Homeಮುಖಪುಟಭಾರತದಲ್ಲಿ 33 ಲಕ್ಷ ಮಕ್ಕಳಲ್ಲಿ ಅಪೌಷ್ಟಿಕತೆ: ಆರ್‌ಟಿಐ ಅಡಿ ಮಾಹಿತಿ ಬಹಿರಂಗ

ಭಾರತದಲ್ಲಿ 33 ಲಕ್ಷ ಮಕ್ಕಳಲ್ಲಿ ಅಪೌಷ್ಟಿಕತೆ: ಆರ್‌ಟಿಐ ಅಡಿ ಮಾಹಿತಿ ಬಹಿರಂಗ

ಕಳೆದ ತಿಂಗಳು ಹೊರಬಿದ್ದ 2021ರ ಜಾಗತಿಕ ಹಸಿವು ಸೂಚ್ಯಂಕದಲ್ಲಿ 116 ದೇಶಗಳ ಪೈಕಿ ಭಾರತವು 101ನೇ ಸ್ಥಾನದಲ್ಲಿದೆ.

- Advertisement -
- Advertisement -

ಭಾರತದಲ್ಲಿ 33 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ, ಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಅಪೌಷ್ಟಿಕ ಮಕ್ಕಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಪಿಟಿಐ ಸುದ್ದಿಸಂಸ್ಥೆಯು ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಈ ಮಾಹಿತಿಯನ್ನು ಪಡೆದುಕೊಂಡಿದೆ.

ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಚಿವಾಲಯದ ಅಕ್ಟೋಬರ್‌ 14ರವರೆಗಿನ ಮಾಹಿತಿ ಪ್ರಕಾರ, ಅಪೌಷ್ಟಿಕತೆಯನ್ನು ಹೊಂದಿರುವ ಅರ್ಧದಷ್ಟು ಮಕ್ಕಳು ತೀವ್ರತರನಾದ ಅಪೌಷ್ಟಿಕತೆಯನ್ನು ಹೊಂದಿವೆ. 17,76,902 ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಇದ್ದು, 15,46,420 ಮಕ್ಕಳಲ್ಲಿ ಮಧ್ಯಮ ತೀವ್ರ ಅಪೌಷ್ಟಿಕತೆ ಇದೆ.

ಎತ್ತರಕ್ಕೆ ಅನುಗುಣವಾಗಿ ಇಲ್ಲದ ತೂಕ, ತೋಳಿನ ಮಧ್ಯದ ಸುತ್ತಳತೆ 115 ಮಿಲಿಮೀಟರ್‌ಗಿಂತ ಕಡಿಮೆ ಇರುವುದು ತೀವ್ರ ಅಪೌಷ್ಟಿಕತೆಯನ್ನು ಸೂಚಿಸುತ್ತದೆ ಎಂದು ವಿಶ್ವಸಂಸ್ಥೆ ಹೇಳಿದೆ. ತೋಳಿನ ಮಧ್ಯದ ಸುತ್ತಳತೆ 115 ಮಿಲಿಮೀಟರ್‌ಗಳಿಗಿಂತ ಹೆಚ್ಚು ಆದರೆ 125 ಮಿಲಿಮೀಟರ್‌ಗಳಿಗಿಂತ ಕಡಿಮೆ ಇದ್ದರೆ ಅದನ್ನು ಮಧ್ಯಮ ತೀವ್ರ ಅಪೌಷ್ಟಿಕತೆ ಎಂದು ವಿಶ್ವಸಂಸ್ಥೆ ವ್ಯಾಖ್ಯಾನಿಸಿದೆ.

ವರದಿಯ ಪ್ರಕಾರ, 6,16,772 ಅಪೌಷ್ಟಿಕ ಮಕ್ಕಳನ್ನು ಹೊಂದಿರುವ ಮಹಾರಾಷ್ಟ್ರ ರಾಜ್ಯ ಮೊದಲ ಸ್ಥಾನದಲ್ಲಿದೆ. ಬಿಹಾರದಲ್ಲಿ 4,75,824, ಗುಜರಾತ್‌ನಲ್ಲಿ 3,20,465, ಆಂಧ್ರಪ್ರದೇಶದಲ್ಲಿ 2,67,228, ಕರ್ನಾಟಕದಲ್ಲಿ 2,49,463, ಉತ್ತರ ಪ್ರದೇಶದಲ್ಲಿ 1,86,640 ಅಪೌಷ್ಟಿಕ ಮಕ್ಕಳಿದ್ದಾರೆ.

ನವೆಂಬರ್ 2020 ಮತ್ತು ಈ ವರ್ಷದ ಅಕ್ಟೋಬರ್ 14ರ ನಡುವೆ ತೀವ್ರತರವಾದ ಅಪೌಷ್ಟಿಕತೆಯ ಮಕ್ಕಳ ಸಂಖ್ಯೆಯಲ್ಲಿ 91% ಏರಿಕೆಯಾಗಿದೆ. ನವೆಂಬರ್ 2020ರಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ 9,27,606 ಆಗಿತ್ತು.

ಪಿಟಿಐ ಪ್ರಕಾರ, ಎರಡು ವಿಧದಲ್ಲಿ ಅಪೌಷ್ಟಿಕ ಮಕ್ಕಳ ಅಂಕಿ-ಅಂಶಗಳನ್ನು ಸರ್ಕಾರ ದಾಖಲಿಸಿದೆ. ಕಳೆದ ವರ್ಷದ ಅಂಕಿಅಂಶಗಳನ್ನು ರಾಜ್ಯ ಸರ್ಕಾರಗಳು ಸಂಗ್ರಹಿಸಿ ಕೇಂದ್ರಕ್ಕೆ ರವಾನಿಸಿದ್ದರೆ, ಈ ವರ್ಷದ ಅಂಕಿಅಂಶಗಳನ್ನು ಅಂಗನವಾಡಿ ಕಾರ್ಯಕರ್ತೆಯರು ನೇರವಾಗಿ ಪೋಷಣ್‌ ಟ್ರ್ಯಾಕರ್ ಅಪ್ಲಿಕೇಶನ್‌ನಲ್ಲಿ ನಮೂದಿಸಿ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ಕಳೆದ ವರ್ಷದ ದತ್ತಾಂಶವು ಆರು ತಿಂಗಳಿಂದ ಆರು ವರ್ಷಗಳವರೆಗಿನ ಮಕ್ಕಳ ಗುಂಪಿಗೆ ಸಂಬಂಧಿಸಿದ್ದು, ಈ ವರ್ಷದ ದತ್ತಾಂಶದಲ್ಲಿ ಮಕ್ಕಳ ವಯಸ್ಸಿನ ಗುಂಪನ್ನು ನಿರ್ದಿಷ್ಟಪಡಿಸಲಾಗಿಲ್ಲ.

ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಅವುಗಳ ಫಲಾನುಭವಿಗಳನ್ನು ಪತ್ತೆಹಚ್ಚಲು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪೋಷಣ್‌ ಟ್ರ್ಯಾಕರ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದೆ.

ಕಳೆದ ತಿಂಗಳು ಹೊರಬಿದ್ದ 2021ರ ಜಾಗತಿಕ ಹಸಿವು ಸೂಚ್ಯಂಕದಲ್ಲಿ 116 ದೇಶಗಳ ಪೈಕಿ ಭಾರತವು 101ನೇ ಸ್ಥಾನದಲ್ಲಿದೆ. ಕಳೆದ ವರ್ಷ 94ನೇ ಸ್ಥಾನದಲ್ಲಿದ್ದ ಭಾರತವು ತನ್ನ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ನೇಪಾಳ ಮತ್ತು ಬಾಂಗ್ಲಾದೇಶಕ್ಕಿಂತ ಹಿಂದಿತ್ತು.

ಆದರೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸೂಚ್ಯಂಕಕ್ಕೆ ಬಳಸಲಾದ ವಿಧಾನವು ಅವೈಜ್ಞಾನಿಕವಾಗಿದೆ ಎಂದು ಪ್ರತಿಪಾದಿಸಿದೆ.


ಇದನ್ನೂ ಓದಿರಿ: ನೋಟ್‌ ಬ್ಯಾನ್‌ ದುರಂತಕ್ಕೆ 5 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...