Homeಮುಖಪುಟಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

ಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

- Advertisement -
- Advertisement -

ಮಾರ್ಚ್ 15ರೊಳಗೆ ತಮ್ಮ ಸೇನೆಯನ್ನು ವಾಪಸ್ ತೆಗೆದುಕೊಳ್ಳುವಂತೆ ಭಾರತಕ್ಕೆ ಮಾಲ್ಡೀವ್ಸ್ ಗಡುವು ನೀಡಿದೆ ಎಂದು ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಉನ್ನತ ಸಹಾಯಕ ಅಬ್ದುಲ್ಲಾ ನಾಝಿಮ್ ಇಬ್ರಾಹಿಂ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಭಾರತೀಯ ಸೇನೆ ಮಾಲ್ಡೀವ್ಸ್‌ನಲ್ಲಿ ಇರಬಾರದು ಎಂಬುವುದು ಅಧ್ಯಕ್ಷ ಮುಯಿಝು ಅವರ ಆಶಯವಾಗಿದೆ. ಕೆಲ ತಿಂಗಳುಗಳಿಂದ ನಾವು ಈ ಬಗ್ಗೆ ಭಾರತದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಮಾಲ್ಡೀವ್ಸ್‌ನಲ್ಲಿರುವ ಭಾರತೀಯ ಹೈಕಮಿಷನರ್ ಭಾನುವಾರ ಮಾಲ್ಡೀವ್ಸ್ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ” ಎಂದು ನಾಝಿಮ್ ಇಬ್ರಾಹಿಂ ತಿಳಿಸಿದ್ದಾರೆ.

ಮಾಲ್ಡೀವ್ಸ್‌ನ ಹೊಸ ಸರ್ಕಾರ ಭಾರತದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ ಚೀನಾದತ್ತ ಒಲವು ತೋರಿಸಿದೆ. ಇತ್ತೀಚೆಗೆ ಭಾರತ ಮತ್ತು ಮಾಲ್ಡೀವ್ಸ್‌ ನಡುವೆ ಶೀತಲ ಸಮರ ನಡೆಯುತ್ತಿದ್ದಾಗಲೇ, ಮಾಲ್ಡೀವ್ಸ್‌ ಅಧ್ಯಕ್ಷ ಮುಯಿಝು ಅವರು ಚೀನಾಗೆ ಭೇಟಿ ನೀಡಿದ್ದರು. ಈ ವೇಳೆ ಮಾಲ್ಡೀವ್ಸ್‌ ರಾಜಧಾನಿ ಮಾಲೆಯ ಅಭಿವೃದ್ಧಿಗೆ 130 ಮಿಲಿಯನ್ ಡಾಲರ್ ನೆರವು ನೀಡಲು ಚೀನಾ ಒಪ್ಪಿಕೊಂಡಿದೆ. ಉಭಯ ದೇಶಗಳು ಕೃಷಿ ಸಹಕಾರ ಒಪ್ಪಂದಕ್ಕೂ ಸಹಿ ಹಾಕಿವೆ.

“ಅಕ್ಕಿ, ಸಕ್ಕರೆ ಮತ್ತು ಹಿಟ್ಟಿನಂತಹ ಆಮದು ಮಾಡಿಕೊಳ್ಳುವ ಪ್ರಧಾನ ಆಹಾರಗಳಿಗಾಗಿ ಒಂದು ದೇಶದ ಮೇಲಿನ ಅವಲಂಬನೆಯನ್ನು ನಮ್ಮ ಸರ್ಕಾರ ಕೊನೆಗೊಳಿಸಲಿದೆ” ಎಂದು ಅಧ್ಯಕ್ಷ ಮುಯಿಝು ಅವರ ಕಚೇರಿಯು ಇತ್ತೀಚೆಗೆ ಪರೋಕ್ಷವಾಗಿ ಭಾರತಕ್ಕೆ ತಿರುಗೇಟು ನೀಡಿತ್ತು.

ಮುಯಿಝು ಅವರು ಚೀನಾವನ್ನು ‘ಮಾಲ್ಡೀವ್ಸ್‌ನ ಆತ್ಮೀಯ ಮಿತ್ರ ರಾಷ್ಟ್ರಗಳಲ್ಲಿ ಒಂದು’ ಎಂದು ಹೇಳಿದ್ದರು. ಚೀನಾ ಭೇಟಿಯ ಬಳಿಕ ಭಾರತವನ್ನು ಗುರಿಯಾಗಿಸಿ ಟೀಕೆ ವ್ಯಕ್ತಪಡಿಸಿದ್ದರು.

“ನಾವು ಚಿಕ್ಕವರಾಗಿರಬಹುದು, ಆದರೆ, ನಮ್ಮನ್ನು ಬೆದರಿಸುವುದಕ್ಕೆ ನಿಮಗೆ ಪರವಾನಗಿ ನೀಡುವುದಿಲ್ಲ. ನಾವು ಯಾರ ಹಿತ್ತಲಿನಲ್ಲಿಲ್ಲ. ನಾವು ಸ್ವತಂತ್ರ ಮತ್ತು ಸಾರ್ವಭೌಮ ರಾಷ್ಟ್ರ” ಎಂದು ಮಾಲ್ಡೀವಿಯನ್ ಮಾಧ್ಯಮದ ಮುಂದೆ ಮುಯಿಝು ಹೇಳಿದ್ದರು.

ಪ್ರಧಾನಿ ಮೋದಿಯವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದರು. ಇದಕ್ಕೆ ಮಾಲ್ಡೀವ್ಸ್‌ ಸಚಿವರು ಟೀಕೆ ವ್ಯಕ್ತಪಡಿಸಿದ್ದರು. ಈ ವಿಚಾರ ಭಾರತ ಮತ್ತು ಮಾಲ್ಡೀವ್ಸ್ ನಡುವೆ ರಾಜತಾಂತ್ರಿಕ ಸಂಬಂಧ ಹದೆಗೆಡುವಂತೆ ಮಾಡಿದೆ. ಪ್ರಧಾನಿ ಮೋದಿಯನ್ನು ಟೀಕಿಸಿದ ಮೂವರು ಸಚಿವರನ್ನು ಮಾಲ್ಡೀವ್ಸ್‌ ಸರ್ಕಾರ ಸಂಪುಟದಿಂದ ವಜಾ ಮಾಡಿದೆ. ಆದರೂ, ಮಾಲ್ಡೀವ್ಸ್‌ನ ಹೊಸ ಸರ್ಕಾರ ಭಾರತಕ್ಕಿಂತ ಚೀನಾದ ಕಡೆ ಹೆಚ್ಚಿನ ಒಲವು ತೋರಿಸುತ್ತಿದೆ.

ಇದನ್ನೂ ಓದಿ: 100ನೇ ದಿನಕ್ಕೆ ಕಾಲಿಟ್ಟ ಯುದ್ಧ: ನೆತನ್ಯಾಹು ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...