Homeಆರೋಗ್ಯಬಿಹಾರದಲ್ಲಿನ ನೂರಾರು ಮಕ್ಕಳ ಸಾವಿಗೆ ಅಪೌಷ್ಟಿಕತೆ ಮತ್ತು ಸರಕಾರಿ ನಿರ್ಲಕ್ಷವೇ ಕಾರಣ

ಬಿಹಾರದಲ್ಲಿನ ನೂರಾರು ಮಕ್ಕಳ ಸಾವಿಗೆ ಅಪೌಷ್ಟಿಕತೆ ಮತ್ತು ಸರಕಾರಿ ನಿರ್ಲಕ್ಷವೇ ಕಾರಣ

- Advertisement -
- Advertisement -

| ಡಾ. ಸ್ವಾತಿ ಶುಕ್ಲಾ |

ಅನುವಾದ: | ನಿಖಿಲ್ ಕೋಲ್ಪೆ |

ಇಂಗ್ಲಿಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಎಕ್ಯೂಟ್ ಎನ್ಸಿಫಲೈಟಿಸ್ ಸಿಂಡ್ರೋಮ್ ಎಂಬ ಸಾಂಕ್ರಾಮಿಕ ರೋಗಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 113ಕ್ಕೂ ಹೆಚ್ಚಾಗಿದೆ. ಈ ಕಾರಣದಿಂದ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ಬಿಹಾರಕ್ಕೆ ಈ ರೋಗವು ಹೊಸದಲ್ಲ. ಲಿಚಿ ಹಣ್ಣಿನ ತೋಟಗಳು ಸಾಮಾನ್ಯವಾಗಿರುವ ಮುಜಾಫರ್‌ಪುರ ಮತ್ತು ನೆರೆಯ ಪ್ರದೇಶಗಳಲ್ಲಿ 1995ರಿಂದಲೇ ಎನ್ಸಿಫಲೈಟಿಸ್ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಈಗಿನ ಪರಿಸ್ಥಿತಿಗೆ ಅಪೌಷ್ಟಿಕತೆಯಿಂದ ಹಿಡಿದು, ಸೆಖೆ, ದುರ್ಬಲ ರೋಗ ನಿರೋಧಕತೆಯ ತನಕ ಹಲವು ಅಂಶಗಳು ಕಾರಣವಾಗಿದ್ದು, ಲಿಚಿಯಲ್ಲಿ ಇರುವ ಕೆಲವು ನಿರ್ದಿಷ್ಟ ರಾಸಾಯನಿಕಗಳು ಇದನ್ನು ಉಲ್ಭಣಿಸುವಂತೆ ಮಾಡಿವೆ.

What is AES? ಎಇಎಸ್ ಎಂದರೇನು?

ಎಕ್ಯೂಯೂ ಎಂಸೆಫಲೈಟಿಸ್ ಸಿಂಡ್ರೋಮ್ ಎಂದು ಮೆದುಳಿಗೆ ಸಂಬಂಧಿಸಿದ ರೋಗವಾಗಿದ್ದು, ಬ್ಯಾಕ್ಟೀರಿಯಾ, ವೈರಸ್, ಪರೋಪಜೀವಿಗಳು, ಶಿಲೀಂದ್ರಗಳು, ರಾಸಾಯನಿಕಗಳು, ಕೆಲವು ರೀತಿಯ ವಿಷವಸ್ತುಗಳು ಇದನ್ನು ಉಂಟುಮಾಡುತ್ತವೆ. ರೋಗ ಲಕ್ಷಣಗಳು ಜ್ವರ, ತಲೆನೋವು, ಅಪಸ್ಮಾರದ ಲಕ್ಷಣಗಳನ್ನು ಒಳಗೊಂಡಿರಬಹುದು. ಈ ರೋಗವು ಮಾನ್ಸೂನ್ ವೇಳೆ ಮತ್ತು ಅದರ ನಂತಥದ ಅವಧಿಯಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳಬಹುದು. ಅದು ಹೆಚ್ಚಾಗಿ ಬರುವುದು 15ವರ್ಷಗಳಿಗಿಂತ ಕೆಳಗಿನ ಮಕ್ಕಳಿಗೆ. ಉತ್ತರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮುಂತಾದ ಗಂಗಾ ನದಿಬಯಲಿನ ಪ್ರದೇಶಗಳಲ್ಲಿ, ಅಸ್ಸಾಂ, ತಮಿಳುನಾಡಿನ ಕೆಲವು ಬಯಲುಗಳು ಈ ರೋಗಕ್ಕೆ ಸೂಕ್ತ ವಾತಾವರಣ ಒದಗಿಸುತ್ತವೆ. ತಕ್ಷಣ ಆಸ್ಪತ್ರೆಗೆ ಸೇರಿಸುವುದು ಮತ್ತು ಸೂಕ್ತ ಔಷದೋಪಚಾರದಿಂದ ಇದು ಗುಣವಾಗುವುದು.

ಹೆಚ್ಚಿನ ಪ್ರಕರಣಗಳು ಮಕ್ಕಳು ಹೊಟ್ಟೆಗೆ ಏನೂ ತಿನ್ನದೇ, ಬರಿಹೊಟ್ಟೆಯಲ್ಲಿ ಕಾಯಿ ಲೀಚಿ ತಿಂದಿದ್ದ ಪ್ರದೇಶದಲ್ಲಿಯೇ ವರದಿಯಾಗಿವೆ. ಕಾಯಿ ಲೀಚಿಯಲ್ಲಿ ವಿಷಕಾರಿಗಳಾದ ಹೈಪೋಗ್ಲೈಸಿನ್ ಎ ಮತ್ತು, ಮಿಥೈಲ್‌ ನ್ಸೈಕ್ಲೋಪ್ರೊಪೈಲ್‌ಗೈಸಿನ್ (ಎಂಸಿಪಿಜಿ) ಎಂಬ ಉದ್ದವಾದ ಮತ್ತು ಹೇಳಲು ಕಷ್ಟವಾಗುವ, ಹೆಸರುಗಳನ್ನು ಹೊಂದಿರುವ ರಾಸಾಯನಿಕಗಳನ್ನು ಹೊಂದಿದೆ. ಇವುಗಳಲ್ಲಿ ಹೈಪೋಗ್ಲೈಸಿನ್ ಎ ಎಂಬುದು ನೈಸರ್ಗಿಕವಾಗಿ ಉತ್ಪತ್ತಿಯಾಗುವ ಎಮಿನೋ ಅಮ್ಲವಾಗಿದ್ದು, ಎರಡನೆಯದಾದ ಎಂಸಿಪಿಜಿ ಎಂಬ ಸಂಯುಕ್ತ ರಾಸಾಯನಿಕವು ತೀವ್ರವಾದ ವಾಂತಿಯನ್ನು, ಅಂದರೆ, (ಜಮೈಕನ್ ವಾಮಿಟಿಂಗ್ ಡಿಸೀಸ್) ಎಂಬ ರೋಗ ಲಕ್ಷಣಗಳನ್ನು ಉಂಟುಮಾಡುತ್ತದೆ. ಇವುಗಳಲ್ಲಿ ಎಂಸಿಪಿಜಿ ಎಂಬುದು ಹಸಿ ಬೀಜಗಳಲ್ಲಿ ಇರುವ ರಕ್ತದಲ್ಲಿ ಸಕ್ಕರೆ ಅಂತ ಕಡಿಮೆ ಮಾಡುವುದು, ವಿಷಕಾರಿ ರಾಸಾಯನಿಕ ಸಂಯುಕ್ತವಾಗಿದ್ದು, ಏಕಾಏಕಿ ರಕ್ಕದೊಟ್ಟಡದ ಕುಸಿತ, ವಾಂತಿ, ಮಾನಸಿಕ ಸ್ಥಿತಿಯ ಬದಲಾವಣೆ- ಇದು ಸೋಮಾರಿತನದಲ್ಲಿ ಕಾಣಬಹುದು. ಈ ರಾಸಾಯನಿಕಗಳು ಹಸಿ ಲೀಚಿ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಇವೆ ಎಂಬುದು ಅತ್ಯಂತ ಗಮನಾರ್ಹ. (ಲಿಚಿ ಎಂಬುದು ಒಂದು ಹಳ್ಳಿ ಮಕ್ಕಳು ತಿನ್ನುವ ವಿದೇಶಿ ಕಾಡು ಹಣ್ಣಾಗಿದ್ದು, ಇಂದು ಸಿರಿವಂತರ ನೆಚ್ಚಿನ ಗ್ಲಾಮರ್ ಹಣ್ಣಾಗಿದೆ-ಅನುವಾದಕ)

ಭಾರತೀಯ ರೋಗ ನಿಯಂತ್ರಣ ಸಂಸ್ಥೆಯ ಪ್ರಕಾರ ಮತ್ತು ಇತರ ಸಂಸ್ಥೆಗಳ ಪ್ರಕಾರ ಲಿಚಿ ಈ ರೋಗಕ್ಕೆ ಮುಖ್ಯ ಕಾರಣವಲ್ಲ. ಈಗಾಗಲೇ ಹೊಟ್ಟೆಗಿಲ್ಲದ ಮಕ್ಕಳು ಬೆಳಿಗ್ಗೆ ಎದ್ದ ಕೂಡಲೇ ಹಸಿವಿನಿಂದ ಕಾಯಿ ಲಿಚಿ ತಿನ್ನುವುದೇ ಆಗಿದೆ. ಅಪೌಷ್ಟಿಕತೆಯ ಕಾರಣದಿಂದ ಮೊದಲೇ ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆ ಇರುವ ಮಕ್ಕಳು ಇದನ್ನು ತಿನ್ನುವುದರಿಂದ ಸಕ್ಕರೆ, ಅಂದರೆ ಗ್ಲೂಕೋಸ್ ಇನ್ನೂ ಕಡಿಮೆಯಾಗಿ, ತೀವ್ರ ಪ್ರಕರಣಗಳಲ್ಲಿ ತಲೆ ಸುತ್ತುವಿಕೆ, ಕೊನೆಗೆ ಸಾವಿಗೂ ಕಾಣವಾಗಬಹುದು.

ಈ ಸಾವುಗಳನ್ನು ತಪ್ಪಿಸಬಹುದುದೇ? ಖಂಡಿತಾ!

ಹಿಂದೆಯೇ ಬರೆದಿರುವುದನ್ನು ಓದಿ. ಇಲ್ಲಿ ಇದು ಸಾಮಾನ್ಯ. 2012ರಲ್ಲಿ ಇಲ್ಲಿ 122 ಮಕ್ಕಳ ಸಾವುಗಳು ಸಂಭವಿಸಿವೆ. ಇಲ್ಲಿನ ಆರೋಗ್ಯ ಇಲಾಖೆ ಸ್ಟ್ಯಾಂಡರ್ಡ್ ಅಪರೇಟಿಂಗ್ ಪ್ರೊಸಿಜರ್ಸ್ (ಎಸ್ಓಪಿ)) ಎಂಬ ಒಂದು ವ್ಯವಸ್ಥೆಯನ್ನು ಜಾರಿಗೊಳಿಸಿತು. ಅದು ರೋಗ ಲಕ್ಷಣಗಳ ಆಧಾರದಲ್ಲಿ ಅದನ್ನು ನಿಯಂತ್ರಿಸುವ ಕುರಿತಾಗಿತ್ತು. ಸರಿ, ಈ ವ್ಯವಸ್ಥೆಯು ಆಶಾ ಕಾರ್ಯಕರ್ತೆಯರು, ಪಂಚಾಯತ್, ರಾಜ್ಯಾಡಳಿತ, ಮಾಧ್ಯಮ, ಸರ್ಕಾರೇತರ ಸಂಸ್ಥೆಗಳು, ಪ್ರಚಾರ ಅಭಿಯಾನಗಳು, ಇತ್ಯಾದಿಗಳನ್ನು ಒಳಗೊಂಡಿತ್ತು. ಇದು ರೋಗ ನಿಯಂತ್ರಣದಲ್ಲಿ ಬಹಳಷ್ಟು ಪರಿಣಾಮಕಾರಿಯಾಯಿತು. ಆ ಕಾಲದಲ್ಲಿ ಮುಜಾಫರ್‌ಪುರ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ, ವೈದ್ಯರು, ದಾದಿಗಳ ಹತ್ತಿರ ಗ್ಲೂಕೋಸ್ ಕಿಟ್ ಲಭ್ಯವಿತ್ತು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ದಿನ ರಾತ್ರಿ ತಪಾಸಣೆ ನಡೆಸುತ್ತಿದ್ದರು. ಕಾರಣ ಇಷ್ಟೇ. ಮಕ್ಕಳು ಬರೇ ಹೊಟ್ಟೆಯಲ್ಲಿ ಮಲಗುತ್ತಿದ್ದರೋ ಎಂದು ನೋಡಲು.

ಹಾಗಾಗಿ ಸರ್ಕಾರ ಈ ಕೂಡಲೇ ಬಡವರಿಗೆ ಸಹಾಯ ಹಸ್ತ ಚಾಚಬೇಕು. ಹಸಿದು ಮಲಗುವುದನ್ನು ತಪ್ಪಿಸಬೇಕು. ಆರೋಗ್ಯ ಸೇವೆಯನ್ನು ಉಚಿತಗೊಳಿಸಬೇಕು. ಉದ್ಯೋಗ ನೀಡುವುದಕ್ಕೆ ಮುಂದಾಗಬೇಕು. ಆಗ ಈ ರೋಗ ಬರದಂತೆ ತಡೆಯಬಹುದಾಗಿದೆ.

2019ರಲ್ಲಿ ತಪ್ಪೇನು?

ಸರಳವಾಗಿ ಹೇಳುವುದಾದರೆ, ಮೇಲೆ ಹೇಳಿದ ಎಸ್ಓಪಿ ನಿರ್ಲಕ್ಷ್ಯ, ತೀವ್ರ ಅಪೌಷ್ಟಿಕತೆ, ಬಿಸಿ ಗಾಳಿಯಿಂದ ಉಂಟಾದ ತೀವ್ರ ಸೆಖೆ, ಶುದ್ಧ ನೀರಿನ ಕೊರತೆ ಬಿಹಾರದಲ್ಲಿ ಈಗಿನ ಬಿಕ್ಕಟ್ಟಿಗೆ ಕಾರಣ.

ಬಿಹಾರದಲ್ಲಿ 44 ಶೇಕಡಾ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.  ಈ ಅಪೌಷ್ಟಿಕತೆಯು ಅವರ ರೋಗ ನಿರೋಧಕ ಶಕ್ತಿಯನ್ನು ಕುಗ್ಗುತ್ತದೆ.  ಈಗ ಸಾವಿಗೀಡಾದ ಮಕ್ಕಳಲ್ಲಿ ಬಹುತೇಕರು ತೀರಾ ಬಡ ಕುಟುಂಬದವರಾರಾಗಿದ್ದು, ಅಪೌಷ್ಟಿಕತೆಯಿಂದ ಬಳಲುತ್ತಿದ್ದರು. ‘ಡೌನ್ ಟು ಅರ್ಥ್’ ಪತ್ರಿಕೆಯ ಒಂದು ವರದಿಯಲ್ಲಿ ಹೇಳಿರುವಂತೆ ಸಾಯುತ್ತಿರುವ ಮಕ್ಕಳಲ್ಲಿ 70 ಶೇಕಡಾ ಹೆಣ್ಣು ಮಕ್ಕಳು. ಅದರಲ್ಲೂ ಮುಖ್ಯವಾಗಿ ಅತ್ಯಂತ ದಲಿತರಾಗಿರುವ ಜಾತಿಗಳಿಗೆ ಸೇರಿದವರು. ಈ ತಡೆದುಯಬಹುದಾದ ಸಾವುಗಳಿಗೆ ಮುಖ್ಯ ಕಾರಣವೆಂದರೆ, ದಲಿತ ವರ್ಗಗಳ, ಅದಲ್ಲೂ ಮುಖ್ಯವಾಗಿ ಹೆಣ್ಣುಮಕ್ಕಳ ಕುರಿತು ಇರುವ ಅಸಡ್ಡೆ.

ಜೂನ್ 10ರಂದು ಒಂದೇ ದಿನ 20 ಮಕ್ಕಳು ಸತ್ತ ವರದಿ ಬಂದ ನಂತರವೇ ರಾಜ್ಯ ಘನಘೋರ ನಿದ್ದೆಯಿಂದ ಎಚ್ಚೆತ್ತುಕೊಂಡಿತು. ಆರೋಗ್ಯ ರಾಜ್ಯ ಮಂತ್ರಿ ಅಶ್ವಿನಿ ಚೌಧರಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಯಾವುದೇ ಎಗ್ಗಿಲ್ಲದೇ ಚುನಾವಣಾ ಕಾರಣದಿಂದ ಈ ಬಾರಿ ಅರೋಗ್ಯ ಜಾಗೃತಿ ಕಾರ್ಯಕ್ರಮಗಳು ಸರಿಯಾಗಿ ನಡೆಯಲಿಲ್ಲ ಎಂದು ‘ಪ್ರಾಮಾಣಿಕ’ವಾಗಿಯೇ ಹೇಳಿಬಿಟ್ಟಿದ್ದಾರೆ. ಈ ಜಾಗೃತಿ ಕಾರ್ಯಕ್ರಮಗಳು ಎನ್ಓಪಿಯ ಮುಖ್ಯ ಭಾಗವಾಗಿದ್ದು, ಇದು ರಾಷ್ಟ್ರೀಯ ಸುದ್ದಿ ಆದ ಬಳಿಕವೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪೆಷಾಲಿಟಿ ಆಸ್ಪತ್ರೆಯೊಂದಕ್ಕೆ ಭೇಟಿ ನೀಡಿದ್ದಾರೆ.

ಉತ್ತರದಾಯಿತ್ವ ಎಲ್ಲಿದೆ? ಜನರಿಗೆ ನೀಡಬೇಕಾಗಿದ್ದ ಜನಶಕ್ತಿ ಮತ್ತು ಸಂಪನ್ಮೂಲಗಳನ್ನು ಚುನಾವಣೆ ಕಡೆಗೆ ತಿರುಗಿಸಲಾಗಿತ್ತು. ಇದರ ಸಂಪೂರ್ಣ ಜವಾಬ್ದಾರಿಯನ್ನು ಮುಂದಿನ ಐದು ವರ್ಷಗಳ ರಾಜ್ಯಭಾರಕ್ಕಾಗಿ ಚುನಾವಣಾ ಸಭೆಗಳಲ್ಲಿ ವ್ಯಸ್ತವಾಗಿದ್ದ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಹಿಸಿಕೊಳ್ಳಬೇಡವೆ? ರಾಜ್ಯ ಸರಕಾರವು ಈ ಎಳೆಯ ಮಕ್ಕಳ ಅಪೌಷ್ಟಿಕತೆಯ ಪರಿಸ್ಥಿತಿಯನ್ನೂ ಬದಲಿಸುವಲ್ಲಿ ವಿಫಲವಾಗಿರುವುದನ್ನೂ ಒಪ್ಪಿಕೊಳ್ಳಬೇಡವೆ?

ಹೊಟ್ಟೆಗಿಲ್ಲದ ಮಕ್ಕಳು ಯಾವುದೇ ಹಣ್ಣು ತಿಂದರೆಂದು ಅವರನ್ನಾಗಲೀ, ಅವರ ಹೆತ್ತವರನ್ನಾಗಲೀ ಯಾರು ದೂರಲು ಸಾಧ್ಯವಿದೆಯೇ? ಯವುದೇ ಮಗು ಹೊಟ್ಟೆಗಿಲ್ಲದೇ ಮಲಗಲು ಬಿಡಬಾರದು ಎಂಬುದು ನಮ್ಮ ಜವಾಬ್ದಾರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...