Homeಮುಖಪುಟಭಾರತದಲ್ಲಿ 33 ಲಕ್ಷ ಮಕ್ಕಳಲ್ಲಿ ಅಪೌಷ್ಟಿಕತೆ: ಆರ್‌ಟಿಐ ಅಡಿ ಮಾಹಿತಿ ಬಹಿರಂಗ

ಭಾರತದಲ್ಲಿ 33 ಲಕ್ಷ ಮಕ್ಕಳಲ್ಲಿ ಅಪೌಷ್ಟಿಕತೆ: ಆರ್‌ಟಿಐ ಅಡಿ ಮಾಹಿತಿ ಬಹಿರಂಗ

ಕಳೆದ ತಿಂಗಳು ಹೊರಬಿದ್ದ 2021ರ ಜಾಗತಿಕ ಹಸಿವು ಸೂಚ್ಯಂಕದಲ್ಲಿ 116 ದೇಶಗಳ ಪೈಕಿ ಭಾರತವು 101ನೇ ಸ್ಥಾನದಲ್ಲಿದೆ.

- Advertisement -
- Advertisement -

ಭಾರತದಲ್ಲಿ 33 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ, ಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಅಪೌಷ್ಟಿಕ ಮಕ್ಕಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಪಿಟಿಐ ಸುದ್ದಿಸಂಸ್ಥೆಯು ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಈ ಮಾಹಿತಿಯನ್ನು ಪಡೆದುಕೊಂಡಿದೆ.

ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಚಿವಾಲಯದ ಅಕ್ಟೋಬರ್‌ 14ರವರೆಗಿನ ಮಾಹಿತಿ ಪ್ರಕಾರ, ಅಪೌಷ್ಟಿಕತೆಯನ್ನು ಹೊಂದಿರುವ ಅರ್ಧದಷ್ಟು ಮಕ್ಕಳು ತೀವ್ರತರನಾದ ಅಪೌಷ್ಟಿಕತೆಯನ್ನು ಹೊಂದಿವೆ. 17,76,902 ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಇದ್ದು, 15,46,420 ಮಕ್ಕಳಲ್ಲಿ ಮಧ್ಯಮ ತೀವ್ರ ಅಪೌಷ್ಟಿಕತೆ ಇದೆ.

ಎತ್ತರಕ್ಕೆ ಅನುಗುಣವಾಗಿ ಇಲ್ಲದ ತೂಕ, ತೋಳಿನ ಮಧ್ಯದ ಸುತ್ತಳತೆ 115 ಮಿಲಿಮೀಟರ್‌ಗಿಂತ ಕಡಿಮೆ ಇರುವುದು ತೀವ್ರ ಅಪೌಷ್ಟಿಕತೆಯನ್ನು ಸೂಚಿಸುತ್ತದೆ ಎಂದು ವಿಶ್ವಸಂಸ್ಥೆ ಹೇಳಿದೆ. ತೋಳಿನ ಮಧ್ಯದ ಸುತ್ತಳತೆ 115 ಮಿಲಿಮೀಟರ್‌ಗಳಿಗಿಂತ ಹೆಚ್ಚು ಆದರೆ 125 ಮಿಲಿಮೀಟರ್‌ಗಳಿಗಿಂತ ಕಡಿಮೆ ಇದ್ದರೆ ಅದನ್ನು ಮಧ್ಯಮ ತೀವ್ರ ಅಪೌಷ್ಟಿಕತೆ ಎಂದು ವಿಶ್ವಸಂಸ್ಥೆ ವ್ಯಾಖ್ಯಾನಿಸಿದೆ.

ವರದಿಯ ಪ್ರಕಾರ, 6,16,772 ಅಪೌಷ್ಟಿಕ ಮಕ್ಕಳನ್ನು ಹೊಂದಿರುವ ಮಹಾರಾಷ್ಟ್ರ ರಾಜ್ಯ ಮೊದಲ ಸ್ಥಾನದಲ್ಲಿದೆ. ಬಿಹಾರದಲ್ಲಿ 4,75,824, ಗುಜರಾತ್‌ನಲ್ಲಿ 3,20,465, ಆಂಧ್ರಪ್ರದೇಶದಲ್ಲಿ 2,67,228, ಕರ್ನಾಟಕದಲ್ಲಿ 2,49,463, ಉತ್ತರ ಪ್ರದೇಶದಲ್ಲಿ 1,86,640 ಅಪೌಷ್ಟಿಕ ಮಕ್ಕಳಿದ್ದಾರೆ.

ನವೆಂಬರ್ 2020 ಮತ್ತು ಈ ವರ್ಷದ ಅಕ್ಟೋಬರ್ 14ರ ನಡುವೆ ತೀವ್ರತರವಾದ ಅಪೌಷ್ಟಿಕತೆಯ ಮಕ್ಕಳ ಸಂಖ್ಯೆಯಲ್ಲಿ 91% ಏರಿಕೆಯಾಗಿದೆ. ನವೆಂಬರ್ 2020ರಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ 9,27,606 ಆಗಿತ್ತು.

ಪಿಟಿಐ ಪ್ರಕಾರ, ಎರಡು ವಿಧದಲ್ಲಿ ಅಪೌಷ್ಟಿಕ ಮಕ್ಕಳ ಅಂಕಿ-ಅಂಶಗಳನ್ನು ಸರ್ಕಾರ ದಾಖಲಿಸಿದೆ. ಕಳೆದ ವರ್ಷದ ಅಂಕಿಅಂಶಗಳನ್ನು ರಾಜ್ಯ ಸರ್ಕಾರಗಳು ಸಂಗ್ರಹಿಸಿ ಕೇಂದ್ರಕ್ಕೆ ರವಾನಿಸಿದ್ದರೆ, ಈ ವರ್ಷದ ಅಂಕಿಅಂಶಗಳನ್ನು ಅಂಗನವಾಡಿ ಕಾರ್ಯಕರ್ತೆಯರು ನೇರವಾಗಿ ಪೋಷಣ್‌ ಟ್ರ್ಯಾಕರ್ ಅಪ್ಲಿಕೇಶನ್‌ನಲ್ಲಿ ನಮೂದಿಸಿ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ಕಳೆದ ವರ್ಷದ ದತ್ತಾಂಶವು ಆರು ತಿಂಗಳಿಂದ ಆರು ವರ್ಷಗಳವರೆಗಿನ ಮಕ್ಕಳ ಗುಂಪಿಗೆ ಸಂಬಂಧಿಸಿದ್ದು, ಈ ವರ್ಷದ ದತ್ತಾಂಶದಲ್ಲಿ ಮಕ್ಕಳ ವಯಸ್ಸಿನ ಗುಂಪನ್ನು ನಿರ್ದಿಷ್ಟಪಡಿಸಲಾಗಿಲ್ಲ.

ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಅವುಗಳ ಫಲಾನುಭವಿಗಳನ್ನು ಪತ್ತೆಹಚ್ಚಲು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪೋಷಣ್‌ ಟ್ರ್ಯಾಕರ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದೆ.

ಕಳೆದ ತಿಂಗಳು ಹೊರಬಿದ್ದ 2021ರ ಜಾಗತಿಕ ಹಸಿವು ಸೂಚ್ಯಂಕದಲ್ಲಿ 116 ದೇಶಗಳ ಪೈಕಿ ಭಾರತವು 101ನೇ ಸ್ಥಾನದಲ್ಲಿದೆ. ಕಳೆದ ವರ್ಷ 94ನೇ ಸ್ಥಾನದಲ್ಲಿದ್ದ ಭಾರತವು ತನ್ನ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ನೇಪಾಳ ಮತ್ತು ಬಾಂಗ್ಲಾದೇಶಕ್ಕಿಂತ ಹಿಂದಿತ್ತು.

ಆದರೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸೂಚ್ಯಂಕಕ್ಕೆ ಬಳಸಲಾದ ವಿಧಾನವು ಅವೈಜ್ಞಾನಿಕವಾಗಿದೆ ಎಂದು ಪ್ರತಿಪಾದಿಸಿದೆ.


ಇದನ್ನೂ ಓದಿರಿ: ನೋಟ್‌ ಬ್ಯಾನ್‌ ದುರಂತಕ್ಕೆ 5 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...