Homeಕರ್ನಾಟಕಮಾಲ್ಗುಡಿ ಎಕ್ಸ್ಪ್ರೆಸ್ ಫೇಸ್ ಬುಕ್ ಪುಟ ಬ್ಲಾಕ್ ಮಾಡಿದ ಫೇಸ್ ಬುಕ್!

ಮಾಲ್ಗುಡಿ ಎಕ್ಸ್ಪ್ರೆಸ್ ಫೇಸ್ ಬುಕ್ ಪುಟ ಬ್ಲಾಕ್ ಮಾಡಿದ ಫೇಸ್ ಬುಕ್!

ಮಾಧ್ಯಮಗಳು ಆಳುವವರ ಭಜನೆ ಮಾಡುವ ಸಮಯದಲ್ಲಿ ನಮ್ಮಂತಹ ಕೆಲವು ಮಾಧ್ಯಮಗಳು ಪ್ರಭುತ್ವದ ಹುನ್ನಾರವನ್ನು ಗಟ್ಟಿ ದನಿಯಲ್ಲಿ, ಸ್ಪಷ್ಟ ಮತ್ತು ನೇರವಾಗಿ ಪ್ರಶ್ನಿಸುವ ಕೆಲಸವನ್ನು ಮಾಡುತ್ತಿವೆ. - ಪ್ರದೀಪ್ ಮಾಲ್ಗುಡಿ.

- Advertisement -
- Advertisement -

ಕೆಲ ತಿಂಗಳುಗಳ ಹಿಂದೆಯಷ್ಟೇ ನಾನುಗೌರಿ.ಕಾಂ ಫೇಸ್‌ಬುಕ್ ಪುಟ ನಿರ್ಬಂಧಿಸಿ ತೀವ್ರ ಟೀಕೆಯ ನಂತರ ಕ್ಷಮೆ ಕೇಳಿ ನಿರ್ಬಂಧ ತೆರವು ಮಾಡಿದ್ದ ಫೇಸ್‌ಬುಕ್‌, ಈಗ ಸಮುದಾಯ ನಿಯಮಗಳನ್ನು ಮುರಿಯಲಾಗಿದೆ ಎಂಬ ಯಥಾ ನೆಪವೊಡ್ಡಿ ಮಾಲ್ಗುಡಿ ಎಕ್ಸ್ಪ್ರೆಸ್ ಫೇಸ್ ಬುಕ್ ಪುಟವನ್ನು ಬ್ಲಾಕ್ ಮಾಡಿದೆ. ಇದರಿಂದ ಮಾಲ್ಗುಡಿ ಎಕ್ಸ್ಪ್ರೆಸ್ ವೆಬ್‌ಸೈಟ್‌ನ ಯಾವುದೇ ಲಿಂಕ್‌ಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳದಂತೆ ತಡೆಹಿಡಿಯಲಾಗಿದೆ.

ಸೈದ್ಧಾಂತಿಕ ಕಾರಣಗಳಿಗಾಗಿ ಹಲವರು ಏಕಕಾಲದಲ್ಲಿ ಮಾಲ್ಗುಡಿ ಎಕ್ಸ್ಪ್ರೆಸ್ ಫೇಸ್ ಬುಕ್ ಪುಟದ ವಿರುದ್ದ ‘ಮಾಸ್‌ ರಿಪೋರ್ಟ್’ ಮಾಡಿದ ಕಾರಣಕ್ಕಾಗಿ ಫೇಸ್‌ಬುಕ್‌ ಈ ರೀತಿ ಬ್ಲಾಕ್ ಮಾಡಿರುವ ಸಾಧ್ಯತೆಯಿದೆ. ರಿಪೋರ್ಟ್ ಸಕಾರಣವಾಗಿದೆಯೇ ಅಥವಾ ಸುಮ್ಮನೆ ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸಲು ಫೇಸ್‌ಬುಕ್ ಬಳಿ ಯಾವುದೇ ವ್ಯವಸ್ಥೆಯಿಲ್ಲ. ಹಾಗಾಗಿ ಯಾವುದೇ ನಿರ್ದಿಷ್ಠ ಕಾರಣ ನೀಡದೆ ಸಮುದಾಯ ನಿಯಮಗಳನ್ನು ಮುರಿಯಲಾಗಿದೆ ಎಂಬ ಕಾರಣ ನೀಡಿ ಬ್ಲಾಕ್ ಮಾಡಿರುವುದು ಸರಿಯಲ್ಲ ಎಂಬುದು ಹಲವರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಬಲಪಂಥೀಯ ಧೋರಣೆಯ ಫೇಸ್‌ಬುಕ್ ಸೆನ್ಸಾರ್‌ಶಿಪ್‌ಗೆ ಮತ್ತೊಂದು ಹೆಸರು ‘ತಾಂತ್ರಿಕ ದೋಷ’


ಮಾಲ್ಗುಡಿ ಎಕ್ಸ್ಪ್ರೆಸ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವ, ಸಂವಿಧಾನಾತ್ಮಕ ಮೌಲ್ಯಗಳನ್ನು ಎತ್ತಿಹಿಡಿಯುವ, ಜಾತ್ಯತೀತ ಸಮಾಜ ನಿರ್ಮಾಣ ಮಾಡುವ ಕನಸನ್ನು ಹೊಂದಿರುವ ಸುದ್ದಿ ಸಂಸ್ಥೆ. ಇದರ ಭಾಗವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಿತಿಗಳನ್ನು ಜನರಿಗೆ ತೋರಿಸುವ ಕೆಲಸವನ್ನು ತನ್ನ ಸೀಮಿತ ಪರಿಧಿಯಲ್ಲಿ ನಡೆಸುತ್ತಿದೆ. ಈಗಿನ ಬ್ಲಾಕ್ ವಿರುದ್ಧ ಈಗಾಗಲೇ ಕನಿಷ್ಠ 10 ಬಾರಿ ಸ್ಪಷ್ಟೀಕರಣ ನೀಡಲಾಗಿದೆ. ಆದರೂ ನಿಷೇಧವನ್ನು ತೆರವುಗೊಳಿಸುತ್ತಿಲ್ಲ. ಇಲ್ಲಿ ಪಟ್ಟಭದ್ರ ಹಿತಾಸಕ್ತಿಗಳಾದ ಸೈದ್ಧಾಂತಿಕ ವಿರೋಧಿಗಳ ಕೈವಾಡವಿರುವ ಸಂಗತಿ ಮೇಲ್ನೋಟಕ್ಕೇ ಎದ್ದು ಕಾಣುತ್ತದೆ ಎಂದು ಮಾಲ್ಗುಡಿ ಎಕ್ಸ್ಪ್ರೆಸ್‌ ಸಂಪಾದಕರಾದ ಪ್ರದೀಪ್ ಮಾಲ್ಗುಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳು ಆಳುವವರ ಭಜನೆ ಮಾಡುವ ಸಮಯದಲ್ಲಿ ನಮ್ಮಂತಹ ಕೆಲವು ಮಾಧ್ಯಮಗಳು ಪ್ರಭುತ್ವದ ಹುನ್ನಾರವನ್ನು ಗಟ್ಟಿ ದನಿಯಲ್ಲಿ, ಸ್ಪಷ್ಟ ಮತ್ತು ನೇರವಾಗಿ ಪ್ರಶ್ನಿಸುವ ಕೆಲಸವನ್ನು ಮಾಡುತ್ತಿವೆ. ನಮ್ಮನ್ನು ನೈತಿಕವಾಗಿ ಮತ್ತು ಮಾನಸಿಕವಾಗಿ ಕುಂದಿಸುವ ಕೆಲಸವನ್ನು ಮಾಡಲಾಗುತ್ತಿದೆ. ಆದರೆ, ಇಟ್ಟ ಹೆಜ್ಜೆಯನ್ನು ಹಿಂದಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...