Homeಮುಖಪುಟಕಾಂಗ್ರೆಸ್‌ ಪ್ರಾಣಾಳಿಕೆ ಬಗ್ಗೆ ಚರ್ಚೆಗೆ ಮೋದಿಯಲ್ಲಿ ಸಮಯಾವಕಾಶ ಕೇಳಿದ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್‌ ಪ್ರಾಣಾಳಿಕೆ ಬಗ್ಗೆ ಚರ್ಚೆಗೆ ಮೋದಿಯಲ್ಲಿ ಸಮಯಾವಕಾಶ ಕೇಳಿದ ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ರಾಜಸ್ಥಾನದಲ್ಲಿ ಬನ್ಸ್ವಾರದಲ್ಲಿ ನಡೆದ ಬಿಜೆಪಿಯ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್‌ ಪ್ರಾಣಾಳಿಕೆ ಬಗ್ಗೆ  ಟೀಕಿಸುತ್ತಾ ಪ್ರಧಾನಿ ಮೋದಿ ಮುಸ್ಲಿಮರ ಬಗ್ಗೆ ದ್ವೇಷದ ಹೇಳಿಕೆಯನ್ನು ನೀಡಿದ್ದರು. ಇದರ ಬೆನ್ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಕ್ಷದ ಪ್ರಣಾಳಿಕೆ ಬಗ್ಗೆ ಚರ್ಚೆಗೆ ಕಾಲಾವಕಾಶವನ್ನು ಕೋರಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ರಾಜಸ್ಥಾನದ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಮುಸ್ಲಿಂ ಅಲ್ಪಸಂಖ್ಯಾತರನ್ನು “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದರು.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದರು.

ಖರ್ಗೆ ಅವರು ಮೋದಿಯ ಹೇಳಿಕೆಯನ್ನು ದ್ವೇಷದ ಹೇಳಿಕೆ ಎಂದು ಬಣ್ಣಿಸಿದ್ದಾರೆ. ಇದು ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಯತ್ನ. ಇದು ಮೊದಲ ಹಂತದ ಲೋಕಸಭೆ ಚುನಾವಣೆಯ ಬಗ್ಗೆ ಬಿಜೆಪಿಗಿರುವ ಭೀತಿ ಮತ್ತು ನಿರಾಶೆಯನ್ನು ತೋರಿಸುತ್ತದೆ. ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲಿ ಮುಸ್ಲಿಂ ಮತ್ತು ಹಿಂದೂ ಪದಗಳ ಉಲ್ಲೇಖವಿಲ್ಲ ಮತ್ತು ಎಲ್ಲರಿಗೂ ಸಮಾನತೆ ಮತ್ತು ನ್ಯಾಯದ ಬಗ್ಗೆ ಮಾತನಾಡುತ್ತದೆ.  ಇಂಡಿಯಾ ಮೈತ್ರಿಕೂಟವು ಮೊದಲ ಸುತ್ತಿನಲ್ಲಿ ಗೆದ್ದಿರುವುದನ್ನು ಮನಗಂಡ ನಂತರ ಪ್ರಧಾನಿ ಮೋದಿ “ದ್ವೇಷ” ಭಾಷಣ ಮಾಡಿದ್ದಾರೆ. ಅಧಿಕಾರಕ್ಕಾಗಿ ಸುಳ್ಳು ಹೇಳುವುದು ಮತ್ತು ವಿರೋಧಿಗಳ ಮೇಲೆ ಆಧಾರರಹಿತ ಆರೋಪಗಳನ್ನು ಮಾಡುವುದು ಮೋದಿ ಅವರು ಮೈಗೂಡಿಸಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ-ಭಾರತೀಯ ಜನತಾ ಪಕ್ಷದ ಮೌಲ್ಯಗಳಾಗಿವೆ. ಭಾರತದ ಇತಿಹಾಸದಲ್ಲಿ, ಯಾವುದೇ ಪ್ರಧಾನಿ ಮೋದಿಯಂತೆ ‘ತಮ್ಮ ಹುದ್ದೆಯ ಘನತೆಯನ್ನು ಕಡಿಮೆ ಮಾಡಿಲ್ಲ’ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನು ಓದಿ: ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬ: ವಿವಾದ ಸೌಹಾರ್ದಯುತವಾಗಿ ಬಗೆಹರಿಸಲು ಸುಪ್ರೀಂಕೋರ್ಟ್‌ ಸೂಚನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....