ಇಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡುವ ವೇಳೆ ಅವರ ಮೈಕ್ರೋಫೋನ್ ಸ್ವಿಚ್ಡ್ ಆಫ್ ಮಾಡಿದ ಕಾರಣ ‘ಇಂಡಿಯಾ’ ಒಕ್ಕೂಟದ ಪಕ್ಷಗಳು ಸರ್ಕಾರದ ನಡೆಯನ್ನು ಖಂಡಿಸಿ ಸಭಾತ್ಯಾಗ ಮಾಡಿವೆ.
ಮಣಿಪುರದ ಕುರಿತು ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಪಡೆಯಲು ‘ಇಂಡಿಯಾ’ ಒಕ್ಕೂಟ ಮಂಡಿಸಿದ ಬೇಡಿಕೆಯನ್ನು ತಡೆಯಲು ಬಿಜೆಪಿ ಸಂಸದರು ಖರ್ಗೆ ಅವರ ಮೈಕ್ರೋಫೋನ್ ಅನ್ನು ಸ್ವಿಚ್ಡ್ ಆಫ್ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.
ಬಿಜೆಪಿ ಸದಸ್ಯರ ಪ್ರಚೋದನೆಯಿಂದ ಸ್ವತಃ ಸಭಾನಾಯಕರೇ ಖರ್ಗೆಯವರ ಮಾತಿಗೆ ಪದೇ ಪದೇ ಅಡ್ಡಿಪಡಿಸಿದರು. ಗದ್ದಲದಲ್ಲಿಯೇ ಮಸೂದೆಗಳನ್ನು ಮಂಡಿಸಲಾಯಿತು. ಸರ್ಕಾರದ ನಿರ್ಧಾರವನ್ನು ಖಂಡಿಸಿ ‘ಇಂಡಿಯಾ’ ಸದಸ್ಯರು ಸಭಾತ್ಯಾಗ ಮಾಡಿದರು ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.
In the Rajya Sabha this afernoon, BJP MPs prevented Leader of the Opposition, @kharge-ji from speaking and raising INDIA’s demand for PM's statement in the House on Manipur and a discussion thereafter.
Repeated obstruction at the instigation of none other than the Leader of the…
— Jairam Ramesh (@Jairam_Ramesh) July 25, 2023
ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಮಣಿಪುರ ಹಿಂಸಾಚಾರದ ಬಗ್ಗೆ ವಿವರವಾದ ಚರ್ಚೆಗೆ ಮತ್ತು ಈಶಾನ್ಯ ರಾಜ್ಯದ ಸಮಸ್ಯೆಯ ಬಗ್ಗೆ ಸದನದಲ್ಲಿ ಪ್ರಧಾನಿ ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ.
ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಓಬ್ರಿಯಾನ್ ಈ ಬಗ್ಗೆ ಟ್ವೀಟ್ ಮಾಡಿದ್ದು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ರೋಫೋನ್ ಸ್ವಿಚ್ಡ್ ಆಫ್ ಮಾಡಲಾಗಿತ್ತು. ಈ ಘಟನೆಗೆ ಪ್ರತಿಭಟನೆ ವ್ಯಕ್ತಪಡಿಸಿ ‘ಇಂಡಿಯಾ’ ಒಕ್ಕೂಟದ ಸದಸ್ಯರು ಸಭಾತ್ಯಾಗ ಮಾಡಿದರು” ಎಂದು ತಿಳಿಸಿದ್ದಾರೆ.
This happened in Rajya Sabha today. THE MICROPHONE OF THE LEADER OF THE OPPOSITION WAS SWITCHED OFF. Every INDIA party walked out in protest
#PARLIAMENT Deep dark chamber
— Derek O'Brien | ডেরেক ও'ব্রায়েন (@derekobrienmp) July 25, 2023
ಇದನ್ನೂ ಓದಿ: ಮಣಿಪುರ ಹಿಂಸಾಚಾರ ಕುರಿತು ಸಂಸತ್ತಿನಲ್ಲಿ ಮಾತನಾಡದ ಪ್ರಧಾನಿ: ಮುಂದುವರೆದ ಪ್ರತಿಪಕ್ಷಗಳ ಪ್ರತಿಭಟನೆ