Homeಅಂತರಾಷ್ಟ್ರೀಯಮಲೇಷ್ಯಾ: ಸಾಮೂಹಿಕ ವ್ಯಾಕ್ಸಿನೇಷನ್‌ ಕೇಂದ್ರದ 204 ಸಿಬ್ಬಂದಿಗೆ ಕೊರೊನಾ!

ಮಲೇಷ್ಯಾ: ಸಾಮೂಹಿಕ ವ್ಯಾಕ್ಸಿನೇಷನ್‌ ಕೇಂದ್ರದ 204 ಸಿಬ್ಬಂದಿಗೆ ಕೊರೊನಾ!

- Advertisement -
- Advertisement -

ಮಲೇಷ್ಯಾದ ಸಾಮೂಹಿಕ ವ್ಯಾಕ್ಸಿನೇಷನ್‌ ಕೇಂದ್ರದ 200 ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿ ಮತ್ತು ಸ್ವಯಂ ಸೇವಕರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳವಾರದಂದು ಅಧಿಕಾರಿಗಳು ಪ್ರಸ್ತುತ ವ್ಯಾಕ್ಸಿನೇಷನ್‌ ಕೇಂದ್ರವನ್ನು ಮುಚ್ಚಿದ್ದಾರೆ.

ಮಲೇಷ್ಯಾದ ಮಧ್ಯ ಸೆಲಂಗೂರ್‌ ರಾಜ್ಯದಲ್ಲಿರುವ ಈ ಕೇಂದ್ರದಲ್ಲಿ ಆರಂಭದಲ್ಲಿ ಇಬ್ಬರು ಸ್ವಯಂಸೇವಕರು ವೈರಸ್‌ಗೆ ತುತ್ತಾಗಿದ್ದರು. ಇದಾದ ನಂತರ 204 ಸಿಬ್ಬಂದಿ ಸಹ ಕೊರೊನಾ ಪಾಸಿಟಿವ್ ಆಗಿದ್ದಾರೆ.

ವ್ಯಾಕ್ಸಿನೇಷನ್‌ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಎಲ್ಲಾ 453 ಸಿಬ್ಬಂದಿಗಳನ್ನು ಪರೀಕ್ಷಿಸಲು ಈಗಾಗಲೇ ಆದೇಶಿಸಲಾಗಿದೆ ಎಂದು ದೇಶದ ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದ ಉಸ್ತುವಾರಿ ವಹಿಸಿರುವ ವಿಜ್ಞಾನ ಸಚಿವ ಖೈರಿ ಜಮಾಲುದ್ದೀನ್ ಹೇಳಿದ್ದಾರೆ. ಪ್ರಸ್ತುತ ಕೊರೊನಾ ಪಾಸಿಟಿವ್‌‌ ಆಗಿರುವ 204 ಜನರು ತಮ್ಮ ದೇಹದಲ್ಲಿ ಕಡಿಮೆ ಪ್ರಮಾಣದ ವೈರಸ್ ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ: ದೇಶದ ಮೊದಲ ಕೊರೊನಾ ಸೋಂಕಿತೆಯಾಗಿದ್ದ ವಿದ್ಯಾರ್ಥಿನಿಗೆ ಮತ್ತೆ ಸೋಂಕು

ವ್ಯಾಕ್ಸಿನೇಷನ್‌ ಕೇಂದ್ರವನ್ನು ಸರ್ಕಾರವು ತ್ವರಿತವಾಗಿ ಮುಚ್ಚಿದೆ ಎಂದು ಖೈರಿ ಒತ್ತಿ ಹೇಳಿದ್ದು, ಅಲ್ಲಿ ಸೋಂಕು ಹೇಗೆ ಬಂದಿದೆ ಎಂದು ಕಂಡು ಹಿಡಿಯುವುದು ಕಷ್ಟ ಎಂದು ಹೇಳಿದ್ದಾರೆ. ಶುಕ್ರವಾರದಿಂದ ಕೇಂದ್ರದಲ್ಲಿ ಲಸಿಕೆ ಹಾಕಿದ ಯಾವುದೆ ಜನರಲ್ಲಿ ರೋಗಲಕ್ಷಣಗಳು ಕಂಡುಬಂದರೆ 10 ದಿನಗಳವರೆಗೆ ತಮ್ಮನ್ನು ಕ್ವಾರೈಂಟೈನ್ ಮಾಡಿಕೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

ನೈರ್ಮಲ್ಯೀಕರಣಕ್ಕಾಗಿ ವ್ಯಾಕ್ಸಿನೇಷನ್‌ ಕೇಂದ್ರವನ್ನು ಮುಚ್ಚಲಾಗಿದ್ದು, ಅದರ ಎಲ್ಲಾ ಸಿಬ್ಬಂದಿಗಳನ್ನು ಪ್ರತ್ಯೇಕಿಸಲಾಗುತ್ತಿದೆ. ಬುಧವಾರದಿಂದ ಕೆಲಸ ಪ್ರಾರಂಭಿಸಲು ವೈದ್ಯಕೀಯ ಕಾರ್ಯಕರ್ತರ ಹೊಸ ತಂಡ ಕೇಂದ್ರವನ್ನು ಸೇರಲಿದೆ ಎಂದು ಸಚಿವರು ಹೇಳಿದ್ದಾರೆ.

ಜೂನ್ 1 ರಿಂದ ಕಟ್ಟುನಿಟ್ಟಾದ ಲಾಕ್‌ಡೌನ್‌ ಹೊರತಾಗಿಯೂ, ಮಲೇಷ್ಯಾದಲ್ಲಿ ಸಾಂಕ್ರಾಮಿಕ ರೋಗದ ಪರಿಸ್ಥಿತಿ ಹದಗೆಟ್ಟಿದೆ. ದೇಶದಲ್ಲಿ ಒಟ್ಟು 8,44,000 ಪ್ರಕರಣಗಳು ದೃಡಪಟ್ಟಿದ್ದು, 6,200 ಕ್ಕೂ ಹೆಚ್ಚು ಸಾವುಗಳಾಗಿದೆ. ಆದರೆ ವ್ಯಾಕ್ಸಿನೇಷನ್ ಪ್ರಕ್ರಿಯೆಯ ವೇಗವನ್ನು ಹೆಚ್ಚಿಸಲಾಗಿದ್ದು, ಇದುವರೆಗೆ ಜನಸಂಖ್ಯೆ ಸುಮಾರು 11% ಜನರಿಗೆ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ: ‘ಬ್ಯಾಂಕಿಂಗ್‌ ಪರೀಕ್ಷೆ: ಕನ್ನಡಿಗರಿಗೆ ದ್ರೋಹ ಬಗೆದ ಮೋದಿ ಸರ್ಕಾರ’ – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...