Homeಮುಖಪುಟಭಾರತದಿಂದ ಆಸ್ಕರ್‌ಗೆ ನಾಮ ನಿರ್ದೇಶನಗೊಂಡ ಮಲಯಾಳಂ ಚಿತ್ರ 'ಜಲ್ಲಿಕಟ್ಟು'

ಭಾರತದಿಂದ ಆಸ್ಕರ್‌ಗೆ ನಾಮ ನಿರ್ದೇಶನಗೊಂಡ ಮಲಯಾಳಂ ಚಿತ್ರ ‘ಜಲ್ಲಿಕಟ್ಟು’

ಹರೀಶ್ ಎಂಬುವವರ "ಮಾವೋಯಿಸ್ಟ್" ಎಂಬ ಸಣ್ಣ ಕಥೆಯನ್ನು ಆಧರಿಸಿದ ಈ ಚಿತ್ರ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು, ಲಿಜೋ ಜೋಸ್ ಪೆಲ್ಲಿಸ್ಸೆರಿ ಅತ್ಯುತ್ತಮ ನಿರ್ದೇಶಕ ಪ್ರಶ್ತಿಯನ್ನೂ ಗೆದ್ದಿದ್ದರು.

- Advertisement -
- Advertisement -

ಕಳೆದ ವರ್ಷ ಬಿಡುಗಡೆಯಾಗಿ ಅತ್ಯುತ್ತಮ ವಿಮರ್ಶೆಗೆ ಒಳಗಾಗಿದ್ದ ಮಲಯಾಳಂ ಚಿತ್ರ ‘ಜಲ್ಲಿಕಟ್ಟು’ ಪ್ರಖ್ಯಾತ ಆಸ್ಕರ್ ಪ್ರಶಸ್ತಿಗೆ ಭಾರತದಿಂದ ಅಧಿಕೃತವಾಗಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಲಿಜೋ ಜೋಸ್ ಪೆಲ್ಲಿಸ್ಸೆರಿ ನಿರ್ದೇಶಿಸಿದ್ದರು. ಆಂತೋಣಿ ವರ್ಗೀಸ್ ಮತ್ತು ಚೆಂಬನ್ ವಿನೋದ್ ಜೋಸ್ ಮತ್ತಿತರರು ಅಭಿನಯಿಸಿರುವ ಚಿತ್ರವು ವಿಮರ್ಶಕರ ನಡುವೆಯೂ ಮೆಚ್ಚುಗೆ ಗಳಿಸಿತ್ತು.

ಭಾರತದ ಸುಮಾರು 27 ಭಾಷೆಗಳ ಚಿತ್ರಗಳ ಪೈಕಿ ಜಲ್ಲಿಕಟ್ಟು ಚಿತ್ರವನ್ನು ಆಯ್ಕೆ ಮಾಡಲಾಗಿದೆ ಎಂದು ಫಿಲ್ಮ್‌ ಫೆಡರೇಷನ್ ಆಫ್ ಇಂಡಿಯಾ ಹೇಳಿದೆ. ‘ದಿ ಡಿಸಿಪ್ಲಿನ್’, ‘ಶಕುಂತಲಾ ದೇವಿ’, ‘ಶಿಕಾರ’, ‘ಛಾಪಕ್’, ‘ಏಕೆ V/s ಏಕೆ’, ‘ಭೋಂಸ್ಲೆ’, ‘ಛಾಲಾಂಗ್’, ‘ಚೆಕ್ ಪೋಸ್ಟ್’ ಮುಂತಾದ ಸಿನಿಮಾಗಳ ಮಧ್ಯೆ ‘ಜಲ್ಲಿಕಟ್ಟು’ ಆಯ್ಕೆಯಾಗಿದೆ.

ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಗುಡ್ಡಗಾಡು ಪ್ರದೇಶದ ಒಂದು ಹಳ್ಳಿಯ ಕಸಾಯಿಖಾನೆಯಿಂದ ತಪ್ಪಿಸಿಕೊಳ್ಳುವ ಒಂದು ಎಮ್ಮೆಯನ್ನು ಅ ಊರಿನ ಜನರು ಪತ್ತೆ ಹಚ್ಚುವುದರ ಸುತ್ತ ಈ ಚಿತ್ರದ ಕಥೆಯು ಹೆಣೆದುಕೊಂಡಿದೆ. ತಪ್ಪಿಸಿಕೊಂಡ ಎಮ್ಮೆಯನ್ನು ಹೇಗಾದರೂ ಹಿಡಿಯಲೇ ಬೇಕು ಎಂದು ಊರಿನ ಗಂಡಸರೆಲ್ಲಾ ಒಟ್ಟಾಗಿ ಮಾಡುವ ಸಾಹಸಗಳನ್ನು ತೋರಿಸುವುದರ ಮೂಲಕ ಮನುಷ್ಯನೊಳಗಿರುವ ಮೃಗೀಯ ಗುಣದ ಪರಿಚಯ ಮಾಡಿಸುವಲ್ಲಿ ನಿರ್ದೇಶಕ ಯಶಸ್ವಿಯಾಗಿದ್ದರು.

ಹರೀಶ್ ಎಂಬುವವರ “ಮಾವೋಯಿಸ್ಟ್” ಎಂಬ ಸಣ್ಣ ಕಥೆಯನ್ನು ಆಧರಿಸಿದ ಈ ಚಿತ್ರ ಟೊರೆಂಟೋ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು, ಲಿಜೋ ಜೋಸ್ ಪೆಲ್ಲಿಸ್ಸೆರಿ ಅತ್ಯುತ್ತಮ ನಿರ್ದೇಶಕ ಪ್ರಶ್ತಿಯನ್ನೂ ಗೆದ್ದಿದ್ದರು.

ಇದನ್ನೂ ಓದಿ: ಇಂಟರ್​​ನ್ಯಾಷನಲ್ ಎಮ್ಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ’ಡೆಲ್ಲಿ ಕ್ರೈಂ’ ವೆಬ್ ಸರಣಿ!

“ಮಾನವೀಯತೆ ಕುರಿತು ಈ ಸಿನಿಮಾವಿದೆ. ಕೆಲವೊಮ್ಮೆ ಮನುಷ್ಯ ಮೃಗಗಳಿಗಿಂತ ಕ್ರೂರನಾಗುತ್ತಾನೆ. ಈ ಚಿತ್ರದ ಉದ್ದೇಶ, ಕ್ಯಾಮರಾ ಕೆಲಸ, ನಿರ್ದೇಶನ ಎಲ್ಲವೂ ಚೆನ್ನಾಗಿದೆ. ಹೀಗಾಗಿ ನಾವು ಈ ಸಿನಿಮಾ ಆಯ್ಕೆ ಮಾಡಿದ್ದೇವೆ’ ಎಂದು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾದ ಚೇರ್‌ಮನ್ ರಾಹುಲ್ ರಾವೇಲ್ ತಿಳಿಸಿದ್ದಾರೆ.

ಫೆಬ್ರವರಿ 28ರಂದು ನಡೆಯಬೇಕಿದ್ದ 93ನೇ ಆಸ್ಕರ್ ಪ್ರಶಸ್ತಿ ಸಮಾರಂಭ, ಕೊರೊನಾದಿಂದಾಗಿ 2021 ಏಪ್ರಿಲ್ 25 ರಂದು ನಡೆಯಲಿದೆ


ಇದನ್ನೂ ಓದಿ: ನಟ ಅಕ್ಷಯ್ ಕುಮಾರ್ ದಾಖಲಿಸಿದ್ದ ಮಾನಹಾನಿ ಕೇಸ್ ವಿರೋಧಿಸಿದ ಯೂಟ್ಯೂಬರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...