Homeಅಂತರಾಷ್ಟ್ರೀಯಮಲೇಷ್ಯಾ: ಸಾಮೂಹಿಕ ವ್ಯಾಕ್ಸಿನೇಷನ್‌ ಕೇಂದ್ರದ 204 ಸಿಬ್ಬಂದಿಗೆ ಕೊರೊನಾ!

ಮಲೇಷ್ಯಾ: ಸಾಮೂಹಿಕ ವ್ಯಾಕ್ಸಿನೇಷನ್‌ ಕೇಂದ್ರದ 204 ಸಿಬ್ಬಂದಿಗೆ ಕೊರೊನಾ!

- Advertisement -
- Advertisement -

ಮಲೇಷ್ಯಾದ ಸಾಮೂಹಿಕ ವ್ಯಾಕ್ಸಿನೇಷನ್‌ ಕೇಂದ್ರದ 200 ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿ ಮತ್ತು ಸ್ವಯಂ ಸೇವಕರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳವಾರದಂದು ಅಧಿಕಾರಿಗಳು ಪ್ರಸ್ತುತ ವ್ಯಾಕ್ಸಿನೇಷನ್‌ ಕೇಂದ್ರವನ್ನು ಮುಚ್ಚಿದ್ದಾರೆ.

ಮಲೇಷ್ಯಾದ ಮಧ್ಯ ಸೆಲಂಗೂರ್‌ ರಾಜ್ಯದಲ್ಲಿರುವ ಈ ಕೇಂದ್ರದಲ್ಲಿ ಆರಂಭದಲ್ಲಿ ಇಬ್ಬರು ಸ್ವಯಂಸೇವಕರು ವೈರಸ್‌ಗೆ ತುತ್ತಾಗಿದ್ದರು. ಇದಾದ ನಂತರ 204 ಸಿಬ್ಬಂದಿ ಸಹ ಕೊರೊನಾ ಪಾಸಿಟಿವ್ ಆಗಿದ್ದಾರೆ.

ವ್ಯಾಕ್ಸಿನೇಷನ್‌ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಎಲ್ಲಾ 453 ಸಿಬ್ಬಂದಿಗಳನ್ನು ಪರೀಕ್ಷಿಸಲು ಈಗಾಗಲೇ ಆದೇಶಿಸಲಾಗಿದೆ ಎಂದು ದೇಶದ ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದ ಉಸ್ತುವಾರಿ ವಹಿಸಿರುವ ವಿಜ್ಞಾನ ಸಚಿವ ಖೈರಿ ಜಮಾಲುದ್ದೀನ್ ಹೇಳಿದ್ದಾರೆ. ಪ್ರಸ್ತುತ ಕೊರೊನಾ ಪಾಸಿಟಿವ್‌‌ ಆಗಿರುವ 204 ಜನರು ತಮ್ಮ ದೇಹದಲ್ಲಿ ಕಡಿಮೆ ಪ್ರಮಾಣದ ವೈರಸ್ ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ: ದೇಶದ ಮೊದಲ ಕೊರೊನಾ ಸೋಂಕಿತೆಯಾಗಿದ್ದ ವಿದ್ಯಾರ್ಥಿನಿಗೆ ಮತ್ತೆ ಸೋಂಕು

ವ್ಯಾಕ್ಸಿನೇಷನ್‌ ಕೇಂದ್ರವನ್ನು ಸರ್ಕಾರವು ತ್ವರಿತವಾಗಿ ಮುಚ್ಚಿದೆ ಎಂದು ಖೈರಿ ಒತ್ತಿ ಹೇಳಿದ್ದು, ಅಲ್ಲಿ ಸೋಂಕು ಹೇಗೆ ಬಂದಿದೆ ಎಂದು ಕಂಡು ಹಿಡಿಯುವುದು ಕಷ್ಟ ಎಂದು ಹೇಳಿದ್ದಾರೆ. ಶುಕ್ರವಾರದಿಂದ ಕೇಂದ್ರದಲ್ಲಿ ಲಸಿಕೆ ಹಾಕಿದ ಯಾವುದೆ ಜನರಲ್ಲಿ ರೋಗಲಕ್ಷಣಗಳು ಕಂಡುಬಂದರೆ 10 ದಿನಗಳವರೆಗೆ ತಮ್ಮನ್ನು ಕ್ವಾರೈಂಟೈನ್ ಮಾಡಿಕೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

ನೈರ್ಮಲ್ಯೀಕರಣಕ್ಕಾಗಿ ವ್ಯಾಕ್ಸಿನೇಷನ್‌ ಕೇಂದ್ರವನ್ನು ಮುಚ್ಚಲಾಗಿದ್ದು, ಅದರ ಎಲ್ಲಾ ಸಿಬ್ಬಂದಿಗಳನ್ನು ಪ್ರತ್ಯೇಕಿಸಲಾಗುತ್ತಿದೆ. ಬುಧವಾರದಿಂದ ಕೆಲಸ ಪ್ರಾರಂಭಿಸಲು ವೈದ್ಯಕೀಯ ಕಾರ್ಯಕರ್ತರ ಹೊಸ ತಂಡ ಕೇಂದ್ರವನ್ನು ಸೇರಲಿದೆ ಎಂದು ಸಚಿವರು ಹೇಳಿದ್ದಾರೆ.

ಜೂನ್ 1 ರಿಂದ ಕಟ್ಟುನಿಟ್ಟಾದ ಲಾಕ್‌ಡೌನ್‌ ಹೊರತಾಗಿಯೂ, ಮಲೇಷ್ಯಾದಲ್ಲಿ ಸಾಂಕ್ರಾಮಿಕ ರೋಗದ ಪರಿಸ್ಥಿತಿ ಹದಗೆಟ್ಟಿದೆ. ದೇಶದಲ್ಲಿ ಒಟ್ಟು 8,44,000 ಪ್ರಕರಣಗಳು ದೃಡಪಟ್ಟಿದ್ದು, 6,200 ಕ್ಕೂ ಹೆಚ್ಚು ಸಾವುಗಳಾಗಿದೆ. ಆದರೆ ವ್ಯಾಕ್ಸಿನೇಷನ್ ಪ್ರಕ್ರಿಯೆಯ ವೇಗವನ್ನು ಹೆಚ್ಚಿಸಲಾಗಿದ್ದು, ಇದುವರೆಗೆ ಜನಸಂಖ್ಯೆ ಸುಮಾರು 11% ಜನರಿಗೆ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ: ‘ಬ್ಯಾಂಕಿಂಗ್‌ ಪರೀಕ್ಷೆ: ಕನ್ನಡಿಗರಿಗೆ ದ್ರೋಹ ಬಗೆದ ಮೋದಿ ಸರ್ಕಾರ’ – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...