Homeಮುಖಪುಟಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

- Advertisement -
- Advertisement -

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು ತಮ್ಮ ಮಕ್ಕಳು ಸೇವಿಸದಂತೆ ಪ್ರಬಲ ಜಾತಿಯವರು ತಡೆದಿರುವ ಘಟನೆಯನ್ನು ಅವರು ಉಲ್ಲೇಖಿಸಿದರು.

ಮೇಲ್ಮನೆಯಲ್ಲಿ ಶೂನ್ಯವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಖರ್ಗೆ, “ನಾವು 21ನೇ ಶತಮಾನದಲ್ಲಿ ಸಾಮಾಜಿಕ ಅಭಿವೃದ್ಧಿ, ಸಾಮಾಜಿಕ ಸುಧಾರಣೆ ಮತ್ತು ಹಿಂದೂಗಳ ಏಕತೆಯ ಬಗ್ಗೆ ಮಾತನಾಡುತ್ತಿದ್ದೇವೆ. ಆದರೆ, ಒಡಿಶಾದ ಅಂಗನವಾಡಿ ಕೇಂದ್ರವೊಂದರಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿರುವ ದಲಿತ ಮಹಿಳೆ ತಯಾರಿಸಿದ ಆಹಾರವನ್ನು ಸೇವಿಸಲು ಒಂದು ನಿರ್ದಿಷ್ಟ ಸಮುದಾಯದ ಜನರು ನಿರಾಕರಿಸುತ್ತಿದ್ದಾರೆ. ಈ ಕಾರಣದಿಂದಾಗಿ ಕಳೆದ ಮೂರು ತಿಂಗಳುಗಳಿಂದ ಆ ಅಂಗನವಾಡಿ ಕೇಂದ್ರವನ್ನು ಮುಚ್ಚಲಾಗಿದೆ” ಎಂದು ಹೇಳಿದರು.

ಮಕ್ಕಳ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಅಂಗನವಾಡಿ ಕೇಂದ್ರಗಳೇ ಮೂಲಾಧಾರವಾಗಿದೆ. ಆದರೆ ಇಂತಹ ಜಾತಿ ತಾರತಮ್ಯದ ಘಟನೆಗಳು ಮಕ್ಕಳ ಬೆಳವಣಿಗೆಯ ಮೇಲೆ ಸಹಜವಾಗಿಯೇ ಕೆಟ್ಟ ಪರಿಣಾಮ ಬೀರುತ್ತವೆ. ಅಲ್ಲದೆ ಇಂತಹ ಘಟನೆಗಳು ಸಂವಿಧಾನದ 21ಎ ವಿಧಿಯಡಿಯಲ್ಲಿ ನೀಡಲಾದ ಶಿಕ್ಷಣದ ಹಕ್ಕಿನ ನೇರ ಉಲ್ಲಂಘನೆಯಾಗಿದೆ ಎಂದು ಖರ್ಗೆ ಕಳವಳ ವ್ಯಕ್ತಪಡಿಸಿದರು.

ದೇಶದ ವಿವಿಧ ಭಾಗಗಳಿಂದ ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಕುರಿತು ವರದಿಯಾಗುತ್ತಿದೆ. ತನಿಖೆಗಳು ಸಕಾಲಿಕವಾಗಿ ನಡೆದಿದ್ದರೆ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಬಹುದಿತ್ತು ಎಂದು ಹೇಳಿದರು.

ಇತರ ರಾಜ್ಯಗಳ ನಿದರ್ಶನಗಳನ್ನು ಉಲ್ಲೇಖಿಸಿದ ಖರ್ಗೆ, ಕೆಲ ವರ್ಷಗಳ ಹಿಂದೆ ಮಧ್ಯಪ್ರದೇಶದಲ್ಲಿ ಆದಿವಾಸಿ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಘಟನೆಯನ್ನು ನೆನಪಿಸಿಕೊಂಡರು. ಕಳೆದ ವರ್ಷ ಗುಜರಾತ್‌ನಲ್ಲಿ ಜಾತಿ ತಾರತಮ್ಯದಿಂದಾಗಿ ದಲಿತ ಸರ್ಕಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡರು ಎಂದು ತಿಳಿಸಿದರು.

ಇಂತಹ ಘಟನೆಗಳು ಜಾತಿ ತಾರತಮ್ಯವು ಕೇವಲ ಸಾಮಾಜಿಕ ಮತ್ತು ರಾಜಕೀಯ ಜೀವನಕ್ಕೆ ಮಾತ್ರ ಸೀಮಿತವಾಗಿಲ್ಲ, ಬದಲಿಗೆ ಕೆಲಸದ ಸ್ಥಳಗಳಲ್ಲಿಯೂ ವ್ಯಾಪಕವಾಗಿದೆ ಎಂಬುವುದನ್ನು ತೋರಿಸುತ್ತವೆ. ಇದು ಜನರ ಘನತೆ, ವೃತ್ತಿಜೀವನದ ಪ್ರಗತಿ ಮತ್ತು ವೈಯಕ್ತಿಕ ಸುರಕ್ಷತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಖರ್ಗೆ ಹೇಳಿದರು.

ಯಾವುದೇ ಅಧಿಕಾರಿಯ ವಿರುದ್ಧ ಇಂತಹ ಜಾತಿ ತಾರತಮ್ಯವು ಸಂವಿಧಾನದ 14, 15 ಮತ್ತು 17 ನೇ ವಿಧಿಗಳ ಉಲ್ಲಂಘನೆಯಾಗಿದೆ ಎಂದ ಖರ್ಗೆ, ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಇಂತಹ ಘಟನೆಗಳನ್ನು ಸಕಾಲಿಕವಾಗಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...