Homeಮುಖಪುಟರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಭಾರಿ ಬಹುಮತದಿಂದ ಆಯ್ಕೆ

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಭಾರಿ ಬಹುಮತದಿಂದ ಆಯ್ಕೆ

- Advertisement -
- Advertisement -

ಬಹುನಿರೀಕ್ಷಿತ ಕಾಂಗ್ರೆಸ್‌‌ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ನಿರೀಕ್ಷೆಯಂತೆ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ‌ ಅವರು ಭಾರಿ ಬಹುಮತಗಳಿಂದ ಬುಧವಾರ ಆಯ್ಕೆಯಾಗಿದ್ದಾರೆ. ಈ ಮೂಲಕ ಸುಮಾರು 2 ದಶಕಗಳ ನಂತರ ಕಾಂಗ್ರೆಸ್‌ನ ಅಧ್ಯಕ್ಷೀಯ ಸ್ಥಾನವನ್ನು ಅಲಂಕರಿಸಿದ ಮೊದಲ ಗಾಂಧಿಯೇತರ ನಾಯಕರಾಗಿ ಹೊರಹೊಮ್ಮಿದ್ದಾರೆ.

ಪಕ್ಷದ ಹೊಸ ಅಧ್ಯಕ್ಷರನ್ನು ಖರ್ಗೆ ಅವರ ಪ್ರತಿಸ್ಪರ್ಧಿ ಶಶಿ ತರೂರ್‌ ಅಭಿನಂದಿಸಿದ್ದು, “ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿರುವುದು ದೊಡ್ಡ ಗೌರವ ಮತ್ತು ದೊಡ್ಡ ಜವಾಬ್ದಾರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಆ ಕಾರ್ಯದಲ್ಲಿ ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ 7897 ಮತಗಳನ್ನು ಪಡದಿದ್ದು, ಅವರ ಪ್ರತಿಸ್ಪರ್ಧಿ ಶಶಿ ತರೂರ್‌ 1072 ಮತಗಳನ್ನು ಪಡೆದಿದ್ದಾರೆ. 416 ಮತಗಳು ತಿರಸ್ಕೃತಗೊಂಡಿದ್ದು, ಒಟ್ಟು 9385 ಮತಗಳು ಚಲಾವಣೆಯಾಗಿದ್ದವು.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ – ಅಪರೂಪದ ಶ್ರೀಸಾಮಾನ್ಯ

“ಸಾವಿರಕ್ಕೂ ಹೆಚ್ಚು ಸಹೋದ್ಯೋಗಿಗಳ ಬೆಂಬಲವನ್ನು ಪಡೆದಿರುವುದು ಮತ್ತು ಭಾರತದಾದ್ಯಂತ ಕಾಂಗ್ರೆಸ್‌ನ ಅನೇಕ ಹಿತೈಷಿಗಳ ಭರವಸೆ ಮತ್ತು ಆಕಾಂಕ್ಷೆಗಳನ್ನು ಹೊತ್ತುಕೊಂಡಿದ್ದು ಒಂದು ಸುಯೋಗವಾಗಿತ್ತು” ಎಂದು ಶಶಿ ತರೂರ್‌ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣೆ ಮತ್ತು ಮಲ್ಲಿಕಾರ್ಜುನ ಖರ್ಗೆ

20 ವರ್ಷಗಳ ನಂತರ ನಡೆದ ಪಕ್ಷದ ಮೊದಲ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಲ್ಲಿಕಾರ್ಜುನ ಖರ್ಗೆ ಅವರು ಹೊಸ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ. ದೀಪಾವಳಿ ನಂತರ ಪಕ್ಷದ ಅಧ್ಯಕ್ಷರಾಗಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆ ಫಲಿತಾಂಶ ಪ್ರಕಟವಾಗುವ ಮುನ್ನವೇ ರಾಹುಲ್ ಗಾಂಧಿ ರಾಜ್ಯದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೆ ಅಧ್ಯಕ್ಷರಾಗಲಿದ್ದಾರೆ ಎಂದು ಸೂಚಿಸಿದ್ದರು. ಪತ್ರಿಕಾಗೋಷ್ಠಿಯಲ್ಲಿ ಹೊಸ ಅಧ್ಯಕ್ಷರಿಗೆ ವರದಿ ನೀಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,“ನನ್ನ ಪಾತ್ರ ಏನು ಎಂಬುದನ್ನು ಹೊಸ ಅಧ್ಯಕ್ಷರು ನಿರ್ಧರಿಸುತ್ತಾರೆ, ಈ ಬಗ್ಗೆ ಖರ್ಗೆ ಮತ್ತು ಸೋನಿಯಾ ಅವರನ್ನು ಕೇಳಿ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಫಲಿತಾಂಶ ಘೋಷಣೆಗೂ ಮುನ್ನ ಖರ್ಗೆ ಅವರ ಪ್ರತಿಸ್ಪರ್ಧಿ ಶಶಿ ತರೂರ್‌‌ ಅವರು ಚುನಾವಣಾ ಪ್ರಕ್ರಿಯೆಯಲ್ಲಿ “ಅತ್ಯಂತ ಗಂಭೀರ ಅಕ್ರಮಗಳು” ನಡೆದಿದೆ ಎಂದು ಆರೋಪಿಸಿದ್ದರು. ತರೂರ್ ಅವರ ತಂಡವನ್ನು ಪ್ರತಿನಿಧಿಸುವ ಸಲ್ಮಾನ್ ಸೋಜ್ ಅವರು ನಂತರ “ನ್ಯಾಯಯುತವಾದ ತನಿಖೆಯ ಬಗ್ಗೆ ಭರವಸೆ ನೀಡಿದ್ದಾರೆ” ಎಂದು ಹೇಳಿ, ಎಣಿಕೆ ಮುಂದುವರಿಸಲು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಖರ್ಗೆ ಮತ್ತು ಥರೂರು: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ದೇಸೀ ಹಾಗೂ ಮಾರ್ಗ

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಆರಂಭವಾದ ಮತ ಎಣಿಕೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮುಕ್ತಾಯವಾಯಿತು.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪಕ್ಷದ ಸತತ ಎರಡು ಸೋಲಿನ ಜವಾಬ್ದಾರಿಯನ್ನು ಹೊತ್ತುಕೊಂಡು ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ಸೋನಿಯಾ ಗಾಂಧಿ ಅವರು ಪಕ್ಷವನ್ನು ತಾತ್ಕಾಲಿಕವಾಗಿ ಮುನ್ನಡೆಸಲು ಒಪ್ಪಿಕೊಂಡ ಮೂರು ವರ್ಷಗಳ ನಂತರ ಈ ಚುನಾವಣೆ ನಡೆದಿದೆ.

1942 ಜುಲೈ  21 ರಂದು ಕರ್ನಾಟಕ-ಮಹಾರಾಷ್ಟ್ರ ಗಡಿಯ ಬೀದರ್ ಜಿಲ್ಲೆಯ ವರವಟ್ಟಿ ಎಂಬ ಕುಗ್ರಾಮದಲ್ಲಿ ಅಸ್ಪೃಶ್ಯ ಮಹಾರ್ ಕುಟುಂಬದಲ್ಲಿ ಜನಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಹುಟ್ಟುತ್ತಲೇ ಗಲಭೆಯೊಂದರಲ್ಲಿ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ಕೂಲಿ ಮಾಡಿ ಕಾಲೇಜು ಮುಗಿಸಿದ ಖರ್ಗೆ ಅವರು ಕಾರ್ಖಾನೆಯಲ್ಲಿ ಕಾರ್ಮಿಕರ ಸಂಘಟನೆ ಕಟ್ಟಿದ ಸಮಾಜಿಕ ರಂಗಕ್ಕೆ ಪ್ರವೇಶ ಮಾಡಿದ್ದರು.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

RPI ಪಕ್ಷದಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳ ರಾಜಕೀಯದಲ್ಲಿ ಸಕ್ರಿಯವಾಗಿ, ನಂತರ ಕಾಂಗ್ರೆಸ್ ಸೇರಿದ ಅವರು ಒಂಬತ್ತು ಬಾರಿ ಶಾಸಕರು, ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ಒಂದು ಬಾರಿ ಕೇಂದ್ರ ಸಚಿವರಾಗಿ, ಇದೀಗ ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌‌ನ ಅತ್ಯುನ್ನತ ನಾಯಕರಾಗಿ ಆಯ್ಕೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....