Homeಅಂತರಾಷ್ಟ್ರೀಯಇಸ್ರೇಲ್‌ ಪ್ರಜೆಗಳಿಗೆ ಪ್ರವೇಶ ನಿಷೇಧಿಸಿದ ಮಾಲ್ಡೀವ್ಸ್‌

ಇಸ್ರೇಲ್‌ ಪ್ರಜೆಗಳಿಗೆ ಪ್ರವೇಶ ನಿಷೇಧಿಸಿದ ಮಾಲ್ಡೀವ್ಸ್‌

- Advertisement -
- Advertisement -

ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸುತ್ತಿರುವ ಇಸ್ರೇಲ್‌ ವಿರುದ್ಧ ಮಾಲ್ಡೀವ್ಸ್ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದು, ಇಸ್ರೇಲ್‌ ಪ್ರಜೆಗಳಿಗೆ ಮಾಲ್ಡೀವ್ಸ್‌ಗೆ ನಿಷೇಧವನ್ನು ವಿಧಿಸಿದೆ.

ಬಿಳಿ ಮರಳಿನ ಕಡಲತೀರಗಳು ಮತ್ತು ಐಷಾರಾಮಿ ರೆಸಾರ್ಟ್‌ಗಳಿಗೆ ಹೆಸರುವಾಸಿಯಾದ ಹಿಂದೂ ಮಹಾಸಾಗರದ ದ್ವೀಪಸಮೂಹ ಮಾಲ್ಡೀವ್ಸ್‌ ಸತತ 8 ತಿಂಗಳಿನಿಂದ ಗಾಝಾದಲ್ಲಿ ಇಸ್ರೇಲ್‌ ಆಕ್ರಮಣವನ್ನು ಬಲವಾಗಿ ವಿರೋಧಿಸಿದೆ ಮತ್ತು ಅಮಾಯಕ ಪ್ಯಾಲೆಸ್ತೀನ್‌ ನಾಗರಿಕರ ಹತ್ಯಾಕಾಂಡವನ್ನು ಖಂಡಿಸಿದೆ. ಇದೀಗ ಯುದ್ಧ ಬಳಿಕ ಇಸ್ರೇಲ್‌ ಪ್ರಜೆಗಳಿಗೆ ಪ್ರವೇಶ ನಿರಾಕರಿಸಿದ ಜಗತ್ತಿನ ಮೊದಲ ದೇಶ ಮಾಲ್ಡೀವ್ಸ್ ಆಗಿದೆ.

ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮದ್ ಮುಯಿಝು ಇಸ್ರೇಲ್‌ ಪಾಸ್‌ಪೋರ್ಟ್‌ಗಳ ಮೇಲೆ ನಿಷೇಧ ಹೇರಲು ನಿರ್ಧರಿಸಿದ್ದಾರೆ ಎಂದು ಅವರ ಕಚೇರಿಯ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ, ಹೊಸ ಕಾನೂನು ಯಾವಾಗ ಜಾರಿಗೆ ಬರಲಿದೆ ಎಂಬ ವಿವರಗಳನ್ನು ಕಚೇರಿಯು ಸ್ಪಷ್ಟವಾಗಿ ನೀಡಿಲ್ಲ.

‘ಮಾಲ್ಡೀವಿಯನ್ಸ್ ಇನ್ ಸೋಲಿಡಾರಿಟಿ ವಿಥ್ ಪ್ಯಾಲೆಸ್ತೀನ್‌’ ಎಂಬ ರಾಷ್ಟ್ರೀಯ ನಿಧಿಸಂಗ್ರಹ ಅಭಿಯಾನವನ್ನು ಮುಯಿಝು ಘೋಷಿಸಿದ್ದಾರೆ. ಯುನೈಟೆಡ್ ನೇಷನ್ಸ್ ರಿಲೀಫ್ ಆಂಡ್ ವರ್ಕ್ಸ್ ಏಜೆನ್ಸಿ ಫಾರ್ ಫೆಲೆಸ್ತೀನ್ ರೆಫ್ಯೂಜೀಸ್ ಇನ್ ಈಸ್ಟ್ (UNRWA)ನ ಸಹಕಾರದೊಂದಿಗೆ ನಿಧಿಸಂಗ್ರಹ ಅಭಿಯಾನ ಕಾರ್ಯಕ್ರಮ ನಡೆಯಲಿದೆ. ಇದರ ಜೊತೆಗೆ ಫೆಲೆಸ್ತೀನ್‌ಗೆ ಸಹಕಾರ ನೀಡಲು ಮಾಲ್ದೀವ್ಸ್‌ ವಿಶೇಷ ರಾಯಭಾರಿಯನ್ನು ನೇಮಿಸಲಿದೆ ಎಂದು ತಿಳಿದು ಬಂದಿದೆ.

ಕಳೆದ ವರ್ಷ ಸುಮಾರು 11,000 ಇಸ್ರೇಲ್‌ ಪ್ರಜೆಗಳು ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದರು, ಇದು ಮಾಲ್ಡೀವ್ಸ್‌ಗೆ ಆಗಮಿಸಿದ್ದ ಒಟ್ಟು ಪ್ರವಾಸಿಗರ ಶೇಕಡಾ 0.6ರಷ್ಟಾಗಿದೆ. ಅಧಿಕೃತ ಮಾಹಿತಿಯ ಪ್ರಕಾರ, ಈ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಮಾಲ್ಡೀವ್ಸ್‌ಗೆ ಭೇಟಿ ನೀಡುವ ಇಸ್ರೇಲ್‌ ಪ್ರಜೆಗಳ ಸಂಖ್ಯೆ 528ಕ್ಕೆ ಇಳಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 88 ಪ್ರತಿಶತದಷ್ಟು ಕಡಿಮೆಯಾಗಿದೆ.

ಗಾಝಾ ಯುದ್ಧದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಇಸ್ರೇಲ್‌ಗಳಿಗೆ ನಿಷೇಧಿಸುವಂತೆ ಮಾಲ್ಡೀವ್ಸ್‌ನ ವಿರೋಧ ಪಕ್ಷಗಳು ಮತ್ತು ಸರ್ಕಾರದ ಮಿತ್ರಪಕ್ಷಗಳು ಮುಯಿಝು ಮೇಲೆ ಒತ್ತಡ ಹೇರಿದೆ. ಅಕ್ಟೋಬರ್ 7ರಿಂದ ನಡೆದ ಸಂಘರ್ಷದಲ್ಲಿ ಕನಿಷ್ಠ 36,439 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 82,627 ಮಂದಿ ಗಾಯಗೊಂಡಿದ್ದಾರೆ.

1990ರ ದಶಕದ ಆರಂಭದಲ್ಲಿ ಇಸ್ರೇಲ್‌ ಪ್ರವಾಸಿಗರ ಮೇಲಿನ ಹಿಂದಿನ ನಿಷೇಧವನ್ನು ಮಾಲ್ಡೀವ್ಸ್ ತೆಗೆದುಹಾಕಿ  2010ರಲ್ಲಿ ಸಂಬಂಧಗಳನ್ನು ಪುನಃಸ್ಥಾಪಿಸಲು ಮುಂದಾಗಿತ್ತು. ಆದರೆ ಫೆಬ್ರವರಿ 2012ರಲ್ಲಿ ಅಧ್ಯಕ್ಷ ಮೊಹಮ್ಮದ್ ನಶೀದ್ ಅವರ ಸರಕಾರದ ಪತನದ ನಂತರ ಈ ಪ್ರಯತ್ನಗಳು ವಿಫಲವಾಗಿದ್ದವು.

ನಿಷೇಧಕ್ಕೆ ಪ್ರತಿಕ್ರಿಯೆಯಾಗಿ, ಇಸ್ರೇಲ್ ವಿದೇಶಾಂಗ ಸಚಿವಾಲಯದ ವಕ್ತಾರರು ಪ್ರಸ್ತುತ ಮಾಲ್ಡೀವ್ಸ್‌ನಲ್ಲಿರುವ ನಾಗರಿಕರನ್ನು ನಿರ್ಗಮಿಸುವಂತೆ ಸೂಚಿಸಿದ್ದಾರೆ. ನೀವು ಸಂಕಷ್ಟಕ್ಕೆ ಸಿಲುಕಿದರೆ, ನಮಗೆ ಸಹಾಯ ಮಾಡುವುದು ಮತ್ತೆ ಕಷ್ಟಕರವಾಗಿರುತ್ತದೆ. ಮಾಲ್ಡೀವ್ಸ್‌ನಲ್ಲಿ ಉಳಿದುಕೊಂಡಿರುವ ಇಸ್ರೇಲ್‌ ನಾಗರಿಕರು ತಕ್ಷಣಕ್ಕೆ ಅಲ್ಲಿಂದ ವಾಪಾಸ್ಸಾಗುವಂತೆ ಶಿಫಾರಸು ಮಾಡಲಾಗಿದೆ.

ಇದಲ್ಲದೆ ಇಸ್ರೇಲ್‌ ಪಾಸ್‌ಪೋರ್ಟ್ ಹೊಂದಿರುವವರಿಗೆ ಅಲ್ಜೀರಿಯಾ, ಬಾಂಗ್ಲಾದೇಶ, ಬ್ರೂನಿ, ಇರಾನ್, ಇರಾಕ್, ಕುವೈತ್, ಲೆಬನಾನ್, ಲಿಬಿಯಾ, ಪಾಕಿಸ್ತಾನ, ಸೌದಿ ಅರೇಬಿಯಾ, ಸಿರಿಯಾ ಮತ್ತು ಯೆಮೆನ್‌ಗೆ ಪ್ರವೇಶಕ್ಕೆ ನಿಷೇಧಿಸಲಾಗಿದೆ.

ಇದನ್ನು ಓದಿ: ಸರಿಯಾದ ಸಮಯಕ್ಕೆ ಬಂಧಿಸದ ಕಾರಣ ನೀರವ್ ಮೋದಿ, ಮಲ್ಯ, ಮೆಹುಲ್ ಚೋಕ್ಸಿ ಭಾರತದಿಂದ ಪಲಾಯನ ಮಾಡಿದ್ರು: ಮುಂಬೈ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...