Homeಮುಖಪುಟಮಾಲೂರು: ಬಿಜೆಪಿ ವಿರುದ್ಧ ಬಂಡಾಯವೆದ್ದ ಹೂಡಿ ವಿಜಯ್ ಕುಮಾರ್- ಮೋದಿ ಫೋಟೊ ಕಿತ್ತೊಗೆದ ಬೆಂಬಲಿಗರು

ಮಾಲೂರು: ಬಿಜೆಪಿ ವಿರುದ್ಧ ಬಂಡಾಯವೆದ್ದ ಹೂಡಿ ವಿಜಯ್ ಕುಮಾರ್- ಮೋದಿ ಫೋಟೊ ಕಿತ್ತೊಗೆದ ಬೆಂಬಲಿಗರು

- Advertisement -
- Advertisement -

ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪಿರುವುದರಿಂದ ಬಂಡಾಯವೆದ್ದಿರುವ ಹೂಡಿ ವಿಜಯ್ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅವರ ಬೆಂಬಲಿಗರು ತಮ್ಮ ಕಚೇರಿಗಳಲ್ಲಿ ಹಾಕಿದ್ದ ಮೋದಿ ಫೋಟೊ ಕಿತ್ತೊಗೆದು, ಬಿಜೆಪಿಯ ವಿವಿಧ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ.

ಜೆಡಿಎಸ್‌ನಲ್ಲಿದ್ದ ಮಾಜಿ ಶಾಸಕರಾದ ಕೆ.ಎಸ್ ಮಂಜುನಾಥ್ ಗೌಡರು ಇತ್ತೀಚೆಗೆ ಬಿಜೆಪಿ ಸೇರಿ ಟಿಕೆಟ್ ಪಡೆದಿದ್ದಾರೆ. ಇದರಿಂದ ಮೂಲ ಬಿಜೆಪಿಗರು ರೊಚ್ಚಿಗೆದ್ದಿದ್ದು ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾಲ್ಕು ವರ್ಷದಿಂದ ಸಮಾಜ ಸೇವೆ ಮಾಡಿದ್ದೇನೆ. ಬಿಜೆಪಿ ಪಕ್ಷ ಕಟ್ಟಿದ್ದೇನೆ. ಆದರೆ ಪಕ್ಷದ ಮುಖಂಡರೆ ನನಗೆ ಟಿಕೆಟ್ ತಪ್ಪಿಸಿ ಜೆಡಿಎಸ್‌ನಿಂದ ಬಂದವರಿಗೆ ಟಿಕೆಟ್ ನೀಡಿದ್ದಾರೆ. ಇದರಿಂದ ನೋವಾಗಿದ್ದು, ಕಾರ್ಯಕರ್ತರ ಮಾತಿಗೆ ಬೆಲೆ ಕೊಟ್ಟು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ. ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದಿಲ್ಲ ಎಂದು ಹೂಡಿ ವಿಜಯ್ ಕುಮಾರ್ ಘೋಷಿಸಿದ್ದಾರೆ.

ಬೆಂಬಲಿಗರ ಸಭೆ ಮುಗಿದ ಕೂಡಲೇ ಸಿಟ್ಟಿಗೆದ್ದ ವಿಜಯ್ ಕುಮಾರ್ ಬೆಂಬಲಿಗರು ತಮ್ಮ ಮನೆಗಳಲ್ಲಿ ಹಾಕಿದ್ದ ಮೋದಿ ಫೋಟೊ ಕಿತ್ತು ಎಸೆದಿದ್ದಾರೆ. ಬಿಜೆಪಿ ಬಾವುಟಗಳನ್ನು ವಿಲೇವಾರಿ ಮಾಡಿದ್ದಾರೆ. ಆದರೆ ವಿಜಯ್ ಕುಮಾರ್ ಹೊಸದಾಗಿ ಕಟ್ಟಿಸಿದ ತಮ್ಮ ಮನೆಗೆ ಮೋದಿ ನಿವಾಸ ಎಂದು ಹೆಸರಿಟ್ಟಿದ್ದರು. ಅವರು ಏನು ಮಾಡುತ್ತಾರೆ ಕಾದು ನೋಡಬೇಕಿದೆ.

ಕಾಂಗ್ರೆಸ್‌ನಿಂದ ಹಾಲಿ ಶಾಸಕ ಕೆ.ವೈ ನಂಜೇಗೌಡರವರಿಗೆ ಟಿಕೆಟ್ ದೊರಕಿದೆ. ಜೆಡಿಎಸ್ ರಾಮೇಗೌಡರಿಗೆ ಟಿಕೆಟ್ ಘೋಷಿಸಿದೆ. ಇನ್ನು ಬಿಜೆಪಿ ಟಿಕೆಟ್ ಕೆ.ಎಸ್ ಮಂಜುನಾಥ್ ಗೌಡರ ಪಾಲಾಗಿದೆ. ಟಿಕೆಟ್ ವಂಚಿತ ಹೂಡಿ ವಿಜಯ್ ಕುಮಾರ್ ಪಕ್ಷೇತರರಾಗಿ ಮಾಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ. ಈ ನಾಲ್ವರು ಒಕ್ಕಲಿಗ ಸಮುದಾಯಕ್ಕೆ ಸೇರಿದ್ದಾರೆ.

ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಜಗದೀಶ್ ಶೆಟ್ಟರ್ ಬಂಡಾಯ ಸ್ಪರ್ಧೆ ಸುಳಿವು ನೀಡಿದ್ದಾರೆ. ಗೂಳಿಹಟ್ಟಿ ಶೇಖರ್ ಬಂಡಾಯ ಅಭ್ಯರ್ಥಿಯಾಗುವುದಾಗಿ ಘೋಷಿಸಿದ್ದಾರೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಉಡುಪಿ ಟಿಕೆಟ್ ಸಿಗದ ರಘುಪತಿ ಭಟ್ ಕಣ್ಣೀರು ಹಾಕಿದ್ದಾರೆ. ನಿನ್ನೆಯೇ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ತುಮಕೂರು ನಗರದ ಸೊಗಡು ಶಿವಣ್ಣ ಬಿಜೆಪಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಕುಣಿಗಲ್ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮುದ್ದಹನುಮೇಗೌಡ ಮತ್ತು ರಾಜೇಶ್ ಗೌಡ ಕೂಡ ಬಂಡಾಯದ ಬಾವುಟ ಹಾರಿಸಿದ್ದಾರೆ. ಜೇವರ್ಗಿಯ ದೊಡ್ಡಪ್ಪಗೌಡ ಪಾಟೀಲ್ ಬಿಜೆಪಿ ತೊರೆದು ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ಮಾಲೂರಿನಲ್ಲಿ ಹೂಡಿ ವಿಜಯ್ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಲಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಚುನಾವಣೆ 2023: ಮೂರೂ ಪ್ರಮುಖ ಪಕ್ಷಗಳಲ್ಲಿ ಟಿಕೆಟ್ ಮತ್ತು ಮುಖ್ಯಮಂತ್ರಿ ಆಕಾಂಕ್ಷಿಗಳ ಹಗ್ಗಜಗ್ಗಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...