Homeಕರ್ನಾಟಕಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ.

ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ ಬಿಜೆಪಿಯ ಕೆ.ಎಸ್. ಮಂಜುನಾಥ್ ಗೌಡ ಅವರಿಗಿಂತ 250ಕ್ಕೂ ಹೆಚ್ಚು ಮತಗಳನ್ನು ಪಡೆದಿರುವುದನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ನಂಜೇಗೌಡ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ಸೆಪ್ಟೆಂಬರ್ 2025 ರ ತೀರ್ಪನ್ನು ರದ್ದುಗೊಳಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ, ನಂಜೇಗೌಡರು ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥ ಗೌಡ ಅವರ ವಿರುದ್ಧ 248 ಮತಗಳ ಅಂತರದಿಂದ ಗೆದ್ದಿದ್ದರು. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಮತಗಳ ಮರುಎಣಿಕೆ ಕೋರಿ ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ನಂಜೇಗೌಡ ಅವರ ಆಯ್ಕೆಯನ್ನು ರದ್ದುಗೊಳಿಸಿತ್ತು. ಮತಗಳ ಮರುಎಣಿಕೆ ನಡೆಸಿ ಹೊಸದಾಗಿ ಫಲಿತಾಂಶ ಘೋಷಿಸಲು ಆದೇಶಿಸಿತ್ತು.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ನಂಜೇಗೌಡ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮೇಲ್ಮನವಿಯನ್ನು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಮುಚ್ಚಿದ ಲಕೋಟೆಯಲ್ಲಿ ಮರು ಮತ ಎಣಿಕೆಯ ನಂತರ ಫಲಿತಾಂಶವನ್ನು ಸಲ್ಲಿಸುವಂತೆ ಚುನಾವಣಾಧಿಕಾರಿಗೆ ಸೂಚಿಸಿತ್ತು.

ಗುರುವಾರ ಸುಪ್ರೀಂ ಕೋರ್ಟ್ ಕಕ್ಷಿದಾರರ ಸಮ್ಮುಖದಲ್ಲಿ ಮುಚ್ಚಿದ ಲಕೋಟೆಯನ್ನು ತೆರೆಯಿತು. ಮರು ಮತ ಎಣಿಕೆಯ ನಂತರವೂ ನಂಜೇಗೌಡ ಅವರೇ ಗೆಲುವು ಸಾಧಿಸಿರುವುದನ್ನು ಪರಿಗಣಿಸಿತು. ನಂಜೇಗೌಡರು 50,957 ಮತಗಳನ್ನು ಮತ್ತು ಮಂಜುನಾಥ ಗೌಡ 50,707 ಮತಗಳನ್ನು ಪಡೆದಿದ್ದಾರೆ ಎಂದು ಕೋರ್ಟ್ ತಿಳಿಸಿದೆ.

“ಇದರರ್ಥ, ಹೈಕೋರ್ಟ್ ನೀಡಿದ ಮರುಎಣಿಕೆಯ ಆದೇಶವನ್ನು ಪಾಲಿಸಿದ ನಂತರವೂ ಮಾಲೂರು ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹೈಕೋರ್ಟ್‌ನ ಹಿಂದಿನ ತೀರ್ಪನ್ನು ಬದಿಗಿಟ್ಟು, ಮೇಲ್ಮನವಿದಾರರ (ಅಭ್ಯರ್ಥಿಯ) ಚುನಾವಣಾ ಆಯ್ಕೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ ಮತ್ತು ಅವರ ಆಯ್ಕೆಯು ಕಾನೂನುಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ,” ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ವಿಡಿಯೋ ರೆಕಾರ್ಡಿಂಗ್‌ಗಳನ್ನು ಒದಗಿಸದಿದ್ದಕ್ಕಾಗಿ ಜಿಲ್ಲಾ ಚುನಾವಣಾ ಅಧಿಕಾರಿಗೆ ಭಾರತೀಯ ಚುನಾವಣಾ ಆಯೋಗ ನೀಡಿದ್ದ ನಿರ್ದೇಶನವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಎಣಿಕೆ ಪ್ರಕ್ರಿಯೆಯ ವಿಡಿಯೋ ರೆಕಾರ್ಡಿಂಗ್ ಕಡ್ಡಾಯವೇ ಅಥವಾ ಇಲ್ಲವೇ ಎಂಬುವುದರ ಕುರಿತು ಯಾವುದೇ ಅಭಿಪ್ರಾಯ ವ್ಯಕ್ತಪಡಿಸುತ್ತಿಲ್ಲ ಎಂದು ಹೇಳಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿದಾರರ (ನಂಜೇಗೌಡ) ಪರವಾಗಿ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...