Homeಅಂತರಾಷ್ಟ್ರೀಯಇಸ್ರೇಲ್‌ ಪ್ರಜೆಗಳಿಗೆ ಪ್ರವೇಶ ನಿಷೇಧಿಸಿದ ಮಾಲ್ಡೀವ್ಸ್‌

ಇಸ್ರೇಲ್‌ ಪ್ರಜೆಗಳಿಗೆ ಪ್ರವೇಶ ನಿಷೇಧಿಸಿದ ಮಾಲ್ಡೀವ್ಸ್‌

- Advertisement -
- Advertisement -

ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸುತ್ತಿರುವ ಇಸ್ರೇಲ್‌ ವಿರುದ್ಧ ಮಾಲ್ಡೀವ್ಸ್ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದು, ಇಸ್ರೇಲ್‌ ಪ್ರಜೆಗಳಿಗೆ ಮಾಲ್ಡೀವ್ಸ್‌ಗೆ ನಿಷೇಧವನ್ನು ವಿಧಿಸಿದೆ.

ಬಿಳಿ ಮರಳಿನ ಕಡಲತೀರಗಳು ಮತ್ತು ಐಷಾರಾಮಿ ರೆಸಾರ್ಟ್‌ಗಳಿಗೆ ಹೆಸರುವಾಸಿಯಾದ ಹಿಂದೂ ಮಹಾಸಾಗರದ ದ್ವೀಪಸಮೂಹ ಮಾಲ್ಡೀವ್ಸ್‌ ಸತತ 8 ತಿಂಗಳಿನಿಂದ ಗಾಝಾದಲ್ಲಿ ಇಸ್ರೇಲ್‌ ಆಕ್ರಮಣವನ್ನು ಬಲವಾಗಿ ವಿರೋಧಿಸಿದೆ ಮತ್ತು ಅಮಾಯಕ ಪ್ಯಾಲೆಸ್ತೀನ್‌ ನಾಗರಿಕರ ಹತ್ಯಾಕಾಂಡವನ್ನು ಖಂಡಿಸಿದೆ. ಇದೀಗ ಯುದ್ಧ ಬಳಿಕ ಇಸ್ರೇಲ್‌ ಪ್ರಜೆಗಳಿಗೆ ಪ್ರವೇಶ ನಿರಾಕರಿಸಿದ ಜಗತ್ತಿನ ಮೊದಲ ದೇಶ ಮಾಲ್ಡೀವ್ಸ್ ಆಗಿದೆ.

ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮದ್ ಮುಯಿಝು ಇಸ್ರೇಲ್‌ ಪಾಸ್‌ಪೋರ್ಟ್‌ಗಳ ಮೇಲೆ ನಿಷೇಧ ಹೇರಲು ನಿರ್ಧರಿಸಿದ್ದಾರೆ ಎಂದು ಅವರ ಕಚೇರಿಯ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ, ಹೊಸ ಕಾನೂನು ಯಾವಾಗ ಜಾರಿಗೆ ಬರಲಿದೆ ಎಂಬ ವಿವರಗಳನ್ನು ಕಚೇರಿಯು ಸ್ಪಷ್ಟವಾಗಿ ನೀಡಿಲ್ಲ.

‘ಮಾಲ್ಡೀವಿಯನ್ಸ್ ಇನ್ ಸೋಲಿಡಾರಿಟಿ ವಿಥ್ ಪ್ಯಾಲೆಸ್ತೀನ್‌’ ಎಂಬ ರಾಷ್ಟ್ರೀಯ ನಿಧಿಸಂಗ್ರಹ ಅಭಿಯಾನವನ್ನು ಮುಯಿಝು ಘೋಷಿಸಿದ್ದಾರೆ. ಯುನೈಟೆಡ್ ನೇಷನ್ಸ್ ರಿಲೀಫ್ ಆಂಡ್ ವರ್ಕ್ಸ್ ಏಜೆನ್ಸಿ ಫಾರ್ ಫೆಲೆಸ್ತೀನ್ ರೆಫ್ಯೂಜೀಸ್ ಇನ್ ಈಸ್ಟ್ (UNRWA)ನ ಸಹಕಾರದೊಂದಿಗೆ ನಿಧಿಸಂಗ್ರಹ ಅಭಿಯಾನ ಕಾರ್ಯಕ್ರಮ ನಡೆಯಲಿದೆ. ಇದರ ಜೊತೆಗೆ ಫೆಲೆಸ್ತೀನ್‌ಗೆ ಸಹಕಾರ ನೀಡಲು ಮಾಲ್ದೀವ್ಸ್‌ ವಿಶೇಷ ರಾಯಭಾರಿಯನ್ನು ನೇಮಿಸಲಿದೆ ಎಂದು ತಿಳಿದು ಬಂದಿದೆ.

ಕಳೆದ ವರ್ಷ ಸುಮಾರು 11,000 ಇಸ್ರೇಲ್‌ ಪ್ರಜೆಗಳು ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದರು, ಇದು ಮಾಲ್ಡೀವ್ಸ್‌ಗೆ ಆಗಮಿಸಿದ್ದ ಒಟ್ಟು ಪ್ರವಾಸಿಗರ ಶೇಕಡಾ 0.6ರಷ್ಟಾಗಿದೆ. ಅಧಿಕೃತ ಮಾಹಿತಿಯ ಪ್ರಕಾರ, ಈ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಮಾಲ್ಡೀವ್ಸ್‌ಗೆ ಭೇಟಿ ನೀಡುವ ಇಸ್ರೇಲ್‌ ಪ್ರಜೆಗಳ ಸಂಖ್ಯೆ 528ಕ್ಕೆ ಇಳಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 88 ಪ್ರತಿಶತದಷ್ಟು ಕಡಿಮೆಯಾಗಿದೆ.

ಗಾಝಾ ಯುದ್ಧದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಇಸ್ರೇಲ್‌ಗಳಿಗೆ ನಿಷೇಧಿಸುವಂತೆ ಮಾಲ್ಡೀವ್ಸ್‌ನ ವಿರೋಧ ಪಕ್ಷಗಳು ಮತ್ತು ಸರ್ಕಾರದ ಮಿತ್ರಪಕ್ಷಗಳು ಮುಯಿಝು ಮೇಲೆ ಒತ್ತಡ ಹೇರಿದೆ. ಅಕ್ಟೋಬರ್ 7ರಿಂದ ನಡೆದ ಸಂಘರ್ಷದಲ್ಲಿ ಕನಿಷ್ಠ 36,439 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 82,627 ಮಂದಿ ಗಾಯಗೊಂಡಿದ್ದಾರೆ.

1990ರ ದಶಕದ ಆರಂಭದಲ್ಲಿ ಇಸ್ರೇಲ್‌ ಪ್ರವಾಸಿಗರ ಮೇಲಿನ ಹಿಂದಿನ ನಿಷೇಧವನ್ನು ಮಾಲ್ಡೀವ್ಸ್ ತೆಗೆದುಹಾಕಿ  2010ರಲ್ಲಿ ಸಂಬಂಧಗಳನ್ನು ಪುನಃಸ್ಥಾಪಿಸಲು ಮುಂದಾಗಿತ್ತು. ಆದರೆ ಫೆಬ್ರವರಿ 2012ರಲ್ಲಿ ಅಧ್ಯಕ್ಷ ಮೊಹಮ್ಮದ್ ನಶೀದ್ ಅವರ ಸರಕಾರದ ಪತನದ ನಂತರ ಈ ಪ್ರಯತ್ನಗಳು ವಿಫಲವಾಗಿದ್ದವು.

ನಿಷೇಧಕ್ಕೆ ಪ್ರತಿಕ್ರಿಯೆಯಾಗಿ, ಇಸ್ರೇಲ್ ವಿದೇಶಾಂಗ ಸಚಿವಾಲಯದ ವಕ್ತಾರರು ಪ್ರಸ್ತುತ ಮಾಲ್ಡೀವ್ಸ್‌ನಲ್ಲಿರುವ ನಾಗರಿಕರನ್ನು ನಿರ್ಗಮಿಸುವಂತೆ ಸೂಚಿಸಿದ್ದಾರೆ. ನೀವು ಸಂಕಷ್ಟಕ್ಕೆ ಸಿಲುಕಿದರೆ, ನಮಗೆ ಸಹಾಯ ಮಾಡುವುದು ಮತ್ತೆ ಕಷ್ಟಕರವಾಗಿರುತ್ತದೆ. ಮಾಲ್ಡೀವ್ಸ್‌ನಲ್ಲಿ ಉಳಿದುಕೊಂಡಿರುವ ಇಸ್ರೇಲ್‌ ನಾಗರಿಕರು ತಕ್ಷಣಕ್ಕೆ ಅಲ್ಲಿಂದ ವಾಪಾಸ್ಸಾಗುವಂತೆ ಶಿಫಾರಸು ಮಾಡಲಾಗಿದೆ.

ಇದಲ್ಲದೆ ಇಸ್ರೇಲ್‌ ಪಾಸ್‌ಪೋರ್ಟ್ ಹೊಂದಿರುವವರಿಗೆ ಅಲ್ಜೀರಿಯಾ, ಬಾಂಗ್ಲಾದೇಶ, ಬ್ರೂನಿ, ಇರಾನ್, ಇರಾಕ್, ಕುವೈತ್, ಲೆಬನಾನ್, ಲಿಬಿಯಾ, ಪಾಕಿಸ್ತಾನ, ಸೌದಿ ಅರೇಬಿಯಾ, ಸಿರಿಯಾ ಮತ್ತು ಯೆಮೆನ್‌ಗೆ ಪ್ರವೇಶಕ್ಕೆ ನಿಷೇಧಿಸಲಾಗಿದೆ.

ಇದನ್ನು ಓದಿ: ಸರಿಯಾದ ಸಮಯಕ್ಕೆ ಬಂಧಿಸದ ಕಾರಣ ನೀರವ್ ಮೋದಿ, ಮಲ್ಯ, ಮೆಹುಲ್ ಚೋಕ್ಸಿ ಭಾರತದಿಂದ ಪಲಾಯನ ಮಾಡಿದ್ರು: ಮುಂಬೈ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...