Homeಮುಖಪುಟಜಿ20 ಶೃಂಗಸಭೆಯ ಔತಣ ಕೂಟಕ್ಕೆ ಖರ್ಗೆಗಿಲ್ಲ ಆಹ್ವಾನ

ಜಿ20 ಶೃಂಗಸಭೆಯ ಔತಣ ಕೂಟಕ್ಕೆ ಖರ್ಗೆಗಿಲ್ಲ ಆಹ್ವಾನ

- Advertisement -
- Advertisement -

ಜಿ20 ಶೃಂಗಸಭೆ ಹಿನ್ನೆಲೆ ರಾಷ್ಟ್ರಪತಿಗಳು ಆಯೋಜಿಸಿರುವ ಔತಣ ಕೂಟಕ್ಕೆ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನನ್ನು ನೀಡಿಲ್ಲ ಎಂದು ಅವರ ಕಚೇರಿ ತಿಳಿಸಿದೆ.

ಖರ್ಗೆ ಅವರು ಕ್ಯಾಬಿನೆಟ್ ಮಂತ್ರಿ ದರ್ಜೆಯ ಸ್ಥಾನಮಾನವನ್ನು ಹೊಂದಿದ್ದಾರೆ ಮತ್ತು ದೇಶದ ಅತಿದೊಡ್ಡ ವಿರೋಧ ಪಕ್ಷದ ಅಧ್ಯಕ್ಷರಾಗಿದ್ದಾರೆ.

ಎಲ್ಲಾ ಕ್ಯಾಬಿನೆಟ್ ಮತ್ತು ರಾಜ್ಯ ಸಚಿವರು ಮತ್ತು ಎಲ್ಲಾ ಮುಖ್ಯಮಂತ್ರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ಎಲ್ಲಾ ಕಾರ್ಯದರ್ಶಿಗಳು ಮತ್ತು ಇತರ ಗೌರವಾನ್ವಿತ ಅತಿಥಿಗಳು ಸಹ ಅತಿಥಿ ಪಟ್ಟಿಯಲ್ಲಿದ್ದಾರೆ. ಆದರೆ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನನ್ನು ನೀಡಲಾಗಿಲ್ಲ.

ಬಿಹಾರದ ನಿತೀಶ್ ಕುಮಾರ್, ಜಾರ್ಖಂಡ್‌ನ ಹೇಮಂತ್ ಸೊರೆನ್, ಪಶ್ಚಿಮ ಬಂಗಾಳದಿಂದ ಮಮತಾ ಬ್ಯಾನರ್ಜಿ, ತಮಿಳುನಾಡಿನ ಎಂಕೆ ಸ್ಟಾಲಿನ್, ದೆಹಲಿಯಿಂದ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್‌ನ ಭಗವಂತ್ ಮಾನ್ ಅವರು ಔತಣಕೂಟದಲ್ಲಿ ಪಾಲ್ಗೊಳ್ಳುವುದಾಗಿ ಖಚಿತಪಡಿಸಿದ್ದಾರೆ. ಎಲ್ಲಾ ಆಹ್ವಾನಿತ ಅತಿಥಿಗಳಿಗೆ ಸಂಜೆ ಆರು ಗಂಟೆಗೆ ಸಂಸತ್ ಭವನಕ್ಕೆ ತಲುಪುವಂತೆ ತಿಳಿಸಲಾಗಿದೆ. ಅಲ್ಲಿಂದ ಭಾರತ ಮಂಟಪಕ್ಕೆ ಕರೆದುಕೊಂಡು ಹೋಗಲು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ದೇಶಗಳ ನಾಯಕರನ್ನು  ಪ್ರತ್ಯೇಕವಾಗಿ ಸ್ವಾಗತಿಸಲಿದ್ದಾರೆ. ಅಲ್ಲಿ ಔತಣಕೂಟವನ್ನು ಕೂಡ ಆಯೋಜಿಸಲಾಗಿದೆ.

ಇದನ್ನು ಓದಿ: ಆಂಧ್ರಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ

0
ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (ಎಸ್‌ಸಿಬಿಎ) ​​ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿರಿಯ ವಕೀಲ ಕಪಿಲ್ ಸಿಬಲ್ ಗೆಲುವು ಸಾಧಿಸಿದ್ದಾರೆ. ಸಿಬಲ್ 1,066 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಹಿರಿಯ ವಕೀಲ ಪ್ರದೀಪ್ ರೈ...