Homeಅಂತರಾಷ್ಟ್ರೀಯಇಸ್ರೇಲ್‌ ಪ್ರಜೆಗಳಿಗೆ ಪ್ರವೇಶ ನಿಷೇಧಿಸಿದ ಮಾಲ್ಡೀವ್ಸ್‌

ಇಸ್ರೇಲ್‌ ಪ್ರಜೆಗಳಿಗೆ ಪ್ರವೇಶ ನಿಷೇಧಿಸಿದ ಮಾಲ್ಡೀವ್ಸ್‌

- Advertisement -
- Advertisement -

ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸುತ್ತಿರುವ ಇಸ್ರೇಲ್‌ ವಿರುದ್ಧ ಮಾಲ್ಡೀವ್ಸ್ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದು, ಇಸ್ರೇಲ್‌ ಪ್ರಜೆಗಳಿಗೆ ಮಾಲ್ಡೀವ್ಸ್‌ಗೆ ನಿಷೇಧವನ್ನು ವಿಧಿಸಿದೆ.

ಬಿಳಿ ಮರಳಿನ ಕಡಲತೀರಗಳು ಮತ್ತು ಐಷಾರಾಮಿ ರೆಸಾರ್ಟ್‌ಗಳಿಗೆ ಹೆಸರುವಾಸಿಯಾದ ಹಿಂದೂ ಮಹಾಸಾಗರದ ದ್ವೀಪಸಮೂಹ ಮಾಲ್ಡೀವ್ಸ್‌ ಸತತ 8 ತಿಂಗಳಿನಿಂದ ಗಾಝಾದಲ್ಲಿ ಇಸ್ರೇಲ್‌ ಆಕ್ರಮಣವನ್ನು ಬಲವಾಗಿ ವಿರೋಧಿಸಿದೆ ಮತ್ತು ಅಮಾಯಕ ಪ್ಯಾಲೆಸ್ತೀನ್‌ ನಾಗರಿಕರ ಹತ್ಯಾಕಾಂಡವನ್ನು ಖಂಡಿಸಿದೆ. ಇದೀಗ ಯುದ್ಧ ಬಳಿಕ ಇಸ್ರೇಲ್‌ ಪ್ರಜೆಗಳಿಗೆ ಪ್ರವೇಶ ನಿರಾಕರಿಸಿದ ಜಗತ್ತಿನ ಮೊದಲ ದೇಶ ಮಾಲ್ಡೀವ್ಸ್ ಆಗಿದೆ.

ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮದ್ ಮುಯಿಝು ಇಸ್ರೇಲ್‌ ಪಾಸ್‌ಪೋರ್ಟ್‌ಗಳ ಮೇಲೆ ನಿಷೇಧ ಹೇರಲು ನಿರ್ಧರಿಸಿದ್ದಾರೆ ಎಂದು ಅವರ ಕಚೇರಿಯ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ, ಹೊಸ ಕಾನೂನು ಯಾವಾಗ ಜಾರಿಗೆ ಬರಲಿದೆ ಎಂಬ ವಿವರಗಳನ್ನು ಕಚೇರಿಯು ಸ್ಪಷ್ಟವಾಗಿ ನೀಡಿಲ್ಲ.

‘ಮಾಲ್ಡೀವಿಯನ್ಸ್ ಇನ್ ಸೋಲಿಡಾರಿಟಿ ವಿಥ್ ಪ್ಯಾಲೆಸ್ತೀನ್‌’ ಎಂಬ ರಾಷ್ಟ್ರೀಯ ನಿಧಿಸಂಗ್ರಹ ಅಭಿಯಾನವನ್ನು ಮುಯಿಝು ಘೋಷಿಸಿದ್ದಾರೆ. ಯುನೈಟೆಡ್ ನೇಷನ್ಸ್ ರಿಲೀಫ್ ಆಂಡ್ ವರ್ಕ್ಸ್ ಏಜೆನ್ಸಿ ಫಾರ್ ಫೆಲೆಸ್ತೀನ್ ರೆಫ್ಯೂಜೀಸ್ ಇನ್ ಈಸ್ಟ್ (UNRWA)ನ ಸಹಕಾರದೊಂದಿಗೆ ನಿಧಿಸಂಗ್ರಹ ಅಭಿಯಾನ ಕಾರ್ಯಕ್ರಮ ನಡೆಯಲಿದೆ. ಇದರ ಜೊತೆಗೆ ಫೆಲೆಸ್ತೀನ್‌ಗೆ ಸಹಕಾರ ನೀಡಲು ಮಾಲ್ದೀವ್ಸ್‌ ವಿಶೇಷ ರಾಯಭಾರಿಯನ್ನು ನೇಮಿಸಲಿದೆ ಎಂದು ತಿಳಿದು ಬಂದಿದೆ.

ಕಳೆದ ವರ್ಷ ಸುಮಾರು 11,000 ಇಸ್ರೇಲ್‌ ಪ್ರಜೆಗಳು ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದರು, ಇದು ಮಾಲ್ಡೀವ್ಸ್‌ಗೆ ಆಗಮಿಸಿದ್ದ ಒಟ್ಟು ಪ್ರವಾಸಿಗರ ಶೇಕಡಾ 0.6ರಷ್ಟಾಗಿದೆ. ಅಧಿಕೃತ ಮಾಹಿತಿಯ ಪ್ರಕಾರ, ಈ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಮಾಲ್ಡೀವ್ಸ್‌ಗೆ ಭೇಟಿ ನೀಡುವ ಇಸ್ರೇಲ್‌ ಪ್ರಜೆಗಳ ಸಂಖ್ಯೆ 528ಕ್ಕೆ ಇಳಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 88 ಪ್ರತಿಶತದಷ್ಟು ಕಡಿಮೆಯಾಗಿದೆ.

ಗಾಝಾ ಯುದ್ಧದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಇಸ್ರೇಲ್‌ಗಳಿಗೆ ನಿಷೇಧಿಸುವಂತೆ ಮಾಲ್ಡೀವ್ಸ್‌ನ ವಿರೋಧ ಪಕ್ಷಗಳು ಮತ್ತು ಸರ್ಕಾರದ ಮಿತ್ರಪಕ್ಷಗಳು ಮುಯಿಝು ಮೇಲೆ ಒತ್ತಡ ಹೇರಿದೆ. ಅಕ್ಟೋಬರ್ 7ರಿಂದ ನಡೆದ ಸಂಘರ್ಷದಲ್ಲಿ ಕನಿಷ್ಠ 36,439 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 82,627 ಮಂದಿ ಗಾಯಗೊಂಡಿದ್ದಾರೆ.

1990ರ ದಶಕದ ಆರಂಭದಲ್ಲಿ ಇಸ್ರೇಲ್‌ ಪ್ರವಾಸಿಗರ ಮೇಲಿನ ಹಿಂದಿನ ನಿಷೇಧವನ್ನು ಮಾಲ್ಡೀವ್ಸ್ ತೆಗೆದುಹಾಕಿ  2010ರಲ್ಲಿ ಸಂಬಂಧಗಳನ್ನು ಪುನಃಸ್ಥಾಪಿಸಲು ಮುಂದಾಗಿತ್ತು. ಆದರೆ ಫೆಬ್ರವರಿ 2012ರಲ್ಲಿ ಅಧ್ಯಕ್ಷ ಮೊಹಮ್ಮದ್ ನಶೀದ್ ಅವರ ಸರಕಾರದ ಪತನದ ನಂತರ ಈ ಪ್ರಯತ್ನಗಳು ವಿಫಲವಾಗಿದ್ದವು.

ನಿಷೇಧಕ್ಕೆ ಪ್ರತಿಕ್ರಿಯೆಯಾಗಿ, ಇಸ್ರೇಲ್ ವಿದೇಶಾಂಗ ಸಚಿವಾಲಯದ ವಕ್ತಾರರು ಪ್ರಸ್ತುತ ಮಾಲ್ಡೀವ್ಸ್‌ನಲ್ಲಿರುವ ನಾಗರಿಕರನ್ನು ನಿರ್ಗಮಿಸುವಂತೆ ಸೂಚಿಸಿದ್ದಾರೆ. ನೀವು ಸಂಕಷ್ಟಕ್ಕೆ ಸಿಲುಕಿದರೆ, ನಮಗೆ ಸಹಾಯ ಮಾಡುವುದು ಮತ್ತೆ ಕಷ್ಟಕರವಾಗಿರುತ್ತದೆ. ಮಾಲ್ಡೀವ್ಸ್‌ನಲ್ಲಿ ಉಳಿದುಕೊಂಡಿರುವ ಇಸ್ರೇಲ್‌ ನಾಗರಿಕರು ತಕ್ಷಣಕ್ಕೆ ಅಲ್ಲಿಂದ ವಾಪಾಸ್ಸಾಗುವಂತೆ ಶಿಫಾರಸು ಮಾಡಲಾಗಿದೆ.

ಇದಲ್ಲದೆ ಇಸ್ರೇಲ್‌ ಪಾಸ್‌ಪೋರ್ಟ್ ಹೊಂದಿರುವವರಿಗೆ ಅಲ್ಜೀರಿಯಾ, ಬಾಂಗ್ಲಾದೇಶ, ಬ್ರೂನಿ, ಇರಾನ್, ಇರಾಕ್, ಕುವೈತ್, ಲೆಬನಾನ್, ಲಿಬಿಯಾ, ಪಾಕಿಸ್ತಾನ, ಸೌದಿ ಅರೇಬಿಯಾ, ಸಿರಿಯಾ ಮತ್ತು ಯೆಮೆನ್‌ಗೆ ಪ್ರವೇಶಕ್ಕೆ ನಿಷೇಧಿಸಲಾಗಿದೆ.

ಇದನ್ನು ಓದಿ: ಸರಿಯಾದ ಸಮಯಕ್ಕೆ ಬಂಧಿಸದ ಕಾರಣ ನೀರವ್ ಮೋದಿ, ಮಲ್ಯ, ಮೆಹುಲ್ ಚೋಕ್ಸಿ ಭಾರತದಿಂದ ಪಲಾಯನ ಮಾಡಿದ್ರು: ಮುಂಬೈ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...