Homeಅಂತರಾಷ್ಟ್ರೀಯಇಸ್ರೇಲ್‌ ಪ್ರಜೆಗಳಿಗೆ ಪ್ರವೇಶ ನಿಷೇಧಿಸಿದ ಮಾಲ್ಡೀವ್ಸ್‌

ಇಸ್ರೇಲ್‌ ಪ್ರಜೆಗಳಿಗೆ ಪ್ರವೇಶ ನಿಷೇಧಿಸಿದ ಮಾಲ್ಡೀವ್ಸ್‌

- Advertisement -
- Advertisement -

ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸುತ್ತಿರುವ ಇಸ್ರೇಲ್‌ ವಿರುದ್ಧ ಮಾಲ್ಡೀವ್ಸ್ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದು, ಇಸ್ರೇಲ್‌ ಪ್ರಜೆಗಳಿಗೆ ಮಾಲ್ಡೀವ್ಸ್‌ಗೆ ನಿಷೇಧವನ್ನು ವಿಧಿಸಿದೆ.

ಬಿಳಿ ಮರಳಿನ ಕಡಲತೀರಗಳು ಮತ್ತು ಐಷಾರಾಮಿ ರೆಸಾರ್ಟ್‌ಗಳಿಗೆ ಹೆಸರುವಾಸಿಯಾದ ಹಿಂದೂ ಮಹಾಸಾಗರದ ದ್ವೀಪಸಮೂಹ ಮಾಲ್ಡೀವ್ಸ್‌ ಸತತ 8 ತಿಂಗಳಿನಿಂದ ಗಾಝಾದಲ್ಲಿ ಇಸ್ರೇಲ್‌ ಆಕ್ರಮಣವನ್ನು ಬಲವಾಗಿ ವಿರೋಧಿಸಿದೆ ಮತ್ತು ಅಮಾಯಕ ಪ್ಯಾಲೆಸ್ತೀನ್‌ ನಾಗರಿಕರ ಹತ್ಯಾಕಾಂಡವನ್ನು ಖಂಡಿಸಿದೆ. ಇದೀಗ ಯುದ್ಧ ಬಳಿಕ ಇಸ್ರೇಲ್‌ ಪ್ರಜೆಗಳಿಗೆ ಪ್ರವೇಶ ನಿರಾಕರಿಸಿದ ಜಗತ್ತಿನ ಮೊದಲ ದೇಶ ಮಾಲ್ಡೀವ್ಸ್ ಆಗಿದೆ.

ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮದ್ ಮುಯಿಝು ಇಸ್ರೇಲ್‌ ಪಾಸ್‌ಪೋರ್ಟ್‌ಗಳ ಮೇಲೆ ನಿಷೇಧ ಹೇರಲು ನಿರ್ಧರಿಸಿದ್ದಾರೆ ಎಂದು ಅವರ ಕಚೇರಿಯ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ, ಹೊಸ ಕಾನೂನು ಯಾವಾಗ ಜಾರಿಗೆ ಬರಲಿದೆ ಎಂಬ ವಿವರಗಳನ್ನು ಕಚೇರಿಯು ಸ್ಪಷ್ಟವಾಗಿ ನೀಡಿಲ್ಲ.

‘ಮಾಲ್ಡೀವಿಯನ್ಸ್ ಇನ್ ಸೋಲಿಡಾರಿಟಿ ವಿಥ್ ಪ್ಯಾಲೆಸ್ತೀನ್‌’ ಎಂಬ ರಾಷ್ಟ್ರೀಯ ನಿಧಿಸಂಗ್ರಹ ಅಭಿಯಾನವನ್ನು ಮುಯಿಝು ಘೋಷಿಸಿದ್ದಾರೆ. ಯುನೈಟೆಡ್ ನೇಷನ್ಸ್ ರಿಲೀಫ್ ಆಂಡ್ ವರ್ಕ್ಸ್ ಏಜೆನ್ಸಿ ಫಾರ್ ಫೆಲೆಸ್ತೀನ್ ರೆಫ್ಯೂಜೀಸ್ ಇನ್ ಈಸ್ಟ್ (UNRWA)ನ ಸಹಕಾರದೊಂದಿಗೆ ನಿಧಿಸಂಗ್ರಹ ಅಭಿಯಾನ ಕಾರ್ಯಕ್ರಮ ನಡೆಯಲಿದೆ. ಇದರ ಜೊತೆಗೆ ಫೆಲೆಸ್ತೀನ್‌ಗೆ ಸಹಕಾರ ನೀಡಲು ಮಾಲ್ದೀವ್ಸ್‌ ವಿಶೇಷ ರಾಯಭಾರಿಯನ್ನು ನೇಮಿಸಲಿದೆ ಎಂದು ತಿಳಿದು ಬಂದಿದೆ.

ಕಳೆದ ವರ್ಷ ಸುಮಾರು 11,000 ಇಸ್ರೇಲ್‌ ಪ್ರಜೆಗಳು ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದರು, ಇದು ಮಾಲ್ಡೀವ್ಸ್‌ಗೆ ಆಗಮಿಸಿದ್ದ ಒಟ್ಟು ಪ್ರವಾಸಿಗರ ಶೇಕಡಾ 0.6ರಷ್ಟಾಗಿದೆ. ಅಧಿಕೃತ ಮಾಹಿತಿಯ ಪ್ರಕಾರ, ಈ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಮಾಲ್ಡೀವ್ಸ್‌ಗೆ ಭೇಟಿ ನೀಡುವ ಇಸ್ರೇಲ್‌ ಪ್ರಜೆಗಳ ಸಂಖ್ಯೆ 528ಕ್ಕೆ ಇಳಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 88 ಪ್ರತಿಶತದಷ್ಟು ಕಡಿಮೆಯಾಗಿದೆ.

ಗಾಝಾ ಯುದ್ಧದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಇಸ್ರೇಲ್‌ಗಳಿಗೆ ನಿಷೇಧಿಸುವಂತೆ ಮಾಲ್ಡೀವ್ಸ್‌ನ ವಿರೋಧ ಪಕ್ಷಗಳು ಮತ್ತು ಸರ್ಕಾರದ ಮಿತ್ರಪಕ್ಷಗಳು ಮುಯಿಝು ಮೇಲೆ ಒತ್ತಡ ಹೇರಿದೆ. ಅಕ್ಟೋಬರ್ 7ರಿಂದ ನಡೆದ ಸಂಘರ್ಷದಲ್ಲಿ ಕನಿಷ್ಠ 36,439 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 82,627 ಮಂದಿ ಗಾಯಗೊಂಡಿದ್ದಾರೆ.

1990ರ ದಶಕದ ಆರಂಭದಲ್ಲಿ ಇಸ್ರೇಲ್‌ ಪ್ರವಾಸಿಗರ ಮೇಲಿನ ಹಿಂದಿನ ನಿಷೇಧವನ್ನು ಮಾಲ್ಡೀವ್ಸ್ ತೆಗೆದುಹಾಕಿ  2010ರಲ್ಲಿ ಸಂಬಂಧಗಳನ್ನು ಪುನಃಸ್ಥಾಪಿಸಲು ಮುಂದಾಗಿತ್ತು. ಆದರೆ ಫೆಬ್ರವರಿ 2012ರಲ್ಲಿ ಅಧ್ಯಕ್ಷ ಮೊಹಮ್ಮದ್ ನಶೀದ್ ಅವರ ಸರಕಾರದ ಪತನದ ನಂತರ ಈ ಪ್ರಯತ್ನಗಳು ವಿಫಲವಾಗಿದ್ದವು.

ನಿಷೇಧಕ್ಕೆ ಪ್ರತಿಕ್ರಿಯೆಯಾಗಿ, ಇಸ್ರೇಲ್ ವಿದೇಶಾಂಗ ಸಚಿವಾಲಯದ ವಕ್ತಾರರು ಪ್ರಸ್ತುತ ಮಾಲ್ಡೀವ್ಸ್‌ನಲ್ಲಿರುವ ನಾಗರಿಕರನ್ನು ನಿರ್ಗಮಿಸುವಂತೆ ಸೂಚಿಸಿದ್ದಾರೆ. ನೀವು ಸಂಕಷ್ಟಕ್ಕೆ ಸಿಲುಕಿದರೆ, ನಮಗೆ ಸಹಾಯ ಮಾಡುವುದು ಮತ್ತೆ ಕಷ್ಟಕರವಾಗಿರುತ್ತದೆ. ಮಾಲ್ಡೀವ್ಸ್‌ನಲ್ಲಿ ಉಳಿದುಕೊಂಡಿರುವ ಇಸ್ರೇಲ್‌ ನಾಗರಿಕರು ತಕ್ಷಣಕ್ಕೆ ಅಲ್ಲಿಂದ ವಾಪಾಸ್ಸಾಗುವಂತೆ ಶಿಫಾರಸು ಮಾಡಲಾಗಿದೆ.

ಇದಲ್ಲದೆ ಇಸ್ರೇಲ್‌ ಪಾಸ್‌ಪೋರ್ಟ್ ಹೊಂದಿರುವವರಿಗೆ ಅಲ್ಜೀರಿಯಾ, ಬಾಂಗ್ಲಾದೇಶ, ಬ್ರೂನಿ, ಇರಾನ್, ಇರಾಕ್, ಕುವೈತ್, ಲೆಬನಾನ್, ಲಿಬಿಯಾ, ಪಾಕಿಸ್ತಾನ, ಸೌದಿ ಅರೇಬಿಯಾ, ಸಿರಿಯಾ ಮತ್ತು ಯೆಮೆನ್‌ಗೆ ಪ್ರವೇಶಕ್ಕೆ ನಿಷೇಧಿಸಲಾಗಿದೆ.

ಇದನ್ನು ಓದಿ: ಸರಿಯಾದ ಸಮಯಕ್ಕೆ ಬಂಧಿಸದ ಕಾರಣ ನೀರವ್ ಮೋದಿ, ಮಲ್ಯ, ಮೆಹುಲ್ ಚೋಕ್ಸಿ ಭಾರತದಿಂದ ಪಲಾಯನ ಮಾಡಿದ್ರು: ಮುಂಬೈ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...