Homeಮುಖಪುಟಪಠ್ಯ ಪುಸ್ತಕದಿಂದ ಸಂವಿಧಾನದ ಪ್ರಸ್ತಾವನೆ ಕೈಬಿಟ್ಟ ವಿಚಾರ| ದೇಶದ ಮೇಲೆ ಕೋಮು ಸಿದ್ಧಾಂತ ಹೇರುವ ಪ್ರಯತ್ನ:...

ಪಠ್ಯ ಪುಸ್ತಕದಿಂದ ಸಂವಿಧಾನದ ಪ್ರಸ್ತಾವನೆ ಕೈಬಿಟ್ಟ ವಿಚಾರ| ದೇಶದ ಮೇಲೆ ಕೋಮು ಸಿದ್ಧಾಂತ ಹೇರುವ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಶಾಲಾ ಮಕ್ಕಳ ಕೆಲ ಪಠ್ಯ ಪುಸ್ತಕಗಳಿಂದ ಸಂವಿಧಾನದ ಪ್ರಸ್ತಾವನೆಯನ್ನು ಕೈಬಿಡಲು ಎನ್‌ಸಿಇಆರ್‌ಟಿ ಮುಂದಾಗಿದೆ ಎಂಬ ವಿಚಾರವನ್ನು ಬುಧವಾರ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ “ಇದು ದೇಶದ ಮೇಲೆ ಕೋಮು ಸಿದ್ಧಾಂತವನ್ನು ಹೇರುವ ಪ್ರಯತ್ನ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರ ” ಈ ವಿಷಯ ನಿಜವಲ್ಲ. ನಾವು ಸಂವಿಧಾನವನ್ನು ರಕ್ಷಿಸಲು ಬದ್ದರಾಗಿದ್ದೇವೆ” ಎಂದು ಹೇಳಿದೆ.

“ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯಲ್ಲಿ ಇರದ ಹೊರತು ಅದು ಉಳಿಯುವುದಿಲ್ಲ. ಸಾಮಾಜಿಕ ಪ್ರಜಾಪ್ರಭುತ್ವದ ಅರ್ಥವೇನು? ಇದರರ್ಥ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ತತ್ವಗಳಾಗಿ ಗುರುತಿಸುವ ಜೀವನ ವಿಧಾನ” ಎಂದ ಖರ್ಗೆ, ನವೆಂಬರ್ 1948 ರಲ್ಲಿ ಸಂವಿಧಾನ ಸಭೆಯ ಚರ್ಚೆಯನ್ನು ರಾಜ್ಯಸಭೆಯಲ್ಲಿ ಉಲ್ಲೇಖಿಸಿದ್ದಾರೆ.

“ಭವಿಷ್ಯದ ಪೀಳಿಗೆಗೆ ಭಾರತೀಯ ಪ್ರಜಾಪ್ರಭುತ್ವ, ಸಂವಿಧಾನದ ಮೂಲ ತತ್ವಗಳು, ಮೌಲ್ಯಗಳು ಹಾಗೂ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರು, ಬಿ ಆರ್ ಅಂಬೇಡ್ಕರ್ , ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ತ್ಯಾಗದ ಬಗ್ಗೆ ಶಿಕ್ಷಣ ನೀಡಬೇಕು” ಎಂದು ಖರ್ಗೆ ಹೇಳಿದ್ದಾರೆ.

“ಇಂದು, ನಾವು ಕೆಲವು ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಿಂದ ಸಂವಿಧಾನದ ಪ್ರಸ್ತಾವನೆಯನ್ನು ತೆಗೆದು ಹಾಕುವ ಕುರಿತ ಬಹಳ ಮುಖ್ಯವಾದ ವಿಷಯವನ್ನು ರಾಜ್ಯಸಭೆಯ ಎತ್ತಿದ್ದೇವೆ. ಮೋದಿ ಸರ್ಕಾರದಿಂದ ಸ್ಪಷ್ಟೀಕರಣವನ್ನು ಕೋರಿದ್ದೇವೆ. ಸಭಾನಾಯಕ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ವಿಷಯವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ ಮತ್ತು ಸಂಪೂರ್ಣ ವಿಷಯದ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ” ಎಂದು ಖರ್ಗೆ ಅವರು ಎಕ್ಸ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.

“2024ರ ಲೋಕಸಭೆ ಚುನಾವಣೆಯಲ್ಲಿ 140 ಕೋಟಿ ಭಾರತೀಯರು ‘400 ಪಾರ್’ ಘೋಷಣೆಯ ಕನಸನ್ನು ಭಗ್ನಗೊಳಿಸಿದ್ದರಿಂದ ಹತಾಶೆಯಲ್ಲಿರುವ ಮೋದಿ ಸರ್ಕಾರ, ಹಿಂಬಾಗಿಲಿನಿಂದ ಪಿಟೀಲು ಬಾರಿಸುವ ಮೂಲಕ ಮಕ್ಕಳ ಪಠ್ಯಪುಸ್ತಕಗಳಲ್ಲಿ ಸಂವಿಧಾನವನ್ನು ತಿದ್ದಲು ಮುಂದಾಗಿದೆ. ಇದಕ್ಕೆ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ” ಎಂದು ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಖರ್ಗೆ ಅವರ ಆರೋಪವನ್ನು ತಳ್ಳಿ ಹಾಕಿದ್ದು, “6 ನೇ ತರಗತಿಯ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಪೀಠಿಕೆ ತುಂಬಾ ಚೆನ್ನಾಗಿದೆ. ಹೊಸ ಪಠ್ಯಪುಸ್ತಕಗಳಲ್ಲಿ, ಸಂವಿಧಾನದ ಪೀಠಿಕೆಯ ಜೊತೆಗೆ, ಮೂಲಭೂತ ಕರ್ತವ್ಯಗಳು, ಮೂಲಭೂತ ಹಕ್ಕುಗಳು, ರಾಷ್ಟ್ರಗೀತೆ ಮತ್ತು ಸಂವಿಧಾನದ ಮೂಲ ಮೌಲ್ಯಗಳನ್ನು ಕೂಡ ಸೇರಿಸಲಾಗಿದೆ” ಎಂದು ಹೇಳಿದ್ದಾರೆ.

ಸಂಸತ್ತಿನ ಸಂಕೀರ್ಣದಲ್ಲಿರುವ ಗಾಂಧಿ ಮತ್ತು ಅಂಬೇಡ್ಕರ್ ಪ್ರತಿಮೆಗಳ ಸ್ಥಳಾಂತರದ ಬಗ್ಗೆಯೂ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರೆ, ಅಧ್ಯಕ್ಷ ಜಗದೀಪ್ ಧನಖರ್ ಅವರು “ಕಾಂಗ್ರೆಸ್ ಅಧ್ಯಕ್ಷರು ವಿಷಯ ಬದಲಿಸುತ್ತಿದ್ದಾರೆ” ಎಂದಿದ್ದಾರೆ.

“ಆರ್‌ಎಸ್‌ಎಸ್ ಮತ್ತು ಬಿಜೆಪಿ ಪಠ್ಯಕ್ರಮವನ್ನು ತಿದ್ದುವ ಮೂಲಕ ತಮ್ಮ ಕೋಮುವಾದಿ ಸಿದ್ಧಾಂತವನ್ನು ಜನರ ಮೇಲೆ ಹೇರಲು ಪ್ರಯತ್ನಿಸುತ್ತಿವೆ. ಎನ್‌ಸಿಇಆರ್‌ಟಿ ತೆಗೆದುಕೊಂಡಿರುವ ಹೆಜ್ಜೆ ಸರಿಯಲ್ಲ” ಎಂದು ಬುಧವಾರ ಬೆಳಗ್ಗೆ ಆಡಳಿತ ಪಕ್ಷದಿಂದ ನಡೆದ ಪ್ರತಿಭಟನೆಯ ವೇಳೆಯೂ ಖರ್ಗೆ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಜೆ.ಪಿ ನಡ್ಡಾ ” ಪಠ್ಯ ಪುಸ್ತಕಗಳಿಂದ ಸಂವಿಧಾನದ ಯಾವುದೇ ಅಂಶವನ್ನು ತೆಗೆದು ಹಾಕುವ ಪ್ರಶ್ನೆಯೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸಂವಿಧಾನದ ಒಂದೊಂದು ಪದವನ್ನು ರಕ್ಷಿಸಲೂ ಬದ್ದವಾಗಿದೆ. ಸಂವಿಧಾಬದ ಪೀಠಿಕೆಯನ್ನು ರಕ್ಷಿಸಲಾಗಿದೆ ಮತ್ತು ರಕ್ಷಿಸಲಾಗುವುದು” ಎಂದಿದ್ದರು.

ಎನ್‌ಸಿಆರ್‌ಟಿಯ 6 ತರಗತಿಯ ಪಠ್ಯ ಪುಸ್ತಕದಿಂದ ಸಂವಿಧಾನದ ಪೀಠಿಕೆಯನ್ನು ಕೈ ಬಿಡಲಾಗಿದೆ ಎಂದು ಇತ್ತೀಚೆಗೆ ಕೆಲ ಮಾಧ್ಯಮಗಳು ವರದಿ ಮಾಡಿತ್ತು. ಈ ವಿಚಾರವಾಗಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ್ದಾರೆ.

ಇದನ್ನೂ ಓದಿ : ದಲಿತ ಬಾಲಕನಿಗೆ ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....