ರಾಷ್ಟ್ರೀಯ ಕಾಂಗ್ರೆಸ್ನ ನೂತನ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ನವೆಂಬರ್ 6ರ ಭಾನುವಾರದಂದು ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಯೋಜಿಸಿದ್ದು, ಅರಮನೆ ಮೈದಾನದಲ್ಲಿ ‘ಸರ್ವೋದಯ ಸಮಾವೇಶ’ ಹಮ್ಮಿಕೊಂಡಿದೆ.
ಸಮಾವೇಶದ ತಯಾರಿ ಭರದಿಂದ ಸಾಗುತ್ತಿದೆ ಎಂದು ಕಾಂಗ್ರೆಸ್ ಹೇಳಿದ್ದು, ಕಲ್ಯಾಣ ಕರ್ನಾಟಕ ಭಾಗದಿಂದಲೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಈ ಹಿಂದೆ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಸಮಾವೇಶದ ಕುರಿತು ಶನಿವಾರ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್,“ನವೆಂಬರ್ 06 ರಂದು ನಡೆಯಲಿರುವ ಸರ್ವೋದಯ ಸಮಾವೇಶದ ತಯಾರಿ ಭರದಿಂದ ಸಾಗುತ್ತಿದೆ. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಆಗಮನಕ್ಕೆ ಇಡೀ ಕರ್ನಾಟಕವೇ ಕಾದಿದೆ” ಎಂದು ಹೇಳಿದ್ದಾರೆ.
ನ.06 ರಂದು ನಡೆಯಲಿರುವ ಸರ್ವೋದಯ ಸಮಾವೇಶದ ತಯಾರಿ ಭರದಿಂದ ಸಾಗುತ್ತಿದ್ದು ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಾಯಕರೊಂದಿಗೆ ನಡೆಸಿದ ಸಭೆಯಲ್ಲಿ ಕಾರ್ಯಕ್ರಮದ ಕುರಿತಂತೆ ಸಮಾಲೋಚನೆ ನಡೆಸಿ ಸಲಹೆಗಳನ್ನು ಪಡೆಯಲಾಯಿತು. AICC ಅಧ್ಯಕ್ಷರಾದ ಶ್ರೀ @Kharge ಅವರ ಆಗಮನಕ್ಕೆ ಇಡೀ ಕರ್ನಾಟಕವೇ ಕಾದಿದೆ. pic.twitter.com/lLSq6IwzMF
— DK Shivakumar (@DKShivakumar) November 5, 2022
ಹೊಸದಾಗಿ ಆಯ್ಕೆಯಾದ ಅಧ್ಯಕ್ಷರು ದೇಶದ ಬೇರೆ ರಾಜ್ಯಗಳಿಗೆ ಪ್ರವಾಸ ಹೋಗುವ ಮೊದಲು ತವರು ರಾಜ್ಯಕ್ಕೆ ಭೇಟಿ ನೀಡಲು ತೀರ್ಮಾನಿಸಿದ್ದಾರೆ, ಹೀಗಾಗಿ ನವೆಂಬರ್ 6 ರಂದು ಅವರನ್ನು ರಾಜಕ್ಕೆ ಸ್ವಾಗತಿಸಲಿದ್ದೇವೆ ಎಂದು ಕಾಂಗ್ರೆಸ್ ಈ ಹಿಂದೆ ಹೇಳಿತ್ತು.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣೆ ಮತ್ತು ಮಲ್ಲಿಕಾರ್ಜುನ ಖರ್ಗೆ
ಭಾನುವಾರ ಬೆಳಿಗ್ಗೆ 10.50ಕ್ಕೆ ಖರ್ಗೆ ಅವರು ನಗರಕ್ಕೆ ತಲುಪಲಿದ್ದಾರೆ ಕಾಂಗ್ರೆಸ್ ಹೇಳಿದೆ. ಕಾರ್ಯಕ್ರಮಕ್ಕೆ ಹಲವು ಸಂಘಟನೆಗಳು ಕೂಡ ಬೆಂಬಲ ನೀಡಿವೆ ಎಂದು ಎಂದು ಪಕ್ಷದ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದರು.
ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ನಂತರ ರಾಷ್ಟ್ರೀಯ ಕಾಂಗ್ರೆಸ್ನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎರಡನೇ ಕನ್ನಡಿಗರಾಗಿದ್ದಾರೆ.