Homeಮುಖಪುಟಪಠ್ಯ ಪುಸ್ತಕದಿಂದ ಸಂವಿಧಾನದ ಪ್ರಸ್ತಾವನೆ ಕೈಬಿಟ್ಟ ವಿಚಾರ| ದೇಶದ ಮೇಲೆ ಕೋಮು ಸಿದ್ಧಾಂತ ಹೇರುವ ಪ್ರಯತ್ನ:...

ಪಠ್ಯ ಪುಸ್ತಕದಿಂದ ಸಂವಿಧಾನದ ಪ್ರಸ್ತಾವನೆ ಕೈಬಿಟ್ಟ ವಿಚಾರ| ದೇಶದ ಮೇಲೆ ಕೋಮು ಸಿದ್ಧಾಂತ ಹೇರುವ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಶಾಲಾ ಮಕ್ಕಳ ಕೆಲ ಪಠ್ಯ ಪುಸ್ತಕಗಳಿಂದ ಸಂವಿಧಾನದ ಪ್ರಸ್ತಾವನೆಯನ್ನು ಕೈಬಿಡಲು ಎನ್‌ಸಿಇಆರ್‌ಟಿ ಮುಂದಾಗಿದೆ ಎಂಬ ವಿಚಾರವನ್ನು ಬುಧವಾರ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ “ಇದು ದೇಶದ ಮೇಲೆ ಕೋಮು ಸಿದ್ಧಾಂತವನ್ನು ಹೇರುವ ಪ್ರಯತ್ನ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರ ” ಈ ವಿಷಯ ನಿಜವಲ್ಲ. ನಾವು ಸಂವಿಧಾನವನ್ನು ರಕ್ಷಿಸಲು ಬದ್ದರಾಗಿದ್ದೇವೆ” ಎಂದು ಹೇಳಿದೆ.

“ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯಲ್ಲಿ ಇರದ ಹೊರತು ಅದು ಉಳಿಯುವುದಿಲ್ಲ. ಸಾಮಾಜಿಕ ಪ್ರಜಾಪ್ರಭುತ್ವದ ಅರ್ಥವೇನು? ಇದರರ್ಥ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ತತ್ವಗಳಾಗಿ ಗುರುತಿಸುವ ಜೀವನ ವಿಧಾನ” ಎಂದ ಖರ್ಗೆ, ನವೆಂಬರ್ 1948 ರಲ್ಲಿ ಸಂವಿಧಾನ ಸಭೆಯ ಚರ್ಚೆಯನ್ನು ರಾಜ್ಯಸಭೆಯಲ್ಲಿ ಉಲ್ಲೇಖಿಸಿದ್ದಾರೆ.

“ಭವಿಷ್ಯದ ಪೀಳಿಗೆಗೆ ಭಾರತೀಯ ಪ್ರಜಾಪ್ರಭುತ್ವ, ಸಂವಿಧಾನದ ಮೂಲ ತತ್ವಗಳು, ಮೌಲ್ಯಗಳು ಹಾಗೂ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರು, ಬಿ ಆರ್ ಅಂಬೇಡ್ಕರ್ , ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ತ್ಯಾಗದ ಬಗ್ಗೆ ಶಿಕ್ಷಣ ನೀಡಬೇಕು” ಎಂದು ಖರ್ಗೆ ಹೇಳಿದ್ದಾರೆ.

“ಇಂದು, ನಾವು ಕೆಲವು ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಿಂದ ಸಂವಿಧಾನದ ಪ್ರಸ್ತಾವನೆಯನ್ನು ತೆಗೆದು ಹಾಕುವ ಕುರಿತ ಬಹಳ ಮುಖ್ಯವಾದ ವಿಷಯವನ್ನು ರಾಜ್ಯಸಭೆಯ ಎತ್ತಿದ್ದೇವೆ. ಮೋದಿ ಸರ್ಕಾರದಿಂದ ಸ್ಪಷ್ಟೀಕರಣವನ್ನು ಕೋರಿದ್ದೇವೆ. ಸಭಾನಾಯಕ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ವಿಷಯವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ ಮತ್ತು ಸಂಪೂರ್ಣ ವಿಷಯದ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ” ಎಂದು ಖರ್ಗೆ ಅವರು ಎಕ್ಸ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.

“2024ರ ಲೋಕಸಭೆ ಚುನಾವಣೆಯಲ್ಲಿ 140 ಕೋಟಿ ಭಾರತೀಯರು ‘400 ಪಾರ್’ ಘೋಷಣೆಯ ಕನಸನ್ನು ಭಗ್ನಗೊಳಿಸಿದ್ದರಿಂದ ಹತಾಶೆಯಲ್ಲಿರುವ ಮೋದಿ ಸರ್ಕಾರ, ಹಿಂಬಾಗಿಲಿನಿಂದ ಪಿಟೀಲು ಬಾರಿಸುವ ಮೂಲಕ ಮಕ್ಕಳ ಪಠ್ಯಪುಸ್ತಕಗಳಲ್ಲಿ ಸಂವಿಧಾನವನ್ನು ತಿದ್ದಲು ಮುಂದಾಗಿದೆ. ಇದಕ್ಕೆ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ” ಎಂದು ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಖರ್ಗೆ ಅವರ ಆರೋಪವನ್ನು ತಳ್ಳಿ ಹಾಕಿದ್ದು, “6 ನೇ ತರಗತಿಯ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಪೀಠಿಕೆ ತುಂಬಾ ಚೆನ್ನಾಗಿದೆ. ಹೊಸ ಪಠ್ಯಪುಸ್ತಕಗಳಲ್ಲಿ, ಸಂವಿಧಾನದ ಪೀಠಿಕೆಯ ಜೊತೆಗೆ, ಮೂಲಭೂತ ಕರ್ತವ್ಯಗಳು, ಮೂಲಭೂತ ಹಕ್ಕುಗಳು, ರಾಷ್ಟ್ರಗೀತೆ ಮತ್ತು ಸಂವಿಧಾನದ ಮೂಲ ಮೌಲ್ಯಗಳನ್ನು ಕೂಡ ಸೇರಿಸಲಾಗಿದೆ” ಎಂದು ಹೇಳಿದ್ದಾರೆ.

ಸಂಸತ್ತಿನ ಸಂಕೀರ್ಣದಲ್ಲಿರುವ ಗಾಂಧಿ ಮತ್ತು ಅಂಬೇಡ್ಕರ್ ಪ್ರತಿಮೆಗಳ ಸ್ಥಳಾಂತರದ ಬಗ್ಗೆಯೂ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರೆ, ಅಧ್ಯಕ್ಷ ಜಗದೀಪ್ ಧನಖರ್ ಅವರು “ಕಾಂಗ್ರೆಸ್ ಅಧ್ಯಕ್ಷರು ವಿಷಯ ಬದಲಿಸುತ್ತಿದ್ದಾರೆ” ಎಂದಿದ್ದಾರೆ.

“ಆರ್‌ಎಸ್‌ಎಸ್ ಮತ್ತು ಬಿಜೆಪಿ ಪಠ್ಯಕ್ರಮವನ್ನು ತಿದ್ದುವ ಮೂಲಕ ತಮ್ಮ ಕೋಮುವಾದಿ ಸಿದ್ಧಾಂತವನ್ನು ಜನರ ಮೇಲೆ ಹೇರಲು ಪ್ರಯತ್ನಿಸುತ್ತಿವೆ. ಎನ್‌ಸಿಇಆರ್‌ಟಿ ತೆಗೆದುಕೊಂಡಿರುವ ಹೆಜ್ಜೆ ಸರಿಯಲ್ಲ” ಎಂದು ಬುಧವಾರ ಬೆಳಗ್ಗೆ ಆಡಳಿತ ಪಕ್ಷದಿಂದ ನಡೆದ ಪ್ರತಿಭಟನೆಯ ವೇಳೆಯೂ ಖರ್ಗೆ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಜೆ.ಪಿ ನಡ್ಡಾ ” ಪಠ್ಯ ಪುಸ್ತಕಗಳಿಂದ ಸಂವಿಧಾನದ ಯಾವುದೇ ಅಂಶವನ್ನು ತೆಗೆದು ಹಾಕುವ ಪ್ರಶ್ನೆಯೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸಂವಿಧಾನದ ಒಂದೊಂದು ಪದವನ್ನು ರಕ್ಷಿಸಲೂ ಬದ್ದವಾಗಿದೆ. ಸಂವಿಧಾಬದ ಪೀಠಿಕೆಯನ್ನು ರಕ್ಷಿಸಲಾಗಿದೆ ಮತ್ತು ರಕ್ಷಿಸಲಾಗುವುದು” ಎಂದಿದ್ದರು.

ಎನ್‌ಸಿಆರ್‌ಟಿಯ 6 ತರಗತಿಯ ಪಠ್ಯ ಪುಸ್ತಕದಿಂದ ಸಂವಿಧಾನದ ಪೀಠಿಕೆಯನ್ನು ಕೈ ಬಿಡಲಾಗಿದೆ ಎಂದು ಇತ್ತೀಚೆಗೆ ಕೆಲ ಮಾಧ್ಯಮಗಳು ವರದಿ ಮಾಡಿತ್ತು. ಈ ವಿಚಾರವಾಗಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ್ದಾರೆ.

ಇದನ್ನೂ ಓದಿ : ದಲಿತ ಬಾಲಕನಿಗೆ ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...