Homeಕರ್ನಾಟಕ8ನೇ ತರಗತಿಯಲ್ಲಿ ಇದ್ದಾಗಿಂದ ನಾನು ಲೀಡರ್ರೇ ಆಗಿದ್ದೆ: ಮಲ್ಲಿಕಾರ್ಜುನ ಖರ್ಗೆಯವರ ಹಳೆಯ ಸಂದರ್ಶನ

8ನೇ ತರಗತಿಯಲ್ಲಿ ಇದ್ದಾಗಿಂದ ನಾನು ಲೀಡರ್ರೇ ಆಗಿದ್ದೆ: ಮಲ್ಲಿಕಾರ್ಜುನ ಖರ್ಗೆಯವರ ಹಳೆಯ ಸಂದರ್ಶನ

ಬ್ಯಾಂಕ್ ರಾಷ್ಟ್ರೀಕರಣ, ಜೀತ ವಿಮುಕ್ತಿ, ಭೂಸುಧಾರಣೆ ಇವೆಲ್ಲಾ ನಡೀತಿದ್ದ ಕಾಲ ಅದು. ಶೋಷಿತ ಸಮುದಾಯಗಳಿಗೆ ಹಲವಾರು ಪ್ರೋಗ್ರಾಮ್ಸ್ ಇದ್ವು. ಹಾಗಾಗಿ ನಾನು ಕಾಂಗ್ರೆಸ್ ಸೇರಿದೆ. ಸೇರೋವಾಗ್ಲೇ ನಾನು ಲೀಡ್ರು.

- Advertisement -
- Advertisement -

ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಗೆ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ 2018ರ ಸೆಪ್ಟಂಬರ್ 04ರಂದು ನ್ಯಾಯಪಥ -ನಾನು ಗೌರಿ ಪತ್ರಿಕೆಯ ಮೊದಲ ಸಂಚಿಕೆಗಾಗಿ ಮಲ್ಲಿಕಾರ್ಜುನ ಖರ್ಗೆಯವರೊಂದಿಗೆ ಡಾ.ವಾಸು ಎಚ್.ವಿರವರು ಸಂದರ್ಶನ ನಡೆಸಿದ್ದರು. ನೆಲದ ಧೂಳಿನಿಂದ ಎದ್ದು ಮೇಲಕ್ಕೆ ಏರಿದ ಈ ನಾಯಕ ಎದೆತೆರೆದು ಆಡಿದ ಮಾತುಕತೆಯಲ್ಲಿ ಭಾರತದ ರಾಜಕಾರಣದಲ್ಲಿ ಅಡಗಿರುವ ಅನೇಕ ಸಾಮಾಜಿಕ ಸೂಕ್ಷ್ಮಗಳು ರಾಜಕೀಯ ಸತ್ಯಗಳು ಹಾದುಹೋಗಿದವು. ಅದರ ಆಯ್ಧ ಭಾಗವನ್ನು ಇಲ್ಲಿ ನೀಡುತ್ತಿದ್ದೇವೆ.

ಪತ್ರಿಕೆ: ದೇಶದ ಸಂವಿಧಾನವೇ ಅಪಾಯದಲ್ಲಿದೆ ಎಂಬ ಮಾತು ಕೇಳಿಬರುತ್ತಿದೆ. ನಿಮ್ಮ ಅನಿಸಿಕೆ ಏನು ಸಾರ್?
ಮಲ್ಲಿಕಾರ್ಜುನ ಖರ್ಗೆ: ನೀವು ಟಿವಿ ನೋಡೋದಿಲ್ಲವೇನು? ಈ ಮಾತನ್ನ ನಾನು ಪಾರ್ಲಿಮೆಂಟಲ್ಲೇ ಹೇಳಿದ್ದೇನೆ. ‘ಸಂವಿಧಾನ ಇಲ್ಲದಿದ್ರೆ ಮೋದಿ ಸಾಹೇಬ್ರೇ, ನೀವು ಸಹಾ ಪ್ರಧಾನಿ ಆಗ್ತಿದ್ದಿಲ್ಲ; ನನ್ನಂತಹ ಬಡ ಕುಟುಂಬದ ಕಾರ್ಮಿಕನ ಮಗ ಅಪೊಸಿಷನ್ ಲೀಡರ್ ಆಗೋಕಾಗ್ತಿರ್ಲಿಲ್ಲ’ ಅಂತ. ಆದ್ರೆ ಅವ್ರು ಇದನ್ನ ಡಿಸ್ಟ್ರಾಯ್ ಮಾಡೋಕೆ ನಿಂತಿದ್ದಾರೆ. ಆದ್ರೆ ನಾವು ಇಂಥವಕ್ಕೆ ಒಂದೇ ಸಾರಿ ಕ್ವಿಕ್ ಆಗಿ ರಿಯಾಕ್ಟ್ ಮಾಡಲ್ಲ. ಕೇರ್‌ಫುಲಿ ರಿಯಾಕ್ಟ್ ಮಾಡ್ತೀವಿ.

ಸಂವಿಧಾನ ಹೋದ್ರೆ ದೇಶಾನೇ ಉಳಿಯಲ್ಲ. ಬಹಳ ಜನ ಈ ರಿಸರ್ವೇಶನ್‍ಗಾಗಿ ನಮ್ಮಂಥವರು ಸಂವಿಧಾನದ ಪರ ನಿಂತಿದ್ದೀವಿ ಅಂದ್ಕೋತಾರೆ. ಸಂವಿಧಾನದಲ್ಲಿ ರಿಸರ್ವೇಷನ್‍ದು ಎರಡು ಕ್ಲಾಸ್ ಇರಬಹುದು ಅಷ್ಟೇ. ಅದೂ ಸಹಾ ಸಂವಿಧಾನದ ಜೊತೆಗೆ ಬಂದಿದ್ದಲ್ಲ. ಪೂನಾ ಪ್ಯಾಕ್ಟ್ ನಂತರ ಸ್ವಾತಂತ್ರ್ಯ ಪೂರ್ವದಲ್ಲೇ ಬಂತು. ಬಾಂಬೆ ಪ್ರಾವಿನ್ಸ್ ಒಳಗೆ ಚುನಾವಣೇಲೇ ರಿಸರ್ವೇಶನ್ ಇತ್ತು.

ಸಂವಿಧಾನ ದೇಶದ ಎಲ್ಲರಿಗೂ ಬೆಳವಣಿಗೆ ತರುವ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನ, ಮೂಲಭೂತ ಹಕ್ಕುಗಳನ್ನ ಕೊಡ್ತದೆ. ಆಧುನಿಕ ಪ್ರಪಂಚದಲ್ಲಿ ಮನುಷ್ಯರ ಬೆಳವಣಿಗೆಗೆ ಬೇಕಾಗುವ ನೀತಿ ಅದು. ವೀಕರ್ ಇರುವವರಿಗೆ ಸ್ವಲ್ಪ ಅನುಕೂಲಗಳನ್ನ ಮಾಡಿಕೊಡಬೇಕು ಅಂತ ಅದು ಹೇಳ್ತದೆ ಅಷ್ಟೇ. ಇದು ಎಲ್ಲರನ್ನೂ ಉಳಿಸುವ ನೀತಿ ಸಂಹಿತೆ ಅಂತ ಅರ್ಥ ಮಾಡ್ಕೋಬೇಕಿದೆ.

ವಾಜಪೇಯಿ ಇದ್ದಾಗ ಸಹಾ ಇಂಥದ್ದು ನಡೆಯಲಿಲ್ಲ. ನಾನು ಭಾಳ ಟೀಕಿಸಿದ ಪಂಡಿತ್ ನೆಹರೂ ಅವರು, ನಂತರ ಭೋಜನಕೂಟದಲ್ಲಿ ಸಿಕ್ಕಾಗ ನನ್ನನ್ನು ಮೆಚ್ಚಿಕೊಂಡ್ರು ಅಂತ ಭಾಷಣ ಮಾಡಿದ್ದನ್ನ ನೀವೆಲ್ಲಾ ನೋಡಿದ್ದೀರಿ. ಆದ್ರೆ ಇವತ್ತು ಇಲ್ಲಿ ಉಲ್ಟಾ ಆಗ್ತಿದೆ. ಅಟಾನಮಸ್ ಇನ್ಸ್‍ಟಿಟ್ಯೂಷನ್ಸ್‍ಅನ್ನೇ ಉಳಿಸ್ತಿಲ್ಲ. ಹೀಗಾಗಿ ನಾವು ಮೋದಿಯನ್ನ ಸರ್ವಾಧಿಕಾರಿ ಅಂತೀವಿ. ಆದ್ರೆ, ನಾನು ಶಿಸ್ತಿನ ಆಡಳಿತ ಕೊಡುತ್ತಿರೋದಕ್ಕೆ ಸರ್ವಾಧಿಕಾರಿ ಅಂತಿದೀರಿ ಅಂತ ಅವ್ರು ಹೇಳ್ತಿದಾರೆ.

ಪತ್ರಿಕೆ: ಹೈದ್ರಾಬಾದ್ ಕರ್ನಾಟಕಕ್ಕೆ 371 ಜೆ ಸಂವಿಧಾನ ತಿದ್ದುಪಡಿ ಮೂಲಕ ವಿಶೇಷ ಸ್ಥಾನಮಾನ ಸಿಗುವುದ್ರಲ್ಲಿ ನಿಮ್ಮ ಪಾತ್ರವೂ ಮಹತ್ವದ್ದಾಗಿತ್ತು. ಆದ್ರೆ, ಈಗ ಅದರ ಜಾರಿ ವಿಚಾರದಲ್ಲಿ ನೀವು ಅಷ್ಟು ಗಮನ ಕೊಡುತ್ತಿಲ್ಲ ಎಂಬ ಆರೋಪವಿದೆಯಲ್ಲಾ ಸಾರ್?

ಖರ್ಗೆ: ಒಂದ್ವಿಚಾರ ಎಲ್ರೂ ಮರೀತಾರೆ. ಇದು ಸಂವಿಧಾನ ತಿದ್ದುಪಡಿ. ಇದನ್ನು ಮಾಡ್ಬೇಕಂದ್ರೆ ಸಂಸತ್ತಿನಲ್ಲಿ ನಮ್ಗೆ ಮೂರನೇ ಎರಡು ಭಾಗ ಮೆಜಾರಿಟಿ ಬೇಕು. ನಮ್ಮ ಪಾರ್ಟಿಗೆ ಮೆಜಾರಿಟೀನೇ ಇರ್ಲಿಲ್ಲ. ಆದ್ರ ನನಗೆ ಹೆಮ್ಮೆ ಅನ್ನಿಸ್ತದೆ. ನಾನು ಮೊದ್ಲು ಪಾರ್ಟಿ ಒಳ್ಗೆ ಮನವರಿಕೆ ಮಾಡಿಕೊಟ್ಟೆ. ಸೋನಿಯಾಗಾಂಧಿಯವರಿಗೆ ಇದರ ಕ್ರೆಡಿಟ್ ಹೋಗ್ಬೇಕು. ನಂತರ ಅವರು ಇತರ ಪಾರ್ಟಿಗಳನ್ನೂ convince ಮಾಡಿದ್ರು. ಸರ್ವಾನುಮತದಿಂದ ಈ ತಿದ್ದುಪಡಿ ಆಯ್ತು. ಪ್ರೆಸಿಡೆಂಟ್ ಸಹಿ ಆಯ್ತು. ನಂತರ ಇಲ್ಲಿ ಉಪಸಮಿತಿ ಮಾಡಿದ್ರು, ನಿಯಮಗಳನ್ನ ಮಾಡಿದ್ರು. ನಂತರ ಗರ್ವನರ್ ಹತ್ತಿರ ಹೋಯಿತು. ನಂತರ 3 ವರ್ಷದಿಂದ ಸಾಕಷ್ಟು ಕೆಲ್ಸಾ ನಡೆಯುತ್ತಿದೆ.

ಆದ್ರೆ, ಯಸ್, ಇನ್ನೂ ಚೆನ್ನಾಗಿ ಕೆಲ್ಸಾ ಆಗ್ಬೇಕು. ನಮ್ಮ ಅಧಿಕಾರಿಗಳೂ ಹೇಗಂದ್ರೆ ಬೀದರ್, ಗುಲ್ಬರ್ಗಾ ಅನ್ನೋದು ಅಂಡಮಾನ್ ನಿಕೋಬಾರ್ ಇದ್ದಂತೆ. ಅವ್ರು ಹೋಗ್ಲಿ ನಿಮ್ಮ ಪತ್ರಕರ್ತರೇ ಆ ಭಾಗಕ್ಕೆ ವರ್ಗಾವಣೆ ಅಂದ್ರೆ ಇಷ್ಟಪಡಲ್ಲ; ಬೇಕಂದ್ರ ಕೇಳಿ ನೋಡಿ ನಿಮ್ಮ ಕೊಲೀಗ್ಸ್‌ನ. ಈ ಮೆಂಟಾಲಿಟಿಯಲ್ಲಿ ಸಮಸ್ಯೆ ಇದೆ.

ಜೊತೆಗೆ ಕೆಲವು ಬೇರೆ ಸಮಸ್ಯೆಗಳೂ ಇವೆ. ಕಾರ್ಯದರ್ಶಿ ಮಟ್ಟದ ಒಬ್ಬ ಅಧಿಕಾರಿಗೆ ತನ್ನ ಇಲಾಖೆಯಲ್ಲಿ 10 ಕೋಟಿ ತನಕ ಖರ್ಚು ಮಾಡುವ ಅಧಿಕಾರ ಇದೆ. ಅದೇ ಮಟ್ಟದ ಹೈದ್ರಾಬಾದ್ ಕರ್ನಾಟಕ ಬೋರ್ಡ್‍ನ ಮುಖ್ಯಸ್ಥರಿಗೆ ಬರೀ 2 ಕೋಟಿ. ಸರ್ಕಾರದಿಂದ ಮಂಜೂರಾಗ್ತಿರೋ ಹಣ, ಅದ್ರಲ್ಲಿ ನಂತರ ಬಿಡುಗಡೆಯಾಗೋ ಹಣ ಇದ್ರಲ್ಲೂ ಸಮಸ್ಯೆ ಇದೆ. ಮಂತ್ರಿಗಳ ನೇಮಕ ಆದ ತಕ್ಷಣ ಹೈ.ಕ ಬೋರ್ಡಿಗೂ ಅಧ್ಯಕ್ಷರ ನೇಮಕ ಆಗಬೇಕು. ಸ್ಕೀಮುಗಳಿಗೆ ಕಾನೂನಿನ ಚೌಕಟ್ಟಿನೊಳಗೇ ಫ್ಲೆಕ್ಸಿಬಿಲಿಟಿ ತೋರಿಸ್ಬೇಕು. ಇವೆಲ್ಲದರ ಬಗ್ಗೆ ನಾನು 3 ಸಾರಿ ಪತ್ರ ಬರೆದಿದ್ದೀನಿ. ಅವನ್ನೆಲ್ಲಾ ನಾನು ಪತ್ರಿಕೆಗಳಿಗೆ ಬಿಡುಗಡೆ ಮಾಡಲ್ಲ.

ನೇಮಕಾತಿಯಲ್ಲಿ, ಆರ್ಥಿಕ ಅನುದಾನದಲ್ಲಿ, ಶಿಕ್ಷಣದಲ್ಲಿ ಸಾಕಷ್ಟು ಅನುಕೂಲ ಆಗ್ತಿದೆ. ಹಲವು ಅಧಿಕಾರಿಗಳು ಈ ಭಾಗದಿಂದ ಆಯ್ಕೆಯಾಗ್ತಿದ್ದಾರೆ. ನೀರಾವರಿ ಇನ್ನೂ ಚೆನ್ನಾಗಿ ಆಗ್ಬೇಕು. ಕೈಗಾರಿಕೆಗಳು ಬರಬೇಕು. ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಉದ್ಯೋಗ ಕೊಡಬೇಕು. ಅದಿನ್ನೂ ಸಾಲದು. ಹಂತ ಹಂತವಾಗಿ ಆಗುವಂತೆ ನಾವೆಲ್ಲರೂ ಪ್ರಯತ್ನ ಪಡಬೇಕು.

ಒಂದ್ ಗಮನಿಸ್ಬೇಕು. ಅಡ್ವಾಣಿಯವರು ಯಾವುದನ್ನು ರಿಜೆಕ್ಟ್ ಮಾಡಿ ಆಗಲ್ಲ ಅಂತ ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಹೇಳಿದ್ರೋ, ಅದನ್ನ ನಮ್ ಸರ್ಕಾರ ಇದ್ದಾಗ ಮಾಡಿದ್ದೇವೆ. ಈ ಮೂರು ವರ್ಷದಲ್ಲೇ ಭಾಳ ಆಗಿದೆ ಅಂತ ಅಂದ್ಕೋಬಾರ್ದು.

ಪತ್ರಿಕೆ: ನೀವು ಗುರುಮಿಠಕಲ್‍ನಿಂದ 8 ಸಾರಿ ಗೆದ್ದಿದ್ರಿ. ಒಳ್ಳೇ ಕೆಲ್ಸಾ ಸಹಾ ಮಾಡಿದ್ದಿರಂತ ಹೆಸ್ರು ಇತ್ತು. ಆದ್ರೆ, ಅದು ಮೀಸಲು ಕ್ಷೇತ್ರವಾಗುಳಿಯದೇ ಚಿತ್ತಾಪುರ ಮೀಸಲು ಕ್ಷೇತ್ರವಾದಾಗ ನೀವು ಕ್ಷೇತ್ರ ಬದಲಾಯಿಸಿದ್ರಿ. ಯಾಕೆ? ಇದು ನಿಮ್ಮ ವ್ಯಕ್ತಿಗತ ಆಯ್ಕೆಯೋ, ಈ ದೇಶದ ಸಾಮಾಜಿಕ ರಾಜಕೀಯ ಪರಿಸ್ಥಿತಿಯೇ ಹಾಗಿದೆಯೋ?

ಖರ್ಗೆ: ನೋಡಿ, ನಾನು ಕ್ಷೇತ್ರ ಬದಲಾವಣೆ ಮಾಡಿದಾಗ ಗುರುಮಿಠಕಲ್ ಜನರೂ ಬಂದು ತಮ್ಮಲ್ಲಿಗೇ ಬರಬೇಕೆಂದು ಒತ್ತಾಯಿಸಿದರು. ನಾಮಿನೇಷನ್ ಹಾಕಕ್ಕೆ ಬಿಡದೇ ಹಠ ಮಾಡಿದ್ರು. ಆದ್ರೆ, ನಾನು ಬೇರೆ ತೀರ್ಮಾನ ತಗೊಂಡೆ. ನನಗೆ ಓಟು ಹಾಕಿದ ಜನಕ್ಕೆ ಅಲ್ಲಿ ಎಂ.ಎಲ್.ಎ ಆಗೋಕೆ ಅವಕಾಶ ಇರಲಿಲ್ಲ. ಈಗಲೂ ನಾನು ಅಲ್ಲೇ ಸ್ಪರ್ಧಿಸಿದ್ರೆ ಕೆಲವರಿಗೆ ಅಸಮಾಧಾನ ಇರುತ್ತದೆ. ಅದು ಹೊರಗೆ ಬರದಿದ್ರೂ ಬೂದಿ ಮುಚ್ಚಿದ ಕೆಂಡದ ರೀತಿ ಇರುತ್ತದೆ. ಏನಪ್ಪಾ ಇಷ್ಟು ವರ್ಷ ಇವ್ರಿಗೇ ಕೊಟ್ಟೀವಿ. ಈಗಲೂ ನಮಗೆ ಅವಕಾಶವಿಲ್ಲ ಅಂತ ಬರುತ್ತೆ. ಮೇಲಾಗಿ ಆ ಸಾರಿ ಕಲಬುರಗಿ ಜಿಲ್ಲೇಲಿ 3 ಕ್ಷೇತ್ರಗಳು ರಿಸರ್ವ್ ಆಗಿಬಿಟ್ಟವು. ಅದರ ಮೇಲೆ ಇನ್ನೂ ಒಂದು ಕ್ಷೇತ್ರದಲ್ಲಿ ನಾನು ಸ್ಪರ್ಧಿಸ್ತೇನೆ ಎಂದ್ರೆ ಸಮಸ್ಯೆ ಆಗ್ತಿತ್ತು.

ಇಷ್ಟರ ಮೇಲೂ ನಿಮ್ಗೆ ಹೇಳ್ಬೇಕು. ಮೊದಲ ಸಾರಿ ನಾನು ಅಲ್ಲಿಂದ ಗೆದ್ದಾಗ 9,000 ಮಾರ್ಜಿನ್‍ನಲ್ಲಿ ಗೆದ್ದಿದ್ದೆ. 8ನೇ ಸಾರಿ ಗೆದ್ದಾಗ 49,000 ಮಾರ್ಜಿನ್. ಪ್ರತೀ ಸಾರಿ (ಒಂದ್ಸಾರಿ ಬಿಟ್ಟು) ಮಾರ್ಜಿನ್ ಜಾಸ್ತಿಯೇ ಆಗ್ತಿತ್ತು. ಹಾಗಿದ್ರೂ ನಾವು ಪರಿಸ್ಥಿತೀನೂ ನೋಡಬೇಕು. ಕೆ.ಎಚ್.ರಂಗನಾಥ್ ಅವರು ಜನರಲ್ ಕ್ಷೇತ್ರದಲ್ಲೇ ಮುಂದುವರೆದ್ರು; ರಮೇಶ್ ಜಾರಕಿಹೊಳೀ ಹಂಗೇ ಮುಂದುವರೆದ್ರು. ಇದನ್ನೆಲ್ಲಾ ನೋಡ್ಬೇಕು. ಇಲ್ಲಾಂದ್ರೆ ಟಿಕೆಟ್ ಕೊಟ್ಟು ಅವರು ಸೋತು ಹತಾಶರಾಗುವುದಕ್ಕಿಂತ ಬದಲಾವಣೆ ಮಾಡೋದು ಒಳ್ಳೇದು.

ಪತ್ರಿಕೆ: ನೀವು ಸುದೀರ್ಘಕಾಲ ರಾಜ್ಯದಲ್ಲೂ ಸಚಿವರಾಗಿದ್ರಿ. ಲೋಕಸಭಾ ಸದಸ್ಯರಾದ ನಂತರ ಎರಡು ಮುಖ್ಯ ಖಾತೆಗಳನ್ನು ನಿಭಾಯಿಸಿದ್ರಿ. ಈಗ ವಿರೋಧ ಪಕ್ಷದ ನಾಯಕರಾಗಿದ್ದೀರಾ. ಮುಖ್ಯಮಂತ್ರಿ ಸ್ಥಾನಕ್ಕಿಂತ ಹೆಚ್ಚಿನದ್ದನ್ನೇ ಪಡೆದುಕೊಂಡಿದ್ದೀರಿ ಅನ್ನಿಸುತ್ತಾ?

ಖರ್ಗೆ: ನಾನು ಕಾಂಗ್ರೆಸ್‍ಗೆ ಸೇರ್ದಾಗ ನನಗೆ ಏನು ಸಿಗುತ್ತೆ ಅಂತ ಆಲೋಚ್ನೆ ಮಾಡಿ ಸೇರ್ಲಿಲ್ಲ. 8ನೇ ತರಗತಿಯಲ್ಲಿ ಇದ್ದಾಗಿಂದ ನಾನು ಲೀಡರ್ರೇ ಆಗಿದ್ದೆ. ಕಾಲೇಜು ಸ್ಟೂಡೆಂಟ್ ಯೂನಿಯನ್ ಪ್ರೆಸಿಡೆಂಟ್ ಆಗಿ ಗೆದ್ದು ಬಂದಿದ್ದೆ. ನಂತ್ರ ಅಲ್ಲಿ ಕಾರ್ಮಿಕರ ಸಂಘಟನೆ ಮಾಡ್ತಿದ್ದೆ. ಸಾಮಾನ್ಯ ಜನರ ಪರವಾಗಿ ಕೆಲ್ಸ ಮಾಡ್ತಿದ್ದಾಗ ಧಮ್ರಾಜ್ ಅಫ್ಜಲ್‍ಪುರ್‍ಕರ್ ಅನ್ನೋ ಕಾಂಗ್ರೆಸ್ ಲೀಡ್ರು, ‘ನೀನು ಮಾಡ್ಬೇಕೂಂತಿರೋದ್ನೆಲ್ಲಾ ನಮ್ ಪಾರ್ಟೀನೇ ಮಾಡ್ಲಿಕ್ಕತ್ತದಾ. ನೀನು ಕಾಂಗ್ರೆಸ್ ಸೇರು’ ಅಂತ ಹೇಳಿದ್ರು. ಬ್ಯಾಂಕ್ ರಾಷ್ಟ್ರೀಕರಣ, ಜೀತ ವಿಮುಕ್ತಿ, ಭೂಸುಧಾರಣೆ ಇವೆಲ್ಲಾ ನಡೀತಿದ್ದ ಕಾಲ ಅದು. ಶೋಷಿತ ಸಮುದಾಯಗಳಿಗೆ ಹಲವಾರು ಪ್ರೋಗ್ರಾಮ್ಸ್ ಇದ್ವು. ಹಾಗಾಗಿ ನಾನು ಕಾಂಗ್ರೆಸ್ ಸೇರಿದೆ. ಸೇರೋವಾಗ್ಲೇ ನಾನು ಲೀಡ್ರು. ಹಾಗಾಗಿ ಅಲ್ಲಿಂದ ಒಂದ್ ಸಾರೀನೂ ಸೋಲದೆ ಗೆದ್ದು ಬಂದೆ, ಇಲ್ಲೀತನಕ ಬಂದಿದ್ದೇನೆ. ಹೈಕಮ್ಯಾಂಡ್ ಕೊಟ್ಟಿರುವ ಜವಾಬ್ದಾರಿ ಇವು.

ಪತ್ರಿಕೆ: ಶೋಷಿತ ಸಮುದಾಯಗಳಿಗೆ ಸಿದ್ದರಾಮಯ್ಯನವರ ಸರ್ಕಾರದಲ್ಲೂ ಹಲವಾರು ಪ್ರೋಗ್ರಾಮ್ಸ್ ಇದ್ವು. ಪೂರಕವಾದ ವಾತಾವರಣಾನೇ ಇತ್ತು. ಆದ್ರೂ ಕಾಂಗ್ರೆಸ್ ಯಾಕೆ ಸೋಲ್ತು ಸಾರ್?

ಖರ್ಗೆ: ಭಾಳಾ ಜನಕ್ ಗೊತ್ತಿಲ್ಲ. ಕಾಂಗ್ರೆಸ್ ಒಳಗೇ ‘ಕಾಂಗ್ರೆಸ್ ಫೋರಂ ಫಾರ್ ಸೋಷಿಯಲಿಸ್ಟಿಕ್ ಆಕ್ಷನ್’ ಅಂತ ಇತ್ತು. ಅವ್ರು ನೆಹ್ರೂ ಪಾಲಿಸೀನೇ ಜಾರಿ ಮಾಡೋಕೆ ಅವ್ರ ವಿರುದ್ಧವೇ ಹೋರಾಟ ಮಾಡ್ತಿದ್ರು. ಹೊರಗಿದ್ದು ಬದಲಾವಣೆ ಮಾಡೋಕಾಗಲ್ಲ ಅನ್ಸಿದ್ರೆ ಒಳಗೇ ಬಂದು ನಿಧಾನಕ್ಕೆ ನಿಮ್ಮ ಸ್ನೇಹಿತರಿಗೆ ಮನವರಿಕೆ ಮಾಡಿಕೊಟ್ಟು ಬದಲಾಯಿಸ್‍ಬಹುದು. ಆ ಥರಾ ನಡೀತಿತ್ತು.

ಸಮಾಜದಲ್ಲೂ ಹಿಂದೆ ಓಬಿಸಿ, ಎಸ್‍ಸಿ ಎಸ್‍ಟಿ ಮತ್ತೆ ಎಕನಾಮಿಕಲಿ ವೀಕ್ ಇದ್ದ ಎಲ್ಲಾ ಜಾತಿ ಜನ ತಾವೆಲ್ಲಾ ಬಡವ್ರು ಒಂದು ಕ್ಲಾಸ್ ಅಂತ ಭಾವಿಸ್ತಿದ್ರು. ಆದ್ರೆ ಈಗ ಹಾಗಿಲ್ಲ. ಕ್ಲಾಸ್ ಅಂತ ಇಲ್ಲ. ಜಾತಿ ಭಾವ್ನೇನೇ ಹೆಚ್ಚಾಗಿದೆ. ದುರಂತ ಅಂದ್ರೆ ಲೀಡರ್ಸ್ ಸಹಾ ಇದನ್ನೇ ಮಾಡ್ತಿದ್ದಾರೆ. ಅದರ ಲಾಭವನ್ನು ಪಟ್ಟಭದ್ರ ಹಿತಾಸಕ್ತಿಗಳು ಪಡೆದುಕೊಳ್ತಾರೆ. ಸಮಾಜವನ್ನ ಒಡೆಯೋ ಜನರ ಶಕ್ತಿ ಹೆಚ್ಚಾಗ್ತಿದೆ. ಇದರಿಂದ ನಮಗೇ ತೊಂದರೆ ಅಂತ ಅರ್ಥ ಮಾಡಿಕೊಳ್ಳೋವ್ರು ಕಡಿಮೆ. ಹೀಗಾಗಿ ಪರಿಸ್ಥಿತಿ ಸೂಕ್ಷ್ಮಾ ಆಗಿದೆ. ಇದನ್ನ ಬದ್ಲಾಯಿಸ್ಲಿಕ್ಕೆ ಕೆಲ್ಸಾ ಮಾಡ್ಬೇಕು ಅಷ್ಟೇ.

ಪತ್ರಿಕೆ: ರಾಜಕಾರಣ ಬಿಟ್ಟರೆ ನಿಮ್ಮ ಹವ್ಯಾಸಗಳೇನು?

ಖರ್ಗೆ: ನಾನು ಹಿಂದೆ ಹಾಕಿ ಆಡ್ತಿದ್ದೆ. ಸ್ಟೂಡೆಂಟ್ ಆಗಿದ್ದಾಗ ಗುಲ್ಬರ್ಗಾ ಡಿವಿಜನ್ ಟೀಂಗೆ ಆಡಿದ್ದೆ. ಮೈಸೂರಿಗೆ ಹೋಗಿ 1963-64ರಲ್ಲಿ ಮೈಸೂರು ಡಿವಿಜನ್ ಮೇಲೆ ಗೆದ್ದಿದ್ವಿ. ಆಗ ಕೂರ್ಗ್ ತಂಡವೇ ಟಾಪ್. ಆದ್ರೆ, ಡಿವಿಜನಲ್ ಟೀಂ ಆಗಿ ನಾವು ಎರಡು ಸಾರಿ ಅವರ ಮೇಲೆ ಗೆದ್ವಿ. ಆ ಮೇಲೆ ಆಟ ಎಲ್ಲಾ ಆಡ್ಲಿಕ್ಕೆ ಆಗ್ಲಿಲ್ಲ.

ಓದ್ತೀನಿ. ಈಗಂತೂ ಭಾಳಾ ಓದ್‍ಬೇಕು. (ಅಲ್ಲೇ ಇದ್ದ ಅವರ ಪತ್ನಿ ರಾತ್ರಿ 2ರ ತನಕ ಓದ್ತಾರೆ ಅಂತ ಹೇಳಿದ್ರು. ಅವರನ್ನಾ ತೋರಿಸಿ) ನಮ್ ಮನೇವ್ರು ದಪ್ಪ ದಪ್ಪ ಪುಸ್ತಕ ಓದ್ತಾರೆ. ದುರ್ಗಾಸ್ತಮಾನ ಕಾದಂಬರಿ ಓದ್ತಾ ಇದ್ರು. ನನಗನ್ನಿಸೋದು ನಮ್ಮ್ ಜನರನ್ನು ಬದುಕಿಸ್ಬೇಕು ಅಂದ್ರೆ ನಾನು ಅಂಥಾ ಪುಸ್ತಕ ಓದಿ ಪ್ರಯೋಜ್ನ ಏನು? ಅದಕ್ಕೆ ಬೇಕಿರೋ ಪುಸ್ತಕಾ ತುಂಬಾ ಓದ್ತೀನಿ. ಅದ್ರಲ್ಲೂ ಸೈಂಟಿಫಿಕ್ ಥಿಂಕಿಂಗ್ ಇರೋ ಧಾರ್ಮಿಕ ಪುಸ್ತಕಗಳನ್ನ ಓದ್ತೀನಿ.

ಇದನ್ನೂ ಓದಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಪತ್ರಿಕೆ: ಸರ್, ಕಂಬಾಲಪಲ್ಲಿ ಘಟನೆ ನಡೆದಾಗ ನೀವೇ ಗೃಹ ಸಚಿವರು. ಆ ಕೇಸಿನಲ್ಲಿ ಯಾರಿಗೂ ಶಿಕ್ಷೆಯಾಗಲಿಲ್ಲ. ಇಂತಹ ಇನ್ನೂ ಹಲವಾರು ಹತ್ಯಾಕಾಂಡಗಳ ಕಥೆ ಹೀಗೇ ಆಗಿದೆ.

ಖರ್ಗೆ: ಹೌದು, ಮಹಿಳೆಯರ ಮೇಲಿನ ಅತ್ಯಾಚಾರದ ವಿಷಯದಲ್ಲಿ, ಬೇರೆ ಬೇರೆ ರೀತಿಯ ಗೂಂಡಾಗಿರಿ ನಡೆದಾಗಲೂ ಹೀಗೆಯೇ. ಕೂಡಲೇ ಕೆಲವು ಪ್ರತಿಭಟನೆಗಳು ಆಗ್ತವೆ. ಆ ನಂತರ ಕಾನೂನು ಪ್ರಕ್ರಿಯೆಯೂ ನಿಧಾನಕ್ಕೆ ದುರ್ಬಲಗೊಳ್ಳುತ್ತದೆ. ಸಮಾಜದ ಪ್ರತಿಕ್ರಿಯೆಯೂ ಇಲ್ಲವಾಗುತ್ತದೆ. ಹಾಗಾಗಿ ಯಾರು ಬಲಿಪಶುಗಳೋ ಅವರೇ ಸಾಕ್ಷಿ ಹೇಳಲ್ಲ. ಯಾಕಂದ್ರೆ ಅಷ್ಟೊತ್ತಿಗೆ ಭಾಳಾ ವರ್ಷ ಆಗಿರುತ್ತೆ. ಆಗಿದ್ದು ಆಗೋಯ್ತು, ಇರೋರು ಚೆನ್ನಾಗಿರಾಣ ಅಂತ ಹಳ್ಳೀಲಿ ಜನಾ ಹೇಳ್ತಿರ್ತಾರೆ. ಇದು ಬಹಳ ಕೆಟ್ಟದು. ಯಾಕಂದ್ರೆ ಇದರಿಂದ ಏನ್ ಮಾಡಿದ್ರೂ ಪರ್ವಾಗಿಲ್ಲ ಅಂತ ಅನ್ನಿಸತ್ತೆ. ನಾವೆಲ್ಲರೂ ಒಂದೇ ಧರ್ಮ ಅಂತ ಹೇಳೋರೂ, ಇಂತಹ ಸಮಯದಲ್ಲಿ ಜಾತಿಗಳಾಗಿಬಿಡ್ತಾರೆ.

ಅಟ್ರಾಸಿಟಿ ಕಾಯ್ದೆಯದ್ದೂ ದುರುಪಯೋಗ ಆಗಿರಬಹುದು; ಯಾರೋ ಎತ್ತಿಕಟ್ಟಿಯೂ ಮಾಡಿಸಿರಬಹುದು. ಆದ್ರೆ 90% ಅಟ್ರಾಸಿಟಿ ನಿಜವಾಗಿ ಆಗಿರುತ್ತಲ್ಲಾ. ಅದಕ್ಕೇನು ಮಾಡೋದು.


ಇದನ್ನೂ ಓದಿ: ಕಾರ್ಮಿಕನ ಪುತ್ರರಾದ ಖರ್ಗೆ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯವರೆಗೆ ಬೆಳೆದ ಯಶೋಗಾಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲು ಅಂಬೇಡ್ಕರ್ ಅವರ ಆಶಯವನ್ನು ಓದಿ ಸರ್ ದಯವಿಟ್ಟು
    ಮನುವಾದಿಗಳ ಪಕ್ಷಗಳಲ್ಲಿ ದುಡಿದರೆ ಪ್ರಯೋಜನ ಇಲ್ಲ .ಬನ್ನಿ ದಲಿತರ ಪಕ್ಷಕ್ಕೆ ನಿಮಗೆ ಸದಾ ಸ್ವಾಗತಿಸಲು ಸಿದ್ದರಾಗಿದ್ದೆವೆ.

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...