Homeಆರೋಗ್ಯಬಿಹಾರದಲ್ಲಿನ ನೂರಾರು ಮಕ್ಕಳ ಸಾವಿಗೆ ಅಪೌಷ್ಟಿಕತೆ ಮತ್ತು ಸರಕಾರಿ ನಿರ್ಲಕ್ಷವೇ ಕಾರಣ

ಬಿಹಾರದಲ್ಲಿನ ನೂರಾರು ಮಕ್ಕಳ ಸಾವಿಗೆ ಅಪೌಷ್ಟಿಕತೆ ಮತ್ತು ಸರಕಾರಿ ನಿರ್ಲಕ್ಷವೇ ಕಾರಣ

- Advertisement -
- Advertisement -

| ಡಾ. ಸ್ವಾತಿ ಶುಕ್ಲಾ |

ಅನುವಾದ: | ನಿಖಿಲ್ ಕೋಲ್ಪೆ |

ಇಂಗ್ಲಿಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಎಕ್ಯೂಟ್ ಎನ್ಸಿಫಲೈಟಿಸ್ ಸಿಂಡ್ರೋಮ್ ಎಂಬ ಸಾಂಕ್ರಾಮಿಕ ರೋಗಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 113ಕ್ಕೂ ಹೆಚ್ಚಾಗಿದೆ. ಈ ಕಾರಣದಿಂದ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ಬಿಹಾರಕ್ಕೆ ಈ ರೋಗವು ಹೊಸದಲ್ಲ. ಲಿಚಿ ಹಣ್ಣಿನ ತೋಟಗಳು ಸಾಮಾನ್ಯವಾಗಿರುವ ಮುಜಾಫರ್‌ಪುರ ಮತ್ತು ನೆರೆಯ ಪ್ರದೇಶಗಳಲ್ಲಿ 1995ರಿಂದಲೇ ಎನ್ಸಿಫಲೈಟಿಸ್ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಈಗಿನ ಪರಿಸ್ಥಿತಿಗೆ ಅಪೌಷ್ಟಿಕತೆಯಿಂದ ಹಿಡಿದು, ಸೆಖೆ, ದುರ್ಬಲ ರೋಗ ನಿರೋಧಕತೆಯ ತನಕ ಹಲವು ಅಂಶಗಳು ಕಾರಣವಾಗಿದ್ದು, ಲಿಚಿಯಲ್ಲಿ ಇರುವ ಕೆಲವು ನಿರ್ದಿಷ್ಟ ರಾಸಾಯನಿಕಗಳು ಇದನ್ನು ಉಲ್ಭಣಿಸುವಂತೆ ಮಾಡಿವೆ.

What is AES? ಎಇಎಸ್ ಎಂದರೇನು?

ಎಕ್ಯೂಯೂ ಎಂಸೆಫಲೈಟಿಸ್ ಸಿಂಡ್ರೋಮ್ ಎಂದು ಮೆದುಳಿಗೆ ಸಂಬಂಧಿಸಿದ ರೋಗವಾಗಿದ್ದು, ಬ್ಯಾಕ್ಟೀರಿಯಾ, ವೈರಸ್, ಪರೋಪಜೀವಿಗಳು, ಶಿಲೀಂದ್ರಗಳು, ರಾಸಾಯನಿಕಗಳು, ಕೆಲವು ರೀತಿಯ ವಿಷವಸ್ತುಗಳು ಇದನ್ನು ಉಂಟುಮಾಡುತ್ತವೆ. ರೋಗ ಲಕ್ಷಣಗಳು ಜ್ವರ, ತಲೆನೋವು, ಅಪಸ್ಮಾರದ ಲಕ್ಷಣಗಳನ್ನು ಒಳಗೊಂಡಿರಬಹುದು. ಈ ರೋಗವು ಮಾನ್ಸೂನ್ ವೇಳೆ ಮತ್ತು ಅದರ ನಂತಥದ ಅವಧಿಯಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳಬಹುದು. ಅದು ಹೆಚ್ಚಾಗಿ ಬರುವುದು 15ವರ್ಷಗಳಿಗಿಂತ ಕೆಳಗಿನ ಮಕ್ಕಳಿಗೆ. ಉತ್ತರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮುಂತಾದ ಗಂಗಾ ನದಿಬಯಲಿನ ಪ್ರದೇಶಗಳಲ್ಲಿ, ಅಸ್ಸಾಂ, ತಮಿಳುನಾಡಿನ ಕೆಲವು ಬಯಲುಗಳು ಈ ರೋಗಕ್ಕೆ ಸೂಕ್ತ ವಾತಾವರಣ ಒದಗಿಸುತ್ತವೆ. ತಕ್ಷಣ ಆಸ್ಪತ್ರೆಗೆ ಸೇರಿಸುವುದು ಮತ್ತು ಸೂಕ್ತ ಔಷದೋಪಚಾರದಿಂದ ಇದು ಗುಣವಾಗುವುದು.

ಹೆಚ್ಚಿನ ಪ್ರಕರಣಗಳು ಮಕ್ಕಳು ಹೊಟ್ಟೆಗೆ ಏನೂ ತಿನ್ನದೇ, ಬರಿಹೊಟ್ಟೆಯಲ್ಲಿ ಕಾಯಿ ಲೀಚಿ ತಿಂದಿದ್ದ ಪ್ರದೇಶದಲ್ಲಿಯೇ ವರದಿಯಾಗಿವೆ. ಕಾಯಿ ಲೀಚಿಯಲ್ಲಿ ವಿಷಕಾರಿಗಳಾದ ಹೈಪೋಗ್ಲೈಸಿನ್ ಎ ಮತ್ತು, ಮಿಥೈಲ್‌ ನ್ಸೈಕ್ಲೋಪ್ರೊಪೈಲ್‌ಗೈಸಿನ್ (ಎಂಸಿಪಿಜಿ) ಎಂಬ ಉದ್ದವಾದ ಮತ್ತು ಹೇಳಲು ಕಷ್ಟವಾಗುವ, ಹೆಸರುಗಳನ್ನು ಹೊಂದಿರುವ ರಾಸಾಯನಿಕಗಳನ್ನು ಹೊಂದಿದೆ. ಇವುಗಳಲ್ಲಿ ಹೈಪೋಗ್ಲೈಸಿನ್ ಎ ಎಂಬುದು ನೈಸರ್ಗಿಕವಾಗಿ ಉತ್ಪತ್ತಿಯಾಗುವ ಎಮಿನೋ ಅಮ್ಲವಾಗಿದ್ದು, ಎರಡನೆಯದಾದ ಎಂಸಿಪಿಜಿ ಎಂಬ ಸಂಯುಕ್ತ ರಾಸಾಯನಿಕವು ತೀವ್ರವಾದ ವಾಂತಿಯನ್ನು, ಅಂದರೆ, (ಜಮೈಕನ್ ವಾಮಿಟಿಂಗ್ ಡಿಸೀಸ್) ಎಂಬ ರೋಗ ಲಕ್ಷಣಗಳನ್ನು ಉಂಟುಮಾಡುತ್ತದೆ. ಇವುಗಳಲ್ಲಿ ಎಂಸಿಪಿಜಿ ಎಂಬುದು ಹಸಿ ಬೀಜಗಳಲ್ಲಿ ಇರುವ ರಕ್ತದಲ್ಲಿ ಸಕ್ಕರೆ ಅಂತ ಕಡಿಮೆ ಮಾಡುವುದು, ವಿಷಕಾರಿ ರಾಸಾಯನಿಕ ಸಂಯುಕ್ತವಾಗಿದ್ದು, ಏಕಾಏಕಿ ರಕ್ಕದೊಟ್ಟಡದ ಕುಸಿತ, ವಾಂತಿ, ಮಾನಸಿಕ ಸ್ಥಿತಿಯ ಬದಲಾವಣೆ- ಇದು ಸೋಮಾರಿತನದಲ್ಲಿ ಕಾಣಬಹುದು. ಈ ರಾಸಾಯನಿಕಗಳು ಹಸಿ ಲೀಚಿ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಇವೆ ಎಂಬುದು ಅತ್ಯಂತ ಗಮನಾರ್ಹ. (ಲಿಚಿ ಎಂಬುದು ಒಂದು ಹಳ್ಳಿ ಮಕ್ಕಳು ತಿನ್ನುವ ವಿದೇಶಿ ಕಾಡು ಹಣ್ಣಾಗಿದ್ದು, ಇಂದು ಸಿರಿವಂತರ ನೆಚ್ಚಿನ ಗ್ಲಾಮರ್ ಹಣ್ಣಾಗಿದೆ-ಅನುವಾದಕ)

ಭಾರತೀಯ ರೋಗ ನಿಯಂತ್ರಣ ಸಂಸ್ಥೆಯ ಪ್ರಕಾರ ಮತ್ತು ಇತರ ಸಂಸ್ಥೆಗಳ ಪ್ರಕಾರ ಲಿಚಿ ಈ ರೋಗಕ್ಕೆ ಮುಖ್ಯ ಕಾರಣವಲ್ಲ. ಈಗಾಗಲೇ ಹೊಟ್ಟೆಗಿಲ್ಲದ ಮಕ್ಕಳು ಬೆಳಿಗ್ಗೆ ಎದ್ದ ಕೂಡಲೇ ಹಸಿವಿನಿಂದ ಕಾಯಿ ಲಿಚಿ ತಿನ್ನುವುದೇ ಆಗಿದೆ. ಅಪೌಷ್ಟಿಕತೆಯ ಕಾರಣದಿಂದ ಮೊದಲೇ ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆ ಇರುವ ಮಕ್ಕಳು ಇದನ್ನು ತಿನ್ನುವುದರಿಂದ ಸಕ್ಕರೆ, ಅಂದರೆ ಗ್ಲೂಕೋಸ್ ಇನ್ನೂ ಕಡಿಮೆಯಾಗಿ, ತೀವ್ರ ಪ್ರಕರಣಗಳಲ್ಲಿ ತಲೆ ಸುತ್ತುವಿಕೆ, ಕೊನೆಗೆ ಸಾವಿಗೂ ಕಾಣವಾಗಬಹುದು.

ಈ ಸಾವುಗಳನ್ನು ತಪ್ಪಿಸಬಹುದುದೇ? ಖಂಡಿತಾ!

ಹಿಂದೆಯೇ ಬರೆದಿರುವುದನ್ನು ಓದಿ. ಇಲ್ಲಿ ಇದು ಸಾಮಾನ್ಯ. 2012ರಲ್ಲಿ ಇಲ್ಲಿ 122 ಮಕ್ಕಳ ಸಾವುಗಳು ಸಂಭವಿಸಿವೆ. ಇಲ್ಲಿನ ಆರೋಗ್ಯ ಇಲಾಖೆ ಸ್ಟ್ಯಾಂಡರ್ಡ್ ಅಪರೇಟಿಂಗ್ ಪ್ರೊಸಿಜರ್ಸ್ (ಎಸ್ಓಪಿ)) ಎಂಬ ಒಂದು ವ್ಯವಸ್ಥೆಯನ್ನು ಜಾರಿಗೊಳಿಸಿತು. ಅದು ರೋಗ ಲಕ್ಷಣಗಳ ಆಧಾರದಲ್ಲಿ ಅದನ್ನು ನಿಯಂತ್ರಿಸುವ ಕುರಿತಾಗಿತ್ತು. ಸರಿ, ಈ ವ್ಯವಸ್ಥೆಯು ಆಶಾ ಕಾರ್ಯಕರ್ತೆಯರು, ಪಂಚಾಯತ್, ರಾಜ್ಯಾಡಳಿತ, ಮಾಧ್ಯಮ, ಸರ್ಕಾರೇತರ ಸಂಸ್ಥೆಗಳು, ಪ್ರಚಾರ ಅಭಿಯಾನಗಳು, ಇತ್ಯಾದಿಗಳನ್ನು ಒಳಗೊಂಡಿತ್ತು. ಇದು ರೋಗ ನಿಯಂತ್ರಣದಲ್ಲಿ ಬಹಳಷ್ಟು ಪರಿಣಾಮಕಾರಿಯಾಯಿತು. ಆ ಕಾಲದಲ್ಲಿ ಮುಜಾಫರ್‌ಪುರ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ, ವೈದ್ಯರು, ದಾದಿಗಳ ಹತ್ತಿರ ಗ್ಲೂಕೋಸ್ ಕಿಟ್ ಲಭ್ಯವಿತ್ತು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ದಿನ ರಾತ್ರಿ ತಪಾಸಣೆ ನಡೆಸುತ್ತಿದ್ದರು. ಕಾರಣ ಇಷ್ಟೇ. ಮಕ್ಕಳು ಬರೇ ಹೊಟ್ಟೆಯಲ್ಲಿ ಮಲಗುತ್ತಿದ್ದರೋ ಎಂದು ನೋಡಲು.

ಹಾಗಾಗಿ ಸರ್ಕಾರ ಈ ಕೂಡಲೇ ಬಡವರಿಗೆ ಸಹಾಯ ಹಸ್ತ ಚಾಚಬೇಕು. ಹಸಿದು ಮಲಗುವುದನ್ನು ತಪ್ಪಿಸಬೇಕು. ಆರೋಗ್ಯ ಸೇವೆಯನ್ನು ಉಚಿತಗೊಳಿಸಬೇಕು. ಉದ್ಯೋಗ ನೀಡುವುದಕ್ಕೆ ಮುಂದಾಗಬೇಕು. ಆಗ ಈ ರೋಗ ಬರದಂತೆ ತಡೆಯಬಹುದಾಗಿದೆ.

2019ರಲ್ಲಿ ತಪ್ಪೇನು?

ಸರಳವಾಗಿ ಹೇಳುವುದಾದರೆ, ಮೇಲೆ ಹೇಳಿದ ಎಸ್ಓಪಿ ನಿರ್ಲಕ್ಷ್ಯ, ತೀವ್ರ ಅಪೌಷ್ಟಿಕತೆ, ಬಿಸಿ ಗಾಳಿಯಿಂದ ಉಂಟಾದ ತೀವ್ರ ಸೆಖೆ, ಶುದ್ಧ ನೀರಿನ ಕೊರತೆ ಬಿಹಾರದಲ್ಲಿ ಈಗಿನ ಬಿಕ್ಕಟ್ಟಿಗೆ ಕಾರಣ.

ಬಿಹಾರದಲ್ಲಿ 44 ಶೇಕಡಾ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.  ಈ ಅಪೌಷ್ಟಿಕತೆಯು ಅವರ ರೋಗ ನಿರೋಧಕ ಶಕ್ತಿಯನ್ನು ಕುಗ್ಗುತ್ತದೆ.  ಈಗ ಸಾವಿಗೀಡಾದ ಮಕ್ಕಳಲ್ಲಿ ಬಹುತೇಕರು ತೀರಾ ಬಡ ಕುಟುಂಬದವರಾರಾಗಿದ್ದು, ಅಪೌಷ್ಟಿಕತೆಯಿಂದ ಬಳಲುತ್ತಿದ್ದರು. ‘ಡೌನ್ ಟು ಅರ್ಥ್’ ಪತ್ರಿಕೆಯ ಒಂದು ವರದಿಯಲ್ಲಿ ಹೇಳಿರುವಂತೆ ಸಾಯುತ್ತಿರುವ ಮಕ್ಕಳಲ್ಲಿ 70 ಶೇಕಡಾ ಹೆಣ್ಣು ಮಕ್ಕಳು. ಅದರಲ್ಲೂ ಮುಖ್ಯವಾಗಿ ಅತ್ಯಂತ ದಲಿತರಾಗಿರುವ ಜಾತಿಗಳಿಗೆ ಸೇರಿದವರು. ಈ ತಡೆದುಯಬಹುದಾದ ಸಾವುಗಳಿಗೆ ಮುಖ್ಯ ಕಾರಣವೆಂದರೆ, ದಲಿತ ವರ್ಗಗಳ, ಅದಲ್ಲೂ ಮುಖ್ಯವಾಗಿ ಹೆಣ್ಣುಮಕ್ಕಳ ಕುರಿತು ಇರುವ ಅಸಡ್ಡೆ.

ಜೂನ್ 10ರಂದು ಒಂದೇ ದಿನ 20 ಮಕ್ಕಳು ಸತ್ತ ವರದಿ ಬಂದ ನಂತರವೇ ರಾಜ್ಯ ಘನಘೋರ ನಿದ್ದೆಯಿಂದ ಎಚ್ಚೆತ್ತುಕೊಂಡಿತು. ಆರೋಗ್ಯ ರಾಜ್ಯ ಮಂತ್ರಿ ಅಶ್ವಿನಿ ಚೌಧರಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಯಾವುದೇ ಎಗ್ಗಿಲ್ಲದೇ ಚುನಾವಣಾ ಕಾರಣದಿಂದ ಈ ಬಾರಿ ಅರೋಗ್ಯ ಜಾಗೃತಿ ಕಾರ್ಯಕ್ರಮಗಳು ಸರಿಯಾಗಿ ನಡೆಯಲಿಲ್ಲ ಎಂದು ‘ಪ್ರಾಮಾಣಿಕ’ವಾಗಿಯೇ ಹೇಳಿಬಿಟ್ಟಿದ್ದಾರೆ. ಈ ಜಾಗೃತಿ ಕಾರ್ಯಕ್ರಮಗಳು ಎನ್ಓಪಿಯ ಮುಖ್ಯ ಭಾಗವಾಗಿದ್ದು, ಇದು ರಾಷ್ಟ್ರೀಯ ಸುದ್ದಿ ಆದ ಬಳಿಕವೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪೆಷಾಲಿಟಿ ಆಸ್ಪತ್ರೆಯೊಂದಕ್ಕೆ ಭೇಟಿ ನೀಡಿದ್ದಾರೆ.

ಉತ್ತರದಾಯಿತ್ವ ಎಲ್ಲಿದೆ? ಜನರಿಗೆ ನೀಡಬೇಕಾಗಿದ್ದ ಜನಶಕ್ತಿ ಮತ್ತು ಸಂಪನ್ಮೂಲಗಳನ್ನು ಚುನಾವಣೆ ಕಡೆಗೆ ತಿರುಗಿಸಲಾಗಿತ್ತು. ಇದರ ಸಂಪೂರ್ಣ ಜವಾಬ್ದಾರಿಯನ್ನು ಮುಂದಿನ ಐದು ವರ್ಷಗಳ ರಾಜ್ಯಭಾರಕ್ಕಾಗಿ ಚುನಾವಣಾ ಸಭೆಗಳಲ್ಲಿ ವ್ಯಸ್ತವಾಗಿದ್ದ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಹಿಸಿಕೊಳ್ಳಬೇಡವೆ? ರಾಜ್ಯ ಸರಕಾರವು ಈ ಎಳೆಯ ಮಕ್ಕಳ ಅಪೌಷ್ಟಿಕತೆಯ ಪರಿಸ್ಥಿತಿಯನ್ನೂ ಬದಲಿಸುವಲ್ಲಿ ವಿಫಲವಾಗಿರುವುದನ್ನೂ ಒಪ್ಪಿಕೊಳ್ಳಬೇಡವೆ?

ಹೊಟ್ಟೆಗಿಲ್ಲದ ಮಕ್ಕಳು ಯಾವುದೇ ಹಣ್ಣು ತಿಂದರೆಂದು ಅವರನ್ನಾಗಲೀ, ಅವರ ಹೆತ್ತವರನ್ನಾಗಲೀ ಯಾರು ದೂರಲು ಸಾಧ್ಯವಿದೆಯೇ? ಯವುದೇ ಮಗು ಹೊಟ್ಟೆಗಿಲ್ಲದೇ ಮಲಗಲು ಬಿಡಬಾರದು ಎಂಬುದು ನಮ್ಮ ಜವಾಬ್ದಾರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...