Homeಕರ್ನಾಟಕಮಾಲೂರು: ದಲಿತ ಬಾಲಕನ ಮನೆಗೆ ಶಾಸಕ ನಂಜೇಗೌಡ ಭೇಟಿ - ನೆರವಿನ ಭರವಸೆ

ಮಾಲೂರು: ದಲಿತ ಬಾಲಕನ ಮನೆಗೆ ಶಾಸಕ ನಂಜೇಗೌಡ ಭೇಟಿ – ನೆರವಿನ ಭರವಸೆ

- Advertisement -
- Advertisement -

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿನ ಅಸ್ಪೃಶ್ಯತೆ ಆಚರಣೆ ಘಟನೆ ಹಿನ್ನೆಲೆಯಲ್ಲಿ ಗ್ರಾಮದ ದಲಿತ ಬಾಲಕನ ಕುಟುಂಬಕ್ಕೆ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ನಂಜೇಗೌಡ ಭೇಟಿ ನೀಡಿ ನೆರವಿನ ಭರವಸೆ ನೀಡಿದ್ದಾರೆ.

ದಲಿತ ಬಾಲಕನ ಮನೆಯಲ್ಲಿಯೇ ಊಟ ಮಾಡಿದ ಶಾಸಕರು ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದಾರೆ. ಬಾಲಕನ ತಾಯಿ ಶೋಭಾ ಅವರಿಗೆ ಸಾಂತ್ವಾನ ಮತ್ತು ಧೈರ್ಯ ಹೇಳಿದ ಅವರು ಉದ್ಯೋಗ ದೊರಕಿಸುವುದಾಗಿ ತಿಳಿಸಿದರು.

ಗ್ರಾಮಕ್ಕೆ ಹತ್ತಿರವಿರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ ಅಡುಗೆ ಸಹಾಯಕಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಕುಟುಂಬಕ್ಕೆ ನಿವೇಶನ ನೀಡುವುದಾಗಿ ತಿಳಿಸಿದ್ದಾರೆ.

ಆ ಕುಟುಂಬಕ್ಕೆ ನಿವೇಶನ ದೊರೆತಿದ್ದು, ಆ ಜಾಗವನ್ನು ಸಮತಟ್ಟು ಮಾಡುವ ಕೆಲಸ ನಡೆಯುತ್ತಿದ್ದು, ಕಾಮಗಾರಿ ಮುಗಿದ ಕೂಡಲೇ ಕುಟುಂಬಕ್ಕೆ ಹಸ್ತಾಂತರಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮಿಯವರ ನೇತೃತ್ವದಲ್ಲಿ ಉಳ್ಳೇರಹಳ್ಳಿ ಗ್ರಾಮದಲ್ಲಿ ಶಾಂತಿ ಸಭೆ ನಡೆಸಲಾಗಿದೆ. ಸವರ್ಣಿಯ ಕುಟುಂಬಗಳು ಈ ರೀತಿಯ ತಪ್ಪನ್ನು ಮುಂದುವರೆಸದಂತೆ ಎಚ್ಚರಿಕೆ ನೀಡಲಾಗಿದೆ.

ಘಟನೆಯ ಹಿನ್ನೆಲೆ

ಗ್ರಾಮದೇವತೆ ಭೂತಮ್ಮನ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಗುಜ್ಜಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು, ಬಾಲಕನ ಕುಟುಂಬಕ್ಕೆ 60 ಸಾವಿರ ದಂಡ ವಿಧಿಸಿ ಸಾಮಾಜಿಕ ಬಹಿಷ್ಕಾರದ ಬೆದರಿಕೆ ಹಾಕಿದ್ದರು. ಸಂತ್ರಸ್ತ ಬಾಲಕನ ಈ ಕುರಿತು ಮಾಡಿದ ವಿಡಿಯೋ ವೈರಲ್ ಆಗಿ ಮಾಧ್ಯಮಗಳಲ್ಲಿ ಘಟನೆಯನ್ನು ಖಂಡಿಸಲಾಗಿತ್ತು.

ಸಾಮಾಜಿಕ ಬಹಿಷ್ಕಾರದ ಸುದ್ದಿ ವೈರಲ್ ಆದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಗ್ರಾಮದ ಸವರ್ಣೀಯ ಸಮುದಾಯಕ್ಕೆ ಸೇರಿದ ಜಿ.ನಾರಾಯಣಸ್ವಾಮಿ ಬಿನ್ ಗೋಪಾಲಪ್ಪ, ಜಿ.ರಮೇಶ್, ಗೋಪಾಲಪ್ಪ, ವೆಂಕಟೇಶಪ್ಪ, ಕೋಟೆಪ್ಪ, ನಾರಾಯಣಸ್ವಾಮಿ, ಚಲಪತಿ, ಮೋಹನ್ ರಾವ್‌, ಚಿನ್ನಯ್ಯ ವಿರುದ್ಧ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆಯ ಕಾಯ್ದೆ 1989 ಅಡಿ ಹಾಗೂ ಐಪಿಸಿ ಕಲಂ 143, 147, 148, 149 504, 506 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇದೇ ಸಂದರ್ಭದಲ್ಲಿ ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ ಯುವಕರು ಕುಟುಂಬವನ್ನು ಭೇಟಿ ಮಾಡಿ ಧೈರ್ಯ ನೀಡಿದ್ದಲ್ಲದೆ ಅರಿವು ಮೂಡಿಸಿದ್ದಾರೆ. ಆ ನಂತರ ಕುಟುಂಬವು ತನ್ನ ಮನೆಯಲ್ಲಿದ್ದ ದೇವರ ಫೋಟೋಗಳನ್ನು ತೆರವು ಮಾಡಿ, ಆ ಸ್ಥಳದಲ್ಲಿ ಅಂಬೇಡ್ಕರ್ ಮತ್ತು ಬುದ್ದನ ಫೋಟೊ ಹಾಕಿತ್ತು. ಇದು ಸಹ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿತ್ತು.

“ನಿಮ್ಮ ಮನೆಯಲ್ಲಿ ಇರಬೇಕಾದದ್ದು ಈ ದೇವರ ಫೋಟೋಗಳಲ್ಲ. ನಿಮಗೆ ನ್ಯಾಯ ದೊರಕಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ” ಎಂದು ಎಎಸ್‌ಎಸ್‌ಕೆ ಸಂಘಟನೆಯ ಮುಖಂಡರು ಹೇಳಿದ್ದರು.

ಇದನ್ನೂ ಓದಿ: ಮಾಲೂರು: ದಲಿತ ಬಾಲಕ ದೇವರು ಮುಟ್ಟಿದನೆಂದು ಶೋಷಿತ ಕುಟುಂಬಕ್ಕೆ ಬಹಿಷ್ಕಾರ; 60 ಸಾವಿರ ರೂ. ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...