Homeಮುಖಪುಟರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಭಾರಿ ಬಹುಮತದಿಂದ ಆಯ್ಕೆ

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಭಾರಿ ಬಹುಮತದಿಂದ ಆಯ್ಕೆ

- Advertisement -
- Advertisement -

ಬಹುನಿರೀಕ್ಷಿತ ಕಾಂಗ್ರೆಸ್‌‌ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ನಿರೀಕ್ಷೆಯಂತೆ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ‌ ಅವರು ಭಾರಿ ಬಹುಮತಗಳಿಂದ ಬುಧವಾರ ಆಯ್ಕೆಯಾಗಿದ್ದಾರೆ. ಈ ಮೂಲಕ ಸುಮಾರು 2 ದಶಕಗಳ ನಂತರ ಕಾಂಗ್ರೆಸ್‌ನ ಅಧ್ಯಕ್ಷೀಯ ಸ್ಥಾನವನ್ನು ಅಲಂಕರಿಸಿದ ಮೊದಲ ಗಾಂಧಿಯೇತರ ನಾಯಕರಾಗಿ ಹೊರಹೊಮ್ಮಿದ್ದಾರೆ.

ಪಕ್ಷದ ಹೊಸ ಅಧ್ಯಕ್ಷರನ್ನು ಖರ್ಗೆ ಅವರ ಪ್ರತಿಸ್ಪರ್ಧಿ ಶಶಿ ತರೂರ್‌ ಅಭಿನಂದಿಸಿದ್ದು, “ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿರುವುದು ದೊಡ್ಡ ಗೌರವ ಮತ್ತು ದೊಡ್ಡ ಜವಾಬ್ದಾರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಆ ಕಾರ್ಯದಲ್ಲಿ ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ 7897 ಮತಗಳನ್ನು ಪಡದಿದ್ದು, ಅವರ ಪ್ರತಿಸ್ಪರ್ಧಿ ಶಶಿ ತರೂರ್‌ 1072 ಮತಗಳನ್ನು ಪಡೆದಿದ್ದಾರೆ. 416 ಮತಗಳು ತಿರಸ್ಕೃತಗೊಂಡಿದ್ದು, ಒಟ್ಟು 9385 ಮತಗಳು ಚಲಾವಣೆಯಾಗಿದ್ದವು.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ – ಅಪರೂಪದ ಶ್ರೀಸಾಮಾನ್ಯ

“ಸಾವಿರಕ್ಕೂ ಹೆಚ್ಚು ಸಹೋದ್ಯೋಗಿಗಳ ಬೆಂಬಲವನ್ನು ಪಡೆದಿರುವುದು ಮತ್ತು ಭಾರತದಾದ್ಯಂತ ಕಾಂಗ್ರೆಸ್‌ನ ಅನೇಕ ಹಿತೈಷಿಗಳ ಭರವಸೆ ಮತ್ತು ಆಕಾಂಕ್ಷೆಗಳನ್ನು ಹೊತ್ತುಕೊಂಡಿದ್ದು ಒಂದು ಸುಯೋಗವಾಗಿತ್ತು” ಎಂದು ಶಶಿ ತರೂರ್‌ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣೆ ಮತ್ತು ಮಲ್ಲಿಕಾರ್ಜುನ ಖರ್ಗೆ

20 ವರ್ಷಗಳ ನಂತರ ನಡೆದ ಪಕ್ಷದ ಮೊದಲ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಲ್ಲಿಕಾರ್ಜುನ ಖರ್ಗೆ ಅವರು ಹೊಸ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ. ದೀಪಾವಳಿ ನಂತರ ಪಕ್ಷದ ಅಧ್ಯಕ್ಷರಾಗಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆ ಫಲಿತಾಂಶ ಪ್ರಕಟವಾಗುವ ಮುನ್ನವೇ ರಾಹುಲ್ ಗಾಂಧಿ ರಾಜ್ಯದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೆ ಅಧ್ಯಕ್ಷರಾಗಲಿದ್ದಾರೆ ಎಂದು ಸೂಚಿಸಿದ್ದರು. ಪತ್ರಿಕಾಗೋಷ್ಠಿಯಲ್ಲಿ ಹೊಸ ಅಧ್ಯಕ್ಷರಿಗೆ ವರದಿ ನೀಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,“ನನ್ನ ಪಾತ್ರ ಏನು ಎಂಬುದನ್ನು ಹೊಸ ಅಧ್ಯಕ್ಷರು ನಿರ್ಧರಿಸುತ್ತಾರೆ, ಈ ಬಗ್ಗೆ ಖರ್ಗೆ ಮತ್ತು ಸೋನಿಯಾ ಅವರನ್ನು ಕೇಳಿ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಫಲಿತಾಂಶ ಘೋಷಣೆಗೂ ಮುನ್ನ ಖರ್ಗೆ ಅವರ ಪ್ರತಿಸ್ಪರ್ಧಿ ಶಶಿ ತರೂರ್‌‌ ಅವರು ಚುನಾವಣಾ ಪ್ರಕ್ರಿಯೆಯಲ್ಲಿ “ಅತ್ಯಂತ ಗಂಭೀರ ಅಕ್ರಮಗಳು” ನಡೆದಿದೆ ಎಂದು ಆರೋಪಿಸಿದ್ದರು. ತರೂರ್ ಅವರ ತಂಡವನ್ನು ಪ್ರತಿನಿಧಿಸುವ ಸಲ್ಮಾನ್ ಸೋಜ್ ಅವರು ನಂತರ “ನ್ಯಾಯಯುತವಾದ ತನಿಖೆಯ ಬಗ್ಗೆ ಭರವಸೆ ನೀಡಿದ್ದಾರೆ” ಎಂದು ಹೇಳಿ, ಎಣಿಕೆ ಮುಂದುವರಿಸಲು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಖರ್ಗೆ ಮತ್ತು ಥರೂರು: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ದೇಸೀ ಹಾಗೂ ಮಾರ್ಗ

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಆರಂಭವಾದ ಮತ ಎಣಿಕೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮುಕ್ತಾಯವಾಯಿತು.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪಕ್ಷದ ಸತತ ಎರಡು ಸೋಲಿನ ಜವಾಬ್ದಾರಿಯನ್ನು ಹೊತ್ತುಕೊಂಡು ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ಸೋನಿಯಾ ಗಾಂಧಿ ಅವರು ಪಕ್ಷವನ್ನು ತಾತ್ಕಾಲಿಕವಾಗಿ ಮುನ್ನಡೆಸಲು ಒಪ್ಪಿಕೊಂಡ ಮೂರು ವರ್ಷಗಳ ನಂತರ ಈ ಚುನಾವಣೆ ನಡೆದಿದೆ.

1942 ಜುಲೈ  21 ರಂದು ಕರ್ನಾಟಕ-ಮಹಾರಾಷ್ಟ್ರ ಗಡಿಯ ಬೀದರ್ ಜಿಲ್ಲೆಯ ವರವಟ್ಟಿ ಎಂಬ ಕುಗ್ರಾಮದಲ್ಲಿ ಅಸ್ಪೃಶ್ಯ ಮಹಾರ್ ಕುಟುಂಬದಲ್ಲಿ ಜನಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಹುಟ್ಟುತ್ತಲೇ ಗಲಭೆಯೊಂದರಲ್ಲಿ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ಕೂಲಿ ಮಾಡಿ ಕಾಲೇಜು ಮುಗಿಸಿದ ಖರ್ಗೆ ಅವರು ಕಾರ್ಖಾನೆಯಲ್ಲಿ ಕಾರ್ಮಿಕರ ಸಂಘಟನೆ ಕಟ್ಟಿದ ಸಮಾಜಿಕ ರಂಗಕ್ಕೆ ಪ್ರವೇಶ ಮಾಡಿದ್ದರು.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

RPI ಪಕ್ಷದಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳ ರಾಜಕೀಯದಲ್ಲಿ ಸಕ್ರಿಯವಾಗಿ, ನಂತರ ಕಾಂಗ್ರೆಸ್ ಸೇರಿದ ಅವರು ಒಂಬತ್ತು ಬಾರಿ ಶಾಸಕರು, ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ಒಂದು ಬಾರಿ ಕೇಂದ್ರ ಸಚಿವರಾಗಿ, ಇದೀಗ ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌‌ನ ಅತ್ಯುನ್ನತ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...