Homeಮುಖಪುಟಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ ಕುರುಹು;...

ಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ ಕುರುಹು; ತಜ್ಞರ ಸಾಕ್ಷಿ

- Advertisement -
- Advertisement -

ಎಲ್‌ಎಂಎಲ್ ವೆಸ್ಪಾ ಸ್ಕೂಟರ್ ಸೇರಿದಂತೆ ಸ್ಫೋಟದ ಸ್ಥಳದಿಂದ ವಶಪಡಿಸಿಕೊಂಡ ಹಲವಾರು ವಸ್ತುಗಳಲ್ಲಿ ಸ್ಫೋಟಕಗಳ ಕುರುಹುಗಳು ಕಂಡುಬಂದಿವೆ ಎಂದು 2008 ರ ಮಾಲೆಗಾಂವ್ ಸ್ಫೋಟ ಪ್ರಕರಣದ 261 ನೇ ಸಾಕ್ಷಿಯಾಗಿರುವ ವಿಧಿವಿಜ್ಞಾನ ತಜ್ಞರು ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಸ್ಕೂಟರ್‌‌ ಶಂಕಿತ ಭಯೋತ್ಪಾದಕಿ, ಭೋಪಾಲ್‌ನ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

2008ರ ಸೆಪ್ಟೆಂಬರ್ 29 ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ಪಟ್ಟಣದ ಮಸೀದಿಯ ಬಳಿ ಸ್ಕೂಟರ್‌ಗೆ ಕಟ್ಟಲಾಗಿದ್ದ ಬಾಂಬ್ ಸ್ಫೋಟಗೊಂಡು ಆರು ಜನರು ಸಾವನ್ನಪ್ಪಿದ್ದರು ಮತ್ತು 100 ಜನರು ಗಾಯಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಕ್ಷಿ ನುಡಿದ ವಿಧಿವಿಜ್ಞಾನ ತಜ್ಞರು 2008 ರಲ್ಲಿ ಸಹಾಯಕ ರಾಸಾಯನಿಕ ವಿಶ್ಲೇಷಕರಾಗಿ ಕೆಲಸ ಮಾಡಿದ್ದರು. ಸ್ಫೋಟದ ಸ್ಥಳದಿಂದ ವಶಪಡಿಸಿಕೊಂಡ ಸ್ಕೂಟರ್‌ನಲ್ಲಿ ಅಮೋನಿಯಂ ನೈಟ್ರೇಟ್ ಕುರುಹುಗಳು ಕಂಡುಬಂದಿವೆ ಎಂದು ಅವರು ಹೇಳಿದ್ದಾರೆ. ಅಮೋನಿಯಂ ನೈಟ್ರೇಟ್ ಅನ್ನು ಸ್ಫೋಟಕವಾಗಿ ಬಳಸಲಾಗುತ್ತದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಭಯೋತ್ಪಾದಕಿ ಪ್ರಗ್ಯಾ ಠಾಕೂರ್‌ , ಭಯೋತ್ಪಾದಕ ಗೋಡ್ಸೆಯನ್ನು ದೇಶಭಕ್ತ ಎಂದಿದ್ದಾರೆ: ರಾಹುಲ್‌ ಗಾಂಧಿ

2008 ರಲ್ಲಿ ಸ್ಫೋಟದ ಸ್ಥಳಕ್ಕೆ ಹೋಗಿದ್ದಾಗ LML ವೆಸ್ಪಾ ಸ್ಕೂಟರ್ ಗಂಭೀರವಾಗಿ ಹಾನಿಗೊಳಗಾದ ಸ್ಥಿತಿಯಲ್ಲಿ ನೋಡಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ವೇಳೆ ಹೋಂಡಾ ಯುನಿಕಾರ್ನ್, ಬೈಸಿಕಲ್ ಸೇರಿದಂತೆ ಇತರೆ ವಾಹನಗಳಿಗೂ ಭಾಗಶಃ ಹಾನಿಯಾಗಿದೆ ಎಂದು ಅವರು ಹೇಳಿದ್ದಾರೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವಿನಾಶ್ ರಸಲ್ ಅವರ ಪಾಟಿ ಸವಾಲಿಗೆ ಉತ್ತರಿಸಿದ ಪ್ರಸ್ತುತ ನಿವೃತ್ತರಾಗಿರುವ ವಿಧಿವಿಜ್ಞಾನ ತಜ್ಞರು, ಪೊಲೀಸರು ಕಳುಹಿಸಿದ ವಸ್ತು ಸಾಕ್ಷ್ಯಗಳ ರಾಸಾಯನಿಕ ವಿಶ್ಲೇಷಣೆ ಮತ್ತು ರಾಸಾಯನಿಕ ವಿಶ್ಲೇಷಣಾ ವರದಿಯನ್ನು ಒದಗಿಸುವುದು ಮತ್ತು ಸ್ಫೋಟದ ಸ್ಥಳಕ್ಕೆ ಭೇಟಿ ನೀಡುವ ಕೆಲಸದಲ್ಲಿ ತೊಡಗಿದ್ದಾಗಿ ಅವರು ತಮ್ಮ ಕೆಲಸವನ್ನು ವಿವರಿಸುತ್ತಾ ಹೇಳಿದ್ದಾರೆ.

ಸ್ಕೂಟರ್‌ನ ಎಂಜಿನ್ ಸಂಖ್ಯೆಯನ್ನು ಸ್ಕ್ರಾಚ್ ಮಾಡಲಾಗಿತ್ತು. ಕಾರ್ಯವಿಧಾನದ ಮೂಲಕ ತಾನು ಬೈಕ್‌ನಿಂದ ಮೂರು ಸಂಭವನೀಯ ಎಂಜಿನ್ ಸಂಖ್ಯೆಗಳನ್ನು ಕಂಡುಹಿಡಿಯುವಲ್ಲಿ ಯಶಸ್ವಿಯಾಗಿದ್ದಾಗಿ ಅವರು ಸಾಕ್ಷಿ ಹೇಳಿದ್ದಾರೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಸಂಖ್ಯೆಗಳನ್ನು ಗುರುತಿಸುವ ಮೊದಲು ನಂಬರ್‌‌ ಪ್ಲೇಟ್‌ನಲ್ಲಿ ಯಾವುದೇ ಎಂಜಿನ್ ಸಂಖ್ಯೆ ಇರಲಿಲ್ಲ ಎಂಬುವುದನ್ನು ತಾನು ಗಮನಿಸಿದ್ದಾಗಿ ಅವರು ಹೇಳಿದ್ದಾರೆ. ಇವರ ಸಾಕ್ಷಿಯ ವಿಚಾರಣೆ ಮತ್ತಷ್ಟು ಮುಂದುವರಿಯಲಿದೆ.

ಎರಡು ದ್ವಿಚಕ್ರವಾಹನಗಳು ಮತ್ತು ಐದು ಸೈಕಲ್‌ಗಳನ್ನು ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಕಚೇರಿಯಿಂದ ನ್ಯಾಯಾಲಯಕ್ಕೆ ತರಲಾಯಿತು. ವಿಶೇಷ ನ್ಯಾಯಾಧೀಶರು, ವಕೀಲರು, ನ್ಯಾಯಾಲಯದ ಸಿಬ್ಬಂದಿ, ಸಾಕ್ಷಿ ಮತ್ತು ಆರೋಪಿಗಳು ನ್ಯಾಯಾಲಯ ಒಳಗಿನಿಂದ ವಾಹನಗಳನ್ನು ನಿಲ್ಲಿಸಿದ ಸ್ಥಳಕ್ಕೆ ತೆರಳಿ ವಾಹನಗಳನ್ನು ಪರಿಶೀಲಿಸಿದರು ಆದರೆ ಛಾಯಾಗ್ರಹಣಕ್ಕೆ ಅವಕಾಶ ನೀಡಲಿಲ್ಲ.

2019 ರಲ್ಲಿ ಪಂಚ ಸಾಕ್ಷಿಯಾಗಿ ಕೆಲಸ ಮಾಡಿದ ಇನ್ನೊಬ್ಬ ಸಾಕ್ಷಿ ಸ್ಫೋಟದ ಸ್ಥಳದಲ್ಲಿದ್ದ ಬೈಕ್ ಅನ್ನು ಗುರುತಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ಸರಿಯಿಲ್ಲ ಎಂದಿದ್ದ ಪ್ರಜ್ಞಾ ಠಾಕೂರ್‌‌ – ಡ್ಯಾನ್ಸ್‌ ಮಾಡುವ ವಿಡಿಯೊ ವೈರಲ್‌!

2008ರ ಸೆಪ್ಟೆಂಬರ್ 29 ರಂದು ಮಾಲೆಗಾಂವ್‌ನ ಭಿಕು ಚೌಕ್‌ನಲ್ಲಿ ಸ್ಕೂಟರ್‌ನಲ್ಲಿ ಇರಿಸಲಾಗಿದ್ದ ಬಾಂಬ್ ಸ್ಪೋಟಿಸಿ ಆರು ಮಂದಿ ಸಾವನ್ನಪ್ಪಿದ್ದರು ಮತ್ತು ನೂರಕ್ಕೂ ಹೆಚ್ಚು ಜನರು ಗಾಯಗೊಂಡರು ಎಂದು ಪ್ರಾಸಿಕ್ಯೂಷನ್ ಹೇಳಿಕೊಂಡಿದೆ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸುವ ಮೊದಲು ಮಹಾರಾಷ್ಟ್ರ ಎಟಿಎಸ್ ಆರಂಭದಲ್ಲಿ ತನಿಖೆ ನಡೆಸಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಭಾಷಣ: ಮೋದಿಗೆ ಕಳುಹಿಸುವ ಬದಲು ‘ಜೆ.ಪಿ.ನಡ್ಡಾ’ಗೆ ನೊಟೀಸ್‌ ನೀಡಿದ ಚುನಾವಣಾ ಆಯೋಗ!

0
ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ದೂರುಗಳ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ನೋಟಿಸ್ ನೀಡಿದೆ. ಆದರೆ, ಈ ನೊಟೀಸ್‌ನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕಳುಹಿಸಲಾಗಿದ್ದು,...