕೇರಳ ಸರ್ಕಾರ ಹೇಮಾ ಸಮಿತಿಯ ವರದಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದೆ.

ವರದಿ ಬಿಡುಗಡೆಯಾದ ನಂತರ, ಮಲಯಾಳಂ ನಟ ಸಿದ್ದೀಕ್, ನಟ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಶಾಸಕ ಎಂ ಮುಖೇಶ್, ನಟ ಜಯಸೂರ್ಯ ಮತ್ತು ನಿರ್ದೇಶಕ ವಿಎ ಶ್ರೀಕುಮಾರ್ ಮೆನನ್ ಸೇರಿದಂತೆ ಮಲಯಾಳಂ ಚಿತ್ರರಂಗದ ಹಲವಾರು ಘಟಾನುಘಟಿಗಳ ವಿರುದ್ದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ‘ಆಂತರಿಕ ಸಮಿತಿ’ ರಚಿಸುವಲ್ಲಿ ಫಿಲ್ಮ್ ಚೇಂಬರ್ ವಿಫಲ : ಜಿಲ್ಲಾಧಿಕಾರಿಗೆ ಪತ್ರ ಬರೆದ ಮಹಿಳಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...