Homeಮುಖಪುಟಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ ಕುರುಹು;...

ಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ ಕುರುಹು; ತಜ್ಞರ ಸಾಕ್ಷಿ

- Advertisement -
- Advertisement -

ಎಲ್‌ಎಂಎಲ್ ವೆಸ್ಪಾ ಸ್ಕೂಟರ್ ಸೇರಿದಂತೆ ಸ್ಫೋಟದ ಸ್ಥಳದಿಂದ ವಶಪಡಿಸಿಕೊಂಡ ಹಲವಾರು ವಸ್ತುಗಳಲ್ಲಿ ಸ್ಫೋಟಕಗಳ ಕುರುಹುಗಳು ಕಂಡುಬಂದಿವೆ ಎಂದು 2008 ರ ಮಾಲೆಗಾಂವ್ ಸ್ಫೋಟ ಪ್ರಕರಣದ 261 ನೇ ಸಾಕ್ಷಿಯಾಗಿರುವ ವಿಧಿವಿಜ್ಞಾನ ತಜ್ಞರು ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಸ್ಕೂಟರ್‌‌ ಶಂಕಿತ ಭಯೋತ್ಪಾದಕಿ, ಭೋಪಾಲ್‌ನ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

2008ರ ಸೆಪ್ಟೆಂಬರ್ 29 ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ಪಟ್ಟಣದ ಮಸೀದಿಯ ಬಳಿ ಸ್ಕೂಟರ್‌ಗೆ ಕಟ್ಟಲಾಗಿದ್ದ ಬಾಂಬ್ ಸ್ಫೋಟಗೊಂಡು ಆರು ಜನರು ಸಾವನ್ನಪ್ಪಿದ್ದರು ಮತ್ತು 100 ಜನರು ಗಾಯಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಕ್ಷಿ ನುಡಿದ ವಿಧಿವಿಜ್ಞಾನ ತಜ್ಞರು 2008 ರಲ್ಲಿ ಸಹಾಯಕ ರಾಸಾಯನಿಕ ವಿಶ್ಲೇಷಕರಾಗಿ ಕೆಲಸ ಮಾಡಿದ್ದರು. ಸ್ಫೋಟದ ಸ್ಥಳದಿಂದ ವಶಪಡಿಸಿಕೊಂಡ ಸ್ಕೂಟರ್‌ನಲ್ಲಿ ಅಮೋನಿಯಂ ನೈಟ್ರೇಟ್ ಕುರುಹುಗಳು ಕಂಡುಬಂದಿವೆ ಎಂದು ಅವರು ಹೇಳಿದ್ದಾರೆ. ಅಮೋನಿಯಂ ನೈಟ್ರೇಟ್ ಅನ್ನು ಸ್ಫೋಟಕವಾಗಿ ಬಳಸಲಾಗುತ್ತದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಭಯೋತ್ಪಾದಕಿ ಪ್ರಗ್ಯಾ ಠಾಕೂರ್‌ , ಭಯೋತ್ಪಾದಕ ಗೋಡ್ಸೆಯನ್ನು ದೇಶಭಕ್ತ ಎಂದಿದ್ದಾರೆ: ರಾಹುಲ್‌ ಗಾಂಧಿ

2008 ರಲ್ಲಿ ಸ್ಫೋಟದ ಸ್ಥಳಕ್ಕೆ ಹೋಗಿದ್ದಾಗ LML ವೆಸ್ಪಾ ಸ್ಕೂಟರ್ ಗಂಭೀರವಾಗಿ ಹಾನಿಗೊಳಗಾದ ಸ್ಥಿತಿಯಲ್ಲಿ ನೋಡಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ವೇಳೆ ಹೋಂಡಾ ಯುನಿಕಾರ್ನ್, ಬೈಸಿಕಲ್ ಸೇರಿದಂತೆ ಇತರೆ ವಾಹನಗಳಿಗೂ ಭಾಗಶಃ ಹಾನಿಯಾಗಿದೆ ಎಂದು ಅವರು ಹೇಳಿದ್ದಾರೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವಿನಾಶ್ ರಸಲ್ ಅವರ ಪಾಟಿ ಸವಾಲಿಗೆ ಉತ್ತರಿಸಿದ ಪ್ರಸ್ತುತ ನಿವೃತ್ತರಾಗಿರುವ ವಿಧಿವಿಜ್ಞಾನ ತಜ್ಞರು, ಪೊಲೀಸರು ಕಳುಹಿಸಿದ ವಸ್ತು ಸಾಕ್ಷ್ಯಗಳ ರಾಸಾಯನಿಕ ವಿಶ್ಲೇಷಣೆ ಮತ್ತು ರಾಸಾಯನಿಕ ವಿಶ್ಲೇಷಣಾ ವರದಿಯನ್ನು ಒದಗಿಸುವುದು ಮತ್ತು ಸ್ಫೋಟದ ಸ್ಥಳಕ್ಕೆ ಭೇಟಿ ನೀಡುವ ಕೆಲಸದಲ್ಲಿ ತೊಡಗಿದ್ದಾಗಿ ಅವರು ತಮ್ಮ ಕೆಲಸವನ್ನು ವಿವರಿಸುತ್ತಾ ಹೇಳಿದ್ದಾರೆ.

ಸ್ಕೂಟರ್‌ನ ಎಂಜಿನ್ ಸಂಖ್ಯೆಯನ್ನು ಸ್ಕ್ರಾಚ್ ಮಾಡಲಾಗಿತ್ತು. ಕಾರ್ಯವಿಧಾನದ ಮೂಲಕ ತಾನು ಬೈಕ್‌ನಿಂದ ಮೂರು ಸಂಭವನೀಯ ಎಂಜಿನ್ ಸಂಖ್ಯೆಗಳನ್ನು ಕಂಡುಹಿಡಿಯುವಲ್ಲಿ ಯಶಸ್ವಿಯಾಗಿದ್ದಾಗಿ ಅವರು ಸಾಕ್ಷಿ ಹೇಳಿದ್ದಾರೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಸಂಖ್ಯೆಗಳನ್ನು ಗುರುತಿಸುವ ಮೊದಲು ನಂಬರ್‌‌ ಪ್ಲೇಟ್‌ನಲ್ಲಿ ಯಾವುದೇ ಎಂಜಿನ್ ಸಂಖ್ಯೆ ಇರಲಿಲ್ಲ ಎಂಬುವುದನ್ನು ತಾನು ಗಮನಿಸಿದ್ದಾಗಿ ಅವರು ಹೇಳಿದ್ದಾರೆ. ಇವರ ಸಾಕ್ಷಿಯ ವಿಚಾರಣೆ ಮತ್ತಷ್ಟು ಮುಂದುವರಿಯಲಿದೆ.

ಎರಡು ದ್ವಿಚಕ್ರವಾಹನಗಳು ಮತ್ತು ಐದು ಸೈಕಲ್‌ಗಳನ್ನು ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಕಚೇರಿಯಿಂದ ನ್ಯಾಯಾಲಯಕ್ಕೆ ತರಲಾಯಿತು. ವಿಶೇಷ ನ್ಯಾಯಾಧೀಶರು, ವಕೀಲರು, ನ್ಯಾಯಾಲಯದ ಸಿಬ್ಬಂದಿ, ಸಾಕ್ಷಿ ಮತ್ತು ಆರೋಪಿಗಳು ನ್ಯಾಯಾಲಯ ಒಳಗಿನಿಂದ ವಾಹನಗಳನ್ನು ನಿಲ್ಲಿಸಿದ ಸ್ಥಳಕ್ಕೆ ತೆರಳಿ ವಾಹನಗಳನ್ನು ಪರಿಶೀಲಿಸಿದರು ಆದರೆ ಛಾಯಾಗ್ರಹಣಕ್ಕೆ ಅವಕಾಶ ನೀಡಲಿಲ್ಲ.

2019 ರಲ್ಲಿ ಪಂಚ ಸಾಕ್ಷಿಯಾಗಿ ಕೆಲಸ ಮಾಡಿದ ಇನ್ನೊಬ್ಬ ಸಾಕ್ಷಿ ಸ್ಫೋಟದ ಸ್ಥಳದಲ್ಲಿದ್ದ ಬೈಕ್ ಅನ್ನು ಗುರುತಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ಸರಿಯಿಲ್ಲ ಎಂದಿದ್ದ ಪ್ರಜ್ಞಾ ಠಾಕೂರ್‌‌ – ಡ್ಯಾನ್ಸ್‌ ಮಾಡುವ ವಿಡಿಯೊ ವೈರಲ್‌!

2008ರ ಸೆಪ್ಟೆಂಬರ್ 29 ರಂದು ಮಾಲೆಗಾಂವ್‌ನ ಭಿಕು ಚೌಕ್‌ನಲ್ಲಿ ಸ್ಕೂಟರ್‌ನಲ್ಲಿ ಇರಿಸಲಾಗಿದ್ದ ಬಾಂಬ್ ಸ್ಪೋಟಿಸಿ ಆರು ಮಂದಿ ಸಾವನ್ನಪ್ಪಿದ್ದರು ಮತ್ತು ನೂರಕ್ಕೂ ಹೆಚ್ಚು ಜನರು ಗಾಯಗೊಂಡರು ಎಂದು ಪ್ರಾಸಿಕ್ಯೂಷನ್ ಹೇಳಿಕೊಂಡಿದೆ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸುವ ಮೊದಲು ಮಹಾರಾಷ್ಟ್ರ ಎಟಿಎಸ್ ಆರಂಭದಲ್ಲಿ ತನಿಖೆ ನಡೆಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...