Homeದಲಿತ್ ಫೈಲ್ಸ್ಮಾಲೂರು: ದಲಿತ ಬಾಲಕ ದೇವರು ಮುಟ್ಟಿದನೆಂದು ಶೋಷಿತ ಕುಟುಂಬಕ್ಕೆ ಬಹಿಷ್ಕಾರ; 60 ಸಾವಿರ ರೂ. ದಂಡ

ಮಾಲೂರು: ದಲಿತ ಬಾಲಕ ದೇವರು ಮುಟ್ಟಿದನೆಂದು ಶೋಷಿತ ಕುಟುಂಬಕ್ಕೆ ಬಹಿಷ್ಕಾರ; 60 ಸಾವಿರ ರೂ. ದಂಡ

- Advertisement -
- Advertisement -

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಹುಳೇರಹಳ್ಳಿಯಲ್ಲಿ ಗ್ರಾಮದೇವತೆಯ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಇತ್ತೀಚೆಗೆ ನಡೆದಿದೆ.

ದೇವರಿಗೆ ಅಪವಿತ್ರವಾಗಿತೆಂದು ಆರೋಪಿಸಿ ಆ ಬಾಲಕನ ಕುಟುಂಬವನ್ನು ಊರಿನ ಸವರ್ಣೀಯರು ಬಹಿಷ್ಕಾರ ಹಾಕಿದ್ದಾರೆ. ಜೊತೆಗೆ ಈ ಬಡ ಕುಟುಂಬಕ್ಕೆ ಅರವತ್ತು ಸಾವಿರ ರೂ. ದಂಡವನ್ನು ವಿಧಿಸಿದ್ದಾರೆ ಎಂಬ ಆರೋಪ ಬಂದಿದೆ.

ಗ್ರಾಮದ ದಲಿತ ಬಾಲಕ ದೇವರ ಮೆರವಣಿಗೆಯ ವೇಳೆ ದೇವರ ಕೋಲನ್ನು ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂದು ಆರೋಪಿಸಿ ಹೊಡೆಯಲು ಮುಂದಾಗಿದ್ದರು. ಜೊತೆಗೆ ಬಾಲಕನ ಕುಟುಂಬವನ್ನು ಕರೆಸಿ ಅರವತ್ತು ಸಾವಿರ ರೂ. ದಂಡ ವಿಧಿಸಿದ್ದರು.

“ನೀನು ಇಲ್ಲಿಗೆ ಬರಬಾರದು. ದೇವರನ್ನು ಮುಟ್ಟಿ ಮೈಲಿಗೆ ಮಾಡಿದ್ದೀಯ. ಅರವತ್ತು ಸಾವಿರ ದಂಡ ಕಟ್ಟಿದರೆ ಮಾತ್ರ ಊರಿನೊಳಗೆ ನಿಮ್ಮ ಕುಟುಂಬ ಪ್ರವೇಶಿಸಬಹುದು” ಎಂದು ತಿಳಿಸಿರುವುದಾಗಿ ಬಾಲಕ ಹೇಳಿಕೆ ನೀಡಿದ್ದಾನೆ.

ಘಟನೆಯನ್ನು ವಿವರಿಸಿರುವ ಬಾಲಕ, “ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾರಾಯಣಸ್ವಾಮಿ ಅವರು ಹೊಡೆಯಲು ಬಂದರು” ಎಂದು ತಿಳಿಸಿದ್ದಾನೆ.

ಬಾಲಕನ ತಾಯಿ ಶೋಭಾ ಮಾತನಾಡಿ, “‌ಅಂದು ನಾನು ಊರಿನಲ್ಲಿ ಇರಲಿಲ್ಲ. ಎಂದಿನಂತೆ ಬೆಳಿಗ್ಗೆ ಎದ್ದು ರೈಲು ಹತ್ತಿ ಬೆಂಗಳೂರಿಗೆ ಹೌಸ್‌ಕೀಪಿಂಗ್ ಕೆಲಸಕ್ಕೆ ಹೋಗಿದ್ದೆ. ಮನೆಗೆ ಬಂದಾಗ ವಿಷಯ ತಿಳಿಯಿತು. ನಾವು ದೇವರಿಗಾಗಿ ಅರವತ್ತು ಸಾವಿರ ರೂ. ಖರ್ಚು ಮಾಡಿದ್ದೇವೆ. ದೇವರು ಬಿಂದಿ (ಅಪವಿತ್ರ) ಆಗಿದೆ. ನಾವು ಶಾಂತಿ (ಪವಿತ್ರ) ಮಾಡಿಸಲೇಬೇಕು. ನೀವು ದುಡ್ಡು ಕಟ್ಟಲೇಬೇಕು ಅಂದರು. ನಮ್ಮ ಕೈಲಿ ಕಟ್ಟಲು ಆಗಲ್ಲ ಎಂದೆ. ಇಲ್ಲವಾದರೆ ಊರು ಖಾಲಿ ಮಾಡಿರಿ” ಎಂದು ಬೆದರಿಕೆ ಹಾಕಿರುವುದಾಗಿ ವಿವರಿಸಿದ್ದಾರೆ.

“ನಾವು ದಿನಕ್ಕೆ ಮುನ್ನೂರು ರೂಪಾಯಿ ಕೂಲಿ ಮಾಡೋರು. ಅರವತ್ತು ಸಾವಿರ ರೂ.ಗಳನ್ನು ಎಲ್ಲಿಂದ ತಂದುಕೊಡಲಿ? ನಮ್ಮ ಪರವಾಗಿ ಯಾರೂ ನಿಲ್ಲಲಿಲ್ಲ. ಊರಿಂದ ಆಚೆ ಬಂದು ಮಾಧ್ಯಮದೊಂದಿಗೆ ವಿಷಯ ಹಂಚಿಕೊಂಡಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

‘ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ ಸಂಘಟನೆ’ಯ ಸಂದೇಶ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. “ನೀವೇನು ಹೆದರಬೇಕಿಲ್ಲ. ನೀವು ಭಾರತ ದೇಶದಲ್ಲಿದ್ದೀರಿ. ಇದು ಯಾರಪ್ಪನ ದೇಶವೂ ಅಲ್ಲ. ಸಂವಿಧಾನದ ಅಡಿಯಲ್ಲಿ ನೀವಿದ್ದೀರಿ” ಎಂದು ಹೇಳಿದ್ದಾರೆ.

“ಮನುಷ್ಯರಾಗಿ ಹೀಗೆ ಯಾರೂ ನಡೆದುಕೊಳ್ಳಬಾರದು. ದಲಿತರಾಗಿ ಹುಟ್ಟಿರುವುದೇ ನಮ್ಮದು ತಪ್ಪಾಯಿತಾ?” ಎಂದು ಪ್ರಶ್ನಿಸಿರುವ ಅವರು, “ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಹೋರಾಡುತ್ತೇವೆ. ಅಧಿಕಾರಿಗಳು ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಎಸ್‌.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು” ಎಂದು ಪ್ರತಿಕ್ರಿಯಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸಂದೇಶ್‌, “ಗ್ರಾಮದಲ್ಲಿ ಹದಿನೈದು ದಲಿತರ ಮನೆಗಳಿದ್ದರೆ, ಎಂಟು ನೂರು ಸವರ್ಣೀಯರ ಮನೆಗಳಿವೆ. ಈ ಗ್ರಾಮದಲ್ಲಿ ಪದೇಪದೇ ಇದೇ ರೀತಿಯ ದೌರ್ಜನ್ಯಗಳಾಗುತ್ತಿವೆ. ಆದರೆ ದಲಿತರು ಧೈರ್ಯ ಮಾಡಿ ಮುಂದೆ ಬರುತ್ತಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲು ಪೊಲೀಸ್ ಟಾಣೆಯಲ್ಲಿ ದೂರು ದಾಕಲಿಸಬೇಕು. ಇಲ್ಲದಿದ್ದರೆ ಇಂತಹ ದೌರ್ಜನ್ಯಗಳು ನಡೆಯುತ್ತಲೇ ಇರುತ್ತವೆ.

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...