Homeಮುಖಪುಟಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ ಕುರುಹು;...

ಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ ಕುರುಹು; ತಜ್ಞರ ಸಾಕ್ಷಿ

- Advertisement -
- Advertisement -

ಎಲ್‌ಎಂಎಲ್ ವೆಸ್ಪಾ ಸ್ಕೂಟರ್ ಸೇರಿದಂತೆ ಸ್ಫೋಟದ ಸ್ಥಳದಿಂದ ವಶಪಡಿಸಿಕೊಂಡ ಹಲವಾರು ವಸ್ತುಗಳಲ್ಲಿ ಸ್ಫೋಟಕಗಳ ಕುರುಹುಗಳು ಕಂಡುಬಂದಿವೆ ಎಂದು 2008 ರ ಮಾಲೆಗಾಂವ್ ಸ್ಫೋಟ ಪ್ರಕರಣದ 261 ನೇ ಸಾಕ್ಷಿಯಾಗಿರುವ ವಿಧಿವಿಜ್ಞಾನ ತಜ್ಞರು ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಸ್ಕೂಟರ್‌‌ ಶಂಕಿತ ಭಯೋತ್ಪಾದಕಿ, ಭೋಪಾಲ್‌ನ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

2008ರ ಸೆಪ್ಟೆಂಬರ್ 29 ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ಪಟ್ಟಣದ ಮಸೀದಿಯ ಬಳಿ ಸ್ಕೂಟರ್‌ಗೆ ಕಟ್ಟಲಾಗಿದ್ದ ಬಾಂಬ್ ಸ್ಫೋಟಗೊಂಡು ಆರು ಜನರು ಸಾವನ್ನಪ್ಪಿದ್ದರು ಮತ್ತು 100 ಜನರು ಗಾಯಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಕ್ಷಿ ನುಡಿದ ವಿಧಿವಿಜ್ಞಾನ ತಜ್ಞರು 2008 ರಲ್ಲಿ ಸಹಾಯಕ ರಾಸಾಯನಿಕ ವಿಶ್ಲೇಷಕರಾಗಿ ಕೆಲಸ ಮಾಡಿದ್ದರು. ಸ್ಫೋಟದ ಸ್ಥಳದಿಂದ ವಶಪಡಿಸಿಕೊಂಡ ಸ್ಕೂಟರ್‌ನಲ್ಲಿ ಅಮೋನಿಯಂ ನೈಟ್ರೇಟ್ ಕುರುಹುಗಳು ಕಂಡುಬಂದಿವೆ ಎಂದು ಅವರು ಹೇಳಿದ್ದಾರೆ. ಅಮೋನಿಯಂ ನೈಟ್ರೇಟ್ ಅನ್ನು ಸ್ಫೋಟಕವಾಗಿ ಬಳಸಲಾಗುತ್ತದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಭಯೋತ್ಪಾದಕಿ ಪ್ರಗ್ಯಾ ಠಾಕೂರ್‌ , ಭಯೋತ್ಪಾದಕ ಗೋಡ್ಸೆಯನ್ನು ದೇಶಭಕ್ತ ಎಂದಿದ್ದಾರೆ: ರಾಹುಲ್‌ ಗಾಂಧಿ

2008 ರಲ್ಲಿ ಸ್ಫೋಟದ ಸ್ಥಳಕ್ಕೆ ಹೋಗಿದ್ದಾಗ LML ವೆಸ್ಪಾ ಸ್ಕೂಟರ್ ಗಂಭೀರವಾಗಿ ಹಾನಿಗೊಳಗಾದ ಸ್ಥಿತಿಯಲ್ಲಿ ನೋಡಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ವೇಳೆ ಹೋಂಡಾ ಯುನಿಕಾರ್ನ್, ಬೈಸಿಕಲ್ ಸೇರಿದಂತೆ ಇತರೆ ವಾಹನಗಳಿಗೂ ಭಾಗಶಃ ಹಾನಿಯಾಗಿದೆ ಎಂದು ಅವರು ಹೇಳಿದ್ದಾರೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವಿನಾಶ್ ರಸಲ್ ಅವರ ಪಾಟಿ ಸವಾಲಿಗೆ ಉತ್ತರಿಸಿದ ಪ್ರಸ್ತುತ ನಿವೃತ್ತರಾಗಿರುವ ವಿಧಿವಿಜ್ಞಾನ ತಜ್ಞರು, ಪೊಲೀಸರು ಕಳುಹಿಸಿದ ವಸ್ತು ಸಾಕ್ಷ್ಯಗಳ ರಾಸಾಯನಿಕ ವಿಶ್ಲೇಷಣೆ ಮತ್ತು ರಾಸಾಯನಿಕ ವಿಶ್ಲೇಷಣಾ ವರದಿಯನ್ನು ಒದಗಿಸುವುದು ಮತ್ತು ಸ್ಫೋಟದ ಸ್ಥಳಕ್ಕೆ ಭೇಟಿ ನೀಡುವ ಕೆಲಸದಲ್ಲಿ ತೊಡಗಿದ್ದಾಗಿ ಅವರು ತಮ್ಮ ಕೆಲಸವನ್ನು ವಿವರಿಸುತ್ತಾ ಹೇಳಿದ್ದಾರೆ.

ಸ್ಕೂಟರ್‌ನ ಎಂಜಿನ್ ಸಂಖ್ಯೆಯನ್ನು ಸ್ಕ್ರಾಚ್ ಮಾಡಲಾಗಿತ್ತು. ಕಾರ್ಯವಿಧಾನದ ಮೂಲಕ ತಾನು ಬೈಕ್‌ನಿಂದ ಮೂರು ಸಂಭವನೀಯ ಎಂಜಿನ್ ಸಂಖ್ಯೆಗಳನ್ನು ಕಂಡುಹಿಡಿಯುವಲ್ಲಿ ಯಶಸ್ವಿಯಾಗಿದ್ದಾಗಿ ಅವರು ಸಾಕ್ಷಿ ಹೇಳಿದ್ದಾರೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಸಂಖ್ಯೆಗಳನ್ನು ಗುರುತಿಸುವ ಮೊದಲು ನಂಬರ್‌‌ ಪ್ಲೇಟ್‌ನಲ್ಲಿ ಯಾವುದೇ ಎಂಜಿನ್ ಸಂಖ್ಯೆ ಇರಲಿಲ್ಲ ಎಂಬುವುದನ್ನು ತಾನು ಗಮನಿಸಿದ್ದಾಗಿ ಅವರು ಹೇಳಿದ್ದಾರೆ. ಇವರ ಸಾಕ್ಷಿಯ ವಿಚಾರಣೆ ಮತ್ತಷ್ಟು ಮುಂದುವರಿಯಲಿದೆ.

ಎರಡು ದ್ವಿಚಕ್ರವಾಹನಗಳು ಮತ್ತು ಐದು ಸೈಕಲ್‌ಗಳನ್ನು ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಕಚೇರಿಯಿಂದ ನ್ಯಾಯಾಲಯಕ್ಕೆ ತರಲಾಯಿತು. ವಿಶೇಷ ನ್ಯಾಯಾಧೀಶರು, ವಕೀಲರು, ನ್ಯಾಯಾಲಯದ ಸಿಬ್ಬಂದಿ, ಸಾಕ್ಷಿ ಮತ್ತು ಆರೋಪಿಗಳು ನ್ಯಾಯಾಲಯ ಒಳಗಿನಿಂದ ವಾಹನಗಳನ್ನು ನಿಲ್ಲಿಸಿದ ಸ್ಥಳಕ್ಕೆ ತೆರಳಿ ವಾಹನಗಳನ್ನು ಪರಿಶೀಲಿಸಿದರು ಆದರೆ ಛಾಯಾಗ್ರಹಣಕ್ಕೆ ಅವಕಾಶ ನೀಡಲಿಲ್ಲ.

2019 ರಲ್ಲಿ ಪಂಚ ಸಾಕ್ಷಿಯಾಗಿ ಕೆಲಸ ಮಾಡಿದ ಇನ್ನೊಬ್ಬ ಸಾಕ್ಷಿ ಸ್ಫೋಟದ ಸ್ಥಳದಲ್ಲಿದ್ದ ಬೈಕ್ ಅನ್ನು ಗುರುತಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ಸರಿಯಿಲ್ಲ ಎಂದಿದ್ದ ಪ್ರಜ್ಞಾ ಠಾಕೂರ್‌‌ – ಡ್ಯಾನ್ಸ್‌ ಮಾಡುವ ವಿಡಿಯೊ ವೈರಲ್‌!

2008ರ ಸೆಪ್ಟೆಂಬರ್ 29 ರಂದು ಮಾಲೆಗಾಂವ್‌ನ ಭಿಕು ಚೌಕ್‌ನಲ್ಲಿ ಸ್ಕೂಟರ್‌ನಲ್ಲಿ ಇರಿಸಲಾಗಿದ್ದ ಬಾಂಬ್ ಸ್ಪೋಟಿಸಿ ಆರು ಮಂದಿ ಸಾವನ್ನಪ್ಪಿದ್ದರು ಮತ್ತು ನೂರಕ್ಕೂ ಹೆಚ್ಚು ಜನರು ಗಾಯಗೊಂಡರು ಎಂದು ಪ್ರಾಸಿಕ್ಯೂಷನ್ ಹೇಳಿಕೊಂಡಿದೆ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸುವ ಮೊದಲು ಮಹಾರಾಷ್ಟ್ರ ಎಟಿಎಸ್ ಆರಂಭದಲ್ಲಿ ತನಿಖೆ ನಡೆಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...