Homeಮುಖಪುಟಮಲಯಾಳಂ ಸಾಹಿತ್ಯ ದಿಗ್ಗಜ ಎಂ.ಟಿ. ವಾಸುದೇವನ್ ನಾಯರ್ (91) ನಿಧನ

ಮಲಯಾಳಂ ಸಾಹಿತ್ಯ ದಿಗ್ಗಜ ಎಂ.ಟಿ. ವಾಸುದೇವನ್ ನಾಯರ್ (91) ನಿಧನ

- Advertisement -
- Advertisement -

‘ಎಂಟಿ’ ಎಂದೇ ಖ್ಯಾತರಾಗಿದ್ದ ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ ಬುಧವಾರ ಕೋಝಿಕ್ಕೋಡ್‌ನಲ್ಲಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಕಳೆದ ವಾರ ಹೃದಯಾಘಾತಕ್ಕೊಳಗಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಐದು ದಿನಗಳಿಂದ ಅವರು ಗಂಭೀರ ಸ್ಥಿತಿಯಲ್ಲಿದ್ದರು. ಮಲಯಾಳಂ ಸಾಹಿತ್ಯ ದಿಗ್ಗಜ

ಬುಧವಾರ ಸಂಜೆ ವೇಳೆಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಹಿರಿಯ ಚಿತ್ರ ಸಾಹಿತಿ ‘ಎಂಟಿ’ ಅವರಿಗೆ ಗೌರವ ಸೂಚಕವಾಗಿ ರಾಜ್ಯ ಸರ್ಕಾರ ಎರಡು ದಿನಗಳ ಶೋಕಾಚರಣೆ ಘೋಷಿಸಿದೆ. ಜ್ಞಾನಪೀಠ, ಪದ್ಮಭೂಷಣ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 3 ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು, 7 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು (ಚಿತ್ರಕಥೆಗಾಗಿ 4) 21 ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಅವರಿಗೆ ದಕ್ಕಿವೆ. ಮಲಯಾಳಂ ಸಾಹಿತ್ಯ ದಿಗ್ಗಜ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಧುನಿಕ ಮಲಯಾಳಂ ಸಾಹಿತ್ಯದಲ್ಲಿ ಬಹುಮುಖ ಬರಹಗಾರರಾದ ಎಂಟಿ ಅವರು ಸುಮಾರು ಹತ್ತು ಕಾದಂಬರಿಗಳು ಮತ್ತು 15 ಕ್ಕೂ ಹೆಚ್ಚು ಸಣ್ಣ ಕಥೆಗಳು ಮತ್ತು ಮಕ್ಕಳ ಸಾಹಿತ್ಯವನ್ನು ಬರೆದಿದ್ದಾರೆ. ಅವರು ಸುಮಾರು 54 ಚಿತ್ರಗಳಿಗೆ ಚಿತ್ರಕಥೆ ಬರೆದಿದ್ದಾರೆ ಮತ್ತು ಆರು ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ.

ಎಂಟಿ ಅವರಿಗೆ 1995 ರಲ್ಲಿ ಜ್ಞಾನಪೀಠ ಮತ್ತು 2005 ರಲ್ಲಿ ಪದ್ಮಭೂಷಣ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಅವರು ನಾಲ್ಕು ಬಾರಿ ಅತ್ಯುತ್ತಮ ಚಿತ್ರಕಥೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಚಲನಚಿತ್ರ ಮತ್ತು ಸಾಹಿತ್ಯ ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆಗಳಿಗಾಗಿ ಅವರನ್ನು ಇತ್ತೀಚೆಗೆ ಕೇರಳ ಸರ್ಕಾರವು ಗೌರವಿಸಿತ್ತು.

ಪಾಲಕ್ಕಾಡ್ ಜಿಲ್ಲೆಯ ಪಟ್ಟಾಂಬಿ ಸಮೀಪದ ಕೂಡಲ್ಲೂರು ಗ್ರಾಮದಲ್ಲಿ ಜನಿಸಿದ ಎಂಟಿ ರಸಾಯನಶಾಸ್ತ್ರ ಶಾಲೆಯ ಶಿಕ್ಷಕರಾಗಿದ್ದರು. ಅವರು ತಮ್ಮ ಪ್ರಶಸ್ತಿ ವಿಜೇತ ಕೃತಿ ‘ನಾಲುಕೆಟ್ಟು’ ಮೂಲಕ ಬರಹಗಾರರಾಗಿ ಜನಪ್ರಿಯರಾಗಿದ್ದರು. ಈ ಕೃತಿ 1958 ರಲ್ಲಿ ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಭೀಮಸೇನನ ದೃಷ್ಟಿಕೋನದಿಂದ ಮಹಾಭಾರತದ ಕಥೆಯನ್ನು ಮರುಸೃಷ್ಟಿಸಿದ್ದ ‘ರಂಡಾಂ ವಳಂ’ (‘ಎರಡನೇ ತಿರುವು’) ಎಂಟಿಯವರ ವ್ಯಾಪಕ ಮೆಚ್ಚುಗೆ ಪಡೆದ ಕೃತಿಯಾಗಿದೆ. ಈ ಕಾದಂಬರಿಯನ್ನು ಆಧರಿಸಿ ಮೋಹನ್ ಲಾಲ್ ಪ್ರಮುಖ ಪಾತ್ರದಲ್ಲಿ ದೊಡ್ಡ ಬಜೆಟ್ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದರಾದರೂ, ಎಂಟಿ ಮತ್ತು ಚಲನಚಿತ್ರ ನಿರ್ಮಾಪಕರ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಅದು ಸ್ಥಗಿತಗೊಂಡಿತ್ತು.

ಅವರ ‘ಒರು ವಡಕ್ಕನ್ ವೀರಗಾಥ’, ‘ಕಡವು’, ‘ಸದಯಂ’ ಮತ್ತು ‘ಪರಿಣಯಂ’ ಚಿತ್ರಗಳ ಚಿತ್ರಕಥೆಗಳು ಅತ್ಯುತ್ತಮ ಚಿತ್ರಕಥೆಗಾಗಿ ರಾಷ್ಟ್ರ ಪ್ರಶಸ್ತಿಯನ್ನು ಗಳಿಸಿವೆ. ಎಂಟಿ ಅವರು ಮಾತೃಭೂಮಿ ಪ್ರಕಾಶನದ ನಿಯತಕಾಲಿಕಗಳ ವಿಭಾಗದ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತ ಎಂಟಿ ಅವರು ಪ್ರಮೀಳಾ ಅವರನ್ನು ಮೊದಲಿಗೆ ಮದುವೆಯಾಗಿದ್ದರು, ನಂತರ ಅವರು ಕಲಾಮಂಡಲಂ ಸರಸ್ವತಿ ಅವರನ್ನು ವಿವಾಹವಾದರು. ಅವರು ಪುತ್ರಿಯರಾದ ಸಿತಾರಾ ಮತ್ತು ಅಶ್ವತಿಯನ್ನೂ ಅವರು ಅಗಲಿದ್ದಾರೆ.

ಇದನ್ನೂ ಓದಿ: ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಚೆನ್ನೈ ಪೊಲೀಸರಿಂದ ತನಿಖೆ

ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಚೆನ್ನೈ ಪೊಲೀಸರಿಂದ ತನಿಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್...

ವಿದ್ಯಾರ್ಥಿಗಳ ಪ್ರತಿಭಟನೆ: ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇರಿಸಿದ ಜಮ್ಮು-ಕಾಶ್ಮೀರ ಪೊಲೀಸರು

ಸರ್ಕಾರ ಮೀಸಲಾತಿ ನೀತಿಯನ್ನು ತರ್ಕಬದ್ಧಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆ & ಕೆ ವಿದ್ಯಾರ್ಥಿಗಳು ಪ್ರತಿಭಟನೆ ಘೋಷಿಸುತ್ತಿದ್ದಂತೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸಂಸದ ಮತ್ತು ಪೀಪಲ್ಸ್...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌...

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು...

ತ್ರಿಪುರಾ: ಮಸೀದಿಗೆ ಮದ್ಯದ ಬಾಟಲಿಗಳನ್ನು ಇಟ್ಟು ಬೆಂಕಿ ಹಚ್ಚಲು ಯತ್ನ: ಬಜರಂಗದಳ ಧ್ವಜ ಕಟ್ಟಿದ ದುಷ್ಕರ್ಮಿಗಳು

ತ್ರಿಪುರಾದ ಧಲೈ ಜಿಲ್ಲೆಯ ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ, ಇದನ್ನು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಬೆದರಿಸುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ನಿವಾಸಿಗಳು ಮತ್ತು ಮಸೀದಿ ಅಧಿಕಾರಿಗಳು ಹೇಳಿದ್ದಾರೆ.  ಮನು-ಚೌಮಾನು ರಸ್ತೆಯಲ್ಲಿರುವ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

"ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು" ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ. ಡಿಸೆಂಬರ್...

“ನನಗೆ ಏನೂ ಆಗುವುದಿಲ್ಲ”: ಅತ್ಯಾಚಾರ ಮಾಡಿ ಸಂತ್ರಸ್ತೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್ ಪತಿ 

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ...

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನದಿಂದ ಪರಿಸರದ ಮೇಲಾಗುವ ಹಾನಿಯ ಕುರಿತು ದೇಶದ ಜನರು ತೀವ್ರ ಆತಂಕ ಮತ್ತು ಕಳವಳ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್‌ ಈ ಕುರಿತು ಸ್ವಯಂ ಪ್ರೇರಿತ (Suo Motu...