Homeಮುಖಪುಟಭಾರತದಲ್ಲಿ 33 ಲಕ್ಷ ಮಕ್ಕಳಲ್ಲಿ ಅಪೌಷ್ಟಿಕತೆ: ಆರ್‌ಟಿಐ ಅಡಿ ಮಾಹಿತಿ ಬಹಿರಂಗ

ಭಾರತದಲ್ಲಿ 33 ಲಕ್ಷ ಮಕ್ಕಳಲ್ಲಿ ಅಪೌಷ್ಟಿಕತೆ: ಆರ್‌ಟಿಐ ಅಡಿ ಮಾಹಿತಿ ಬಹಿರಂಗ

ಕಳೆದ ತಿಂಗಳು ಹೊರಬಿದ್ದ 2021ರ ಜಾಗತಿಕ ಹಸಿವು ಸೂಚ್ಯಂಕದಲ್ಲಿ 116 ದೇಶಗಳ ಪೈಕಿ ಭಾರತವು 101ನೇ ಸ್ಥಾನದಲ್ಲಿದೆ.

- Advertisement -
- Advertisement -

ಭಾರತದಲ್ಲಿ 33 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ, ಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಅಪೌಷ್ಟಿಕ ಮಕ್ಕಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಪಿಟಿಐ ಸುದ್ದಿಸಂಸ್ಥೆಯು ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಈ ಮಾಹಿತಿಯನ್ನು ಪಡೆದುಕೊಂಡಿದೆ.

ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಚಿವಾಲಯದ ಅಕ್ಟೋಬರ್‌ 14ರವರೆಗಿನ ಮಾಹಿತಿ ಪ್ರಕಾರ, ಅಪೌಷ್ಟಿಕತೆಯನ್ನು ಹೊಂದಿರುವ ಅರ್ಧದಷ್ಟು ಮಕ್ಕಳು ತೀವ್ರತರನಾದ ಅಪೌಷ್ಟಿಕತೆಯನ್ನು ಹೊಂದಿವೆ. 17,76,902 ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಇದ್ದು, 15,46,420 ಮಕ್ಕಳಲ್ಲಿ ಮಧ್ಯಮ ತೀವ್ರ ಅಪೌಷ್ಟಿಕತೆ ಇದೆ.

ಎತ್ತರಕ್ಕೆ ಅನುಗುಣವಾಗಿ ಇಲ್ಲದ ತೂಕ, ತೋಳಿನ ಮಧ್ಯದ ಸುತ್ತಳತೆ 115 ಮಿಲಿಮೀಟರ್‌ಗಿಂತ ಕಡಿಮೆ ಇರುವುದು ತೀವ್ರ ಅಪೌಷ್ಟಿಕತೆಯನ್ನು ಸೂಚಿಸುತ್ತದೆ ಎಂದು ವಿಶ್ವಸಂಸ್ಥೆ ಹೇಳಿದೆ. ತೋಳಿನ ಮಧ್ಯದ ಸುತ್ತಳತೆ 115 ಮಿಲಿಮೀಟರ್‌ಗಳಿಗಿಂತ ಹೆಚ್ಚು ಆದರೆ 125 ಮಿಲಿಮೀಟರ್‌ಗಳಿಗಿಂತ ಕಡಿಮೆ ಇದ್ದರೆ ಅದನ್ನು ಮಧ್ಯಮ ತೀವ್ರ ಅಪೌಷ್ಟಿಕತೆ ಎಂದು ವಿಶ್ವಸಂಸ್ಥೆ ವ್ಯಾಖ್ಯಾನಿಸಿದೆ.

ವರದಿಯ ಪ್ರಕಾರ, 6,16,772 ಅಪೌಷ್ಟಿಕ ಮಕ್ಕಳನ್ನು ಹೊಂದಿರುವ ಮಹಾರಾಷ್ಟ್ರ ರಾಜ್ಯ ಮೊದಲ ಸ್ಥಾನದಲ್ಲಿದೆ. ಬಿಹಾರದಲ್ಲಿ 4,75,824, ಗುಜರಾತ್‌ನಲ್ಲಿ 3,20,465, ಆಂಧ್ರಪ್ರದೇಶದಲ್ಲಿ 2,67,228, ಕರ್ನಾಟಕದಲ್ಲಿ 2,49,463, ಉತ್ತರ ಪ್ರದೇಶದಲ್ಲಿ 1,86,640 ಅಪೌಷ್ಟಿಕ ಮಕ್ಕಳಿದ್ದಾರೆ.

ನವೆಂಬರ್ 2020 ಮತ್ತು ಈ ವರ್ಷದ ಅಕ್ಟೋಬರ್ 14ರ ನಡುವೆ ತೀವ್ರತರವಾದ ಅಪೌಷ್ಟಿಕತೆಯ ಮಕ್ಕಳ ಸಂಖ್ಯೆಯಲ್ಲಿ 91% ಏರಿಕೆಯಾಗಿದೆ. ನವೆಂಬರ್ 2020ರಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ 9,27,606 ಆಗಿತ್ತು.

ಪಿಟಿಐ ಪ್ರಕಾರ, ಎರಡು ವಿಧದಲ್ಲಿ ಅಪೌಷ್ಟಿಕ ಮಕ್ಕಳ ಅಂಕಿ-ಅಂಶಗಳನ್ನು ಸರ್ಕಾರ ದಾಖಲಿಸಿದೆ. ಕಳೆದ ವರ್ಷದ ಅಂಕಿಅಂಶಗಳನ್ನು ರಾಜ್ಯ ಸರ್ಕಾರಗಳು ಸಂಗ್ರಹಿಸಿ ಕೇಂದ್ರಕ್ಕೆ ರವಾನಿಸಿದ್ದರೆ, ಈ ವರ್ಷದ ಅಂಕಿಅಂಶಗಳನ್ನು ಅಂಗನವಾಡಿ ಕಾರ್ಯಕರ್ತೆಯರು ನೇರವಾಗಿ ಪೋಷಣ್‌ ಟ್ರ್ಯಾಕರ್ ಅಪ್ಲಿಕೇಶನ್‌ನಲ್ಲಿ ನಮೂದಿಸಿ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ಕಳೆದ ವರ್ಷದ ದತ್ತಾಂಶವು ಆರು ತಿಂಗಳಿಂದ ಆರು ವರ್ಷಗಳವರೆಗಿನ ಮಕ್ಕಳ ಗುಂಪಿಗೆ ಸಂಬಂಧಿಸಿದ್ದು, ಈ ವರ್ಷದ ದತ್ತಾಂಶದಲ್ಲಿ ಮಕ್ಕಳ ವಯಸ್ಸಿನ ಗುಂಪನ್ನು ನಿರ್ದಿಷ್ಟಪಡಿಸಲಾಗಿಲ್ಲ.

ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಅವುಗಳ ಫಲಾನುಭವಿಗಳನ್ನು ಪತ್ತೆಹಚ್ಚಲು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪೋಷಣ್‌ ಟ್ರ್ಯಾಕರ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದೆ.

ಕಳೆದ ತಿಂಗಳು ಹೊರಬಿದ್ದ 2021ರ ಜಾಗತಿಕ ಹಸಿವು ಸೂಚ್ಯಂಕದಲ್ಲಿ 116 ದೇಶಗಳ ಪೈಕಿ ಭಾರತವು 101ನೇ ಸ್ಥಾನದಲ್ಲಿದೆ. ಕಳೆದ ವರ್ಷ 94ನೇ ಸ್ಥಾನದಲ್ಲಿದ್ದ ಭಾರತವು ತನ್ನ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ನೇಪಾಳ ಮತ್ತು ಬಾಂಗ್ಲಾದೇಶಕ್ಕಿಂತ ಹಿಂದಿತ್ತು.

ಆದರೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸೂಚ್ಯಂಕಕ್ಕೆ ಬಳಸಲಾದ ವಿಧಾನವು ಅವೈಜ್ಞಾನಿಕವಾಗಿದೆ ಎಂದು ಪ್ರತಿಪಾದಿಸಿದೆ.


ಇದನ್ನೂ ಓದಿರಿ: ನೋಟ್‌ ಬ್ಯಾನ್‌ ದುರಂತಕ್ಕೆ 5 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...