Homeಮುಖಪುಟಪ್ರಚಾರಕ್ಕೆ ಯೋಧರು, ಸರಕಾರಿ ನೌಕರರ ಬಳಕೆ : ಕಳವಳ ವ್ಯಕ್ತಪಡಿಸಿ ಪ್ರಧಾನಿಗೆ ಪತ್ರ ಬರೆದ ಖರ್ಗೆ

ಪ್ರಚಾರಕ್ಕೆ ಯೋಧರು, ಸರಕಾರಿ ನೌಕರರ ಬಳಕೆ : ಕಳವಳ ವ್ಯಕ್ತಪಡಿಸಿ ಪ್ರಧಾನಿಗೆ ಪತ್ರ ಬರೆದ ಖರ್ಗೆ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಸರ್ಕಾರಿ ಯೋಜನೆಗಳನ್ನು ಪ್ರಚಾರ ಪಡಿಸಲು ಸರಕಾರಿ ನೌಕರರನ್ನು ಮತ್ತು ಸಶಸ್ತ್ರ ಪಡೆಗಳಿಗೆ ಸೂಚಿಸುವ ಎರಡು ಆದೇಶಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಈ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅ.18 ರ ಸರಕಾರದ ಆದೇಶವನ್ನು ಉಲ್ಲೇಖಿಸಿದ್ದು, ಇದರಲ್ಲಿ ಬಿಜೆಪಿ ಸರಕಾರದ 9 ವರ್ಷಗಳ ಸಾಧನೆಗಳನ್ನು ಪ್ರಚಾರ ಮಾಡಲು ಜಂಟಿ ಕಾರ್ಯದರ್ಶಿ, ನಿರ್ದೇಶಕ ಮತ್ತು ಉಪ ಕಾರ್ಯದರ್ಶಿ ಶ್ರೇಣಿಯ ಹಿರಿಯ ಅಧಿಕಾರಿಗಳನ್ನು ರಥ ಪ್ರಭಾರಿಗಳು ಆಗಿ ಕಾರ್ಯನಿರ್ವಹಿಸಲು ಕೇಂದ್ರ ಸೂಚಿಸಿದೆ ಎಂದು ಹೇಳಲಾಗಿದೆ.

ಈ ಆದೇಶವು ಕೇಂದ್ರ ನಾಗರಿಕ ಸೇವೆಗಳ (ನಡತೆ) ನಿಯಮಗಳು 1964ನ್ನು ಉಲ್ಲಂಘಿಸಿದೆ ಎಂದು ಖರ್ಗೆ ಬರೆದಿದ್ದಾರೆ. ಯಾವುದೇ ಸರ್ಕಾರಿ ನೌಕರರು ಯಾವುದೇ ರಾಜಕೀಯ ಚಟುವಟಿಕೆಯಲ್ಲಿ ಭಾಗವಹಿಸಬಾರದು ಎಂದು ನಿರ್ದೇಶಿಸುತ್ತದೆ. ಸರಕಾರದ ಆದೇಶವು ಇದರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಮೋದಿ ಆಡಳಿತದ ಪ್ರಚಾರಕ್ಕಾಗಿ ಹಿರಿಯ ಸರ್ಕಾರಿ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ಅಧ್ಯಕ್ಷರು, ತಮ್ಮ ಪತ್ರದಲ್ಲಿ ಅ.9 ರಂದು ರಕ್ಷಣಾ ಸಚಿವಾಲಯ ಹೊರಡಿಸಿದ ಮತ್ತೊಂದು ಆದೇಶವನ್ನು ಉಲ್ಲೇಖಿಸಿದ್ದಾರೆ. ಸೈನಿಕರು ತಮ್ಮ ವಾರ್ಷಿಕ ರಜೆಯ ಸಮಯದಲ್ಲಿ ಸರ್ಕಾರಿ ಯೋಜನೆಗಳನ್ನು ಪ್ರಚಾರ ಮಾಡುವಂತೆ ಅದರಲ್ಲಿ ನಿರ್ದೇಶಿಸಲಾಗಿತ್ತು.

ಪ್ರತಿಯೊಬ್ಬ ಜವಾನನ ನಿಷ್ಠೆ, ರಾಷ್ಟ್ರ ಮತ್ತು ಸಂವಿಧಾನಕ್ಕೆ ಇದೆ. ನಮ್ಮ ಸೈನಿಕರನ್ನು ಸರ್ಕಾರದ ಯೋಜನೆಗಳ ಮಾರ್ಕೆಟಿಂಗ್ ಏಜೆಂಟ್‌ಗಳಾಗುವಂತೆ ಒತ್ತಾಯಿಸುವುದು ಸಶಸ್ತ್ರ ಪಡೆಗಳ ರಾಜಕೀಕರಣಕ್ಕೆ ತೆಗೆದುಕೊಂಡ ಅಪಾಯಕಾರಿ ಹೆಜ್ಜೆಯಾಗಿದೆ ಎಂದು ಖರ್ಗೆ ಮೋದಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದರೆ.

ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಆದೇಶಗಳನ್ನು ಸಮರ್ಥಿಸಿಕೊಂಡಿದ್ದು, ಸರಕಾರದ ಯೋಜನೆಗಳನ್ನು ತಳಮಟ್ಟಕ್ಕೆ ತಲುಪಿಸುವುದು  ಆಡಳಿತದ ಮೂಲ ತತ್ವವಾಗಿದೆ ಎಂದು ಹೇಳಿದರು.

ಇದನ್ನು ಓದಿ: ಜೆಡಿಎಸ್ ಜೊತೆ ಸಂಬಂಧ ಕೊನೆಗೊಳಿಸಿ ಸ್ವತಂತ್ರವಾಗಿ ಇರುವುದಾಗಿ ಹೇಳಿದ ಕೇರಳ ಜೆಡಿಎಸ್ ಘಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...