Homeಆರೋಗ್ಯಬಿಹಾರದಲ್ಲಿನ ನೂರಾರು ಮಕ್ಕಳ ಸಾವಿಗೆ ಅಪೌಷ್ಟಿಕತೆ ಮತ್ತು ಸರಕಾರಿ ನಿರ್ಲಕ್ಷವೇ ಕಾರಣ

ಬಿಹಾರದಲ್ಲಿನ ನೂರಾರು ಮಕ್ಕಳ ಸಾವಿಗೆ ಅಪೌಷ್ಟಿಕತೆ ಮತ್ತು ಸರಕಾರಿ ನಿರ್ಲಕ್ಷವೇ ಕಾರಣ

- Advertisement -
- Advertisement -

| ಡಾ. ಸ್ವಾತಿ ಶುಕ್ಲಾ |

ಅನುವಾದ: | ನಿಖಿಲ್ ಕೋಲ್ಪೆ |

ಇಂಗ್ಲಿಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಎಕ್ಯೂಟ್ ಎನ್ಸಿಫಲೈಟಿಸ್ ಸಿಂಡ್ರೋಮ್ ಎಂಬ ಸಾಂಕ್ರಾಮಿಕ ರೋಗಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 113ಕ್ಕೂ ಹೆಚ್ಚಾಗಿದೆ. ಈ ಕಾರಣದಿಂದ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ಬಿಹಾರಕ್ಕೆ ಈ ರೋಗವು ಹೊಸದಲ್ಲ. ಲಿಚಿ ಹಣ್ಣಿನ ತೋಟಗಳು ಸಾಮಾನ್ಯವಾಗಿರುವ ಮುಜಾಫರ್‌ಪುರ ಮತ್ತು ನೆರೆಯ ಪ್ರದೇಶಗಳಲ್ಲಿ 1995ರಿಂದಲೇ ಎನ್ಸಿಫಲೈಟಿಸ್ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಈಗಿನ ಪರಿಸ್ಥಿತಿಗೆ ಅಪೌಷ್ಟಿಕತೆಯಿಂದ ಹಿಡಿದು, ಸೆಖೆ, ದುರ್ಬಲ ರೋಗ ನಿರೋಧಕತೆಯ ತನಕ ಹಲವು ಅಂಶಗಳು ಕಾರಣವಾಗಿದ್ದು, ಲಿಚಿಯಲ್ಲಿ ಇರುವ ಕೆಲವು ನಿರ್ದಿಷ್ಟ ರಾಸಾಯನಿಕಗಳು ಇದನ್ನು ಉಲ್ಭಣಿಸುವಂತೆ ಮಾಡಿವೆ.

What is AES? ಎಇಎಸ್ ಎಂದರೇನು?

ಎಕ್ಯೂಯೂ ಎಂಸೆಫಲೈಟಿಸ್ ಸಿಂಡ್ರೋಮ್ ಎಂದು ಮೆದುಳಿಗೆ ಸಂಬಂಧಿಸಿದ ರೋಗವಾಗಿದ್ದು, ಬ್ಯಾಕ್ಟೀರಿಯಾ, ವೈರಸ್, ಪರೋಪಜೀವಿಗಳು, ಶಿಲೀಂದ್ರಗಳು, ರಾಸಾಯನಿಕಗಳು, ಕೆಲವು ರೀತಿಯ ವಿಷವಸ್ತುಗಳು ಇದನ್ನು ಉಂಟುಮಾಡುತ್ತವೆ. ರೋಗ ಲಕ್ಷಣಗಳು ಜ್ವರ, ತಲೆನೋವು, ಅಪಸ್ಮಾರದ ಲಕ್ಷಣಗಳನ್ನು ಒಳಗೊಂಡಿರಬಹುದು. ಈ ರೋಗವು ಮಾನ್ಸೂನ್ ವೇಳೆ ಮತ್ತು ಅದರ ನಂತಥದ ಅವಧಿಯಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳಬಹುದು. ಅದು ಹೆಚ್ಚಾಗಿ ಬರುವುದು 15ವರ್ಷಗಳಿಗಿಂತ ಕೆಳಗಿನ ಮಕ್ಕಳಿಗೆ. ಉತ್ತರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮುಂತಾದ ಗಂಗಾ ನದಿಬಯಲಿನ ಪ್ರದೇಶಗಳಲ್ಲಿ, ಅಸ್ಸಾಂ, ತಮಿಳುನಾಡಿನ ಕೆಲವು ಬಯಲುಗಳು ಈ ರೋಗಕ್ಕೆ ಸೂಕ್ತ ವಾತಾವರಣ ಒದಗಿಸುತ್ತವೆ. ತಕ್ಷಣ ಆಸ್ಪತ್ರೆಗೆ ಸೇರಿಸುವುದು ಮತ್ತು ಸೂಕ್ತ ಔಷದೋಪಚಾರದಿಂದ ಇದು ಗುಣವಾಗುವುದು.

ಹೆಚ್ಚಿನ ಪ್ರಕರಣಗಳು ಮಕ್ಕಳು ಹೊಟ್ಟೆಗೆ ಏನೂ ತಿನ್ನದೇ, ಬರಿಹೊಟ್ಟೆಯಲ್ಲಿ ಕಾಯಿ ಲೀಚಿ ತಿಂದಿದ್ದ ಪ್ರದೇಶದಲ್ಲಿಯೇ ವರದಿಯಾಗಿವೆ. ಕಾಯಿ ಲೀಚಿಯಲ್ಲಿ ವಿಷಕಾರಿಗಳಾದ ಹೈಪೋಗ್ಲೈಸಿನ್ ಎ ಮತ್ತು, ಮಿಥೈಲ್‌ ನ್ಸೈಕ್ಲೋಪ್ರೊಪೈಲ್‌ಗೈಸಿನ್ (ಎಂಸಿಪಿಜಿ) ಎಂಬ ಉದ್ದವಾದ ಮತ್ತು ಹೇಳಲು ಕಷ್ಟವಾಗುವ, ಹೆಸರುಗಳನ್ನು ಹೊಂದಿರುವ ರಾಸಾಯನಿಕಗಳನ್ನು ಹೊಂದಿದೆ. ಇವುಗಳಲ್ಲಿ ಹೈಪೋಗ್ಲೈಸಿನ್ ಎ ಎಂಬುದು ನೈಸರ್ಗಿಕವಾಗಿ ಉತ್ಪತ್ತಿಯಾಗುವ ಎಮಿನೋ ಅಮ್ಲವಾಗಿದ್ದು, ಎರಡನೆಯದಾದ ಎಂಸಿಪಿಜಿ ಎಂಬ ಸಂಯುಕ್ತ ರಾಸಾಯನಿಕವು ತೀವ್ರವಾದ ವಾಂತಿಯನ್ನು, ಅಂದರೆ, (ಜಮೈಕನ್ ವಾಮಿಟಿಂಗ್ ಡಿಸೀಸ್) ಎಂಬ ರೋಗ ಲಕ್ಷಣಗಳನ್ನು ಉಂಟುಮಾಡುತ್ತದೆ. ಇವುಗಳಲ್ಲಿ ಎಂಸಿಪಿಜಿ ಎಂಬುದು ಹಸಿ ಬೀಜಗಳಲ್ಲಿ ಇರುವ ರಕ್ತದಲ್ಲಿ ಸಕ್ಕರೆ ಅಂತ ಕಡಿಮೆ ಮಾಡುವುದು, ವಿಷಕಾರಿ ರಾಸಾಯನಿಕ ಸಂಯುಕ್ತವಾಗಿದ್ದು, ಏಕಾಏಕಿ ರಕ್ಕದೊಟ್ಟಡದ ಕುಸಿತ, ವಾಂತಿ, ಮಾನಸಿಕ ಸ್ಥಿತಿಯ ಬದಲಾವಣೆ- ಇದು ಸೋಮಾರಿತನದಲ್ಲಿ ಕಾಣಬಹುದು. ಈ ರಾಸಾಯನಿಕಗಳು ಹಸಿ ಲೀಚಿ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಇವೆ ಎಂಬುದು ಅತ್ಯಂತ ಗಮನಾರ್ಹ. (ಲಿಚಿ ಎಂಬುದು ಒಂದು ಹಳ್ಳಿ ಮಕ್ಕಳು ತಿನ್ನುವ ವಿದೇಶಿ ಕಾಡು ಹಣ್ಣಾಗಿದ್ದು, ಇಂದು ಸಿರಿವಂತರ ನೆಚ್ಚಿನ ಗ್ಲಾಮರ್ ಹಣ್ಣಾಗಿದೆ-ಅನುವಾದಕ)

ಭಾರತೀಯ ರೋಗ ನಿಯಂತ್ರಣ ಸಂಸ್ಥೆಯ ಪ್ರಕಾರ ಮತ್ತು ಇತರ ಸಂಸ್ಥೆಗಳ ಪ್ರಕಾರ ಲಿಚಿ ಈ ರೋಗಕ್ಕೆ ಮುಖ್ಯ ಕಾರಣವಲ್ಲ. ಈಗಾಗಲೇ ಹೊಟ್ಟೆಗಿಲ್ಲದ ಮಕ್ಕಳು ಬೆಳಿಗ್ಗೆ ಎದ್ದ ಕೂಡಲೇ ಹಸಿವಿನಿಂದ ಕಾಯಿ ಲಿಚಿ ತಿನ್ನುವುದೇ ಆಗಿದೆ. ಅಪೌಷ್ಟಿಕತೆಯ ಕಾರಣದಿಂದ ಮೊದಲೇ ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆ ಇರುವ ಮಕ್ಕಳು ಇದನ್ನು ತಿನ್ನುವುದರಿಂದ ಸಕ್ಕರೆ, ಅಂದರೆ ಗ್ಲೂಕೋಸ್ ಇನ್ನೂ ಕಡಿಮೆಯಾಗಿ, ತೀವ್ರ ಪ್ರಕರಣಗಳಲ್ಲಿ ತಲೆ ಸುತ್ತುವಿಕೆ, ಕೊನೆಗೆ ಸಾವಿಗೂ ಕಾಣವಾಗಬಹುದು.

ಈ ಸಾವುಗಳನ್ನು ತಪ್ಪಿಸಬಹುದುದೇ? ಖಂಡಿತಾ!

ಹಿಂದೆಯೇ ಬರೆದಿರುವುದನ್ನು ಓದಿ. ಇಲ್ಲಿ ಇದು ಸಾಮಾನ್ಯ. 2012ರಲ್ಲಿ ಇಲ್ಲಿ 122 ಮಕ್ಕಳ ಸಾವುಗಳು ಸಂಭವಿಸಿವೆ. ಇಲ್ಲಿನ ಆರೋಗ್ಯ ಇಲಾಖೆ ಸ್ಟ್ಯಾಂಡರ್ಡ್ ಅಪರೇಟಿಂಗ್ ಪ್ರೊಸಿಜರ್ಸ್ (ಎಸ್ಓಪಿ)) ಎಂಬ ಒಂದು ವ್ಯವಸ್ಥೆಯನ್ನು ಜಾರಿಗೊಳಿಸಿತು. ಅದು ರೋಗ ಲಕ್ಷಣಗಳ ಆಧಾರದಲ್ಲಿ ಅದನ್ನು ನಿಯಂತ್ರಿಸುವ ಕುರಿತಾಗಿತ್ತು. ಸರಿ, ಈ ವ್ಯವಸ್ಥೆಯು ಆಶಾ ಕಾರ್ಯಕರ್ತೆಯರು, ಪಂಚಾಯತ್, ರಾಜ್ಯಾಡಳಿತ, ಮಾಧ್ಯಮ, ಸರ್ಕಾರೇತರ ಸಂಸ್ಥೆಗಳು, ಪ್ರಚಾರ ಅಭಿಯಾನಗಳು, ಇತ್ಯಾದಿಗಳನ್ನು ಒಳಗೊಂಡಿತ್ತು. ಇದು ರೋಗ ನಿಯಂತ್ರಣದಲ್ಲಿ ಬಹಳಷ್ಟು ಪರಿಣಾಮಕಾರಿಯಾಯಿತು. ಆ ಕಾಲದಲ್ಲಿ ಮುಜಾಫರ್‌ಪುರ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ, ವೈದ್ಯರು, ದಾದಿಗಳ ಹತ್ತಿರ ಗ್ಲೂಕೋಸ್ ಕಿಟ್ ಲಭ್ಯವಿತ್ತು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ದಿನ ರಾತ್ರಿ ತಪಾಸಣೆ ನಡೆಸುತ್ತಿದ್ದರು. ಕಾರಣ ಇಷ್ಟೇ. ಮಕ್ಕಳು ಬರೇ ಹೊಟ್ಟೆಯಲ್ಲಿ ಮಲಗುತ್ತಿದ್ದರೋ ಎಂದು ನೋಡಲು.

ಹಾಗಾಗಿ ಸರ್ಕಾರ ಈ ಕೂಡಲೇ ಬಡವರಿಗೆ ಸಹಾಯ ಹಸ್ತ ಚಾಚಬೇಕು. ಹಸಿದು ಮಲಗುವುದನ್ನು ತಪ್ಪಿಸಬೇಕು. ಆರೋಗ್ಯ ಸೇವೆಯನ್ನು ಉಚಿತಗೊಳಿಸಬೇಕು. ಉದ್ಯೋಗ ನೀಡುವುದಕ್ಕೆ ಮುಂದಾಗಬೇಕು. ಆಗ ಈ ರೋಗ ಬರದಂತೆ ತಡೆಯಬಹುದಾಗಿದೆ.

2019ರಲ್ಲಿ ತಪ್ಪೇನು?

ಸರಳವಾಗಿ ಹೇಳುವುದಾದರೆ, ಮೇಲೆ ಹೇಳಿದ ಎಸ್ಓಪಿ ನಿರ್ಲಕ್ಷ್ಯ, ತೀವ್ರ ಅಪೌಷ್ಟಿಕತೆ, ಬಿಸಿ ಗಾಳಿಯಿಂದ ಉಂಟಾದ ತೀವ್ರ ಸೆಖೆ, ಶುದ್ಧ ನೀರಿನ ಕೊರತೆ ಬಿಹಾರದಲ್ಲಿ ಈಗಿನ ಬಿಕ್ಕಟ್ಟಿಗೆ ಕಾರಣ.

ಬಿಹಾರದಲ್ಲಿ 44 ಶೇಕಡಾ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.  ಈ ಅಪೌಷ್ಟಿಕತೆಯು ಅವರ ರೋಗ ನಿರೋಧಕ ಶಕ್ತಿಯನ್ನು ಕುಗ್ಗುತ್ತದೆ.  ಈಗ ಸಾವಿಗೀಡಾದ ಮಕ್ಕಳಲ್ಲಿ ಬಹುತೇಕರು ತೀರಾ ಬಡ ಕುಟುಂಬದವರಾರಾಗಿದ್ದು, ಅಪೌಷ್ಟಿಕತೆಯಿಂದ ಬಳಲುತ್ತಿದ್ದರು. ‘ಡೌನ್ ಟು ಅರ್ಥ್’ ಪತ್ರಿಕೆಯ ಒಂದು ವರದಿಯಲ್ಲಿ ಹೇಳಿರುವಂತೆ ಸಾಯುತ್ತಿರುವ ಮಕ್ಕಳಲ್ಲಿ 70 ಶೇಕಡಾ ಹೆಣ್ಣು ಮಕ್ಕಳು. ಅದರಲ್ಲೂ ಮುಖ್ಯವಾಗಿ ಅತ್ಯಂತ ದಲಿತರಾಗಿರುವ ಜಾತಿಗಳಿಗೆ ಸೇರಿದವರು. ಈ ತಡೆದುಯಬಹುದಾದ ಸಾವುಗಳಿಗೆ ಮುಖ್ಯ ಕಾರಣವೆಂದರೆ, ದಲಿತ ವರ್ಗಗಳ, ಅದಲ್ಲೂ ಮುಖ್ಯವಾಗಿ ಹೆಣ್ಣುಮಕ್ಕಳ ಕುರಿತು ಇರುವ ಅಸಡ್ಡೆ.

ಜೂನ್ 10ರಂದು ಒಂದೇ ದಿನ 20 ಮಕ್ಕಳು ಸತ್ತ ವರದಿ ಬಂದ ನಂತರವೇ ರಾಜ್ಯ ಘನಘೋರ ನಿದ್ದೆಯಿಂದ ಎಚ್ಚೆತ್ತುಕೊಂಡಿತು. ಆರೋಗ್ಯ ರಾಜ್ಯ ಮಂತ್ರಿ ಅಶ್ವಿನಿ ಚೌಧರಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಯಾವುದೇ ಎಗ್ಗಿಲ್ಲದೇ ಚುನಾವಣಾ ಕಾರಣದಿಂದ ಈ ಬಾರಿ ಅರೋಗ್ಯ ಜಾಗೃತಿ ಕಾರ್ಯಕ್ರಮಗಳು ಸರಿಯಾಗಿ ನಡೆಯಲಿಲ್ಲ ಎಂದು ‘ಪ್ರಾಮಾಣಿಕ’ವಾಗಿಯೇ ಹೇಳಿಬಿಟ್ಟಿದ್ದಾರೆ. ಈ ಜಾಗೃತಿ ಕಾರ್ಯಕ್ರಮಗಳು ಎನ್ಓಪಿಯ ಮುಖ್ಯ ಭಾಗವಾಗಿದ್ದು, ಇದು ರಾಷ್ಟ್ರೀಯ ಸುದ್ದಿ ಆದ ಬಳಿಕವೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪೆಷಾಲಿಟಿ ಆಸ್ಪತ್ರೆಯೊಂದಕ್ಕೆ ಭೇಟಿ ನೀಡಿದ್ದಾರೆ.

ಉತ್ತರದಾಯಿತ್ವ ಎಲ್ಲಿದೆ? ಜನರಿಗೆ ನೀಡಬೇಕಾಗಿದ್ದ ಜನಶಕ್ತಿ ಮತ್ತು ಸಂಪನ್ಮೂಲಗಳನ್ನು ಚುನಾವಣೆ ಕಡೆಗೆ ತಿರುಗಿಸಲಾಗಿತ್ತು. ಇದರ ಸಂಪೂರ್ಣ ಜವಾಬ್ದಾರಿಯನ್ನು ಮುಂದಿನ ಐದು ವರ್ಷಗಳ ರಾಜ್ಯಭಾರಕ್ಕಾಗಿ ಚುನಾವಣಾ ಸಭೆಗಳಲ್ಲಿ ವ್ಯಸ್ತವಾಗಿದ್ದ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಹಿಸಿಕೊಳ್ಳಬೇಡವೆ? ರಾಜ್ಯ ಸರಕಾರವು ಈ ಎಳೆಯ ಮಕ್ಕಳ ಅಪೌಷ್ಟಿಕತೆಯ ಪರಿಸ್ಥಿತಿಯನ್ನೂ ಬದಲಿಸುವಲ್ಲಿ ವಿಫಲವಾಗಿರುವುದನ್ನೂ ಒಪ್ಪಿಕೊಳ್ಳಬೇಡವೆ?

ಹೊಟ್ಟೆಗಿಲ್ಲದ ಮಕ್ಕಳು ಯಾವುದೇ ಹಣ್ಣು ತಿಂದರೆಂದು ಅವರನ್ನಾಗಲೀ, ಅವರ ಹೆತ್ತವರನ್ನಾಗಲೀ ಯಾರು ದೂರಲು ಸಾಧ್ಯವಿದೆಯೇ? ಯವುದೇ ಮಗು ಹೊಟ್ಟೆಗಿಲ್ಲದೇ ಮಲಗಲು ಬಿಡಬಾರದು ಎಂಬುದು ನಮ್ಮ ಜವಾಬ್ದಾರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...